Homeಕರ್ನಾಟಕVHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲವಾಗಿದ್ದು, ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೆಚ್‌.ಡಿ. ಕುಮಾರ ಸ್ವಾಮಿ ಶುಕ್ರವಾರ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಕುಮಾರಸ್ವಾಮಿ, “ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇದು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ʼಧರ್ಮೋ ರಕ್ಷತಿ ರಕ್ಷಿತಃʼ ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

“ವಿಶ್ವ ಹಿಂದೂ ಪರಿಷತ್‌, ʼವಿಶ್ವ ವಿನಾಶಕ ಪರಿಷತ್‌ʼ ಅಥವಾ ʼಧರ್ಮ ವಿನಾಶಕ ಪರಿಷತ್‌ʼ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ?” ಎಂದು ಎಂದು ಅವರು ಪ್ರಶ್ನಿಸಿದ್ದಾರೆ.

“ಕೊರೋನಾ ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ, ಧರ್ಮ ಮೀರಿ ಸೇವೆ ಮಾಡಿದ್ದಾರೆ. ʼಶವ ಸಂಸ್ಕಾರದಲ್ಲೂ ಕೀರ್ತಿʼಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ? ಸೋಂಕಿಗೆ ಬಲಿಯಾದವರ ಪಾರ್ಥೀವ ಶರೀರಗಳನ್ನು ನೀವು ಬಾಲಂಗೋಚಿ ಆಗಿರುವ ಪಕ್ಷದ ಸರಕಾರ ಹೇಗೆ ಕಂಡಿತು ಎಂಬುದಕ್ಕೆ ದಿವಂಗತ ಕೇಂದ್ರ ಮಂತ್ರಿ ಶ್ರೀ ಸುರೇಶ ಅಂಗಡಿಯವರೇ ಸಾಕ್ಷಿ. ಅವರ ಅಂತ್ಯಕ್ರಿಯೆ ಹೇಗಾಯಿತು ಎಂದು ಮಾಧ್ಯಮಗಳ ಮೂಲಕ ಕಣ್ಣಾರೆ ನೋಡಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಅಂದು ಕೇಂದ್ರ-ರಾಜ್ಯ ಸರಕಾರಗಳ ವೈಫಲ್ಯಗಳು ಯಾವ ಮಟ್ಟದಲ್ಲಿದ್ದವು? ಬೆಂಗಳೂರಿನಲ್ಲಿ ಯಾರೆಲ್ಲ ಶವ ಸಂಸ್ಕಾರ ಮಾಡಿದರು ಎನ್ನುವುದನ್ನು ನಾವೂ ಮಾಧ್ಯಮಗಳಲ್ಲಿ ಕಂಡಿದ್ದೇವೆ. ಆಗ ಇವರೆಲ್ಲ ಎಲ್ಲಿದ್ದರೋ ನನಗಂತೂ ಗೊತ್ತಿಲ್ಲ. ಡಿಜೆ ಹಳ್ಳಿ ಗಲಭೆ ಕಾರಣದ ಬಗ್ಗೆ ನೀವು ಏಕೆ ದನಿಯೆತ್ತುವುದಿಲ್ಲ? ಠಾಣೆಗೆ ಬೆಂಕಿ ಬಿದ್ದಾಗ ಅದರಲ್ಲಿ ಚಳಿ ಕಾಯಿಸಿಕೊಂಡವರು ನೀವು. ಧರ್ಮದ ಪಾಠ ಮಾಡುವ ನೀವು, ಧರ್ಮಗುರುಗಳಿಗೆ ಗೌರವ ಕೊಡಬೇಕು ಎನ್ನುವುದನ್ನೂ ತಿಳಿದಿರಬೇಕಲ್ಲವೇ? ನೀವು ಬಾಲಂಗೋಚಿ ಆಗಿರುವ ಸರಕಾರದ ಬೇಹುಗಾರಿಕೆ ವಿಭಾಗ ನಿದ್ದೆ ಮಾಡುತ್ತಿತ್ತು, ಏಕೆ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

“ಧರ್ಮ ರಕ್ಷಣೆ ಎಂದರೆ ಶಿವಮೊಗ್ಗದಲ್ಲಿ ಸಚಿವರೇ 144‌ ಸೆಕ್ಷನ್ ಉಲ್ಲಂಘಿಸುವುದಾ? ಅವರೇ ನಿಂತು ಹಿಂಸೆಗೆ ಪ್ರಚೋದನೆ ಕೊಡುವುದಾ? ನಾವ್ಯಾರೂ ಹೀಗೆ ಮಾಡಿಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಎಂದು ನೇರವಾಗಿ ಹೇಳಿದ್ದೇನೆ. ಹಿಜಾಬ್‌ ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ʼಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ” ಎಂದು ಅವರು ಹೇಳಿದ್ದಾರೆ.

“ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ʼಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...