Homeಕರ್ನಾಟಕಖಾಸಗಿ ಕೊರೊನ ಪರೀಕ್ಷೆಗೆ 4,500‌ ರೂ ಶುಲ್ಕ : ತೀವ್ರ ಟೀಕೆ

ಖಾಸಗಿ ಕೊರೊನ ಪರೀಕ್ಷೆಗೆ 4,500‌ ರೂ ಶುಲ್ಕ : ತೀವ್ರ ಟೀಕೆ

- Advertisement -
- Advertisement -

ಕರ್ನಾಟಕ ಸರ್ಕಾರ ಕೊರೊನಾ ವೈರಸ್ ಪರೀಕ್ಷೆಯನ್ನು ನಡೆಸಲು ಖಾಸಗಿ ಪ್ರಯೋಗಾಲಯಕ್ಕೆ ಅನುಮೋದನೆ ನೀಡಿದೆ. ಈ ಬಗ್ಗೆ ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಖಾಸಗಿ ಪರೀಕ್ಷೆಗೆ 4500 ರೂ ನಿಗದಿಪಡಿಸಬಹುದು ಎಂದು ಹೇಳಿದೆ.

20/03/2020 ರಲ್ಲಿ ಭಾರತ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಪರೀಕ್ಷೆಯನ್ನು ಈ ಕೆಳಗಿನ ಕೊರೊನ ವೈರಸ್ ಶಂಕಿತರಿಗೆ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ ತನ್ನ ಸುತ್ತೋಲೆಯಲ್ಲಿ ಹೇಳಿದೆ:

  • ಕಳೆದ 14 ದಿನಗಳಲ್ಲಿ ಅಂತರರಾಷ್ಟ್ರೀಯ ಪ್ರಯಾಣವನ್ನು ಕೈಗೊಂಡ ರೋಗ ಲಕ್ಷಣ ಇರುವ ಎಲ್ಲಾ ವ್ಯಕ್ತಿಗಳು.
  • ಪ್ರಯೋಗಾಲಯ ಖಚಿತ ಪಡಿಸಿದ ರೋಗಿಗಳ ಸಂಪರ್ಕದಲ್ಲಿದ್ದ ರೋಗ ಲಕ್ಷಣಗಳಿರುವ ಎಲ್ಲಾ ವ್ಯಕ್ತಿಗಳಿಗೆ.
  • ರೋಗ ಲಕ್ಷಣವಿರುವ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ.
  • ತೀವ್ರವಾದ ಜ್ವರ, ಕೆಮ್ಮು ಅಥವಾ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಎಲ್ಲಾ ರೋಗಿಗಳಿಗೆ.
  • ಕೊರೊನಾ ಸೋಂಕು ದೃಢವಾದವರ ಸಂಪರ್ಕಕ್ಕೆ ಬಂದವರು ಕಡ್ಡಾಯವಾಗಿ ಅವನ / ಅವಳ ಸಂಪರ್ಕಕ್ಕೆ ಬಂದ ನಂತರದ 5 ನೇ ದಿನ ಮತ್ತು 14 ನೇ ದಿನದ ನಡುವೆ ಒಮ್ಮೆ ಪರೀಕ್ಷಿಸಬೇಕು.

ಇದನ್ನೂ ಓದಿ: ಖಾಸಗಿಯಾಗಿ ಕೊರೊನ ಪರೀಕ್ಷೆಗೆ ಒಪ್ಪಿದ ಕೇಂದ್ರ ಸರ್ಕಾರ; ಶುಲ್ಕ 4,500‌ ರೂ…!!


ಸುತ್ತೋಲೆಯಲ್ಲಿ ಪರೀಕ್ಷೆ ನಡೆಸುವ ಬೆಂಗಳೂರಿನ ಎರಡು ಪ್ರಯೋಗಾಲಯಗಳನ್ನು ಹೆಸರಿದೆ ಹಾಗೂ ಮೊದಲ ಹಂತದ ಪರೀಕ್ಷೆಗಾಗಿ 3000/ರೂ. ಹಾಗೂ ಹೆಚ್ಚುವರಿ ದೃಢೀಕರಣಕ್ಕಾಗಿ 1500/ರೂ. ಗಳನ್ನು ನಿಗಧಿಪಡಿಸಿದೆ. ಒಟ್ಟು ಪರೀಕ್ಷೆಯ ವೆಚ್ಚ 4500/ರೂ. ಗಳನ್ನು ಮೀರಬಾರದು ಎಂದು ಸುತ್ತೋಲೆಯಲ್ಲಿ ಹೇಳಿದೆ.

ಸರ್ಕಾರದ ಈ ನಡೆಯ ಬಗ್ಗೆ ಹಲವಾರು ಜನ ಟೀಕಿಸಿದ್ದಾರೆ. ಚಿಂತಕ ಕೆ.ಪಿ. ಸುರೇಶ್ ಅವರು “ಸರಕಾರ ಜನದ್ರೋಹ ಮಾಡುತ್ತಿದೆ. ವಿಮಾನದಿಂದಿಳಿದವರನ್ನು ಸರಿಯಾಗಿ ಪರೀಕ್ಷಿಸದೇ ಬಿಟ್ಟವರು ಈ ಮಾರಿಯನ್ನು ಉಳಿದವರಿಗೆ ಅಂಟಿಸಿದ್ದಕ್ಕೆ ಸಾಮಾನ್ಯರು ಬೆಲೆ ತೆರಬೇಕಾಗಿದೆ. ಅಗ್ಗದ ಟೆಸ್ಟಿಂಗ್ ಕಿಟ್ ಅಭಿವೃದ್ಧಿಪಡಿಸಿದ ವರದಿ ಈಗಾಗಲೆ ಇದೆ. ಅದನ್ನು ಉತ್ಪಾದಿಸಿ ಹಂಚುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಆದರೆ ಇಂಥಾ ವಿಷಯಗಳು ಬಂದಾಗ ಅದರಿಂದ ತಪ್ಪಿಸುವ ಕಲೆ ಕೇಂದ್ರ ಸರಕಾರಕ್ಕೆ ಸಿದ್ಧಿಸಿದೆ.” ಎಂದಿದ್ದಾರಲ್ಲದೆ, “ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಎಲ್ಲಾ ನಾಗರಿಕರಿಗೂ ಕೊರೊನಾ ಪರೀಕ್ಷೆ ಉಚಿತ ಎಂದು ಮಾರ್ಚ್ 15 ರಂದು ಹೇಳಿದ್ದರು. ಆದರೆ ಈಗ ಮೆತ್ತಗೆ ಜವಾಬ್ದಾರಿಯಿಂದ ಜಾರಿಕೊಂಡ ಕೇಂದ್ರದ ಮೋದಿ ಸರಕಾರ ಸುತ್ತೋಲೆ ಕಳುಹಿಸಿದೆ. ಕಳ್ಳಾಟಕ್ಕೂ ಒಂದು ಮಿತಿ ಬೇಕು.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...