HomeUncategorizedಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ

ಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ

- Advertisement -
- Advertisement -

ಹಾಗೆ ನೋಡಿದರೆ ನಮ್ಮ ದೇಶಕ್ಕೆ ಕೊರೊನಾ ಸೋಂಕು ಈ ಪ್ರಮಾಣದಲ್ಲಿ ವಿಸ್ತರಿಸಲೇಬಾರದಿತ್ತು. ಚೀನಾ ಪಕ್ಕದ ಇತರ ರಾಷ್ಟ್ರಗಳು ಅಂತಹ ಮಾದರಿ ಸೃಷ್ಟಿ ಮಾಡಿದವು. ಸರ್ಕಾರಗಳು ಜವಾಬ್ದಾರಿಯುತವಾಗಿ ವರ್ತಿಸದೇ ಇರುವುದರಿಂದ ದೇಶಕ್ಕೆ ಕೊರೊನಾ ಪ್ರವೇಶ ಮಾಡಿತು. ಇಷ್ಟು ದೊಡ್ಡ ದೇಶವನ್ನು ಅಷ್ಟು ಸುಲಭದಲ್ಲಿ ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಕೆಲವರು ಎನ್ನುತ್ತಾರೆ. ಇದು ಎಷ್ಟು ನಿಜವೋ ಸುಳ್ಳೋ ಯಾರಿಗೆ ಗೊತ್ತು. ಆದರೆ ಸಾಂಕ್ರಾಮಿಕ ಹರಡಿದ ಮೇಲೂ ನಮ್ಮ ಪ್ರಭುತ್ವ ಮಾಡಿದ್ದೇನು?. ಚಪ್ಪಾಳೆ ತಟ್ಟಲು, ಬೆಳಕು ಹಚ್ಚಲು ದಿನಗಳ ಮುಂಚೆ ಹೇಳಿದ ಸರ್ಕಾರ ಇಡೀ ದೇಶವನ್ನು ಮುಚ್ಚುತ್ತಿದ್ದೇವೆ ಎಂದು ಹೇಳಿದ್ದು ಕೇವಲ ನಾಲ್ಕೈದು ಗಂಟೆಗಳ ಮುಂಚೆ. ಇದು ಈ ದೇಶದ ಸಂಪತ್ತನ್ನು ಉತ್ಪಾದಿಸುವ ಕಾರ್ಮಿಕವರ್ಗಕ್ಕೆ ಮಾಡಿದ ಅನ್ಯಾಯವಲ್ಲದೆ ಮತ್ತೇನು?. ನಂತರವಾದರೂ ಸರ್ಕಾರ ಎಚ್ಚೆತ್ತಿತೇ ಅದೂ ಇಲ್ಲ. ಲಕ್ಷಾಂತರ ವಲಸೆ ಕಾರ್ಮಿಕರ ಮಹಾವಲಸೆಯ ಕರಳು ಹಿಂಡುವ ಕತೆಗಳಿಗೂ ಸರ್ಕಾರ ಎಚ್ಚರವಾಗಲೇ ಇಲ್ಲ.

ಆದರೆ ದೇಶದ ಇತರ ಕಡೆಗಳಗಲ್ಲಿ ವಲಸೆ ಕಾರ್ಮಿಕರ ಕಣ್ಣೀರಿನ ಕತೆಗಳು ದೇಶದೆಲ್ಲೆಡೆ ಹರಿದಾಡುತ್ತಿರುವಾಗ, ನಮ್ಮದೇ ದೇಶದ ಕಮ್ಯೂನಿಷ್ಟ್ ಸರ್ಕಾರವಿರುವ ಕೇರಳದ್ದು ಬೇರೆಯೆ ಕತೆಯಾಗಿತ್ತು. ಇಲ್ಲಿ ವಲಸೆ ಕಾರ್ಮಿಕರಿಗೆ ದೇಶದ ಇತರ ಕಡೆಗಳಲ್ಲಿ ಆದಂತಹ ಯಾವುದೇ ಕಷ್ಟಗಳೂ ಇರಲಿಲ್ಲ.

ಅಷ್ಟೇ ಅಲ್ಲದೆ ಕೇರಳ ತನ್ನ ಊರನ್ನು ಕಟ್ಟಿದ ಈ ಕಾರ್ಮಿಕರಿಗೆ ವಲಸೆ ಕಾರ್ಮಿಕರು ಎನ್ನುವ ಹೆಸರನ್ನು ಕಿತ್ತೆಸೆದು “ಅತಿಥಿ” ಕಾರ್ಮಿಕರು ಎಂದು ಗೌರವಪೂರ್ವಕವಾಗಿ ಕರೆಯಿತು.

ಕೊರೊನಾ ಪ್ರಕರಣ ಮೊದಲಿಗೆ ವರದಿಯಾಗಿದ್ದು ಕೇರಳದಲ್ಲೇ . ಇದಕ್ಕಾಗಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಕೊರೊನಾ ಪರಿಹಾರವಾಗಿ ಬರೋಬ್ಬರಿ 20 ಸಾವಿರ ಕೋಟಿ ಪ್ಯಾಕೇಜನ್ನು ಘೋಷಿಸಿತು. ಈ ಹೊತ್ತಿಗೆ ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಇಷ್ಟೊಂದು ಮೊತ್ತದ ಪ್ಯಾಕೇಜನ್ನು ಘೋಷಿಸಿರಲಿಲ್ಲ. ಕೇಂದ್ರದ ಆಡಳಿತ ಪಕ್ಷದ ನಾಯಕರು ಕೇರಳದ ಈ ನಡೆಗೆ ತಕರಾರು ಮಾಡಿದರು, ಆದರೆ ಕೇರಳ ತಲೆ ಕೆಡಿಸಿಕೊಳ್ಳಲಿಲ್ಲ.

ವಲಸೆ ಕಾರ್ಮಿಕರನ್ನು ಅತಿಥಿ ಕಾರ್ಮಿಕರು ಎಂದು ಕರೆದ ಕೇರಳ ಅವರಿಗಾಗಿ ಸರ್ಕಾರದ ವತಿಯಿಂದಲೇ 15 ಸಾವಿರಕ್ಕಿಂತಲೂ ಹೆಚ್ಚು ಕೊರೊನಾ ಪರಿಹಾರ ಶಿಬಿರಗಳನ್ನು ತೆರೆದಿತ್ತು. ಇದರೊಂದಿಗೆ ಅಲ್ಲಿನ NGO ಗಳು ಕೂಡಾ 3397 ಪರಿಹಾರ ಶಿಬಿರಗಳನ್ನು ತೆರೆದು ಜನಸೇವೆಯಲ್ಲಿ ತೊಡಗಿದವು. ಎಪ್ರಿಲ್ 17ರಂದು ಕೇಂದ್ರ ಗೃಹ ಸಚಿವಾಲಯ ಸುಪ್ರೀಂಕೋರ್ಟಿಗೆ ನೀಡಿದ ಮಾಹಿತಿಯಂತೆ ದೇಶದಾದ್ಯಂತ ಇರುವ ಒಟ್ಟು ಪರಿಹಾರ ಶಿಬಿರಗಳಲ್ಲಿ 69% ಕ್ಕಿಂತ ಹೆಚ್ಚು ಶಿಬಿರಗಳು ಕೇರಳವೊಂದರಲ್ಲೇ ಇತ್ತು. ಇಲ್ಲಿ ಕೇವಲ ಕಾರ್ಮಿಕರನ್ನು ಕೂಡಿ ಹಾಕದೆ ಅವರಿಗೆ ಮನೋರಂಜನೆಗಾಗಿ ಟಿವಿ, ಕ್ಯಾರಮ್, ಚೆಸ್, ಮೊಬೈಲ್ ರೀಚಾರ್ಜ್ ಇತ್ಯಾದಿಗಳ ವ್ಯವಸ್ಥೆ ಮಾಡಿಕೊಟ್ಟಿತು. ವಿಶ್ವದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ಭಾಷೆಗಳನ್ನು ತಮ್ಮದೇ ಭಾಷೆಯಲ್ಲಿ ಮಾತನಾಡುವ ಕೇರಳ,  ಈ ಕಾರ್ಮಿಕರೊಂದಿಗಿನ ಸಂವಹನಕ್ಕಾಗಿ ಅಸ್ಸಾಮಿ, ಒಡಿಯಾ, ಹಿಂದಿ, ಬಂಗಾಳಿ ಇತ್ಯಾದಿ ಭಾಷೆಗಳಲ್ಲಿ ಮಾತನಾಡಿತು, ಸಂದೇಶಗಳನ್ನು ಕೊಟ್ಟಿತು, ಪೋಸ್ಟರುಗಳನ್ನು ಹಂಚಿತು. ಇದಲ್ಲವೇ ನಾಡು ಕಟ್ಟಿದವರ ಋಣವನ್ನು ತೀರಿಸುವ ಬಗೆ.

ಕೇರಳದ  ಪರಿಹಾರ ಶಿಬಿರಗಳಲ್ಲಿ ಮೂರು ಲಕ್ಷ ಕಾರ್ಮಿಕ ಆಶ್ರಯ ಪಡೆಯುತ್ತಾರೆ. (ಸುಮ್ಮನೆ ನಿಮ್ಮ ಮಾಹಿತಿಗೆ ಕರ್ನಾಟಕದ ಪರಿಹಾರ ಶಿಬಿರಗಳಲ್ಲಿ ಇದ್ದ ವಲಸೆ ಕಾರ್ಮಿಕರ ಸಂಖ್ಯೆ ಕೇವಲ 16,138). ಕೇರಳದ ಈ ಪರಿಹಾರ ಶಿಬಿರಗಳಲ್ಲಿ ಒಂದುವರೆ ಲಕ್ಷ ಕಾರ್ಮಿಕರು ನೇರವಾಗಿ ವಸತಿ ಹಾಗೂ ಉಚಿತ ಊಟವನ್ನೂ ಪಡೆಯುತ್ತಾರೆ. ಇದಕ್ಕಾಗಿಯೆ ದೇಶದೆಲ್ಲೆಡೆ ವಲಸೆ ಕಾರ್ಮಿಕರು ಹಸಿವಿನ ಬೆಂಕಿಯಿಂದ ಧಗದಗಿಸುತ್ತಿದ್ದರೆ ಕೇರಳದ ’ಅತಿಥಿ ಕಾರ್ಮಿಕರು’ ತಾವು ಲಾಕ್‌ಡೌನ್ ನಂತರ ನಮ್ಮ ಕುಟುಂಬವನ್ನು ಸೇರಿಕೊಳ್ಳುತ್ತೇವೆ ಎಂದು ವಿಶ್ವಾಸದಿಂದು ಹೇಳಿದ್ದು. ಅವರ ವಿಶ್ವಾಸಗಳು, ನಿರೀಕ್ಷೆಗಳನ್ನು ಕೇರಳದ ಎಡಪಂಥೀಯ ಸರ್ಕಾರ ಹುಸಿಗೊಳಿಸಲೂ ಇಲ್ಲ. ತಮ್ಮೂರನ್ನು ಕಟ್ಟಿದ ’ಅತಿಥಿ ಕಾರ್ಮಿಕ’ರನ್ನು ಬಹಳ ಗೌರವಪೂರ್ವಕವಾಗಿ ಕಳುಹಿಸಿಕೊಟ್ಟಿತು. ಕಾರ್ಮಿಕರಿಗೆ ಉಚಿತ ರೈಲು ಪ್ರಯಾಣ, ಊರಿಗೆ ತಲುಪುವವರೆಗಿನ ಆಹಾರ, ರೈಲಿನಲ್ಲಿ ಪೋಲಿಸ್ ಭದ್ರತೆ, ವೈದ್ಯಕೀಯ ಸೌಲಭ್ಯ ಇತ್ಯಾದಿಗಳನ್ನು ನೀಡಿತು. ಕೇರಳದ ಕಾರ್ಯಕ್ಕೆ ಒರಿಸ್ಸಾ ಮುಖ್ಯಮಂತ್ರಿ ಧನ್ಯವಾದವನ್ನೂ ಹೇಳಿದರು.

ಒಂದು ಆಪತ್ತು ಎರಗಿದರೆ ವ್ಯವಸ್ಥೆಯನ್ನು ಹೇಗೆ ನಡೆಸಬೇಕು ಎಂಬುವುದಕ್ಕೆ ಕೇರಳ ಒಂದು ಅತ್ಯುತ್ತಮ ಉದಾಹರಣೆ. ಈ ಹಿಂದೆ ಕೇರಳಕ್ಕೆ ಎರಗಿದ ನಿಫಾ, ಶತಮಾನದ ಪ್ರವಾಹವನ್ನು ಕೇರಳ ಎದುರಿಸಿದ ರೀತಿ ಮಾದರಿ ಯೋಗ್ಯ. ಕೊರೊನಾ ದೇಶಕ್ಕೆ ಎರಗಿದ ಸಂದರ್ಭದಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿ ಮಾಡಿದ್ದ  ಕೇರಳದಲ್ಲಿ ಈಗ ಸಕ್ರಿಯವಾಗಿರುವ ಪ್ರಕರಣ ಕೇವಲ ನಲವತ್ತರ ಒಳಗೆ, ಅಲ್ಲಿ ಸೋಂಕಿನಿಂದ ಘಟಿಸಿರುವ ಸಾವು ಕೇವಲ ನಾಲ್ಕು. ವೃದ್ದರಿಗೆ ಅಪಾಯವೆಂದು ಹೇಳುವ ಈ , ಸೋಂಕು ತಗುಲಿಸಿಕೊಂಡ ಭಾರತದ ಅತ್ಯಂತ ಹಿರಿಯ 93 ವರ್ಷದ ವ್ಯಕ್ತಿಯೂ ಗುಣಮುಖರಾಗಿ ತಮ್ಮ ಮನೆಗೆ ಹೋಗುತ್ತಾರೆ.

ಸರ್ಕಾರಗಳು ಜನಪರವಾಗಿರುವುದು ಅಂದರೆ ಹೀಗೆಯೇ ಅಲ್ಲವೆ. ಹಾಗಾಗಿಯೇ ಹೀಗಂತೂ ಹೇಳಬಹುದು, ಕೇರಳ ರಾಜ್ಯ ಭಾರತವೆಂಬ ರಾಜ್ಯಗಳ ಒಕ್ಕೂಟಕ್ಕೆ ಮಾದರಿ. ಭಾರತ ಅನುಸರಿಸಬೇಕಾದ ದಾರಿ ಕೇರಳದಲ್ಲಿದೆ.


ವಿಡಿಯೋ ನೋಡಿ: ಏನಾಯ್ತು ಈ ಸುದ್ದಿಗಳು ? ಸದ್ದು…!!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...