HomeUncategorizedಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ

ಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ

- Advertisement -
- Advertisement -

ಹಾಗೆ ನೋಡಿದರೆ ನಮ್ಮ ದೇಶಕ್ಕೆ ಕೊರೊನಾ ಸೋಂಕು ಈ ಪ್ರಮಾಣದಲ್ಲಿ ವಿಸ್ತರಿಸಲೇಬಾರದಿತ್ತು. ಚೀನಾ ಪಕ್ಕದ ಇತರ ರಾಷ್ಟ್ರಗಳು ಅಂತಹ ಮಾದರಿ ಸೃಷ್ಟಿ ಮಾಡಿದವು. ಸರ್ಕಾರಗಳು ಜವಾಬ್ದಾರಿಯುತವಾಗಿ ವರ್ತಿಸದೇ ಇರುವುದರಿಂದ ದೇಶಕ್ಕೆ ಕೊರೊನಾ ಪ್ರವೇಶ ಮಾಡಿತು. ಇಷ್ಟು ದೊಡ್ಡ ದೇಶವನ್ನು ಅಷ್ಟು ಸುಲಭದಲ್ಲಿ ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಕೆಲವರು ಎನ್ನುತ್ತಾರೆ. ಇದು ಎಷ್ಟು ನಿಜವೋ ಸುಳ್ಳೋ ಯಾರಿಗೆ ಗೊತ್ತು. ಆದರೆ ಸಾಂಕ್ರಾಮಿಕ ಹರಡಿದ ಮೇಲೂ ನಮ್ಮ ಪ್ರಭುತ್ವ ಮಾಡಿದ್ದೇನು?. ಚಪ್ಪಾಳೆ ತಟ್ಟಲು, ಬೆಳಕು ಹಚ್ಚಲು ದಿನಗಳ ಮುಂಚೆ ಹೇಳಿದ ಸರ್ಕಾರ ಇಡೀ ದೇಶವನ್ನು ಮುಚ್ಚುತ್ತಿದ್ದೇವೆ ಎಂದು ಹೇಳಿದ್ದು ಕೇವಲ ನಾಲ್ಕೈದು ಗಂಟೆಗಳ ಮುಂಚೆ. ಇದು ಈ ದೇಶದ ಸಂಪತ್ತನ್ನು ಉತ್ಪಾದಿಸುವ ಕಾರ್ಮಿಕವರ್ಗಕ್ಕೆ ಮಾಡಿದ ಅನ್ಯಾಯವಲ್ಲದೆ ಮತ್ತೇನು?. ನಂತರವಾದರೂ ಸರ್ಕಾರ ಎಚ್ಚೆತ್ತಿತೇ ಅದೂ ಇಲ್ಲ. ಲಕ್ಷಾಂತರ ವಲಸೆ ಕಾರ್ಮಿಕರ ಮಹಾವಲಸೆಯ ಕರಳು ಹಿಂಡುವ ಕತೆಗಳಿಗೂ ಸರ್ಕಾರ ಎಚ್ಚರವಾಗಲೇ ಇಲ್ಲ.

ಆದರೆ ದೇಶದ ಇತರ ಕಡೆಗಳಗಲ್ಲಿ ವಲಸೆ ಕಾರ್ಮಿಕರ ಕಣ್ಣೀರಿನ ಕತೆಗಳು ದೇಶದೆಲ್ಲೆಡೆ ಹರಿದಾಡುತ್ತಿರುವಾಗ, ನಮ್ಮದೇ ದೇಶದ ಕಮ್ಯೂನಿಷ್ಟ್ ಸರ್ಕಾರವಿರುವ ಕೇರಳದ್ದು ಬೇರೆಯೆ ಕತೆಯಾಗಿತ್ತು. ಇಲ್ಲಿ ವಲಸೆ ಕಾರ್ಮಿಕರಿಗೆ ದೇಶದ ಇತರ ಕಡೆಗಳಲ್ಲಿ ಆದಂತಹ ಯಾವುದೇ ಕಷ್ಟಗಳೂ ಇರಲಿಲ್ಲ.

ಅಷ್ಟೇ ಅಲ್ಲದೆ ಕೇರಳ ತನ್ನ ಊರನ್ನು ಕಟ್ಟಿದ ಈ ಕಾರ್ಮಿಕರಿಗೆ ವಲಸೆ ಕಾರ್ಮಿಕರು ಎನ್ನುವ ಹೆಸರನ್ನು ಕಿತ್ತೆಸೆದು “ಅತಿಥಿ” ಕಾರ್ಮಿಕರು ಎಂದು ಗೌರವಪೂರ್ವಕವಾಗಿ ಕರೆಯಿತು.

ಕೊರೊನಾ ಪ್ರಕರಣ ಮೊದಲಿಗೆ ವರದಿಯಾಗಿದ್ದು ಕೇರಳದಲ್ಲೇ . ಇದಕ್ಕಾಗಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಕೊರೊನಾ ಪರಿಹಾರವಾಗಿ ಬರೋಬ್ಬರಿ 20 ಸಾವಿರ ಕೋಟಿ ಪ್ಯಾಕೇಜನ್ನು ಘೋಷಿಸಿತು. ಈ ಹೊತ್ತಿಗೆ ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಇಷ್ಟೊಂದು ಮೊತ್ತದ ಪ್ಯಾಕೇಜನ್ನು ಘೋಷಿಸಿರಲಿಲ್ಲ. ಕೇಂದ್ರದ ಆಡಳಿತ ಪಕ್ಷದ ನಾಯಕರು ಕೇರಳದ ಈ ನಡೆಗೆ ತಕರಾರು ಮಾಡಿದರು, ಆದರೆ ಕೇರಳ ತಲೆ ಕೆಡಿಸಿಕೊಳ್ಳಲಿಲ್ಲ.

ವಲಸೆ ಕಾರ್ಮಿಕರನ್ನು ಅತಿಥಿ ಕಾರ್ಮಿಕರು ಎಂದು ಕರೆದ ಕೇರಳ ಅವರಿಗಾಗಿ ಸರ್ಕಾರದ ವತಿಯಿಂದಲೇ 15 ಸಾವಿರಕ್ಕಿಂತಲೂ ಹೆಚ್ಚು ಕೊರೊನಾ ಪರಿಹಾರ ಶಿಬಿರಗಳನ್ನು ತೆರೆದಿತ್ತು. ಇದರೊಂದಿಗೆ ಅಲ್ಲಿನ NGO ಗಳು ಕೂಡಾ 3397 ಪರಿಹಾರ ಶಿಬಿರಗಳನ್ನು ತೆರೆದು ಜನಸೇವೆಯಲ್ಲಿ ತೊಡಗಿದವು. ಎಪ್ರಿಲ್ 17ರಂದು ಕೇಂದ್ರ ಗೃಹ ಸಚಿವಾಲಯ ಸುಪ್ರೀಂಕೋರ್ಟಿಗೆ ನೀಡಿದ ಮಾಹಿತಿಯಂತೆ ದೇಶದಾದ್ಯಂತ ಇರುವ ಒಟ್ಟು ಪರಿಹಾರ ಶಿಬಿರಗಳಲ್ಲಿ 69% ಕ್ಕಿಂತ ಹೆಚ್ಚು ಶಿಬಿರಗಳು ಕೇರಳವೊಂದರಲ್ಲೇ ಇತ್ತು. ಇಲ್ಲಿ ಕೇವಲ ಕಾರ್ಮಿಕರನ್ನು ಕೂಡಿ ಹಾಕದೆ ಅವರಿಗೆ ಮನೋರಂಜನೆಗಾಗಿ ಟಿವಿ, ಕ್ಯಾರಮ್, ಚೆಸ್, ಮೊಬೈಲ್ ರೀಚಾರ್ಜ್ ಇತ್ಯಾದಿಗಳ ವ್ಯವಸ್ಥೆ ಮಾಡಿಕೊಟ್ಟಿತು. ವಿಶ್ವದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ಭಾಷೆಗಳನ್ನು ತಮ್ಮದೇ ಭಾಷೆಯಲ್ಲಿ ಮಾತನಾಡುವ ಕೇರಳ,  ಈ ಕಾರ್ಮಿಕರೊಂದಿಗಿನ ಸಂವಹನಕ್ಕಾಗಿ ಅಸ್ಸಾಮಿ, ಒಡಿಯಾ, ಹಿಂದಿ, ಬಂಗಾಳಿ ಇತ್ಯಾದಿ ಭಾಷೆಗಳಲ್ಲಿ ಮಾತನಾಡಿತು, ಸಂದೇಶಗಳನ್ನು ಕೊಟ್ಟಿತು, ಪೋಸ್ಟರುಗಳನ್ನು ಹಂಚಿತು. ಇದಲ್ಲವೇ ನಾಡು ಕಟ್ಟಿದವರ ಋಣವನ್ನು ತೀರಿಸುವ ಬಗೆ.

ಕೇರಳದ  ಪರಿಹಾರ ಶಿಬಿರಗಳಲ್ಲಿ ಮೂರು ಲಕ್ಷ ಕಾರ್ಮಿಕ ಆಶ್ರಯ ಪಡೆಯುತ್ತಾರೆ. (ಸುಮ್ಮನೆ ನಿಮ್ಮ ಮಾಹಿತಿಗೆ ಕರ್ನಾಟಕದ ಪರಿಹಾರ ಶಿಬಿರಗಳಲ್ಲಿ ಇದ್ದ ವಲಸೆ ಕಾರ್ಮಿಕರ ಸಂಖ್ಯೆ ಕೇವಲ 16,138). ಕೇರಳದ ಈ ಪರಿಹಾರ ಶಿಬಿರಗಳಲ್ಲಿ ಒಂದುವರೆ ಲಕ್ಷ ಕಾರ್ಮಿಕರು ನೇರವಾಗಿ ವಸತಿ ಹಾಗೂ ಉಚಿತ ಊಟವನ್ನೂ ಪಡೆಯುತ್ತಾರೆ. ಇದಕ್ಕಾಗಿಯೆ ದೇಶದೆಲ್ಲೆಡೆ ವಲಸೆ ಕಾರ್ಮಿಕರು ಹಸಿವಿನ ಬೆಂಕಿಯಿಂದ ಧಗದಗಿಸುತ್ತಿದ್ದರೆ ಕೇರಳದ ’ಅತಿಥಿ ಕಾರ್ಮಿಕರು’ ತಾವು ಲಾಕ್‌ಡೌನ್ ನಂತರ ನಮ್ಮ ಕುಟುಂಬವನ್ನು ಸೇರಿಕೊಳ್ಳುತ್ತೇವೆ ಎಂದು ವಿಶ್ವಾಸದಿಂದು ಹೇಳಿದ್ದು. ಅವರ ವಿಶ್ವಾಸಗಳು, ನಿರೀಕ್ಷೆಗಳನ್ನು ಕೇರಳದ ಎಡಪಂಥೀಯ ಸರ್ಕಾರ ಹುಸಿಗೊಳಿಸಲೂ ಇಲ್ಲ. ತಮ್ಮೂರನ್ನು ಕಟ್ಟಿದ ’ಅತಿಥಿ ಕಾರ್ಮಿಕ’ರನ್ನು ಬಹಳ ಗೌರವಪೂರ್ವಕವಾಗಿ ಕಳುಹಿಸಿಕೊಟ್ಟಿತು. ಕಾರ್ಮಿಕರಿಗೆ ಉಚಿತ ರೈಲು ಪ್ರಯಾಣ, ಊರಿಗೆ ತಲುಪುವವರೆಗಿನ ಆಹಾರ, ರೈಲಿನಲ್ಲಿ ಪೋಲಿಸ್ ಭದ್ರತೆ, ವೈದ್ಯಕೀಯ ಸೌಲಭ್ಯ ಇತ್ಯಾದಿಗಳನ್ನು ನೀಡಿತು. ಕೇರಳದ ಕಾರ್ಯಕ್ಕೆ ಒರಿಸ್ಸಾ ಮುಖ್ಯಮಂತ್ರಿ ಧನ್ಯವಾದವನ್ನೂ ಹೇಳಿದರು.

ಒಂದು ಆಪತ್ತು ಎರಗಿದರೆ ವ್ಯವಸ್ಥೆಯನ್ನು ಹೇಗೆ ನಡೆಸಬೇಕು ಎಂಬುವುದಕ್ಕೆ ಕೇರಳ ಒಂದು ಅತ್ಯುತ್ತಮ ಉದಾಹರಣೆ. ಈ ಹಿಂದೆ ಕೇರಳಕ್ಕೆ ಎರಗಿದ ನಿಫಾ, ಶತಮಾನದ ಪ್ರವಾಹವನ್ನು ಕೇರಳ ಎದುರಿಸಿದ ರೀತಿ ಮಾದರಿ ಯೋಗ್ಯ. ಕೊರೊನಾ ದೇಶಕ್ಕೆ ಎರಗಿದ ಸಂದರ್ಭದಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿ ಮಾಡಿದ್ದ  ಕೇರಳದಲ್ಲಿ ಈಗ ಸಕ್ರಿಯವಾಗಿರುವ ಪ್ರಕರಣ ಕೇವಲ ನಲವತ್ತರ ಒಳಗೆ, ಅಲ್ಲಿ ಸೋಂಕಿನಿಂದ ಘಟಿಸಿರುವ ಸಾವು ಕೇವಲ ನಾಲ್ಕು. ವೃದ್ದರಿಗೆ ಅಪಾಯವೆಂದು ಹೇಳುವ ಈ , ಸೋಂಕು ತಗುಲಿಸಿಕೊಂಡ ಭಾರತದ ಅತ್ಯಂತ ಹಿರಿಯ 93 ವರ್ಷದ ವ್ಯಕ್ತಿಯೂ ಗುಣಮುಖರಾಗಿ ತಮ್ಮ ಮನೆಗೆ ಹೋಗುತ್ತಾರೆ.

ಸರ್ಕಾರಗಳು ಜನಪರವಾಗಿರುವುದು ಅಂದರೆ ಹೀಗೆಯೇ ಅಲ್ಲವೆ. ಹಾಗಾಗಿಯೇ ಹೀಗಂತೂ ಹೇಳಬಹುದು, ಕೇರಳ ರಾಜ್ಯ ಭಾರತವೆಂಬ ರಾಜ್ಯಗಳ ಒಕ್ಕೂಟಕ್ಕೆ ಮಾದರಿ. ಭಾರತ ಅನುಸರಿಸಬೇಕಾದ ದಾರಿ ಕೇರಳದಲ್ಲಿದೆ.


ವಿಡಿಯೋ ನೋಡಿ: ಏನಾಯ್ತು ಈ ಸುದ್ದಿಗಳು ? ಸದ್ದು…!!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...