Homeಕರ್ನಾಟಕಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಚೇತನ್‌ ಅವರ ಪತ್ನಿ ಮೇಘಾ ಅವರು ಮಾತನಾಡಿದರು.

- Advertisement -
- Advertisement -

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟ ಒಂದೇ ಪರಿಹಾರ: ಮೇಘಾ
“ಪೊಲೀಸರು ಹೇಗೆ ಟಾರ್ಚರ್‌ ಮಾಡುತ್ತಾರೆ ಎಂದು ಕೇಳಿದ್ದೆ. ಆದರೆ ನಿನ್ನೆ ನಾನೇ ಇದನ್ನು ಅನುಭವಿಸಿದೆ” ಎಂದು ನಟ ಚೇತನ್‌ ಅವರ ಪತ್ನಿ ಮೇಘಾ ಹೇಳಿದರು.

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಚೇತನ್‌ ಅವರನ್ನು ಶೇಷಾದ್ರಿಪುರಂ ಪೊಲೀಸರು ಕರೆದೊಯ್ದು, ಗಂಟೆಗಟ್ಟಲೆ ಯಾವುದೇ ಮಾಹಿತಿ ನೀಡದೆ, ಯಾಕೆ ಬಂಧಿಸಲಾಗಿದೆ ಎಂಬುದನ್ನು ತಿಳಿಸದೆ ತೊಂದರೆ ನೀಡಿದ್ದನ್ನು ಖಂಡಿಸಿದ ಮೇಘಾ ಅವರು, “ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಒಬ್ಬ ಸೆಲೆಬ್ರಿಟಿಗೆ ಈ ಸ್ಥಿತಿ ಅಂದರೆ, ಸಾಮಾನ್ಯಜನರ ಸ್ಥಿತಿ ನೆನೆದರೆ ಭಯವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯತನಕ ಚೇತನ್‌ ಎಲ್ಲಿದ್ದಾರೆಂದು ಗೊತ್ತಾಗಲಿಲ್ಲ. ಕರ್ನಾಟಕ ಜಾತ್ಯತೀತ ನೆಲ. ಆದರೆ ಕರ್ನಾಟಕದಲ್ಲಿ ಈ ಥರ ಆಗುತ್ತಿರುವುದನ್ನು ನೋಡಿದರೆ ಭಯವಾಗುತ್ತಿದೆ ಎಂದು ತಿಳಿಸಿದರು.

ನಾನು ಕಾನೂನಿನ ವಿಚಾರ ಮಾತನಾಡುವುದಿಲ್ಲ. ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸುಳ್ಳು ಆರೋಪ ಮಾಡಲಾಗುತ್ತಿದೆ. ಚೇತನ್ ಅಷ್ಟೇ ಅಲ್ಲ. ಅನೇಕ ಸಾಮಾಜಿಕ ಹೋರಾಟಗಾರರಿಗೆ ಈ ರೀತಿ ತೊಂದರೆ ನೀಡಲಾಗಿದೆ. ಗೌರಿ ಲಂಕೇಶ್‌ ಏನಾದರು, ಇತರೆ ಹೋರಾಟಗಾರರಿಗೆ ಯಾವ ರೀತಿ ಬೆದರಿಕೆಗಳು ಬರುತ್ತಿವೆ ಎಂಬುದು ಗೊತ್ತಿದೆ ಎಂದರು.

ಸೆಲೆಬ್ರಿಟಿ ಆದವರಿಗೆ ಇಷ್ಟು ತೊಂದರೆಯಾಗಿದ್ದು ನೋಡಿರಲಿಲ್ಲ. ನನಗೆ ಭಯ ಆಗಿದೆ. ಯಾಕೆಂದರೆ ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ. ಇದಕ್ಕೆ ಇರುವ ಒಂದೇ ಒಂದು ಪರಿಹಾರವೆಂದರೆ ನಾವು ಇನ್ನೂ ಹೆಚ್ಚಿನ ಹೋರಾಟ ಮಾಡಬೇಕಿದೆ. ಬೇರೆ ವಿಧಿ ಇಲ್ಲ ಎಂದು ಎಚ್ಚರಿಸಿದರು.

“ನಾನು ಸುಮ್ಮನೆ ಇರುತ್ತೇನೆಂದರೆ ದಬ್ಬಾಳಿಕೆ ಮಾಡಿಯೇ ಮಾಡುತ್ತಾರೆ. ನಾವೆಲ್ಲ ಒಗ್ಗಟ್ಟಾಗಿ ಇರೋಣ. ಎಲ್ಲರನ್ನೂ ಜೈಲಿಗೆ ಹಾಕಲಿ. ನನ್ನನ್ನೂ ಹಾಕಲಿ. ನಾನು ಕೂಡ ಜೈಲಿಗೆ ಹೋಗಲು ಬಯಸುತ್ತೇನೆ. ಹೋರಾಟ ಮುಂದೆಯೂ ಆಗಲಿ” ಎಂದ ಅವರು ‘ಜೈ ಭೀಮ್‌’ ಎಂದು ಘೋಷಣೆ ಕೂಗಿದರು.

ಪ್ರೊ.ಹರಿರಾಮ್ ಮಾತನಾಡಿ, “ಉತ್ತರ ಭಾರತದ ಸಂಸ್ಕೃತಿಯನ್ನು ದಕ್ಷಿಣಕ್ಕೆ ಆಮದು ಮಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಧಕ್ಕೆಯಾಗುತ್ತಿದೆ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ವಕೀಲನಾಗಿ ನಾನು ಹೇಳುವುದಾದರೆ ಚೇತನ್‌ ಟ್ವೀಟ್‌ನಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಲೀ ಪ್ರಚೋದನೆಯಾಗಲೀ, ನಿಂದನೆಯಾಗಲಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ವಕೀಲರಾದ ಅನಂತ ನಾಯಕ್‌ ಮಾತನಾಡಿ, “ಸಂಬಂಧಪಡದ ಸುಳ್ಳು ಕೇಸ್‌ಗಳನ್ನು ಹಾಕಿ ಚೇತನ್‌ ಅವರ ಚಳವಳಿ, ಚಿಂತನೆಗಳನ್ನು ಹೊಸಕಿ ಹಾಕುತ್ತೇವೆ ಎಂದು ತಿಳಿದಿದ್ದರೆ ಅದು ಪೊಲೀಸರ ಪೆದ್ದುತನ. ದೂರು ದಾಖಲಾದ ತಕ್ಷಣ ಅನೇಕ ಮುಖಂಡರು ಪೊಲೀಸ್ ಠಾಣೆಗೆ ಹೋದೆವು. ಅಧಿಕಾರಿಗಳ ಬಳಿ ಮಾಹಿತಿ ಪಡೆಯಲು ಮುಂದಾದೆವು. ಯಾರು ದೂರು ನೀಡಿದ್ದಾರೆ ಎಂದು ಕೇಳಿದೆವು. ಯಾರೂ ಮಾಹಿತಿ ನೀಡುತ್ತಿರಲಿಲ್ಲ. ದೊಡ್ಡವರ ಬಳಿ ಮಾತನಾಡಬೇಕು ಸರ್ ಎಂದರು. ಇನ್‌ಸ್ಪೆಕ್ಟರ್‌, ಎಸಿಪಿ, ಐಪಿಎಸ್ ಅಧಿಕಾರಿಯೂ ದೊಡ್ಡವರತ್ತ ಬೆರಳು ತೋರಿಸಿದರು. ಯಾರೀ ಬಿಗ್‌ ಬಾಸ್?” ಎಂದು ಪ್ರಶ್ನಿಸಿದರು.

ಭಾಸ್ಕರ್‌ ಪ್ರಸಾದ್ ಮಾತನಾಡಿ, “ಕಾಳಿ ಸ್ವಾಮೀಜಿ ಎಂಬ ಗೂಂಡಾ ನಾವು ಮಚ್ಚು ಹಿಡಿದು ಬಂದರೆ ನೀವ್ಯಾರು ಉಳಿಯುವುದಿಲ್ಲ ಎಂದಿರುವುದನ್ನು ನೋಡಿದ್ದೇವೆ. ಪೊಲೀಸರು ಆತನ ಮೇಲೆ ಕ್ರಮ ಜರುಗಿಸುವುದಿಲ್ಲ. ಸಚಿವ ಈಶ್ವರಪ್ಪನವರು ಈ ದೇಶದ ಭಾವುಟವನ್ನು ಬದಲಾಯಿಸುತ್ತೇವೆ ಎನ್ನುತ್ತಾರೆ. ಧನ ತಿನ್ನೋರ ಕೈ ಕತ್ತಿರಿಸಿ ಎಂದು ಹೇಳಿಕೆಗಳನ್ನು ನೀಡುತ್ತಾರೆ. ಅವರ ವಿರುದ್ಧ ಯಾರೂ ಕ್ರಮ ಜರುಗಿಸುವುದಿಲ್ಲ. ಆದರೆ ದಲಿತರು, ಆದಿವಾಸಿಗಳ ಪರ ಹೋರಾಡಿದ ಚೇತನ್‌ ವಿರುದ್ಧ ನೀವು ಕ್ರಮ ಜರುಗಿಸುತ್ತೀರಿ. ಒಬ್ಬೊಬ್ಬ ಹೋರಾಟಗಾರರನ್ನು ಕಂಡರೂ ನೀವು ಭಯ ಬೀಳುತ್ತೀರಿ. ಇವರಿಗೆ ರಾಜಕೀಯ ಶಕ್ತಿ ಇರುವುದರಿಂದಲೇ ಈ ರೀತಿ ವರ್ತಿಸುತ್ತಿದ್ದಾರೆ. ಇವರು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂದರು.

ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಚನ್ನಕೃಷ್ಣಪ್ಪ, ಸಿದ್ದರಾಜು, ಅಯ್ಯಪ್ಪ, ಗಡಿನಾಡು ಕನ್ನಡಿಗರ ಸಂಘಟನೆಯ ಅಧ್ಯಕ್ಷ ಸೈಯದ್ ಮಂಜು, ರಮೇಶ್‌, ನರಸಿಂಹಮೂರ್ತಿ ಮೊದಲಾದವರು ಪ್ರತಿಭಟನೆಯಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....