Homeಕರ್ನಾಟಕVHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲವಾಗಿದ್ದು, ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೆಚ್‌.ಡಿ. ಕುಮಾರ ಸ್ವಾಮಿ ಶುಕ್ರವಾರ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಕುಮಾರಸ್ವಾಮಿ, “ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇದು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ʼಧರ್ಮೋ ರಕ್ಷತಿ ರಕ್ಷಿತಃʼ ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

“ವಿಶ್ವ ಹಿಂದೂ ಪರಿಷತ್‌, ʼವಿಶ್ವ ವಿನಾಶಕ ಪರಿಷತ್‌ʼ ಅಥವಾ ʼಧರ್ಮ ವಿನಾಶಕ ಪರಿಷತ್‌ʼ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ?” ಎಂದು ಎಂದು ಅವರು ಪ್ರಶ್ನಿಸಿದ್ದಾರೆ.

“ಕೊರೋನಾ ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ, ಧರ್ಮ ಮೀರಿ ಸೇವೆ ಮಾಡಿದ್ದಾರೆ. ʼಶವ ಸಂಸ್ಕಾರದಲ್ಲೂ ಕೀರ್ತಿʼಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ? ಸೋಂಕಿಗೆ ಬಲಿಯಾದವರ ಪಾರ್ಥೀವ ಶರೀರಗಳನ್ನು ನೀವು ಬಾಲಂಗೋಚಿ ಆಗಿರುವ ಪಕ್ಷದ ಸರಕಾರ ಹೇಗೆ ಕಂಡಿತು ಎಂಬುದಕ್ಕೆ ದಿವಂಗತ ಕೇಂದ್ರ ಮಂತ್ರಿ ಶ್ರೀ ಸುರೇಶ ಅಂಗಡಿಯವರೇ ಸಾಕ್ಷಿ. ಅವರ ಅಂತ್ಯಕ್ರಿಯೆ ಹೇಗಾಯಿತು ಎಂದು ಮಾಧ್ಯಮಗಳ ಮೂಲಕ ಕಣ್ಣಾರೆ ನೋಡಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಅಂದು ಕೇಂದ್ರ-ರಾಜ್ಯ ಸರಕಾರಗಳ ವೈಫಲ್ಯಗಳು ಯಾವ ಮಟ್ಟದಲ್ಲಿದ್ದವು? ಬೆಂಗಳೂರಿನಲ್ಲಿ ಯಾರೆಲ್ಲ ಶವ ಸಂಸ್ಕಾರ ಮಾಡಿದರು ಎನ್ನುವುದನ್ನು ನಾವೂ ಮಾಧ್ಯಮಗಳಲ್ಲಿ ಕಂಡಿದ್ದೇವೆ. ಆಗ ಇವರೆಲ್ಲ ಎಲ್ಲಿದ್ದರೋ ನನಗಂತೂ ಗೊತ್ತಿಲ್ಲ. ಡಿಜೆ ಹಳ್ಳಿ ಗಲಭೆ ಕಾರಣದ ಬಗ್ಗೆ ನೀವು ಏಕೆ ದನಿಯೆತ್ತುವುದಿಲ್ಲ? ಠಾಣೆಗೆ ಬೆಂಕಿ ಬಿದ್ದಾಗ ಅದರಲ್ಲಿ ಚಳಿ ಕಾಯಿಸಿಕೊಂಡವರು ನೀವು. ಧರ್ಮದ ಪಾಠ ಮಾಡುವ ನೀವು, ಧರ್ಮಗುರುಗಳಿಗೆ ಗೌರವ ಕೊಡಬೇಕು ಎನ್ನುವುದನ್ನೂ ತಿಳಿದಿರಬೇಕಲ್ಲವೇ? ನೀವು ಬಾಲಂಗೋಚಿ ಆಗಿರುವ ಸರಕಾರದ ಬೇಹುಗಾರಿಕೆ ವಿಭಾಗ ನಿದ್ದೆ ಮಾಡುತ್ತಿತ್ತು, ಏಕೆ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

“ಧರ್ಮ ರಕ್ಷಣೆ ಎಂದರೆ ಶಿವಮೊಗ್ಗದಲ್ಲಿ ಸಚಿವರೇ 144‌ ಸೆಕ್ಷನ್ ಉಲ್ಲಂಘಿಸುವುದಾ? ಅವರೇ ನಿಂತು ಹಿಂಸೆಗೆ ಪ್ರಚೋದನೆ ಕೊಡುವುದಾ? ನಾವ್ಯಾರೂ ಹೀಗೆ ಮಾಡಿಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಎಂದು ನೇರವಾಗಿ ಹೇಳಿದ್ದೇನೆ. ಹಿಜಾಬ್‌ ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ʼಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ” ಎಂದು ಅವರು ಹೇಳಿದ್ದಾರೆ.

“ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ʼಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...