Homeಕರ್ನಾಟಕVHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲವಾಗಿದ್ದು, ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೆಚ್‌.ಡಿ. ಕುಮಾರ ಸ್ವಾಮಿ ಶುಕ್ರವಾರ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಕುಮಾರಸ್ವಾಮಿ, “ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇದು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ʼಧರ್ಮೋ ರಕ್ಷತಿ ರಕ್ಷಿತಃʼ ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

“ವಿಶ್ವ ಹಿಂದೂ ಪರಿಷತ್‌, ʼವಿಶ್ವ ವಿನಾಶಕ ಪರಿಷತ್‌ʼ ಅಥವಾ ʼಧರ್ಮ ವಿನಾಶಕ ಪರಿಷತ್‌ʼ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ?” ಎಂದು ಎಂದು ಅವರು ಪ್ರಶ್ನಿಸಿದ್ದಾರೆ.

“ಕೊರೋನಾ ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ, ಧರ್ಮ ಮೀರಿ ಸೇವೆ ಮಾಡಿದ್ದಾರೆ. ʼಶವ ಸಂಸ್ಕಾರದಲ್ಲೂ ಕೀರ್ತಿʼಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ? ಸೋಂಕಿಗೆ ಬಲಿಯಾದವರ ಪಾರ್ಥೀವ ಶರೀರಗಳನ್ನು ನೀವು ಬಾಲಂಗೋಚಿ ಆಗಿರುವ ಪಕ್ಷದ ಸರಕಾರ ಹೇಗೆ ಕಂಡಿತು ಎಂಬುದಕ್ಕೆ ದಿವಂಗತ ಕೇಂದ್ರ ಮಂತ್ರಿ ಶ್ರೀ ಸುರೇಶ ಅಂಗಡಿಯವರೇ ಸಾಕ್ಷಿ. ಅವರ ಅಂತ್ಯಕ್ರಿಯೆ ಹೇಗಾಯಿತು ಎಂದು ಮಾಧ್ಯಮಗಳ ಮೂಲಕ ಕಣ್ಣಾರೆ ನೋಡಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಅಂದು ಕೇಂದ್ರ-ರಾಜ್ಯ ಸರಕಾರಗಳ ವೈಫಲ್ಯಗಳು ಯಾವ ಮಟ್ಟದಲ್ಲಿದ್ದವು? ಬೆಂಗಳೂರಿನಲ್ಲಿ ಯಾರೆಲ್ಲ ಶವ ಸಂಸ್ಕಾರ ಮಾಡಿದರು ಎನ್ನುವುದನ್ನು ನಾವೂ ಮಾಧ್ಯಮಗಳಲ್ಲಿ ಕಂಡಿದ್ದೇವೆ. ಆಗ ಇವರೆಲ್ಲ ಎಲ್ಲಿದ್ದರೋ ನನಗಂತೂ ಗೊತ್ತಿಲ್ಲ. ಡಿಜೆ ಹಳ್ಳಿ ಗಲಭೆ ಕಾರಣದ ಬಗ್ಗೆ ನೀವು ಏಕೆ ದನಿಯೆತ್ತುವುದಿಲ್ಲ? ಠಾಣೆಗೆ ಬೆಂಕಿ ಬಿದ್ದಾಗ ಅದರಲ್ಲಿ ಚಳಿ ಕಾಯಿಸಿಕೊಂಡವರು ನೀವು. ಧರ್ಮದ ಪಾಠ ಮಾಡುವ ನೀವು, ಧರ್ಮಗುರುಗಳಿಗೆ ಗೌರವ ಕೊಡಬೇಕು ಎನ್ನುವುದನ್ನೂ ತಿಳಿದಿರಬೇಕಲ್ಲವೇ? ನೀವು ಬಾಲಂಗೋಚಿ ಆಗಿರುವ ಸರಕಾರದ ಬೇಹುಗಾರಿಕೆ ವಿಭಾಗ ನಿದ್ದೆ ಮಾಡುತ್ತಿತ್ತು, ಏಕೆ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

“ಧರ್ಮ ರಕ್ಷಣೆ ಎಂದರೆ ಶಿವಮೊಗ್ಗದಲ್ಲಿ ಸಚಿವರೇ 144‌ ಸೆಕ್ಷನ್ ಉಲ್ಲಂಘಿಸುವುದಾ? ಅವರೇ ನಿಂತು ಹಿಂಸೆಗೆ ಪ್ರಚೋದನೆ ಕೊಡುವುದಾ? ನಾವ್ಯಾರೂ ಹೀಗೆ ಮಾಡಿಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಎಂದು ನೇರವಾಗಿ ಹೇಳಿದ್ದೇನೆ. ಹಿಜಾಬ್‌ ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ʼಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ” ಎಂದು ಅವರು ಹೇಳಿದ್ದಾರೆ.

“ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ʼಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...