Homeಕರ್ನಾಟಕಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಚೇತನ್‌ ಅವರ ಪತ್ನಿ ಮೇಘಾ ಅವರು ಮಾತನಾಡಿದರು.

- Advertisement -
- Advertisement -

ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟ ಒಂದೇ ಪರಿಹಾರ: ಮೇಘಾ
“ಪೊಲೀಸರು ಹೇಗೆ ಟಾರ್ಚರ್‌ ಮಾಡುತ್ತಾರೆ ಎಂದು ಕೇಳಿದ್ದೆ. ಆದರೆ ನಿನ್ನೆ ನಾನೇ ಇದನ್ನು ಅನುಭವಿಸಿದೆ” ಎಂದು ನಟ ಚೇತನ್‌ ಅವರ ಪತ್ನಿ ಮೇಘಾ ಹೇಳಿದರು.

ನಟ ಚೇತನ್‌ ಅಹಿಂಸಾ ಅವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಚೇತನ್‌ ಅವರನ್ನು ಶೇಷಾದ್ರಿಪುರಂ ಪೊಲೀಸರು ಕರೆದೊಯ್ದು, ಗಂಟೆಗಟ್ಟಲೆ ಯಾವುದೇ ಮಾಹಿತಿ ನೀಡದೆ, ಯಾಕೆ ಬಂಧಿಸಲಾಗಿದೆ ಎಂಬುದನ್ನು ತಿಳಿಸದೆ ತೊಂದರೆ ನೀಡಿದ್ದನ್ನು ಖಂಡಿಸಿದ ಮೇಘಾ ಅವರು, “ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಒಬ್ಬ ಸೆಲೆಬ್ರಿಟಿಗೆ ಈ ಸ್ಥಿತಿ ಅಂದರೆ, ಸಾಮಾನ್ಯಜನರ ಸ್ಥಿತಿ ನೆನೆದರೆ ಭಯವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಮಂಗಳವಾರ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 10 ಗಂಟೆಯತನಕ ಚೇತನ್‌ ಎಲ್ಲಿದ್ದಾರೆಂದು ಗೊತ್ತಾಗಲಿಲ್ಲ. ಕರ್ನಾಟಕ ಜಾತ್ಯತೀತ ನೆಲ. ಆದರೆ ಕರ್ನಾಟಕದಲ್ಲಿ ಈ ಥರ ಆಗುತ್ತಿರುವುದನ್ನು ನೋಡಿದರೆ ಭಯವಾಗುತ್ತಿದೆ ಎಂದು ತಿಳಿಸಿದರು.

ನಾನು ಕಾನೂನಿನ ವಿಚಾರ ಮಾತನಾಡುವುದಿಲ್ಲ. ಕ್ಷುಲ್ಲಕ ಕಾರಣಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಸುಳ್ಳು ಆರೋಪ ಮಾಡಲಾಗುತ್ತಿದೆ. ಚೇತನ್ ಅಷ್ಟೇ ಅಲ್ಲ. ಅನೇಕ ಸಾಮಾಜಿಕ ಹೋರಾಟಗಾರರಿಗೆ ಈ ರೀತಿ ತೊಂದರೆ ನೀಡಲಾಗಿದೆ. ಗೌರಿ ಲಂಕೇಶ್‌ ಏನಾದರು, ಇತರೆ ಹೋರಾಟಗಾರರಿಗೆ ಯಾವ ರೀತಿ ಬೆದರಿಕೆಗಳು ಬರುತ್ತಿವೆ ಎಂಬುದು ಗೊತ್ತಿದೆ ಎಂದರು.

ಸೆಲೆಬ್ರಿಟಿ ಆದವರಿಗೆ ಇಷ್ಟು ತೊಂದರೆಯಾಗಿದ್ದು ನೋಡಿರಲಿಲ್ಲ. ನನಗೆ ಭಯ ಆಗಿದೆ. ಯಾಕೆಂದರೆ ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ. ಇದಕ್ಕೆ ಇರುವ ಒಂದೇ ಒಂದು ಪರಿಹಾರವೆಂದರೆ ನಾವು ಇನ್ನೂ ಹೆಚ್ಚಿನ ಹೋರಾಟ ಮಾಡಬೇಕಿದೆ. ಬೇರೆ ವಿಧಿ ಇಲ್ಲ ಎಂದು ಎಚ್ಚರಿಸಿದರು.

“ನಾನು ಸುಮ್ಮನೆ ಇರುತ್ತೇನೆಂದರೆ ದಬ್ಬಾಳಿಕೆ ಮಾಡಿಯೇ ಮಾಡುತ್ತಾರೆ. ನಾವೆಲ್ಲ ಒಗ್ಗಟ್ಟಾಗಿ ಇರೋಣ. ಎಲ್ಲರನ್ನೂ ಜೈಲಿಗೆ ಹಾಕಲಿ. ನನ್ನನ್ನೂ ಹಾಕಲಿ. ನಾನು ಕೂಡ ಜೈಲಿಗೆ ಹೋಗಲು ಬಯಸುತ್ತೇನೆ. ಹೋರಾಟ ಮುಂದೆಯೂ ಆಗಲಿ” ಎಂದ ಅವರು ‘ಜೈ ಭೀಮ್‌’ ಎಂದು ಘೋಷಣೆ ಕೂಗಿದರು.

ಪ್ರೊ.ಹರಿರಾಮ್ ಮಾತನಾಡಿ, “ಉತ್ತರ ಭಾರತದ ಸಂಸ್ಕೃತಿಯನ್ನು ದಕ್ಷಿಣಕ್ಕೆ ಆಮದು ಮಾಡಿಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಧಕ್ಕೆಯಾಗುತ್ತಿದೆ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕಾಗಿದೆ. ವಕೀಲನಾಗಿ ನಾನು ಹೇಳುವುದಾದರೆ ಚೇತನ್‌ ಟ್ವೀಟ್‌ನಲ್ಲಿ ಯಾವುದೇ ರೀತಿಯ ಕಾನೂನು ಉಲ್ಲಂಘನೆಯಾಗಲೀ ಪ್ರಚೋದನೆಯಾಗಲೀ, ನಿಂದನೆಯಾಗಲಿ ಇಲ್ಲ” ಎಂದು ಸ್ಪಷ್ಟಪಡಿಸಿದರು.

ವಕೀಲರಾದ ಅನಂತ ನಾಯಕ್‌ ಮಾತನಾಡಿ, “ಸಂಬಂಧಪಡದ ಸುಳ್ಳು ಕೇಸ್‌ಗಳನ್ನು ಹಾಕಿ ಚೇತನ್‌ ಅವರ ಚಳವಳಿ, ಚಿಂತನೆಗಳನ್ನು ಹೊಸಕಿ ಹಾಕುತ್ತೇವೆ ಎಂದು ತಿಳಿದಿದ್ದರೆ ಅದು ಪೊಲೀಸರ ಪೆದ್ದುತನ. ದೂರು ದಾಖಲಾದ ತಕ್ಷಣ ಅನೇಕ ಮುಖಂಡರು ಪೊಲೀಸ್ ಠಾಣೆಗೆ ಹೋದೆವು. ಅಧಿಕಾರಿಗಳ ಬಳಿ ಮಾಹಿತಿ ಪಡೆಯಲು ಮುಂದಾದೆವು. ಯಾರು ದೂರು ನೀಡಿದ್ದಾರೆ ಎಂದು ಕೇಳಿದೆವು. ಯಾರೂ ಮಾಹಿತಿ ನೀಡುತ್ತಿರಲಿಲ್ಲ. ದೊಡ್ಡವರ ಬಳಿ ಮಾತನಾಡಬೇಕು ಸರ್ ಎಂದರು. ಇನ್‌ಸ್ಪೆಕ್ಟರ್‌, ಎಸಿಪಿ, ಐಪಿಎಸ್ ಅಧಿಕಾರಿಯೂ ದೊಡ್ಡವರತ್ತ ಬೆರಳು ತೋರಿಸಿದರು. ಯಾರೀ ಬಿಗ್‌ ಬಾಸ್?” ಎಂದು ಪ್ರಶ್ನಿಸಿದರು.

ಭಾಸ್ಕರ್‌ ಪ್ರಸಾದ್ ಮಾತನಾಡಿ, “ಕಾಳಿ ಸ್ವಾಮೀಜಿ ಎಂಬ ಗೂಂಡಾ ನಾವು ಮಚ್ಚು ಹಿಡಿದು ಬಂದರೆ ನೀವ್ಯಾರು ಉಳಿಯುವುದಿಲ್ಲ ಎಂದಿರುವುದನ್ನು ನೋಡಿದ್ದೇವೆ. ಪೊಲೀಸರು ಆತನ ಮೇಲೆ ಕ್ರಮ ಜರುಗಿಸುವುದಿಲ್ಲ. ಸಚಿವ ಈಶ್ವರಪ್ಪನವರು ಈ ದೇಶದ ಭಾವುಟವನ್ನು ಬದಲಾಯಿಸುತ್ತೇವೆ ಎನ್ನುತ್ತಾರೆ. ಧನ ತಿನ್ನೋರ ಕೈ ಕತ್ತಿರಿಸಿ ಎಂದು ಹೇಳಿಕೆಗಳನ್ನು ನೀಡುತ್ತಾರೆ. ಅವರ ವಿರುದ್ಧ ಯಾರೂ ಕ್ರಮ ಜರುಗಿಸುವುದಿಲ್ಲ. ಆದರೆ ದಲಿತರು, ಆದಿವಾಸಿಗಳ ಪರ ಹೋರಾಡಿದ ಚೇತನ್‌ ವಿರುದ್ಧ ನೀವು ಕ್ರಮ ಜರುಗಿಸುತ್ತೀರಿ. ಒಬ್ಬೊಬ್ಬ ಹೋರಾಟಗಾರರನ್ನು ಕಂಡರೂ ನೀವು ಭಯ ಬೀಳುತ್ತೀರಿ. ಇವರಿಗೆ ರಾಜಕೀಯ ಶಕ್ತಿ ಇರುವುದರಿಂದಲೇ ಈ ರೀತಿ ವರ್ತಿಸುತ್ತಿದ್ದಾರೆ. ಇವರು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂದರು.

ದಲಿತ ಮುಖಂಡರಾದ ಮಾವಳ್ಳಿ ಶಂಕರ್‌, ಚನ್ನಕೃಷ್ಣಪ್ಪ, ಸಿದ್ದರಾಜು, ಅಯ್ಯಪ್ಪ, ಗಡಿನಾಡು ಕನ್ನಡಿಗರ ಸಂಘಟನೆಯ ಅಧ್ಯಕ್ಷ ಸೈಯದ್ ಮಂಜು, ರಮೇಶ್‌, ನರಸಿಂಹಮೂರ್ತಿ ಮೊದಲಾದವರು ಪ್ರತಿಭಟನೆಯಲ್ಲಿ ಹಾಜರಿದ್ದರು.


ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...