Homeಮುಖಪುಟಕೊವ್ಯಾಕ್ಸಿನ್‌ನ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯಕ್ಕೆ ಲಸಿಕೆ ಬೇಡ: ಛತ್ತೀಸ್‌ಘಡ ಸರ್ಕಾರ

ಕೊವ್ಯಾಕ್ಸಿನ್‌ನ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯಕ್ಕೆ ಲಸಿಕೆ ಬೇಡ: ಛತ್ತೀಸ್‌ಘಡ ಸರ್ಕಾರ

ತನ್ನ ಮೂರನೇ ಹಂತದ ಪ್ರಯೋಗಗಳನ್ನು ಇನ್ನೂ ಪೂರ್ಣಗೊಳಿಸದ ಕೊವಾಕ್ಸಿನ್ ಅನ್ನು ಕ್ಲಿನಿಕಲ್ ಟ್ರಯಲ್ ಮೋಡ್‌ನಲ್ಲಿ ಬಳಸಲಾಗುತ್ತಿದೆ. ಅಂದರೆ ಇದನ್ನು ಸ್ವೀಕರಿಸುವವರನ್ನು ಇನ್ನೂ ಮೇಲ್ವಿಚಾರಣೆ ಮಾಡಲಾಗುತ್ತಿದೆ

- Advertisement -
- Advertisement -

ಕೋವಾಕ್ಸಿನ್ ಲಸಿಕೆಯ “ಮೂರನೇ ಹಂತದ ಪ್ರಯೋಗಗಳ ಅಪೂರ್ಣತೆ” ಮತ್ತು “ಲಸಿಕೆಗಳ ಮುಕ್ತಾಯ ದಿನಾಂಕ”ಕ್ಕೆ ಸಂಬಂಧಿಸಿದ ಗೊಂದಲಗಳು ನಮ್ಮ ರಾಜ್ಯದ ಪ್ರಾಥಮಿಕ ಕಾಳಜಿಯ ವಿಷಯವಾಗಿದೆ. ಈ ಸಮಸ್ಯೆಗಳನ್ನು ಬಗೆಹರಿಸುವವರೆಗೆ ಛತ್ತೀಸ್‌ಗಡಕ್ಕೆ ಕೋವಾಕ್ಸಿನ್ ಸರಬರಾಜನ್ನು ನಿಲ್ಲಿಸಬೇಕು ಎಂದು ರಾಜ್ಯದ ಆರೋಗ್ಯ ಸಚಿವ ಡಿಯೋ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರಬರೆದಿದ್ದರು.

ಲಸಿಕೆಯ ಬಾಟಲುಗಳಲ್ಲಿ ಮುಕ್ತಾಯ ದಿನಾಂಕವಿಲ್ಲದಿರುವುದು ಸೇರಿದಂತೆ ಮುಂತಾದ ಸಮಸ್ಯೆಗಳನ್ನು ಪರಿಹರಿಸುವವರೆಗೆ ಛತೀಸ್‌ಘಡ್ ಸರ್ಕಾರಕ್ಕೆ ಕೋವಾಕ್ಸಿನ್ ಸರಬರಾಜನ್ನು ನಿಲ್ಲಿಸುವಂತೆ ನಾನು ಕೇಂದ್ರವನ್ನು ವಿನಂತಿಸಿದ್ದೇನೆ ಎಂದು ಛತ್ತೀಸ್‌ಘಡ ಆರೋಗ್ಯ ಸಚಿವರು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

 

ಈ ಹಿನ್ನೆಲೆಯಲ್ಲಿ ಕೇಂದ್ರ ಮಂತ್ರಿ ಡಾ.ಹರ್ಷವರ್ಧನ್ ಅವರು ಛತ್ತೀಸ್‌ಗಡದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ಡಿಯೊ ಅವರಿಗೆ ಪ್ರತಿಕ್ರಿಯಿಸಿ ಪತ್ರ ಬರೆದಿದ್ದಾರೆ.

ಡಾ.ಹರ್ಷವರ್ಧನ್ ತಮ್ಮ ಪತ್ರದಲ್ಲಿ, ವ್ಯಾಕ್ಸಿನೇಷನ್ ವೇಳಾಪಟ್ಟಿಯಲ್ಲಿ ರಾಜ್ಯವು ತೀರಾ ಹಿಂದುಳಿದಿದೆ. ಇದು ಕೇಂದ್ರಕ್ಕೆ ಹೆಚ್ಚಿನ ಚಿಂತೆಯನ್ನುಂಟುಮಾಡಿದೆ. ಛತ್ತೀಸ್‌ಘಡ ಸರ್ಕಾರವು ತಮ್ಮ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯ ಮೊದಲ ಪ್ರಮಾಣವನ್ನು ನೀಡುವ ಮೂಲಕ 69.87% ರಷ್ಟು ಮಾತ್ರ ಲಸಿಕೆ ನೀಡಿದೆ. ಜೊತೆಗೆ ರಾಜ್ಯವು ತನ್ನ 2,09,512 ಮುಂಚೂಣಿಯ ಕಾರ್ಯಕರ್ತರಲ್ಲಿ ಕೇವಲ 9.55% ರಷ್ಟು ಜನರಿಗೆ ಮಾತ್ರ ಲಸಿಕೆಯ ಮೊದಲ ಡೋಸ್ ನೀಡಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

“ಕೊವಾಕ್ಸಿನ್ ಬಾಟಲಿಯಲ್ಲಿ ಮುಕ್ತಾಯ ದಿನಾಂಕ ಲಭ್ಯವಿಲ್ಲದಿರುವ ಬಗ್ಗೆ ನಿಮ್ಮ ಕಾಳಜಿ ಸಂಪೂರ್ಣವಾಗಿ ಆಧಾರರಹಿತವಾಗಿದೆ” ಎಂದು ಹರ್ಷವರ್ಧನ್ ಛತ್ತೀಸ್‌ಘಡ ಆರೋಗ್ಯ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಡಾ. ಹರ್ಷವರ್ಧನ್ ಅವರು ರಾಜ್ಯಗಳಿಗೆ ಸರಬರಾಜು ಮಾಡುವ ಎಲ್ಲಾ ಲಸಿಕೆಗಳು “ಸುರಕ್ಷಿತ ಮತ್ತು ಇಮ್ಯುನೊಜೆನಿಕ್” ಮತ್ತು ಇದನ್ನು ತ್ವರಿತವಾಗಿ ಬಳಸಬೇಕು ಎಂದು ಹೇಳಿದ್ದಾರೆ.

ತನ್ನ ಮೂರನೇ ಹಂತದ ಪ್ರಯೋಗಗಳನ್ನು ಇನ್ನೂ ಪೂರ್ಣಗೊಳಿಸದ ಕೊವಾಕ್ಸಿನ್ ಅನ್ನು ಕ್ಲಿನಿಕಲ್ ಟ್ರಯಲ್ ಮೋಡ್‌ನಲ್ಲಿ ಬಳಸಲಾಗುತ್ತಿದೆ. ಅಂದರೆ ಇದನ್ನು ಸ್ವೀಕರಿಸುವವರನ್ನು ಇನ್ನೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಹಾಗಾಗಿ ಕಾಂಗ್ರೆಸ್ ಆಡಳಿತದ ರಾಜ್ಯವಾದ ಛತ್ತೀಸ್‌ಘಡವು ಈ ಹಿಂದೆ ಕೋವಾಕ್ಸಿನ್ ಬಗ್ಗೆ ತನ್ನ ಆಕ್ಷೇಪವನ್ನು ವ್ಯಕ್ತಪಡಿಸಿತ್ತು.


ಇದನ್ನೂ ಓದಿ: ರಾಜ್ಯಸಭಾ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ: ಕಾಂಗ್ರೆಸ್ ತೀರ್ಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...