Homeಕರ್ನಾಟಕಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಚೇತನ್‌ ಅವರ ಪತ್ನಿ ಮೇಘಾ ಅವರು ಮಾತನಾಡಿದರು.

- Advertisement -
- Advertisement -

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟ ಒಂದೇ ಪರಿಹಾರ: ಮೇಘಾ
“ಪೊಲೀಸರು ಹೇಗೆ ಟಾರ್ಚರ್‌ ಮಾಡುತ್ತಾರೆ ಎಂದು ಕೇಳಿದ್ದೆ. ಆದರೆ ನಿನ್ನೆ ನಾನೇ ಇದನ್ನು ಅನುಭವಿಸಿದೆ” ಎಂದು ನಟ ಚೇತನ್‌ ಅವರ ಪತ್ನಿ ಮೇಘಾ ಹೇಳಿದರು.

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಚೇತನ್‌ ಅವರನ್ನು ಶೇಷಾದ್ರಿಪುರಂ ಪೊಲೀಸರು ಕರೆದೊಯ್ದು, ಗಂಟೆಗಟ್ಟಲೆ ಯಾವುದೇ ಮಾಹಿತಿ ನೀಡದೆ, ಯಾಕೆ ಬಂಧಿಸಲಾಗಿದೆ ಎಂಬುದನ್ನು ತಿಳಿಸದೆ ತೊಂದರೆ ನೀಡಿದ್ದನ್ನು ಖಂಡಿಸಿದ ಮೇಘಾ ಅವರು, “ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಒಬ್ಬ ಸೆಲೆಬ್ರಿಟಿಗೆ ಈ ಸ್ಥಿತಿ ಅಂದರೆ, ಸಾಮಾನ್ಯಜನರ ಸ್ಥಿತಿ ನೆನೆದರೆ ಭಯವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯತನಕ ಚೇತನ್‌ ಎಲ್ಲಿದ್ದಾರೆಂದು ಗೊತ್ತಾಗಲಿಲ್ಲ. ಕರ್ನಾಟಕ ಜಾತ್ಯತೀತ ನೆಲ. ಆದರೆ ಕರ್ನಾಟಕದಲ್ಲಿ ಈ ಥರ ಆಗುತ್ತಿರುವುದನ್ನು ನೋಡಿದರೆ ಭಯವಾಗುತ್ತಿದೆ ಎಂದು ತಿಳಿಸಿದರು.

ನಾನು ಕಾನೂನಿನ ವಿಚಾರ ಮಾತನಾಡುವುದಿಲ್ಲ. ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸುಳ್ಳು ಆರೋಪ ಮಾಡಲಾಗುತ್ತಿದೆ. ಚೇತನ್ ಅಷ್ಟೇ ಅಲ್ಲ. ಅನೇಕ ಸಾಮಾಜಿಕ ಹೋರಾಟಗಾರರಿಗೆ ಈ ರೀತಿ ತೊಂದರೆ ನೀಡಲಾಗಿದೆ. ಗೌರಿ ಲಂಕೇಶ್‌ ಏನಾದರು, ಇತರೆ ಹೋರಾಟಗಾರರಿಗೆ ಯಾವ ರೀತಿ ಬೆದರಿಕೆಗಳು ಬರುತ್ತಿವೆ ಎಂಬುದು ಗೊತ್ತಿದೆ ಎಂದರು.

ಸೆಲೆಬ್ರಿಟಿ ಆದವರಿಗೆ ಇಷ್ಟು ತೊಂದರೆಯಾಗಿದ್ದು ನೋಡಿರಲಿಲ್ಲ. ನನಗೆ ಭಯ ಆಗಿದೆ. ಯಾಕೆಂದರೆ ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ. ಇದಕ್ಕೆ ಇರುವ ಒಂದೇ ಒಂದು ಪರಿಹಾರವೆಂದರೆ ನಾವು ಇನ್ನೂ ಹೆಚ್ಚಿನ ಹೋರಾಟ ಮಾಡಬೇಕಿದೆ. ಬೇರೆ ವಿಧಿ ಇಲ್ಲ ಎಂದು ಎಚ್ಚರಿಸಿದರು.

“ನಾನು ಸುಮ್ಮನೆ ಇರುತ್ತೇನೆಂದರೆ ದಬ್ಬಾಳಿಕೆ ಮಾಡಿಯೇ ಮಾಡುತ್ತಾರೆ. ನಾವೆಲ್ಲ ಒಗ್ಗಟ್ಟಾಗಿ ಇರೋಣ. ಎಲ್ಲರನ್ನೂ ಜೈಲಿಗೆ ಹಾಕಲಿ. ನನ್ನನ್ನೂ ಹಾಕಲಿ. ನಾನು ಕೂಡ ಜೈಲಿಗೆ ಹೋಗಲು ಬಯಸುತ್ತೇನೆ. ಹೋರಾಟ ಮುಂದೆಯೂ ಆಗಲಿ” ಎಂದ ಅವರು ‘ಜೈ ಭೀಮ್‌’ ಎಂದು ಘೋಷಣೆ ಕೂಗಿದರು.

ಪ್ರೊ.ಹರಿರಾಮ್ ಮಾತನಾಡಿ, “ಉತ್ತರ ಭಾರತದ ಸಂಸ್ಕೃತಿಯನ್ನು ದಕ್ಷಿಣಕ್ಕೆ ಆಮದು ಮಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಧಕ್ಕೆಯಾಗುತ್ತಿದೆ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ವಕೀಲನಾಗಿ ನಾನು ಹೇಳುವುದಾದರೆ ಚೇತನ್‌ ಟ್ವೀಟ್‌ನಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಲೀ ಪ್ರಚೋದನೆಯಾಗಲೀ, ನಿಂದನೆಯಾಗಲಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ವಕೀಲರಾದ ಅನಂತ ನಾಯಕ್‌ ಮಾತನಾಡಿ, “ಸಂಬಂಧಪಡದ ಸುಳ್ಳು ಕೇಸ್‌ಗಳನ್ನು ಹಾಕಿ ಚೇತನ್‌ ಅವರ ಚಳವಳಿ, ಚಿಂತನೆಗಳನ್ನು ಹೊಸಕಿ ಹಾಕುತ್ತೇವೆ ಎಂದು ತಿಳಿದಿದ್ದರೆ ಅದು ಪೊಲೀಸರ ಪೆದ್ದುತನ. ದೂರು ದಾಖಲಾದ ತಕ್ಷಣ ಅನೇಕ ಮುಖಂಡರು ಪೊಲೀಸ್ ಠಾಣೆಗೆ ಹೋದೆವು. ಅಧಿಕಾರಿಗಳ ಬಳಿ ಮಾಹಿತಿ ಪಡೆಯಲು ಮುಂದಾದೆವು. ಯಾರು ದೂರು ನೀಡಿದ್ದಾರೆ ಎಂದು ಕೇಳಿದೆವು. ಯಾರೂ ಮಾಹಿತಿ ನೀಡುತ್ತಿರಲಿಲ್ಲ. ದೊಡ್ಡವರ ಬಳಿ ಮಾತನಾಡಬೇಕು ಸರ್ ಎಂದರು. ಇನ್‌ಸ್ಪೆಕ್ಟರ್‌, ಎಸಿಪಿ, ಐಪಿಎಸ್ ಅಧಿಕಾರಿಯೂ ದೊಡ್ಡವರತ್ತ ಬೆರಳು ತೋರಿಸಿದರು. ಯಾರೀ ಬಿಗ್‌ ಬಾಸ್?” ಎಂದು ಪ್ರಶ್ನಿಸಿದರು.

ಭಾಸ್ಕರ್‌ ಪ್ರಸಾದ್ ಮಾತನಾಡಿ, “ಕಾಳಿ ಸ್ವಾಮೀಜಿ ಎಂಬ ಗೂಂಡಾ ನಾವು ಮಚ್ಚು ಹಿಡಿದು ಬಂದರೆ ನೀವ್ಯಾರು ಉಳಿಯುವುದಿಲ್ಲ ಎಂದಿರುವುದನ್ನು ನೋಡಿದ್ದೇವೆ. ಪೊಲೀಸರು ಆತನ ಮೇಲೆ ಕ್ರಮ ಜರುಗಿಸುವುದಿಲ್ಲ. ಸಚಿವ ಈಶ್ವರಪ್ಪನವರು ಈ ದೇಶದ ಭಾವುಟವನ್ನು ಬದಲಾಯಿಸುತ್ತೇವೆ ಎನ್ನುತ್ತಾರೆ. ಧನ ತಿನ್ನೋರ ಕೈ ಕತ್ತಿರಿಸಿ ಎಂದು ಹೇಳಿಕೆಗಳನ್ನು ನೀಡುತ್ತಾರೆ. ಅವರ ವಿರುದ್ಧ ಯಾರೂ ಕ್ರಮ ಜರುಗಿಸುವುದಿಲ್ಲ. ಆದರೆ ದಲಿತರು, ಆದಿವಾಸಿಗಳ ಪರ ಹೋರಾಡಿದ ಚೇತನ್‌ ವಿರುದ್ಧ ನೀವು ಕ್ರಮ ಜರುಗಿಸುತ್ತೀರಿ. ಒಬ್ಬೊಬ್ಬ ಹೋರಾಟಗಾರರನ್ನು ಕಂಡರೂ ನೀವು ಭಯ ಬೀಳುತ್ತೀರಿ. ಇವರಿಗೆ ರಾಜಕೀಯ ಶಕ್ತಿ ಇರುವುದರಿಂದಲೇ ಈ ರೀತಿ ವರ್ತಿಸುತ್ತಿದ್ದಾರೆ. ಇವರು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂದರು.

ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಚನ್ನಕೃಷ್ಣಪ್ಪ, ಸಿದ್ದರಾಜು, ಅಯ್ಯಪ್ಪ, ಗಡಿನಾಡು ಕನ್ನಡಿಗರ ಸಂಘಟನೆಯ ಅಧ್ಯಕ್ಷ ಸೈಯದ್ ಮಂಜು, ರಮೇಶ್‌, ನರಸಿಂಹಮೂರ್ತಿ ಮೊದಲಾದವರು ಪ್ರತಿಭಟನೆಯಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...