Homeಕರ್ನಾಟಕಖಾಸಗಿ ಕೊರೊನ ಪರೀಕ್ಷೆಗೆ 4,500‌ ರೂ ಶುಲ್ಕ : ತೀವ್ರ ಟೀಕೆ

ಖಾಸಗಿ ಕೊರೊನ ಪರೀಕ್ಷೆಗೆ 4,500‌ ರೂ ಶುಲ್ಕ : ತೀವ್ರ ಟೀಕೆ

- Advertisement -
- Advertisement -

ಕರ್ನಾಟಕ ಸರ್ಕಾರ ಕೊರೊನಾ ವೈರಸ್ ಪರೀಕ್ಷೆಯನ್ನು ನಡೆಸಲು ಖಾಸಗಿ ಪ್ರಯೋಗಾಲಯಕ್ಕೆ ಅನುಮೋದನೆ ನೀಡಿದೆ. ಈ ಬಗ್ಗೆ ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಖಾಸಗಿ ಪರೀಕ್ಷೆಗೆ 4500 ರೂ ನಿಗದಿಪಡಿಸಬಹುದು ಎಂದು ಹೇಳಿದೆ.

20/03/2020 ರಲ್ಲಿ ಭಾರತ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಪರೀಕ್ಷೆಯನ್ನು ಈ ಕೆಳಗಿನ ಕೊರೊನ ವೈರಸ್ ಶಂಕಿತರಿಗೆ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ ತನ್ನ ಸುತ್ತೋಲೆಯಲ್ಲಿ ಹೇಳಿದೆ:

  • ಕಳೆದ 14 ದಿನಗಳಲ್ಲಿ ಅಂತರರಾಷ್ಟ್ರೀಯ ಪ್ರಯಾಣವನ್ನು ಕೈಗೊಂಡ ರೋಗ ಲಕ್ಷಣ ಇರುವ ಎಲ್ಲಾ ವ್ಯಕ್ತಿಗಳು.
  • ಪ್ರಯೋಗಾಲಯ ಖಚಿತ ಪಡಿಸಿದ ರೋಗಿಗಳ ಸಂಪರ್ಕದಲ್ಲಿದ್ದ ರೋಗ ಲಕ್ಷಣಗಳಿರುವ ಎಲ್ಲಾ ವ್ಯಕ್ತಿಗಳಿಗೆ.
  • ರೋಗ ಲಕ್ಷಣವಿರುವ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ.
  • ತೀವ್ರವಾದ ಜ್ವರ, ಕೆಮ್ಮು ಅಥವಾ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಎಲ್ಲಾ ರೋಗಿಗಳಿಗೆ.
  • ಕೊರೊನಾ ಸೋಂಕು ದೃಢವಾದವರ ಸಂಪರ್ಕಕ್ಕೆ ಬಂದವರು ಕಡ್ಡಾಯವಾಗಿ ಅವನ / ಅವಳ ಸಂಪರ್ಕಕ್ಕೆ ಬಂದ ನಂತರದ 5 ನೇ ದಿನ ಮತ್ತು 14 ನೇ ದಿನದ ನಡುವೆ ಒಮ್ಮೆ ಪರೀಕ್ಷಿಸಬೇಕು.

ಇದನ್ನೂ ಓದಿ: ಖಾಸಗಿಯಾಗಿ ಕೊರೊನ ಪರೀಕ್ಷೆಗೆ ಒಪ್ಪಿದ ಕೇಂದ್ರ ಸರ್ಕಾರ; ಶುಲ್ಕ 4,500‌ ರೂ…!!


ಸುತ್ತೋಲೆಯಲ್ಲಿ ಪರೀಕ್ಷೆ ನಡೆಸುವ ಬೆಂಗಳೂರಿನ ಎರಡು ಪ್ರಯೋಗಾಲಯಗಳನ್ನು ಹೆಸರಿದೆ ಹಾಗೂ ಮೊದಲ ಹಂತದ ಪರೀಕ್ಷೆಗಾಗಿ 3000/ರೂ. ಹಾಗೂ ಹೆಚ್ಚುವರಿ ದೃಢೀಕರಣಕ್ಕಾಗಿ 1500/ರೂ. ಗಳನ್ನು ನಿಗಧಿಪಡಿಸಿದೆ. ಒಟ್ಟು ಪರೀಕ್ಷೆಯ ವೆಚ್ಚ 4500/ರೂ. ಗಳನ್ನು ಮೀರಬಾರದು ಎಂದು ಸುತ್ತೋಲೆಯಲ್ಲಿ ಹೇಳಿದೆ.

ಸರ್ಕಾರದ ಈ ನಡೆಯ ಬಗ್ಗೆ ಹಲವಾರು ಜನ ಟೀಕಿಸಿದ್ದಾರೆ. ಚಿಂತಕ ಕೆ.ಪಿ. ಸುರೇಶ್ ಅವರು “ಸರಕಾರ ಜನದ್ರೋಹ ಮಾಡುತ್ತಿದೆ. ವಿಮಾನದಿಂದಿಳಿದವರನ್ನು ಸರಿಯಾಗಿ ಪರೀಕ್ಷಿಸದೇ ಬಿಟ್ಟವರು ಈ ಮಾರಿಯನ್ನು ಉಳಿದವರಿಗೆ ಅಂಟಿಸಿದ್ದಕ್ಕೆ ಸಾಮಾನ್ಯರು ಬೆಲೆ ತೆರಬೇಕಾಗಿದೆ. ಅಗ್ಗದ ಟೆಸ್ಟಿಂಗ್ ಕಿಟ್ ಅಭಿವೃದ್ಧಿಪಡಿಸಿದ ವರದಿ ಈಗಾಗಲೆ ಇದೆ. ಅದನ್ನು ಉತ್ಪಾದಿಸಿ ಹಂಚುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಆದರೆ ಇಂಥಾ ವಿಷಯಗಳು ಬಂದಾಗ ಅದರಿಂದ ತಪ್ಪಿಸುವ ಕಲೆ ಕೇಂದ್ರ ಸರಕಾರಕ್ಕೆ ಸಿದ್ಧಿಸಿದೆ.” ಎಂದಿದ್ದಾರಲ್ಲದೆ, “ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಎಲ್ಲಾ ನಾಗರಿಕರಿಗೂ ಕೊರೊನಾ ಪರೀಕ್ಷೆ ಉಚಿತ ಎಂದು ಮಾರ್ಚ್ 15 ರಂದು ಹೇಳಿದ್ದರು. ಆದರೆ ಈಗ ಮೆತ್ತಗೆ ಜವಾಬ್ದಾರಿಯಿಂದ ಜಾರಿಕೊಂಡ ಕೇಂದ್ರದ ಮೋದಿ ಸರಕಾರ ಸುತ್ತೋಲೆ ಕಳುಹಿಸಿದೆ. ಕಳ್ಳಾಟಕ್ಕೂ ಒಂದು ಮಿತಿ ಬೇಕು.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...