Homeಕರ್ನಾಟಕಖಾಸಗಿ ಕೊರೊನ ಪರೀಕ್ಷೆಗೆ 4,500‌ ರೂ ಶುಲ್ಕ : ತೀವ್ರ ಟೀಕೆ

ಖಾಸಗಿ ಕೊರೊನ ಪರೀಕ್ಷೆಗೆ 4,500‌ ರೂ ಶುಲ್ಕ : ತೀವ್ರ ಟೀಕೆ

- Advertisement -
- Advertisement -

ಕರ್ನಾಟಕ ಸರ್ಕಾರ ಕೊರೊನಾ ವೈರಸ್ ಪರೀಕ್ಷೆಯನ್ನು ನಡೆಸಲು ಖಾಸಗಿ ಪ್ರಯೋಗಾಲಯಕ್ಕೆ ಅನುಮೋದನೆ ನೀಡಿದೆ. ಈ ಬಗ್ಗೆ ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಖಾಸಗಿ ಪರೀಕ್ಷೆಗೆ 4500 ರೂ ನಿಗದಿಪಡಿಸಬಹುದು ಎಂದು ಹೇಳಿದೆ.

20/03/2020 ರಲ್ಲಿ ಭಾರತ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಪರೀಕ್ಷೆಯನ್ನು ಈ ಕೆಳಗಿನ ಕೊರೊನ ವೈರಸ್ ಶಂಕಿತರಿಗೆ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ ತನ್ನ ಸುತ್ತೋಲೆಯಲ್ಲಿ ಹೇಳಿದೆ:

  • ಕಳೆದ 14 ದಿನಗಳಲ್ಲಿ ಅಂತರರಾಷ್ಟ್ರೀಯ ಪ್ರಯಾಣವನ್ನು ಕೈಗೊಂಡ ರೋಗ ಲಕ್ಷಣ ಇರುವ ಎಲ್ಲಾ ವ್ಯಕ್ತಿಗಳು.
  • ಪ್ರಯೋಗಾಲಯ ಖಚಿತ ಪಡಿಸಿದ ರೋಗಿಗಳ ಸಂಪರ್ಕದಲ್ಲಿದ್ದ ರೋಗ ಲಕ್ಷಣಗಳಿರುವ ಎಲ್ಲಾ ವ್ಯಕ್ತಿಗಳಿಗೆ.
  • ರೋಗ ಲಕ್ಷಣವಿರುವ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ.
  • ತೀವ್ರವಾದ ಜ್ವರ, ಕೆಮ್ಮು ಅಥವಾ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಎಲ್ಲಾ ರೋಗಿಗಳಿಗೆ.
  • ಕೊರೊನಾ ಸೋಂಕು ದೃಢವಾದವರ ಸಂಪರ್ಕಕ್ಕೆ ಬಂದವರು ಕಡ್ಡಾಯವಾಗಿ ಅವನ / ಅವಳ ಸಂಪರ್ಕಕ್ಕೆ ಬಂದ ನಂತರದ 5 ನೇ ದಿನ ಮತ್ತು 14 ನೇ ದಿನದ ನಡುವೆ ಒಮ್ಮೆ ಪರೀಕ್ಷಿಸಬೇಕು.

ಇದನ್ನೂ ಓದಿ: ಖಾಸಗಿಯಾಗಿ ಕೊರೊನ ಪರೀಕ್ಷೆಗೆ ಒಪ್ಪಿದ ಕೇಂದ್ರ ಸರ್ಕಾರ; ಶುಲ್ಕ 4,500‌ ರೂ…!!


ಸುತ್ತೋಲೆಯಲ್ಲಿ ಪರೀಕ್ಷೆ ನಡೆಸುವ ಬೆಂಗಳೂರಿನ ಎರಡು ಪ್ರಯೋಗಾಲಯಗಳನ್ನು ಹೆಸರಿದೆ ಹಾಗೂ ಮೊದಲ ಹಂತದ ಪರೀಕ್ಷೆಗಾಗಿ 3000/ರೂ. ಹಾಗೂ ಹೆಚ್ಚುವರಿ ದೃಢೀಕರಣಕ್ಕಾಗಿ 1500/ರೂ. ಗಳನ್ನು ನಿಗಧಿಪಡಿಸಿದೆ. ಒಟ್ಟು ಪರೀಕ್ಷೆಯ ವೆಚ್ಚ 4500/ರೂ. ಗಳನ್ನು ಮೀರಬಾರದು ಎಂದು ಸುತ್ತೋಲೆಯಲ್ಲಿ ಹೇಳಿದೆ.

ಸರ್ಕಾರದ ಈ ನಡೆಯ ಬಗ್ಗೆ ಹಲವಾರು ಜನ ಟೀಕಿಸಿದ್ದಾರೆ. ಚಿಂತಕ ಕೆ.ಪಿ. ಸುರೇಶ್ ಅವರು “ಸರಕಾರ ಜನದ್ರೋಹ ಮಾಡುತ್ತಿದೆ. ವಿಮಾನದಿಂದಿಳಿದವರನ್ನು ಸರಿಯಾಗಿ ಪರೀಕ್ಷಿಸದೇ ಬಿಟ್ಟವರು ಈ ಮಾರಿಯನ್ನು ಉಳಿದವರಿಗೆ ಅಂಟಿಸಿದ್ದಕ್ಕೆ ಸಾಮಾನ್ಯರು ಬೆಲೆ ತೆರಬೇಕಾಗಿದೆ. ಅಗ್ಗದ ಟೆಸ್ಟಿಂಗ್ ಕಿಟ್ ಅಭಿವೃದ್ಧಿಪಡಿಸಿದ ವರದಿ ಈಗಾಗಲೆ ಇದೆ. ಅದನ್ನು ಉತ್ಪಾದಿಸಿ ಹಂಚುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಆದರೆ ಇಂಥಾ ವಿಷಯಗಳು ಬಂದಾಗ ಅದರಿಂದ ತಪ್ಪಿಸುವ ಕಲೆ ಕೇಂದ್ರ ಸರಕಾರಕ್ಕೆ ಸಿದ್ಧಿಸಿದೆ.” ಎಂದಿದ್ದಾರಲ್ಲದೆ, “ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಎಲ್ಲಾ ನಾಗರಿಕರಿಗೂ ಕೊರೊನಾ ಪರೀಕ್ಷೆ ಉಚಿತ ಎಂದು ಮಾರ್ಚ್ 15 ರಂದು ಹೇಳಿದ್ದರು. ಆದರೆ ಈಗ ಮೆತ್ತಗೆ ಜವಾಬ್ದಾರಿಯಿಂದ ಜಾರಿಕೊಂಡ ಕೇಂದ್ರದ ಮೋದಿ ಸರಕಾರ ಸುತ್ತೋಲೆ ಕಳುಹಿಸಿದೆ. ಕಳ್ಳಾಟಕ್ಕೂ ಒಂದು ಮಿತಿ ಬೇಕು.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...