Homeಕರ್ನಾಟಕVHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲವಾಗಿದ್ದು, ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೆಚ್‌.ಡಿ. ಕುಮಾರ ಸ್ವಾಮಿ ಶುಕ್ರವಾರ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಕುಮಾರಸ್ವಾಮಿ, “ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇದು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ʼಧರ್ಮೋ ರಕ್ಷತಿ ರಕ್ಷಿತಃʼ ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

“ವಿಶ್ವ ಹಿಂದೂ ಪರಿಷತ್‌, ʼವಿಶ್ವ ವಿನಾಶಕ ಪರಿಷತ್‌ʼ ಅಥವಾ ʼಧರ್ಮ ವಿನಾಶಕ ಪರಿಷತ್‌ʼ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ?” ಎಂದು ಎಂದು ಅವರು ಪ್ರಶ್ನಿಸಿದ್ದಾರೆ.

“ಕೊರೋನಾ ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ, ಧರ್ಮ ಮೀರಿ ಸೇವೆ ಮಾಡಿದ್ದಾರೆ. ʼಶವ ಸಂಸ್ಕಾರದಲ್ಲೂ ಕೀರ್ತಿʼಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ? ಸೋಂಕಿಗೆ ಬಲಿಯಾದವರ ಪಾರ್ಥೀವ ಶರೀರಗಳನ್ನು ನೀವು ಬಾಲಂಗೋಚಿ ಆಗಿರುವ ಪಕ್ಷದ ಸರಕಾರ ಹೇಗೆ ಕಂಡಿತು ಎಂಬುದಕ್ಕೆ ದಿವಂಗತ ಕೇಂದ್ರ ಮಂತ್ರಿ ಶ್ರೀ ಸುರೇಶ ಅಂಗಡಿಯವರೇ ಸಾಕ್ಷಿ. ಅವರ ಅಂತ್ಯಕ್ರಿಯೆ ಹೇಗಾಯಿತು ಎಂದು ಮಾಧ್ಯಮಗಳ ಮೂಲಕ ಕಣ್ಣಾರೆ ನೋಡಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಅಂದು ಕೇಂದ್ರ-ರಾಜ್ಯ ಸರಕಾರಗಳ ವೈಫಲ್ಯಗಳು ಯಾವ ಮಟ್ಟದಲ್ಲಿದ್ದವು? ಬೆಂಗಳೂರಿನಲ್ಲಿ ಯಾರೆಲ್ಲ ಶವ ಸಂಸ್ಕಾರ ಮಾಡಿದರು ಎನ್ನುವುದನ್ನು ನಾವೂ ಮಾಧ್ಯಮಗಳಲ್ಲಿ ಕಂಡಿದ್ದೇವೆ. ಆಗ ಇವರೆಲ್ಲ ಎಲ್ಲಿದ್ದರೋ ನನಗಂತೂ ಗೊತ್ತಿಲ್ಲ. ಡಿಜೆ ಹಳ್ಳಿ ಗಲಭೆ ಕಾರಣದ ಬಗ್ಗೆ ನೀವು ಏಕೆ ದನಿಯೆತ್ತುವುದಿಲ್ಲ? ಠಾಣೆಗೆ ಬೆಂಕಿ ಬಿದ್ದಾಗ ಅದರಲ್ಲಿ ಚಳಿ ಕಾಯಿಸಿಕೊಂಡವರು ನೀವು. ಧರ್ಮದ ಪಾಠ ಮಾಡುವ ನೀವು, ಧರ್ಮಗುರುಗಳಿಗೆ ಗೌರವ ಕೊಡಬೇಕು ಎನ್ನುವುದನ್ನೂ ತಿಳಿದಿರಬೇಕಲ್ಲವೇ? ನೀವು ಬಾಲಂಗೋಚಿ ಆಗಿರುವ ಸರಕಾರದ ಬೇಹುಗಾರಿಕೆ ವಿಭಾಗ ನಿದ್ದೆ ಮಾಡುತ್ತಿತ್ತು, ಏಕೆ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

“ಧರ್ಮ ರಕ್ಷಣೆ ಎಂದರೆ ಶಿವಮೊಗ್ಗದಲ್ಲಿ ಸಚಿವರೇ 144‌ ಸೆಕ್ಷನ್ ಉಲ್ಲಂಘಿಸುವುದಾ? ಅವರೇ ನಿಂತು ಹಿಂಸೆಗೆ ಪ್ರಚೋದನೆ ಕೊಡುವುದಾ? ನಾವ್ಯಾರೂ ಹೀಗೆ ಮಾಡಿಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಎಂದು ನೇರವಾಗಿ ಹೇಳಿದ್ದೇನೆ. ಹಿಜಾಬ್‌ ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ʼಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ” ಎಂದು ಅವರು ಹೇಳಿದ್ದಾರೆ.

“ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ʼಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...