Homeಮುಖಪುಟಕೊವ್ಯಾಕ್ಸಿನ್‌ನ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯಕ್ಕೆ ಲಸಿಕೆ ಬೇಡ: ಛತ್ತೀಸ್‌ಘಡ ಸರ್ಕಾರ

ಕೊವ್ಯಾಕ್ಸಿನ್‌ನ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯಕ್ಕೆ ಲಸಿಕೆ ಬೇಡ: ಛತ್ತೀಸ್‌ಘಡ ಸರ್ಕಾರ

ತನ್ನ ಮೂರನೇ ಹಂತದ ಪ್ರಯೋಗಗಳನ್ನು ಇನ್ನೂ ಪೂರ್ಣಗೊಳಿಸದ ಕೊವಾಕ್ಸಿನ್ ಅನ್ನು ಕ್ಲಿನಿಕಲ್ ಟ್ರಯಲ್ ಮೋಡ್‌ನಲ್ಲಿ ಬಳಸಲಾಗುತ್ತಿದೆ. ಅಂದರೆ ಇದನ್ನು ಸ್ವೀಕರಿಸುವವರನ್ನು ಇನ್ನೂ ಮೇಲ್ವಿಚಾರಣೆ ಮಾಡಲಾಗುತ್ತಿದೆ

- Advertisement -
- Advertisement -

ಕೋವಾಕ್ಸಿನ್ ಲಸಿಕೆಯ “ಮೂರನೇ ಹಂತದ ಪ್ರಯೋಗಗಳ ಅಪೂರ್ಣತೆ” ಮತ್ತು “ಲಸಿಕೆಗಳ ಮುಕ್ತಾಯ ದಿನಾಂಕ”ಕ್ಕೆ ಸಂಬಂಧಿಸಿದ ಗೊಂದಲಗಳು ನಮ್ಮ ರಾಜ್ಯದ ಪ್ರಾಥಮಿಕ ಕಾಳಜಿಯ ವಿಷಯವಾಗಿದೆ. ಈ ಸಮಸ್ಯೆಗಳನ್ನು ಬಗೆಹರಿಸುವವರೆಗೆ ಛತ್ತೀಸ್‌ಗಡಕ್ಕೆ ಕೋವಾಕ್ಸಿನ್ ಸರಬರಾಜನ್ನು ನಿಲ್ಲಿಸಬೇಕು ಎಂದು ರಾಜ್ಯದ ಆರೋಗ್ಯ ಸಚಿವ ಡಿಯೋ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರಬರೆದಿದ್ದರು.

ಲಸಿಕೆಯ ಬಾಟಲುಗಳಲ್ಲಿ ಮುಕ್ತಾಯ ದಿನಾಂಕವಿಲ್ಲದಿರುವುದು ಸೇರಿದಂತೆ ಮುಂತಾದ ಸಮಸ್ಯೆಗಳನ್ನು ಪರಿಹರಿಸುವವರೆಗೆ ಛತೀಸ್‌ಘಡ್ ಸರ್ಕಾರಕ್ಕೆ ಕೋವಾಕ್ಸಿನ್ ಸರಬರಾಜನ್ನು ನಿಲ್ಲಿಸುವಂತೆ ನಾನು ಕೇಂದ್ರವನ್ನು ವಿನಂತಿಸಿದ್ದೇನೆ ಎಂದು ಛತ್ತೀಸ್‌ಘಡ ಆರೋಗ್ಯ ಸಚಿವರು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

 

ಈ ಹಿನ್ನೆಲೆಯಲ್ಲಿ ಕೇಂದ್ರ ಮಂತ್ರಿ ಡಾ.ಹರ್ಷವರ್ಧನ್ ಅವರು ಛತ್ತೀಸ್‌ಗಡದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ಡಿಯೊ ಅವರಿಗೆ ಪ್ರತಿಕ್ರಿಯಿಸಿ ಪತ್ರ ಬರೆದಿದ್ದಾರೆ.

ಡಾ.ಹರ್ಷವರ್ಧನ್ ತಮ್ಮ ಪತ್ರದಲ್ಲಿ, ವ್ಯಾಕ್ಸಿನೇಷನ್ ವೇಳಾಪಟ್ಟಿಯಲ್ಲಿ ರಾಜ್ಯವು ತೀರಾ ಹಿಂದುಳಿದಿದೆ. ಇದು ಕೇಂದ್ರಕ್ಕೆ ಹೆಚ್ಚಿನ ಚಿಂತೆಯನ್ನುಂಟುಮಾಡಿದೆ. ಛತ್ತೀಸ್‌ಘಡ ಸರ್ಕಾರವು ತಮ್ಮ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯ ಮೊದಲ ಪ್ರಮಾಣವನ್ನು ನೀಡುವ ಮೂಲಕ 69.87% ರಷ್ಟು ಮಾತ್ರ ಲಸಿಕೆ ನೀಡಿದೆ. ಜೊತೆಗೆ ರಾಜ್ಯವು ತನ್ನ 2,09,512 ಮುಂಚೂಣಿಯ ಕಾರ್ಯಕರ್ತರಲ್ಲಿ ಕೇವಲ 9.55% ರಷ್ಟು ಜನರಿಗೆ ಮಾತ್ರ ಲಸಿಕೆಯ ಮೊದಲ ಡೋಸ್ ನೀಡಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

“ಕೊವಾಕ್ಸಿನ್ ಬಾಟಲಿಯಲ್ಲಿ ಮುಕ್ತಾಯ ದಿನಾಂಕ ಲಭ್ಯವಿಲ್ಲದಿರುವ ಬಗ್ಗೆ ನಿಮ್ಮ ಕಾಳಜಿ ಸಂಪೂರ್ಣವಾಗಿ ಆಧಾರರಹಿತವಾಗಿದೆ” ಎಂದು ಹರ್ಷವರ್ಧನ್ ಛತ್ತೀಸ್‌ಘಡ ಆರೋಗ್ಯ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಡಾ. ಹರ್ಷವರ್ಧನ್ ಅವರು ರಾಜ್ಯಗಳಿಗೆ ಸರಬರಾಜು ಮಾಡುವ ಎಲ್ಲಾ ಲಸಿಕೆಗಳು “ಸುರಕ್ಷಿತ ಮತ್ತು ಇಮ್ಯುನೊಜೆನಿಕ್” ಮತ್ತು ಇದನ್ನು ತ್ವರಿತವಾಗಿ ಬಳಸಬೇಕು ಎಂದು ಹೇಳಿದ್ದಾರೆ.

ತನ್ನ ಮೂರನೇ ಹಂತದ ಪ್ರಯೋಗಗಳನ್ನು ಇನ್ನೂ ಪೂರ್ಣಗೊಳಿಸದ ಕೊವಾಕ್ಸಿನ್ ಅನ್ನು ಕ್ಲಿನಿಕಲ್ ಟ್ರಯಲ್ ಮೋಡ್‌ನಲ್ಲಿ ಬಳಸಲಾಗುತ್ತಿದೆ. ಅಂದರೆ ಇದನ್ನು ಸ್ವೀಕರಿಸುವವರನ್ನು ಇನ್ನೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಹಾಗಾಗಿ ಕಾಂಗ್ರೆಸ್ ಆಡಳಿತದ ರಾಜ್ಯವಾದ ಛತ್ತೀಸ್‌ಘಡವು ಈ ಹಿಂದೆ ಕೋವಾಕ್ಸಿನ್ ಬಗ್ಗೆ ತನ್ನ ಆಕ್ಷೇಪವನ್ನು ವ್ಯಕ್ತಪಡಿಸಿತ್ತು.


ಇದನ್ನೂ ಓದಿ: ರಾಜ್ಯಸಭಾ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ: ಕಾಂಗ್ರೆಸ್ ತೀರ್ಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...