Homeಕರ್ನಾಟಕಖಾಸಗಿ ಕೊರೊನ ಪರೀಕ್ಷೆಗೆ 4,500‌ ರೂ ಶುಲ್ಕ : ತೀವ್ರ ಟೀಕೆ

ಖಾಸಗಿ ಕೊರೊನ ಪರೀಕ್ಷೆಗೆ 4,500‌ ರೂ ಶುಲ್ಕ : ತೀವ್ರ ಟೀಕೆ

- Advertisement -
- Advertisement -

ಕರ್ನಾಟಕ ಸರ್ಕಾರ ಕೊರೊನಾ ವೈರಸ್ ಪರೀಕ್ಷೆಯನ್ನು ನಡೆಸಲು ಖಾಸಗಿ ಪ್ರಯೋಗಾಲಯಕ್ಕೆ ಅನುಮೋದನೆ ನೀಡಿದೆ. ಈ ಬಗ್ಗೆ ಕರ್ನಾಟಕ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಖಾಸಗಿ ಪರೀಕ್ಷೆಗೆ 4500 ರೂ ನಿಗದಿಪಡಿಸಬಹುದು ಎಂದು ಹೇಳಿದೆ.

20/03/2020 ರಲ್ಲಿ ಭಾರತ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ ಪರೀಕ್ಷೆಯನ್ನು ಈ ಕೆಳಗಿನ ಕೊರೊನ ವೈರಸ್ ಶಂಕಿತರಿಗೆ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರ ತನ್ನ ಸುತ್ತೋಲೆಯಲ್ಲಿ ಹೇಳಿದೆ:

  • ಕಳೆದ 14 ದಿನಗಳಲ್ಲಿ ಅಂತರರಾಷ್ಟ್ರೀಯ ಪ್ರಯಾಣವನ್ನು ಕೈಗೊಂಡ ರೋಗ ಲಕ್ಷಣ ಇರುವ ಎಲ್ಲಾ ವ್ಯಕ್ತಿಗಳು.
  • ಪ್ರಯೋಗಾಲಯ ಖಚಿತ ಪಡಿಸಿದ ರೋಗಿಗಳ ಸಂಪರ್ಕದಲ್ಲಿದ್ದ ರೋಗ ಲಕ್ಷಣಗಳಿರುವ ಎಲ್ಲಾ ವ್ಯಕ್ತಿಗಳಿಗೆ.
  • ರೋಗ ಲಕ್ಷಣವಿರುವ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ.
  • ತೀವ್ರವಾದ ಜ್ವರ, ಕೆಮ್ಮು ಅಥವಾ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದ ಎಲ್ಲಾ ರೋಗಿಗಳಿಗೆ.
  • ಕೊರೊನಾ ಸೋಂಕು ದೃಢವಾದವರ ಸಂಪರ್ಕಕ್ಕೆ ಬಂದವರು ಕಡ್ಡಾಯವಾಗಿ ಅವನ / ಅವಳ ಸಂಪರ್ಕಕ್ಕೆ ಬಂದ ನಂತರದ 5 ನೇ ದಿನ ಮತ್ತು 14 ನೇ ದಿನದ ನಡುವೆ ಒಮ್ಮೆ ಪರೀಕ್ಷಿಸಬೇಕು.

ಇದನ್ನೂ ಓದಿ: ಖಾಸಗಿಯಾಗಿ ಕೊರೊನ ಪರೀಕ್ಷೆಗೆ ಒಪ್ಪಿದ ಕೇಂದ್ರ ಸರ್ಕಾರ; ಶುಲ್ಕ 4,500‌ ರೂ…!!


ಸುತ್ತೋಲೆಯಲ್ಲಿ ಪರೀಕ್ಷೆ ನಡೆಸುವ ಬೆಂಗಳೂರಿನ ಎರಡು ಪ್ರಯೋಗಾಲಯಗಳನ್ನು ಹೆಸರಿದೆ ಹಾಗೂ ಮೊದಲ ಹಂತದ ಪರೀಕ್ಷೆಗಾಗಿ 3000/ರೂ. ಹಾಗೂ ಹೆಚ್ಚುವರಿ ದೃಢೀಕರಣಕ್ಕಾಗಿ 1500/ರೂ. ಗಳನ್ನು ನಿಗಧಿಪಡಿಸಿದೆ. ಒಟ್ಟು ಪರೀಕ್ಷೆಯ ವೆಚ್ಚ 4500/ರೂ. ಗಳನ್ನು ಮೀರಬಾರದು ಎಂದು ಸುತ್ತೋಲೆಯಲ್ಲಿ ಹೇಳಿದೆ.

ಸರ್ಕಾರದ ಈ ನಡೆಯ ಬಗ್ಗೆ ಹಲವಾರು ಜನ ಟೀಕಿಸಿದ್ದಾರೆ. ಚಿಂತಕ ಕೆ.ಪಿ. ಸುರೇಶ್ ಅವರು “ಸರಕಾರ ಜನದ್ರೋಹ ಮಾಡುತ್ತಿದೆ. ವಿಮಾನದಿಂದಿಳಿದವರನ್ನು ಸರಿಯಾಗಿ ಪರೀಕ್ಷಿಸದೇ ಬಿಟ್ಟವರು ಈ ಮಾರಿಯನ್ನು ಉಳಿದವರಿಗೆ ಅಂಟಿಸಿದ್ದಕ್ಕೆ ಸಾಮಾನ್ಯರು ಬೆಲೆ ತೆರಬೇಕಾಗಿದೆ. ಅಗ್ಗದ ಟೆಸ್ಟಿಂಗ್ ಕಿಟ್ ಅಭಿವೃದ್ಧಿಪಡಿಸಿದ ವರದಿ ಈಗಾಗಲೆ ಇದೆ. ಅದನ್ನು ಉತ್ಪಾದಿಸಿ ಹಂಚುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಆದರೆ ಇಂಥಾ ವಿಷಯಗಳು ಬಂದಾಗ ಅದರಿಂದ ತಪ್ಪಿಸುವ ಕಲೆ ಕೇಂದ್ರ ಸರಕಾರಕ್ಕೆ ಸಿದ್ಧಿಸಿದೆ.” ಎಂದಿದ್ದಾರಲ್ಲದೆ, “ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಎಲ್ಲಾ ನಾಗರಿಕರಿಗೂ ಕೊರೊನಾ ಪರೀಕ್ಷೆ ಉಚಿತ ಎಂದು ಮಾರ್ಚ್ 15 ರಂದು ಹೇಳಿದ್ದರು. ಆದರೆ ಈಗ ಮೆತ್ತಗೆ ಜವಾಬ್ದಾರಿಯಿಂದ ಜಾರಿಕೊಂಡ ಕೇಂದ್ರದ ಮೋದಿ ಸರಕಾರ ಸುತ್ತೋಲೆ ಕಳುಹಿಸಿದೆ. ಕಳ್ಳಾಟಕ್ಕೂ ಒಂದು ಮಿತಿ ಬೇಕು.” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...