HomeUncategorizedಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ

ಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ

- Advertisement -
- Advertisement -

ಹಾಗೆ ನೋಡಿದರೆ ನಮ್ಮ ದೇಶಕ್ಕೆ ಕೊರೊನಾ ಸೋಂಕು ಈ ಪ್ರಮಾಣದಲ್ಲಿ ವಿಸ್ತರಿಸಲೇಬಾರದಿತ್ತು. ಚೀನಾ ಪಕ್ಕದ ಇತರ ರಾಷ್ಟ್ರಗಳು ಅಂತಹ ಮಾದರಿ ಸೃಷ್ಟಿ ಮಾಡಿದವು. ಸರ್ಕಾರಗಳು ಜವಾಬ್ದಾರಿಯುತವಾಗಿ ವರ್ತಿಸದೇ ಇರುವುದರಿಂದ ದೇಶಕ್ಕೆ ಕೊರೊನಾ ಪ್ರವೇಶ ಮಾಡಿತು. ಇಷ್ಟು ದೊಡ್ಡ ದೇಶವನ್ನು ಅಷ್ಟು ಸುಲಭದಲ್ಲಿ ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಕೆಲವರು ಎನ್ನುತ್ತಾರೆ. ಇದು ಎಷ್ಟು ನಿಜವೋ ಸುಳ್ಳೋ ಯಾರಿಗೆ ಗೊತ್ತು. ಆದರೆ ಸಾಂಕ್ರಾಮಿಕ ಹರಡಿದ ಮೇಲೂ ನಮ್ಮ ಪ್ರಭುತ್ವ ಮಾಡಿದ್ದೇನು?. ಚಪ್ಪಾಳೆ ತಟ್ಟಲು, ಬೆಳಕು ಹಚ್ಚಲು ದಿನಗಳ ಮುಂಚೆ ಹೇಳಿದ ಸರ್ಕಾರ ಇಡೀ ದೇಶವನ್ನು ಮುಚ್ಚುತ್ತಿದ್ದೇವೆ ಎಂದು ಹೇಳಿದ್ದು ಕೇವಲ ನಾಲ್ಕೈದು ಗಂಟೆಗಳ ಮುಂಚೆ. ಇದು ಈ ದೇಶದ ಸಂಪತ್ತನ್ನು ಉತ್ಪಾದಿಸುವ ಕಾರ್ಮಿಕವರ್ಗಕ್ಕೆ ಮಾಡಿದ ಅನ್ಯಾಯವಲ್ಲದೆ ಮತ್ತೇನು?. ನಂತರವಾದರೂ ಸರ್ಕಾರ ಎಚ್ಚೆತ್ತಿತೇ ಅದೂ ಇಲ್ಲ. ಲಕ್ಷಾಂತರ ವಲಸೆ ಕಾರ್ಮಿಕರ ಮಹಾವಲಸೆಯ ಕರಳು ಹಿಂಡುವ ಕತೆಗಳಿಗೂ ಸರ್ಕಾರ ಎಚ್ಚರವಾಗಲೇ ಇಲ್ಲ.

ಆದರೆ ದೇಶದ ಇತರ ಕಡೆಗಳಗಲ್ಲಿ ವಲಸೆ ಕಾರ್ಮಿಕರ ಕಣ್ಣೀರಿನ ಕತೆಗಳು ದೇಶದೆಲ್ಲೆಡೆ ಹರಿದಾಡುತ್ತಿರುವಾಗ, ನಮ್ಮದೇ ದೇಶದ ಕಮ್ಯೂನಿಷ್ಟ್ ಸರ್ಕಾರವಿರುವ ಕೇರಳದ್ದು ಬೇರೆಯೆ ಕತೆಯಾಗಿತ್ತು. ಇಲ್ಲಿ ವಲಸೆ ಕಾರ್ಮಿಕರಿಗೆ ದೇಶದ ಇತರ ಕಡೆಗಳಲ್ಲಿ ಆದಂತಹ ಯಾವುದೇ ಕಷ್ಟಗಳೂ ಇರಲಿಲ್ಲ.

ಅಷ್ಟೇ ಅಲ್ಲದೆ ಕೇರಳ ತನ್ನ ಊರನ್ನು ಕಟ್ಟಿದ ಈ ಕಾರ್ಮಿಕರಿಗೆ ವಲಸೆ ಕಾರ್ಮಿಕರು ಎನ್ನುವ ಹೆಸರನ್ನು ಕಿತ್ತೆಸೆದು “ಅತಿಥಿ” ಕಾರ್ಮಿಕರು ಎಂದು ಗೌರವಪೂರ್ವಕವಾಗಿ ಕರೆಯಿತು.

ಕೊರೊನಾ ಪ್ರಕರಣ ಮೊದಲಿಗೆ ವರದಿಯಾಗಿದ್ದು ಕೇರಳದಲ್ಲೇ . ಇದಕ್ಕಾಗಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಕೊರೊನಾ ಪರಿಹಾರವಾಗಿ ಬರೋಬ್ಬರಿ 20 ಸಾವಿರ ಕೋಟಿ ಪ್ಯಾಕೇಜನ್ನು ಘೋಷಿಸಿತು. ಈ ಹೊತ್ತಿಗೆ ಕೇಂದ್ರ ಸರ್ಕಾರ ಇಡೀ ದೇಶಕ್ಕೆ ಇಷ್ಟೊಂದು ಮೊತ್ತದ ಪ್ಯಾಕೇಜನ್ನು ಘೋಷಿಸಿರಲಿಲ್ಲ. ಕೇಂದ್ರದ ಆಡಳಿತ ಪಕ್ಷದ ನಾಯಕರು ಕೇರಳದ ಈ ನಡೆಗೆ ತಕರಾರು ಮಾಡಿದರು, ಆದರೆ ಕೇರಳ ತಲೆ ಕೆಡಿಸಿಕೊಳ್ಳಲಿಲ್ಲ.

ವಲಸೆ ಕಾರ್ಮಿಕರನ್ನು ಅತಿಥಿ ಕಾರ್ಮಿಕರು ಎಂದು ಕರೆದ ಕೇರಳ ಅವರಿಗಾಗಿ ಸರ್ಕಾರದ ವತಿಯಿಂದಲೇ 15 ಸಾವಿರಕ್ಕಿಂತಲೂ ಹೆಚ್ಚು ಕೊರೊನಾ ಪರಿಹಾರ ಶಿಬಿರಗಳನ್ನು ತೆರೆದಿತ್ತು. ಇದರೊಂದಿಗೆ ಅಲ್ಲಿನ NGO ಗಳು ಕೂಡಾ 3397 ಪರಿಹಾರ ಶಿಬಿರಗಳನ್ನು ತೆರೆದು ಜನಸೇವೆಯಲ್ಲಿ ತೊಡಗಿದವು. ಎಪ್ರಿಲ್ 17ರಂದು ಕೇಂದ್ರ ಗೃಹ ಸಚಿವಾಲಯ ಸುಪ್ರೀಂಕೋರ್ಟಿಗೆ ನೀಡಿದ ಮಾಹಿತಿಯಂತೆ ದೇಶದಾದ್ಯಂತ ಇರುವ ಒಟ್ಟು ಪರಿಹಾರ ಶಿಬಿರಗಳಲ್ಲಿ 69% ಕ್ಕಿಂತ ಹೆಚ್ಚು ಶಿಬಿರಗಳು ಕೇರಳವೊಂದರಲ್ಲೇ ಇತ್ತು. ಇಲ್ಲಿ ಕೇವಲ ಕಾರ್ಮಿಕರನ್ನು ಕೂಡಿ ಹಾಕದೆ ಅವರಿಗೆ ಮನೋರಂಜನೆಗಾಗಿ ಟಿವಿ, ಕ್ಯಾರಮ್, ಚೆಸ್, ಮೊಬೈಲ್ ರೀಚಾರ್ಜ್ ಇತ್ಯಾದಿಗಳ ವ್ಯವಸ್ಥೆ ಮಾಡಿಕೊಟ್ಟಿತು. ವಿಶ್ವದ ಯಾವುದೇ ಭಾಗಕ್ಕೆ ಹೋದರೂ ಅಲ್ಲಿನ ಭಾಷೆಗಳನ್ನು ತಮ್ಮದೇ ಭಾಷೆಯಲ್ಲಿ ಮಾತನಾಡುವ ಕೇರಳ,  ಈ ಕಾರ್ಮಿಕರೊಂದಿಗಿನ ಸಂವಹನಕ್ಕಾಗಿ ಅಸ್ಸಾಮಿ, ಒಡಿಯಾ, ಹಿಂದಿ, ಬಂಗಾಳಿ ಇತ್ಯಾದಿ ಭಾಷೆಗಳಲ್ಲಿ ಮಾತನಾಡಿತು, ಸಂದೇಶಗಳನ್ನು ಕೊಟ್ಟಿತು, ಪೋಸ್ಟರುಗಳನ್ನು ಹಂಚಿತು. ಇದಲ್ಲವೇ ನಾಡು ಕಟ್ಟಿದವರ ಋಣವನ್ನು ತೀರಿಸುವ ಬಗೆ.

ಕೇರಳದ  ಪರಿಹಾರ ಶಿಬಿರಗಳಲ್ಲಿ ಮೂರು ಲಕ್ಷ ಕಾರ್ಮಿಕ ಆಶ್ರಯ ಪಡೆಯುತ್ತಾರೆ. (ಸುಮ್ಮನೆ ನಿಮ್ಮ ಮಾಹಿತಿಗೆ ಕರ್ನಾಟಕದ ಪರಿಹಾರ ಶಿಬಿರಗಳಲ್ಲಿ ಇದ್ದ ವಲಸೆ ಕಾರ್ಮಿಕರ ಸಂಖ್ಯೆ ಕೇವಲ 16,138). ಕೇರಳದ ಈ ಪರಿಹಾರ ಶಿಬಿರಗಳಲ್ಲಿ ಒಂದುವರೆ ಲಕ್ಷ ಕಾರ್ಮಿಕರು ನೇರವಾಗಿ ವಸತಿ ಹಾಗೂ ಉಚಿತ ಊಟವನ್ನೂ ಪಡೆಯುತ್ತಾರೆ. ಇದಕ್ಕಾಗಿಯೆ ದೇಶದೆಲ್ಲೆಡೆ ವಲಸೆ ಕಾರ್ಮಿಕರು ಹಸಿವಿನ ಬೆಂಕಿಯಿಂದ ಧಗದಗಿಸುತ್ತಿದ್ದರೆ ಕೇರಳದ ’ಅತಿಥಿ ಕಾರ್ಮಿಕರು’ ತಾವು ಲಾಕ್‌ಡೌನ್ ನಂತರ ನಮ್ಮ ಕುಟುಂಬವನ್ನು ಸೇರಿಕೊಳ್ಳುತ್ತೇವೆ ಎಂದು ವಿಶ್ವಾಸದಿಂದು ಹೇಳಿದ್ದು. ಅವರ ವಿಶ್ವಾಸಗಳು, ನಿರೀಕ್ಷೆಗಳನ್ನು ಕೇರಳದ ಎಡಪಂಥೀಯ ಸರ್ಕಾರ ಹುಸಿಗೊಳಿಸಲೂ ಇಲ್ಲ. ತಮ್ಮೂರನ್ನು ಕಟ್ಟಿದ ’ಅತಿಥಿ ಕಾರ್ಮಿಕ’ರನ್ನು ಬಹಳ ಗೌರವಪೂರ್ವಕವಾಗಿ ಕಳುಹಿಸಿಕೊಟ್ಟಿತು. ಕಾರ್ಮಿಕರಿಗೆ ಉಚಿತ ರೈಲು ಪ್ರಯಾಣ, ಊರಿಗೆ ತಲುಪುವವರೆಗಿನ ಆಹಾರ, ರೈಲಿನಲ್ಲಿ ಪೋಲಿಸ್ ಭದ್ರತೆ, ವೈದ್ಯಕೀಯ ಸೌಲಭ್ಯ ಇತ್ಯಾದಿಗಳನ್ನು ನೀಡಿತು. ಕೇರಳದ ಕಾರ್ಯಕ್ಕೆ ಒರಿಸ್ಸಾ ಮುಖ್ಯಮಂತ್ರಿ ಧನ್ಯವಾದವನ್ನೂ ಹೇಳಿದರು.

ಒಂದು ಆಪತ್ತು ಎರಗಿದರೆ ವ್ಯವಸ್ಥೆಯನ್ನು ಹೇಗೆ ನಡೆಸಬೇಕು ಎಂಬುವುದಕ್ಕೆ ಕೇರಳ ಒಂದು ಅತ್ಯುತ್ತಮ ಉದಾಹರಣೆ. ಈ ಹಿಂದೆ ಕೇರಳಕ್ಕೆ ಎರಗಿದ ನಿಫಾ, ಶತಮಾನದ ಪ್ರವಾಹವನ್ನು ಕೇರಳ ಎದುರಿಸಿದ ರೀತಿ ಮಾದರಿ ಯೋಗ್ಯ. ಕೊರೊನಾ ದೇಶಕ್ಕೆ ಎರಗಿದ ಸಂದರ್ಭದಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿ ಮಾಡಿದ್ದ  ಕೇರಳದಲ್ಲಿ ಈಗ ಸಕ್ರಿಯವಾಗಿರುವ ಪ್ರಕರಣ ಕೇವಲ ನಲವತ್ತರ ಒಳಗೆ, ಅಲ್ಲಿ ಸೋಂಕಿನಿಂದ ಘಟಿಸಿರುವ ಸಾವು ಕೇವಲ ನಾಲ್ಕು. ವೃದ್ದರಿಗೆ ಅಪಾಯವೆಂದು ಹೇಳುವ ಈ , ಸೋಂಕು ತಗುಲಿಸಿಕೊಂಡ ಭಾರತದ ಅತ್ಯಂತ ಹಿರಿಯ 93 ವರ್ಷದ ವ್ಯಕ್ತಿಯೂ ಗುಣಮುಖರಾಗಿ ತಮ್ಮ ಮನೆಗೆ ಹೋಗುತ್ತಾರೆ.

ಸರ್ಕಾರಗಳು ಜನಪರವಾಗಿರುವುದು ಅಂದರೆ ಹೀಗೆಯೇ ಅಲ್ಲವೆ. ಹಾಗಾಗಿಯೇ ಹೀಗಂತೂ ಹೇಳಬಹುದು, ಕೇರಳ ರಾಜ್ಯ ಭಾರತವೆಂಬ ರಾಜ್ಯಗಳ ಒಕ್ಕೂಟಕ್ಕೆ ಮಾದರಿ. ಭಾರತ ಅನುಸರಿಸಬೇಕಾದ ದಾರಿ ಕೇರಳದಲ್ಲಿದೆ.


ವಿಡಿಯೋ ನೋಡಿ: ಏನಾಯ್ತು ಈ ಸುದ್ದಿಗಳು ? ಸದ್ದು…!!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...