HomeUncategorizedಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ

ಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ

- Advertisement -
- Advertisement -

ಹಾಗೆ ನೋಡಿದರೆ ನಮ್ಮ ದೇಶಕ್ಕೆ ಕೊರೊನಾ ಸೋಂಕು ಈ ಪ್ರಮಾಣದಲ್ಲಿ ವಿಸ್ತರಿಸಲೇಬಾರದಿತ್ತು. ಚೀನಾ ಪಕ್ಕದ ಇತರ ರಾಷ್ಟ್ರಗಳು ಅಂತಹ ಮಾದರಿ ಸೃಷ್ಟಿ ಮಾಡಿದವು. ಸರ್ಕಾರಗಳು ಜವಾಬ್ದಾರಿಯುತವಾಗಿ ವರ್ತಿಸದೇ ಇರುವುದರಿಂದ ದೇಶಕ್ಕೆ ಕೊರೊನಾ ಪ್ರವೇಶ ಮಾಡಿತು. ಇಷ್ಟು ದೊಡ್ಡ ದೇಶವನ್ನು ಅಷ್ಟು ಸುಲಭದಲ್ಲಿ ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಕೆಲವರು ಎನ್ನುತ್ತಾರೆ. ಇದು ಎಷ್ಟು ನಿಜವೋ ಸುಳ್ಳೋ ಯಾರಿಗೆ ಗೊತ್ತು. ಆದರೆ ಸಾಂಕ್ರಾಮಿಕ ಹರಡಿದ ಮೇಲೂ ನಮ್ಮ ಪ್ರಭುತ್ವ ಮಾಡಿದ್ದೇನು?. ಚಪ್ಪಾಳೆ ತಟ್ಟಲು, ಬೆಳಕು ಹಚ್ಚಲು ದಿನಗಳ ಮುಂಚೆ ಹೇಳಿದ ಸರ್ಕಾರ ಇಡೀ ದೇಶವನ್ನು ಮುಚ್ಚುತ್ತಿದ್ದೇವೆ ಎಂದು ಹೇಳಿದ್ದು ಕೇವಲ ನಾಲ್ಕೈದು ಗಂಟೆಗಳ ಮುಂಚೆ. ಇದು ಈ ದೇಶದ ಸಂಪತ್ತನ್ನು ಉತ್ಪಾದಿಸುವ ಕಾರ್ಮಿಕವರ್ಗಕ್ಕೆ ಮಾಡಿದ ಅನ್ಯಾಯವಲ್ಲದೆ ಮತ್ತೇನು?. ನಂತರವಾದರೂ ಸರ್ಕಾರ ಎಚ್ಚೆತ್ತಿತೇ ಅದೂ ಇಲ್ಲ. ಲಕ್ಷಾಂತರ ವಲಸೆ ಕಾರ್ಮಿಕರ ಮಹಾವಲಸೆಯ ಕರಳು ಹಿಂಡುವ ಕತೆಗಳಿಗೂ ಸರ್ಕಾರ ಎಚ್ಚರವಾಗಲೇ ಇಲ್ಲ.

ಆದರೆ ದೇಶದ ಇತರ ಕಡೆಗಳಗಲ್ಲಿ ವಲಸೆ ಕಾರ್ಮಿಕರ ಕಣ್ಣೀರಿನ ಕತೆಗಳು ದೇಶದೆಲ್ಲೆಡೆ ಹರಿದಾಡುತ್ತಿರುವಾಗ, ನಮ್ಮದೇ ದೇಶದ ಕಮ್ಯೂನಿಷ್ಟ್ ಸರ್ಕಾರವಿರುವ ಕೇರಳದ್ದು ಬೇರೆಯೆ ಕತೆಯಾಗಿತ್ತು. ಇಲ್ಲಿ ವಲಸೆ ಕಾರ್ಮಿಕರಿಗೆ ದೇಶದ ಇತರ ಕಡೆಗಳಲ್ಲಿ ಆದಂತಹ ಯಾವುದೇ ಕಷ್ಟಗಳೂ ಇರಲಿಲ್ಲ.

ಅಷ್ಟೇ ಅಲ್ಲದೆ ಕೇರಳ ತನ್ನ ಊರನ್ನು ಕಟ್ಟಿದ ಈ ಕಾರ್ಮಿಕರಿಗೆ ವಲಸೆ ಕಾರ್ಮಿಕರು ಎನ್ನುವ ಹೆಸರನ್ನು ಕಿತ್ತೆಸೆದು “ಅತಿಥಿ” ಕಾರ್ಮಿಕರು ಎಂದು ಗೌರವಪೂರ್ವಕವಾಗಿ ಕರೆಯಿತು.

ಕೊರೊನಾ ಪ್ರಕರಣ ಮೊದಲಿಗೆ ವರದಿಯಾಗಿದ್ದು ಕೇರಳದಲ್ಲೇ . ಇದಕ್ಕಾಗಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಕೊರೊನಾ ಪರಿಹಾರವಾಗಿ ಬರೋಬ್ಬರಿ 20 ಸಾವಿರ ಕೋಟಿ ಪ್ಯಾಕೇಜನ್ನು ಘೋಷಿಸಿತು. ಈ ಹೊತ್ತಿಗೆ ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಇಷ್ಟೊಂದು ಮೊತ್ತದ ಪ್ಯಾಕೇಜನ್ನು ಘೋಷಿಸಿರಲಿಲ್ಲ. ಕೇಂದ್ರದ ಆಡಳಿತ ಪಕ್ಷದ ನಾಯಕರು ಕೇರಳದ ಈ ನಡೆಗೆ ತಕರಾರು ಮಾಡಿದರು, ಆದರೆ ಕೇರಳ ತಲೆ ಕೆಡಿಸಿಕೊಳ್ಳಲಿಲ್ಲ.

ವಲಸೆ ಕಾರ್ಮಿಕರನ್ನು ಅತಿಥಿ ಕಾರ್ಮಿಕರು ಎಂದು ಕರೆದ ಕೇರಳ ಅವರಿಗಾಗಿ ಸರ್ಕಾರದ ವತಿಯಿಂದಲೇ 15 ಸಾವಿರಕ್ಕಿಂತಲೂ ಹೆಚ್ಚು ಕೊರೊನಾ ಪರಿಹಾರ ಶಿಬಿರಗಳನ್ನು ತೆರೆದಿತ್ತು. ಇದರೊಂದಿಗೆ ಅಲ್ಲಿನ NGO ಗಳು ಕೂಡಾ 3397 ಪರಿಹಾರ ಶಿಬಿರಗಳನ್ನು ತೆರೆದು ಜನಸೇವೆಯಲ್ಲಿ ತೊಡಗಿದವು. ಎಪ್ರಿಲ್ 17ರಂದು ಕೇಂದ್ರ ಗೃಹ ಸಚಿವಾಲಯ ಸುಪ್ರೀಂಕೋರ್ಟಿಗೆ ನೀಡಿದ ಮಾಹಿತಿಯಂತೆ ದೇಶದಾದ್ಯಂತ ಇರುವ ಒಟ್ಟು ಪರಿಹಾರ ಶಿಬಿರಗಳಲ್ಲಿ 69% ಕ್ಕಿಂತ ಹೆಚ್ಚು ಶಿಬಿರಗಳು ಕೇರಳವೊಂದರಲ್ಲೇ ಇತ್ತು. ಇಲ್ಲಿ ಕೇವಲ ಕಾರ್ಮಿಕರನ್ನು ಕೂಡಿ ಹಾಕದೆ ಅವರಿಗೆ ಮನೋರಂಜನೆಗಾಗಿ ಟಿವಿ, ಕ್ಯಾರಮ್, ಚೆಸ್, ಮೊಬೈಲ್ ರೀಚಾರ್ಜ್ ಇತ್ಯಾದಿಗಳ ವ್ಯವಸ್ಥೆ ಮಾಡಿಕೊಟ್ಟಿತು. ವಿಶ್ವದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ಭಾಷೆಗಳನ್ನು ತಮ್ಮದೇ ಭಾಷೆಯಲ್ಲಿ ಮಾತನಾಡುವ ಕೇರಳ,  ಈ ಕಾರ್ಮಿಕರೊಂದಿಗಿನ ಸಂವಹನಕ್ಕಾಗಿ ಅಸ್ಸಾಮಿ, ಒಡಿಯಾ, ಹಿಂದಿ, ಬಂಗಾಳಿ ಇತ್ಯಾದಿ ಭಾಷೆಗಳಲ್ಲಿ ಮಾತನಾಡಿತು, ಸಂದೇಶಗಳನ್ನು ಕೊಟ್ಟಿತು, ಪೋಸ್ಟರುಗಳನ್ನು ಹಂಚಿತು. ಇದಲ್ಲವೇ ನಾಡು ಕಟ್ಟಿದವರ ಋಣವನ್ನು ತೀರಿಸುವ ಬಗೆ.

ಕೇರಳದ  ಪರಿಹಾರ ಶಿಬಿರಗಳಲ್ಲಿ ಮೂರು ಲಕ್ಷ ಕಾರ್ಮಿಕ ಆಶ್ರಯ ಪಡೆಯುತ್ತಾರೆ. (ಸುಮ್ಮನೆ ನಿಮ್ಮ ಮಾಹಿತಿಗೆ ಕರ್ನಾಟಕದ ಪರಿಹಾರ ಶಿಬಿರಗಳಲ್ಲಿ ಇದ್ದ ವಲಸೆ ಕಾರ್ಮಿಕರ ಸಂಖ್ಯೆ ಕೇವಲ 16,138). ಕೇರಳದ ಈ ಪರಿಹಾರ ಶಿಬಿರಗಳಲ್ಲಿ ಒಂದುವರೆ ಲಕ್ಷ ಕಾರ್ಮಿಕರು ನೇರವಾಗಿ ವಸತಿ ಹಾಗೂ ಉಚಿತ ಊಟವನ್ನೂ ಪಡೆಯುತ್ತಾರೆ. ಇದಕ್ಕಾಗಿಯೆ ದೇಶದೆಲ್ಲೆಡೆ ವಲಸೆ ಕಾರ್ಮಿಕರು ಹಸಿವಿನ ಬೆಂಕಿಯಿಂದ ಧಗದಗಿಸುತ್ತಿದ್ದರೆ ಕೇರಳದ ’ಅತಿಥಿ ಕಾರ್ಮಿಕರು’ ತಾವು ಲಾಕ್‌ಡೌನ್ ನಂತರ ನಮ್ಮ ಕುಟುಂಬವನ್ನು ಸೇರಿಕೊಳ್ಳುತ್ತೇವೆ ಎಂದು ವಿಶ್ವಾಸದಿಂದು ಹೇಳಿದ್ದು. ಅವರ ವಿಶ್ವಾಸಗಳು, ನಿರೀಕ್ಷೆಗಳನ್ನು ಕೇರಳದ ಎಡಪಂಥೀಯ ಸರ್ಕಾರ ಹುಸಿಗೊಳಿಸಲೂ ಇಲ್ಲ. ತಮ್ಮೂರನ್ನು ಕಟ್ಟಿದ ’ಅತಿಥಿ ಕಾರ್ಮಿಕ’ರನ್ನು ಬಹಳ ಗೌರವಪೂರ್ವಕವಾಗಿ ಕಳುಹಿಸಿಕೊಟ್ಟಿತು. ಕಾರ್ಮಿಕರಿಗೆ ಉಚಿತ ರೈಲು ಪ್ರಯಾಣ, ಊರಿಗೆ ತಲುಪುವವರೆಗಿನ ಆಹಾರ, ರೈಲಿನಲ್ಲಿ ಪೋಲಿಸ್ ಭದ್ರತೆ, ವೈದ್ಯಕೀಯ ಸೌಲಭ್ಯ ಇತ್ಯಾದಿಗಳನ್ನು ನೀಡಿತು. ಕೇರಳದ ಕಾರ್ಯಕ್ಕೆ ಒರಿಸ್ಸಾ ಮುಖ್ಯಮಂತ್ರಿ ಧನ್ಯವಾದವನ್ನೂ ಹೇಳಿದರು.

ಒಂದು ಆಪತ್ತು ಎರಗಿದರೆ ವ್ಯವಸ್ಥೆಯನ್ನು ಹೇಗೆ ನಡೆಸಬೇಕು ಎಂಬುವುದಕ್ಕೆ ಕೇರಳ ಒಂದು ಅತ್ಯುತ್ತಮ ಉದಾಹರಣೆ. ಈ ಹಿಂದೆ ಕೇರಳಕ್ಕೆ ಎರಗಿದ ನಿಫಾ, ಶತಮಾನದ ಪ್ರವಾಹವನ್ನು ಕೇರಳ ಎದುರಿಸಿದ ರೀತಿ ಮಾದರಿ ಯೋಗ್ಯ. ಕೊರೊನಾ ದೇಶಕ್ಕೆ ಎರಗಿದ ಸಂದರ್ಭದಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿ ಮಾಡಿದ್ದ  ಕೇರಳದಲ್ಲಿ ಈಗ ಸಕ್ರಿಯವಾಗಿರುವ ಪ್ರಕರಣ ಕೇವಲ ನಲವತ್ತರ ಒಳಗೆ, ಅಲ್ಲಿ ಸೋಂಕಿನಿಂದ ಘಟಿಸಿರುವ ಸಾವು ಕೇವಲ ನಾಲ್ಕು. ವೃದ್ದರಿಗೆ ಅಪಾಯವೆಂದು ಹೇಳುವ ಈ , ಸೋಂಕು ತಗುಲಿಸಿಕೊಂಡ ಭಾರತದ ಅತ್ಯಂತ ಹಿರಿಯ 93 ವರ್ಷದ ವ್ಯಕ್ತಿಯೂ ಗುಣಮುಖರಾಗಿ ತಮ್ಮ ಮನೆಗೆ ಹೋಗುತ್ತಾರೆ.

ಸರ್ಕಾರಗಳು ಜನಪರವಾಗಿರುವುದು ಅಂದರೆ ಹೀಗೆಯೇ ಅಲ್ಲವೆ. ಹಾಗಾಗಿಯೇ ಹೀಗಂತೂ ಹೇಳಬಹುದು, ಕೇರಳ ರಾಜ್ಯ ಭಾರತವೆಂಬ ರಾಜ್ಯಗಳ ಒಕ್ಕೂಟಕ್ಕೆ ಮಾದರಿ. ಭಾರತ ಅನುಸರಿಸಬೇಕಾದ ದಾರಿ ಕೇರಳದಲ್ಲಿದೆ.


ವಿಡಿಯೋ ನೋಡಿ: ಏನಾಯ್ತು ಈ ಸುದ್ದಿಗಳು ? ಸದ್ದು…!!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...