Homeಕರ್ನಾಟಕಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಚೇತನ್‌ ಅವರ ಪತ್ನಿ ಮೇಘಾ ಅವರು ಮಾತನಾಡಿದರು.

- Advertisement -
- Advertisement -

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟ ಒಂದೇ ಪರಿಹಾರ: ಮೇಘಾ
“ಪೊಲೀಸರು ಹೇಗೆ ಟಾರ್ಚರ್‌ ಮಾಡುತ್ತಾರೆ ಎಂದು ಕೇಳಿದ್ದೆ. ಆದರೆ ನಿನ್ನೆ ನಾನೇ ಇದನ್ನು ಅನುಭವಿಸಿದೆ” ಎಂದು ನಟ ಚೇತನ್‌ ಅವರ ಪತ್ನಿ ಮೇಘಾ ಹೇಳಿದರು.

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಚೇತನ್‌ ಅವರನ್ನು ಶೇಷಾದ್ರಿಪುರಂ ಪೊಲೀಸರು ಕರೆದೊಯ್ದು, ಗಂಟೆಗಟ್ಟಲೆ ಯಾವುದೇ ಮಾಹಿತಿ ನೀಡದೆ, ಯಾಕೆ ಬಂಧಿಸಲಾಗಿದೆ ಎಂಬುದನ್ನು ತಿಳಿಸದೆ ತೊಂದರೆ ನೀಡಿದ್ದನ್ನು ಖಂಡಿಸಿದ ಮೇಘಾ ಅವರು, “ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಒಬ್ಬ ಸೆಲೆಬ್ರಿಟಿಗೆ ಈ ಸ್ಥಿತಿ ಅಂದರೆ, ಸಾಮಾನ್ಯಜನರ ಸ್ಥಿತಿ ನೆನೆದರೆ ಭಯವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯತನಕ ಚೇತನ್‌ ಎಲ್ಲಿದ್ದಾರೆಂದು ಗೊತ್ತಾಗಲಿಲ್ಲ. ಕರ್ನಾಟಕ ಜಾತ್ಯತೀತ ನೆಲ. ಆದರೆ ಕರ್ನಾಟಕದಲ್ಲಿ ಈ ಥರ ಆಗುತ್ತಿರುವುದನ್ನು ನೋಡಿದರೆ ಭಯವಾಗುತ್ತಿದೆ ಎಂದು ತಿಳಿಸಿದರು.

ನಾನು ಕಾನೂನಿನ ವಿಚಾರ ಮಾತನಾಡುವುದಿಲ್ಲ. ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸುಳ್ಳು ಆರೋಪ ಮಾಡಲಾಗುತ್ತಿದೆ. ಚೇತನ್ ಅಷ್ಟೇ ಅಲ್ಲ. ಅನೇಕ ಸಾಮಾಜಿಕ ಹೋರಾಟಗಾರರಿಗೆ ಈ ರೀತಿ ತೊಂದರೆ ನೀಡಲಾಗಿದೆ. ಗೌರಿ ಲಂಕೇಶ್‌ ಏನಾದರು, ಇತರೆ ಹೋರಾಟಗಾರರಿಗೆ ಯಾವ ರೀತಿ ಬೆದರಿಕೆಗಳು ಬರುತ್ತಿವೆ ಎಂಬುದು ಗೊತ್ತಿದೆ ಎಂದರು.

ಸೆಲೆಬ್ರಿಟಿ ಆದವರಿಗೆ ಇಷ್ಟು ತೊಂದರೆಯಾಗಿದ್ದು ನೋಡಿರಲಿಲ್ಲ. ನನಗೆ ಭಯ ಆಗಿದೆ. ಯಾಕೆಂದರೆ ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ. ಇದಕ್ಕೆ ಇರುವ ಒಂದೇ ಒಂದು ಪರಿಹಾರವೆಂದರೆ ನಾವು ಇನ್ನೂ ಹೆಚ್ಚಿನ ಹೋರಾಟ ಮಾಡಬೇಕಿದೆ. ಬೇರೆ ವಿಧಿ ಇಲ್ಲ ಎಂದು ಎಚ್ಚರಿಸಿದರು.

“ನಾನು ಸುಮ್ಮನೆ ಇರುತ್ತೇನೆಂದರೆ ದಬ್ಬಾಳಿಕೆ ಮಾಡಿಯೇ ಮಾಡುತ್ತಾರೆ. ನಾವೆಲ್ಲ ಒಗ್ಗಟ್ಟಾಗಿ ಇರೋಣ. ಎಲ್ಲರನ್ನೂ ಜೈಲಿಗೆ ಹಾಕಲಿ. ನನ್ನನ್ನೂ ಹಾಕಲಿ. ನಾನು ಕೂಡ ಜೈಲಿಗೆ ಹೋಗಲು ಬಯಸುತ್ತೇನೆ. ಹೋರಾಟ ಮುಂದೆಯೂ ಆಗಲಿ” ಎಂದ ಅವರು ‘ಜೈ ಭೀಮ್‌’ ಎಂದು ಘೋಷಣೆ ಕೂಗಿದರು.

ಪ್ರೊ.ಹರಿರಾಮ್ ಮಾತನಾಡಿ, “ಉತ್ತರ ಭಾರತದ ಸಂಸ್ಕೃತಿಯನ್ನು ದಕ್ಷಿಣಕ್ಕೆ ಆಮದು ಮಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಧಕ್ಕೆಯಾಗುತ್ತಿದೆ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ವಕೀಲನಾಗಿ ನಾನು ಹೇಳುವುದಾದರೆ ಚೇತನ್‌ ಟ್ವೀಟ್‌ನಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಲೀ ಪ್ರಚೋದನೆಯಾಗಲೀ, ನಿಂದನೆಯಾಗಲಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ವಕೀಲರಾದ ಅನಂತ ನಾಯಕ್‌ ಮಾತನಾಡಿ, “ಸಂಬಂಧಪಡದ ಸುಳ್ಳು ಕೇಸ್‌ಗಳನ್ನು ಹಾಕಿ ಚೇತನ್‌ ಅವರ ಚಳವಳಿ, ಚಿಂತನೆಗಳನ್ನು ಹೊಸಕಿ ಹಾಕುತ್ತೇವೆ ಎಂದು ತಿಳಿದಿದ್ದರೆ ಅದು ಪೊಲೀಸರ ಪೆದ್ದುತನ. ದೂರು ದಾಖಲಾದ ತಕ್ಷಣ ಅನೇಕ ಮುಖಂಡರು ಪೊಲೀಸ್ ಠಾಣೆಗೆ ಹೋದೆವು. ಅಧಿಕಾರಿಗಳ ಬಳಿ ಮಾಹಿತಿ ಪಡೆಯಲು ಮುಂದಾದೆವು. ಯಾರು ದೂರು ನೀಡಿದ್ದಾರೆ ಎಂದು ಕೇಳಿದೆವು. ಯಾರೂ ಮಾಹಿತಿ ನೀಡುತ್ತಿರಲಿಲ್ಲ. ದೊಡ್ಡವರ ಬಳಿ ಮಾತನಾಡಬೇಕು ಸರ್ ಎಂದರು. ಇನ್‌ಸ್ಪೆಕ್ಟರ್‌, ಎಸಿಪಿ, ಐಪಿಎಸ್ ಅಧಿಕಾರಿಯೂ ದೊಡ್ಡವರತ್ತ ಬೆರಳು ತೋರಿಸಿದರು. ಯಾರೀ ಬಿಗ್‌ ಬಾಸ್?” ಎಂದು ಪ್ರಶ್ನಿಸಿದರು.

ಭಾಸ್ಕರ್‌ ಪ್ರಸಾದ್ ಮಾತನಾಡಿ, “ಕಾಳಿ ಸ್ವಾಮೀಜಿ ಎಂಬ ಗೂಂಡಾ ನಾವು ಮಚ್ಚು ಹಿಡಿದು ಬಂದರೆ ನೀವ್ಯಾರು ಉಳಿಯುವುದಿಲ್ಲ ಎಂದಿರುವುದನ್ನು ನೋಡಿದ್ದೇವೆ. ಪೊಲೀಸರು ಆತನ ಮೇಲೆ ಕ್ರಮ ಜರುಗಿಸುವುದಿಲ್ಲ. ಸಚಿವ ಈಶ್ವರಪ್ಪನವರು ಈ ದೇಶದ ಭಾವುಟವನ್ನು ಬದಲಾಯಿಸುತ್ತೇವೆ ಎನ್ನುತ್ತಾರೆ. ಧನ ತಿನ್ನೋರ ಕೈ ಕತ್ತಿರಿಸಿ ಎಂದು ಹೇಳಿಕೆಗಳನ್ನು ನೀಡುತ್ತಾರೆ. ಅವರ ವಿರುದ್ಧ ಯಾರೂ ಕ್ರಮ ಜರುಗಿಸುವುದಿಲ್ಲ. ಆದರೆ ದಲಿತರು, ಆದಿವಾಸಿಗಳ ಪರ ಹೋರಾಡಿದ ಚೇತನ್‌ ವಿರುದ್ಧ ನೀವು ಕ್ರಮ ಜರುಗಿಸುತ್ತೀರಿ. ಒಬ್ಬೊಬ್ಬ ಹೋರಾಟಗಾರರನ್ನು ಕಂಡರೂ ನೀವು ಭಯ ಬೀಳುತ್ತೀರಿ. ಇವರಿಗೆ ರಾಜಕೀಯ ಶಕ್ತಿ ಇರುವುದರಿಂದಲೇ ಈ ರೀತಿ ವರ್ತಿಸುತ್ತಿದ್ದಾರೆ. ಇವರು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂದರು.

ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಚನ್ನಕೃಷ್ಣಪ್ಪ, ಸಿದ್ದರಾಜು, ಅಯ್ಯಪ್ಪ, ಗಡಿನಾಡು ಕನ್ನಡಿಗರ ಸಂಘಟನೆಯ ಅಧ್ಯಕ್ಷ ಸೈಯದ್ ಮಂಜು, ರಮೇಶ್‌, ನರಸಿಂಹಮೂರ್ತಿ ಮೊದಲಾದವರು ಪ್ರತಿಭಟನೆಯಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...