Homeಕರ್ನಾಟಕVHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲವಾಗಿದ್ದು, ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೆಚ್‌.ಡಿ. ಕುಮಾರ ಸ್ವಾಮಿ ಶುಕ್ರವಾರ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಕುಮಾರಸ್ವಾಮಿ, “ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇದು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ʼಧರ್ಮೋ ರಕ್ಷತಿ ರಕ್ಷಿತಃʼ ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

“ವಿಶ್ವ ಹಿಂದೂ ಪರಿಷತ್‌, ʼವಿಶ್ವ ವಿನಾಶಕ ಪರಿಷತ್‌ʼ ಅಥವಾ ʼಧರ್ಮ ವಿನಾಶಕ ಪರಿಷತ್‌ʼ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ?” ಎಂದು ಎಂದು ಅವರು ಪ್ರಶ್ನಿಸಿದ್ದಾರೆ.

“ಕೊರೋನಾ ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ, ಧರ್ಮ ಮೀರಿ ಸೇವೆ ಮಾಡಿದ್ದಾರೆ. ʼಶವ ಸಂಸ್ಕಾರದಲ್ಲೂ ಕೀರ್ತಿʼಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ? ಸೋಂಕಿಗೆ ಬಲಿಯಾದವರ ಪಾರ್ಥೀವ ಶರೀರಗಳನ್ನು ನೀವು ಬಾಲಂಗೋಚಿ ಆಗಿರುವ ಪಕ್ಷದ ಸರಕಾರ ಹೇಗೆ ಕಂಡಿತು ಎಂಬುದಕ್ಕೆ ದಿವಂಗತ ಕೇಂದ್ರ ಮಂತ್ರಿ ಶ್ರೀ ಸುರೇಶ ಅಂಗಡಿಯವರೇ ಸಾಕ್ಷಿ. ಅವರ ಅಂತ್ಯಕ್ರಿಯೆ ಹೇಗಾಯಿತು ಎಂದು ಮಾಧ್ಯಮಗಳ ಮೂಲಕ ಕಣ್ಣಾರೆ ನೋಡಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಅಂದು ಕೇಂದ್ರ-ರಾಜ್ಯ ಸರಕಾರಗಳ ವೈಫಲ್ಯಗಳು ಯಾವ ಮಟ್ಟದಲ್ಲಿದ್ದವು? ಬೆಂಗಳೂರಿನಲ್ಲಿ ಯಾರೆಲ್ಲ ಶವ ಸಂಸ್ಕಾರ ಮಾಡಿದರು ಎನ್ನುವುದನ್ನು ನಾವೂ ಮಾಧ್ಯಮಗಳಲ್ಲಿ ಕಂಡಿದ್ದೇವೆ. ಆಗ ಇವರೆಲ್ಲ ಎಲ್ಲಿದ್ದರೋ ನನಗಂತೂ ಗೊತ್ತಿಲ್ಲ. ಡಿಜೆ ಹಳ್ಳಿ ಗಲಭೆ ಕಾರಣದ ಬಗ್ಗೆ ನೀವು ಏಕೆ ದನಿಯೆತ್ತುವುದಿಲ್ಲ? ಠಾಣೆಗೆ ಬೆಂಕಿ ಬಿದ್ದಾಗ ಅದರಲ್ಲಿ ಚಳಿ ಕಾಯಿಸಿಕೊಂಡವರು ನೀವು. ಧರ್ಮದ ಪಾಠ ಮಾಡುವ ನೀವು, ಧರ್ಮಗುರುಗಳಿಗೆ ಗೌರವ ಕೊಡಬೇಕು ಎನ್ನುವುದನ್ನೂ ತಿಳಿದಿರಬೇಕಲ್ಲವೇ? ನೀವು ಬಾಲಂಗೋಚಿ ಆಗಿರುವ ಸರಕಾರದ ಬೇಹುಗಾರಿಕೆ ವಿಭಾಗ ನಿದ್ದೆ ಮಾಡುತ್ತಿತ್ತು, ಏಕೆ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

“ಧರ್ಮ ರಕ್ಷಣೆ ಎಂದರೆ ಶಿವಮೊಗ್ಗದಲ್ಲಿ ಸಚಿವರೇ 144‌ ಸೆಕ್ಷನ್ ಉಲ್ಲಂಘಿಸುವುದಾ? ಅವರೇ ನಿಂತು ಹಿಂಸೆಗೆ ಪ್ರಚೋದನೆ ಕೊಡುವುದಾ? ನಾವ್ಯಾರೂ ಹೀಗೆ ಮಾಡಿಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಎಂದು ನೇರವಾಗಿ ಹೇಳಿದ್ದೇನೆ. ಹಿಜಾಬ್‌ ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ʼಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ” ಎಂದು ಅವರು ಹೇಳಿದ್ದಾರೆ.

“ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ʼಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...