Homeಕರ್ನಾಟಕಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಚೇತನ್‌ ಅವರ ಪತ್ನಿ ಮೇಘಾ ಅವರು ಮಾತನಾಡಿದರು.

- Advertisement -
- Advertisement -

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟ ಒಂದೇ ಪರಿಹಾರ: ಮೇಘಾ
“ಪೊಲೀಸರು ಹೇಗೆ ಟಾರ್ಚರ್‌ ಮಾಡುತ್ತಾರೆ ಎಂದು ಕೇಳಿದ್ದೆ. ಆದರೆ ನಿನ್ನೆ ನಾನೇ ಇದನ್ನು ಅನುಭವಿಸಿದೆ” ಎಂದು ನಟ ಚೇತನ್‌ ಅವರ ಪತ್ನಿ ಮೇಘಾ ಹೇಳಿದರು.

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಚೇತನ್‌ ಅವರನ್ನು ಶೇಷಾದ್ರಿಪುರಂ ಪೊಲೀಸರು ಕರೆದೊಯ್ದು, ಗಂಟೆಗಟ್ಟಲೆ ಯಾವುದೇ ಮಾಹಿತಿ ನೀಡದೆ, ಯಾಕೆ ಬಂಧಿಸಲಾಗಿದೆ ಎಂಬುದನ್ನು ತಿಳಿಸದೆ ತೊಂದರೆ ನೀಡಿದ್ದನ್ನು ಖಂಡಿಸಿದ ಮೇಘಾ ಅವರು, “ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಒಬ್ಬ ಸೆಲೆಬ್ರಿಟಿಗೆ ಈ ಸ್ಥಿತಿ ಅಂದರೆ, ಸಾಮಾನ್ಯಜನರ ಸ್ಥಿತಿ ನೆನೆದರೆ ಭಯವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯತನಕ ಚೇತನ್‌ ಎಲ್ಲಿದ್ದಾರೆಂದು ಗೊತ್ತಾಗಲಿಲ್ಲ. ಕರ್ನಾಟಕ ಜಾತ್ಯತೀತ ನೆಲ. ಆದರೆ ಕರ್ನಾಟಕದಲ್ಲಿ ಈ ಥರ ಆಗುತ್ತಿರುವುದನ್ನು ನೋಡಿದರೆ ಭಯವಾಗುತ್ತಿದೆ ಎಂದು ತಿಳಿಸಿದರು.

ನಾನು ಕಾನೂನಿನ ವಿಚಾರ ಮಾತನಾಡುವುದಿಲ್ಲ. ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸುಳ್ಳು ಆರೋಪ ಮಾಡಲಾಗುತ್ತಿದೆ. ಚೇತನ್ ಅಷ್ಟೇ ಅಲ್ಲ. ಅನೇಕ ಸಾಮಾಜಿಕ ಹೋರಾಟಗಾರರಿಗೆ ಈ ರೀತಿ ತೊಂದರೆ ನೀಡಲಾಗಿದೆ. ಗೌರಿ ಲಂಕೇಶ್‌ ಏನಾದರು, ಇತರೆ ಹೋರಾಟಗಾರರಿಗೆ ಯಾವ ರೀತಿ ಬೆದರಿಕೆಗಳು ಬರುತ್ತಿವೆ ಎಂಬುದು ಗೊತ್ತಿದೆ ಎಂದರು.

ಸೆಲೆಬ್ರಿಟಿ ಆದವರಿಗೆ ಇಷ್ಟು ತೊಂದರೆಯಾಗಿದ್ದು ನೋಡಿರಲಿಲ್ಲ. ನನಗೆ ಭಯ ಆಗಿದೆ. ಯಾಕೆಂದರೆ ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ. ಇದಕ್ಕೆ ಇರುವ ಒಂದೇ ಒಂದು ಪರಿಹಾರವೆಂದರೆ ನಾವು ಇನ್ನೂ ಹೆಚ್ಚಿನ ಹೋರಾಟ ಮಾಡಬೇಕಿದೆ. ಬೇರೆ ವಿಧಿ ಇಲ್ಲ ಎಂದು ಎಚ್ಚರಿಸಿದರು.

“ನಾನು ಸುಮ್ಮನೆ ಇರುತ್ತೇನೆಂದರೆ ದಬ್ಬಾಳಿಕೆ ಮಾಡಿಯೇ ಮಾಡುತ್ತಾರೆ. ನಾವೆಲ್ಲ ಒಗ್ಗಟ್ಟಾಗಿ ಇರೋಣ. ಎಲ್ಲರನ್ನೂ ಜೈಲಿಗೆ ಹಾಕಲಿ. ನನ್ನನ್ನೂ ಹಾಕಲಿ. ನಾನು ಕೂಡ ಜೈಲಿಗೆ ಹೋಗಲು ಬಯಸುತ್ತೇನೆ. ಹೋರಾಟ ಮುಂದೆಯೂ ಆಗಲಿ” ಎಂದ ಅವರು ‘ಜೈ ಭೀಮ್‌’ ಎಂದು ಘೋಷಣೆ ಕೂಗಿದರು.

ಪ್ರೊ.ಹರಿರಾಮ್ ಮಾತನಾಡಿ, “ಉತ್ತರ ಭಾರತದ ಸಂಸ್ಕೃತಿಯನ್ನು ದಕ್ಷಿಣಕ್ಕೆ ಆಮದು ಮಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಧಕ್ಕೆಯಾಗುತ್ತಿದೆ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ವಕೀಲನಾಗಿ ನಾನು ಹೇಳುವುದಾದರೆ ಚೇತನ್‌ ಟ್ವೀಟ್‌ನಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಲೀ ಪ್ರಚೋದನೆಯಾಗಲೀ, ನಿಂದನೆಯಾಗಲಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ವಕೀಲರಾದ ಅನಂತ ನಾಯಕ್‌ ಮಾತನಾಡಿ, “ಸಂಬಂಧಪಡದ ಸುಳ್ಳು ಕೇಸ್‌ಗಳನ್ನು ಹಾಕಿ ಚೇತನ್‌ ಅವರ ಚಳವಳಿ, ಚಿಂತನೆಗಳನ್ನು ಹೊಸಕಿ ಹಾಕುತ್ತೇವೆ ಎಂದು ತಿಳಿದಿದ್ದರೆ ಅದು ಪೊಲೀಸರ ಪೆದ್ದುತನ. ದೂರು ದಾಖಲಾದ ತಕ್ಷಣ ಅನೇಕ ಮುಖಂಡರು ಪೊಲೀಸ್ ಠಾಣೆಗೆ ಹೋದೆವು. ಅಧಿಕಾರಿಗಳ ಬಳಿ ಮಾಹಿತಿ ಪಡೆಯಲು ಮುಂದಾದೆವು. ಯಾರು ದೂರು ನೀಡಿದ್ದಾರೆ ಎಂದು ಕೇಳಿದೆವು. ಯಾರೂ ಮಾಹಿತಿ ನೀಡುತ್ತಿರಲಿಲ್ಲ. ದೊಡ್ಡವರ ಬಳಿ ಮಾತನಾಡಬೇಕು ಸರ್ ಎಂದರು. ಇನ್‌ಸ್ಪೆಕ್ಟರ್‌, ಎಸಿಪಿ, ಐಪಿಎಸ್ ಅಧಿಕಾರಿಯೂ ದೊಡ್ಡವರತ್ತ ಬೆರಳು ತೋರಿಸಿದರು. ಯಾರೀ ಬಿಗ್‌ ಬಾಸ್?” ಎಂದು ಪ್ರಶ್ನಿಸಿದರು.

ಭಾಸ್ಕರ್‌ ಪ್ರಸಾದ್ ಮಾತನಾಡಿ, “ಕಾಳಿ ಸ್ವಾಮೀಜಿ ಎಂಬ ಗೂಂಡಾ ನಾವು ಮಚ್ಚು ಹಿಡಿದು ಬಂದರೆ ನೀವ್ಯಾರು ಉಳಿಯುವುದಿಲ್ಲ ಎಂದಿರುವುದನ್ನು ನೋಡಿದ್ದೇವೆ. ಪೊಲೀಸರು ಆತನ ಮೇಲೆ ಕ್ರಮ ಜರುಗಿಸುವುದಿಲ್ಲ. ಸಚಿವ ಈಶ್ವರಪ್ಪನವರು ಈ ದೇಶದ ಭಾವುಟವನ್ನು ಬದಲಾಯಿಸುತ್ತೇವೆ ಎನ್ನುತ್ತಾರೆ. ಧನ ತಿನ್ನೋರ ಕೈ ಕತ್ತಿರಿಸಿ ಎಂದು ಹೇಳಿಕೆಗಳನ್ನು ನೀಡುತ್ತಾರೆ. ಅವರ ವಿರುದ್ಧ ಯಾರೂ ಕ್ರಮ ಜರುಗಿಸುವುದಿಲ್ಲ. ಆದರೆ ದಲಿತರು, ಆದಿವಾಸಿಗಳ ಪರ ಹೋರಾಡಿದ ಚೇತನ್‌ ವಿರುದ್ಧ ನೀವು ಕ್ರಮ ಜರುಗಿಸುತ್ತೀರಿ. ಒಬ್ಬೊಬ್ಬ ಹೋರಾಟಗಾರರನ್ನು ಕಂಡರೂ ನೀವು ಭಯ ಬೀಳುತ್ತೀರಿ. ಇವರಿಗೆ ರಾಜಕೀಯ ಶಕ್ತಿ ಇರುವುದರಿಂದಲೇ ಈ ರೀತಿ ವರ್ತಿಸುತ್ತಿದ್ದಾರೆ. ಇವರು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂದರು.

ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಚನ್ನಕೃಷ್ಣಪ್ಪ, ಸಿದ್ದರಾಜು, ಅಯ್ಯಪ್ಪ, ಗಡಿನಾಡು ಕನ್ನಡಿಗರ ಸಂಘಟನೆಯ ಅಧ್ಯಕ್ಷ ಸೈಯದ್ ಮಂಜು, ರಮೇಶ್‌, ನರಸಿಂಹಮೂರ್ತಿ ಮೊದಲಾದವರು ಪ್ರತಿಭಟನೆಯಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...