Homeಕರ್ನಾಟಕಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಚೇತನ್‌ ಅವರ ಪತ್ನಿ ಮೇಘಾ ಅವರು ಮಾತನಾಡಿದರು.

- Advertisement -
- Advertisement -

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟ ಒಂದೇ ಪರಿಹಾರ: ಮೇಘಾ
“ಪೊಲೀಸರು ಹೇಗೆ ಟಾರ್ಚರ್‌ ಮಾಡುತ್ತಾರೆ ಎಂದು ಕೇಳಿದ್ದೆ. ಆದರೆ ನಿನ್ನೆ ನಾನೇ ಇದನ್ನು ಅನುಭವಿಸಿದೆ” ಎಂದು ನಟ ಚೇತನ್‌ ಅವರ ಪತ್ನಿ ಮೇಘಾ ಹೇಳಿದರು.

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಚೇತನ್‌ ಅವರನ್ನು ಶೇಷಾದ್ರಿಪುರಂ ಪೊಲೀಸರು ಕರೆದೊಯ್ದು, ಗಂಟೆಗಟ್ಟಲೆ ಯಾವುದೇ ಮಾಹಿತಿ ನೀಡದೆ, ಯಾಕೆ ಬಂಧಿಸಲಾಗಿದೆ ಎಂಬುದನ್ನು ತಿಳಿಸದೆ ತೊಂದರೆ ನೀಡಿದ್ದನ್ನು ಖಂಡಿಸಿದ ಮೇಘಾ ಅವರು, “ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಒಬ್ಬ ಸೆಲೆಬ್ರಿಟಿಗೆ ಈ ಸ್ಥಿತಿ ಅಂದರೆ, ಸಾಮಾನ್ಯಜನರ ಸ್ಥಿತಿ ನೆನೆದರೆ ಭಯವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯತನಕ ಚೇತನ್‌ ಎಲ್ಲಿದ್ದಾರೆಂದು ಗೊತ್ತಾಗಲಿಲ್ಲ. ಕರ್ನಾಟಕ ಜಾತ್ಯತೀತ ನೆಲ. ಆದರೆ ಕರ್ನಾಟಕದಲ್ಲಿ ಈ ಥರ ಆಗುತ್ತಿರುವುದನ್ನು ನೋಡಿದರೆ ಭಯವಾಗುತ್ತಿದೆ ಎಂದು ತಿಳಿಸಿದರು.

ನಾನು ಕಾನೂನಿನ ವಿಚಾರ ಮಾತನಾಡುವುದಿಲ್ಲ. ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸುಳ್ಳು ಆರೋಪ ಮಾಡಲಾಗುತ್ತಿದೆ. ಚೇತನ್ ಅಷ್ಟೇ ಅಲ್ಲ. ಅನೇಕ ಸಾಮಾಜಿಕ ಹೋರಾಟಗಾರರಿಗೆ ಈ ರೀತಿ ತೊಂದರೆ ನೀಡಲಾಗಿದೆ. ಗೌರಿ ಲಂಕೇಶ್‌ ಏನಾದರು, ಇತರೆ ಹೋರಾಟಗಾರರಿಗೆ ಯಾವ ರೀತಿ ಬೆದರಿಕೆಗಳು ಬರುತ್ತಿವೆ ಎಂಬುದು ಗೊತ್ತಿದೆ ಎಂದರು.

ಸೆಲೆಬ್ರಿಟಿ ಆದವರಿಗೆ ಇಷ್ಟು ತೊಂದರೆಯಾಗಿದ್ದು ನೋಡಿರಲಿಲ್ಲ. ನನಗೆ ಭಯ ಆಗಿದೆ. ಯಾಕೆಂದರೆ ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ. ಇದಕ್ಕೆ ಇರುವ ಒಂದೇ ಒಂದು ಪರಿಹಾರವೆಂದರೆ ನಾವು ಇನ್ನೂ ಹೆಚ್ಚಿನ ಹೋರಾಟ ಮಾಡಬೇಕಿದೆ. ಬೇರೆ ವಿಧಿ ಇಲ್ಲ ಎಂದು ಎಚ್ಚರಿಸಿದರು.

“ನಾನು ಸುಮ್ಮನೆ ಇರುತ್ತೇನೆಂದರೆ ದಬ್ಬಾಳಿಕೆ ಮಾಡಿಯೇ ಮಾಡುತ್ತಾರೆ. ನಾವೆಲ್ಲ ಒಗ್ಗಟ್ಟಾಗಿ ಇರೋಣ. ಎಲ್ಲರನ್ನೂ ಜೈಲಿಗೆ ಹಾಕಲಿ. ನನ್ನನ್ನೂ ಹಾಕಲಿ. ನಾನು ಕೂಡ ಜೈಲಿಗೆ ಹೋಗಲು ಬಯಸುತ್ತೇನೆ. ಹೋರಾಟ ಮುಂದೆಯೂ ಆಗಲಿ” ಎಂದ ಅವರು ‘ಜೈ ಭೀಮ್‌’ ಎಂದು ಘೋಷಣೆ ಕೂಗಿದರು.

ಪ್ರೊ.ಹರಿರಾಮ್ ಮಾತನಾಡಿ, “ಉತ್ತರ ಭಾರತದ ಸಂಸ್ಕೃತಿಯನ್ನು ದಕ್ಷಿಣಕ್ಕೆ ಆಮದು ಮಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಧಕ್ಕೆಯಾಗುತ್ತಿದೆ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ವಕೀಲನಾಗಿ ನಾನು ಹೇಳುವುದಾದರೆ ಚೇತನ್‌ ಟ್ವೀಟ್‌ನಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಲೀ ಪ್ರಚೋದನೆಯಾಗಲೀ, ನಿಂದನೆಯಾಗಲಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ವಕೀಲರಾದ ಅನಂತ ನಾಯಕ್‌ ಮಾತನಾಡಿ, “ಸಂಬಂಧಪಡದ ಸುಳ್ಳು ಕೇಸ್‌ಗಳನ್ನು ಹಾಕಿ ಚೇತನ್‌ ಅವರ ಚಳವಳಿ, ಚಿಂತನೆಗಳನ್ನು ಹೊಸಕಿ ಹಾಕುತ್ತೇವೆ ಎಂದು ತಿಳಿದಿದ್ದರೆ ಅದು ಪೊಲೀಸರ ಪೆದ್ದುತನ. ದೂರು ದಾಖಲಾದ ತಕ್ಷಣ ಅನೇಕ ಮುಖಂಡರು ಪೊಲೀಸ್ ಠಾಣೆಗೆ ಹೋದೆವು. ಅಧಿಕಾರಿಗಳ ಬಳಿ ಮಾಹಿತಿ ಪಡೆಯಲು ಮುಂದಾದೆವು. ಯಾರು ದೂರು ನೀಡಿದ್ದಾರೆ ಎಂದು ಕೇಳಿದೆವು. ಯಾರೂ ಮಾಹಿತಿ ನೀಡುತ್ತಿರಲಿಲ್ಲ. ದೊಡ್ಡವರ ಬಳಿ ಮಾತನಾಡಬೇಕು ಸರ್ ಎಂದರು. ಇನ್‌ಸ್ಪೆಕ್ಟರ್‌, ಎಸಿಪಿ, ಐಪಿಎಸ್ ಅಧಿಕಾರಿಯೂ ದೊಡ್ಡವರತ್ತ ಬೆರಳು ತೋರಿಸಿದರು. ಯಾರೀ ಬಿಗ್‌ ಬಾಸ್?” ಎಂದು ಪ್ರಶ್ನಿಸಿದರು.

ಭಾಸ್ಕರ್‌ ಪ್ರಸಾದ್ ಮಾತನಾಡಿ, “ಕಾಳಿ ಸ್ವಾಮೀಜಿ ಎಂಬ ಗೂಂಡಾ ನಾವು ಮಚ್ಚು ಹಿಡಿದು ಬಂದರೆ ನೀವ್ಯಾರು ಉಳಿಯುವುದಿಲ್ಲ ಎಂದಿರುವುದನ್ನು ನೋಡಿದ್ದೇವೆ. ಪೊಲೀಸರು ಆತನ ಮೇಲೆ ಕ್ರಮ ಜರುಗಿಸುವುದಿಲ್ಲ. ಸಚಿವ ಈಶ್ವರಪ್ಪನವರು ಈ ದೇಶದ ಭಾವುಟವನ್ನು ಬದಲಾಯಿಸುತ್ತೇವೆ ಎನ್ನುತ್ತಾರೆ. ಧನ ತಿನ್ನೋರ ಕೈ ಕತ್ತಿರಿಸಿ ಎಂದು ಹೇಳಿಕೆಗಳನ್ನು ನೀಡುತ್ತಾರೆ. ಅವರ ವಿರುದ್ಧ ಯಾರೂ ಕ್ರಮ ಜರುಗಿಸುವುದಿಲ್ಲ. ಆದರೆ ದಲಿತರು, ಆದಿವಾಸಿಗಳ ಪರ ಹೋರಾಡಿದ ಚೇತನ್‌ ವಿರುದ್ಧ ನೀವು ಕ್ರಮ ಜರುಗಿಸುತ್ತೀರಿ. ಒಬ್ಬೊಬ್ಬ ಹೋರಾಟಗಾರರನ್ನು ಕಂಡರೂ ನೀವು ಭಯ ಬೀಳುತ್ತೀರಿ. ಇವರಿಗೆ ರಾಜಕೀಯ ಶಕ್ತಿ ಇರುವುದರಿಂದಲೇ ಈ ರೀತಿ ವರ್ತಿಸುತ್ತಿದ್ದಾರೆ. ಇವರು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂದರು.

ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಚನ್ನಕೃಷ್ಣಪ್ಪ, ಸಿದ್ದರಾಜು, ಅಯ್ಯಪ್ಪ, ಗಡಿನಾಡು ಕನ್ನಡಿಗರ ಸಂಘಟನೆಯ ಅಧ್ಯಕ್ಷ ಸೈಯದ್ ಮಂಜು, ರಮೇಶ್‌, ನರಸಿಂಹಮೂರ್ತಿ ಮೊದಲಾದವರು ಪ್ರತಿಭಟನೆಯಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....