Homeಮುಖಪುಟಕೊವ್ಯಾಕ್ಸಿನ್‌ನ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯಕ್ಕೆ ಲಸಿಕೆ ಬೇಡ: ಛತ್ತೀಸ್‌ಘಡ ಸರ್ಕಾರ

ಕೊವ್ಯಾಕ್ಸಿನ್‌ನ ಸಮಸ್ಯೆ ಬಗೆಹರಿಯುವವರೆಗೆ ರಾಜ್ಯಕ್ಕೆ ಲಸಿಕೆ ಬೇಡ: ಛತ್ತೀಸ್‌ಘಡ ಸರ್ಕಾರ

ತನ್ನ ಮೂರನೇ ಹಂತದ ಪ್ರಯೋಗಗಳನ್ನು ಇನ್ನೂ ಪೂರ್ಣಗೊಳಿಸದ ಕೊವಾಕ್ಸಿನ್ ಅನ್ನು ಕ್ಲಿನಿಕಲ್ ಟ್ರಯಲ್ ಮೋಡ್‌ನಲ್ಲಿ ಬಳಸಲಾಗುತ್ತಿದೆ. ಅಂದರೆ ಇದನ್ನು ಸ್ವೀಕರಿಸುವವರನ್ನು ಇನ್ನೂ ಮೇಲ್ವಿಚಾರಣೆ ಮಾಡಲಾಗುತ್ತಿದೆ

- Advertisement -
- Advertisement -

ಕೋವಾಕ್ಸಿನ್ ಲಸಿಕೆಯ “ಮೂರನೇ ಹಂತದ ಪ್ರಯೋಗಗಳ ಅಪೂರ್ಣತೆ” ಮತ್ತು “ಲಸಿಕೆಗಳ ಮುಕ್ತಾಯ ದಿನಾಂಕ”ಕ್ಕೆ ಸಂಬಂಧಿಸಿದ ಗೊಂದಲಗಳು ನಮ್ಮ ರಾಜ್ಯದ ಪ್ರಾಥಮಿಕ ಕಾಳಜಿಯ ವಿಷಯವಾಗಿದೆ. ಈ ಸಮಸ್ಯೆಗಳನ್ನು ಬಗೆಹರಿಸುವವರೆಗೆ ಛತ್ತೀಸ್‌ಗಡಕ್ಕೆ ಕೋವಾಕ್ಸಿನ್ ಸರಬರಾಜನ್ನು ನಿಲ್ಲಿಸಬೇಕು ಎಂದು ರಾಜ್ಯದ ಆರೋಗ್ಯ ಸಚಿವ ಡಿಯೋ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರಬರೆದಿದ್ದರು.

ಲಸಿಕೆಯ ಬಾಟಲುಗಳಲ್ಲಿ ಮುಕ್ತಾಯ ದಿನಾಂಕವಿಲ್ಲದಿರುವುದು ಸೇರಿದಂತೆ ಮುಂತಾದ ಸಮಸ್ಯೆಗಳನ್ನು ಪರಿಹರಿಸುವವರೆಗೆ ಛತೀಸ್‌ಘಡ್ ಸರ್ಕಾರಕ್ಕೆ ಕೋವಾಕ್ಸಿನ್ ಸರಬರಾಜನ್ನು ನಿಲ್ಲಿಸುವಂತೆ ನಾನು ಕೇಂದ್ರವನ್ನು ವಿನಂತಿಸಿದ್ದೇನೆ ಎಂದು ಛತ್ತೀಸ್‌ಘಡ ಆರೋಗ್ಯ ಸಚಿವರು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

 

ಈ ಹಿನ್ನೆಲೆಯಲ್ಲಿ ಕೇಂದ್ರ ಮಂತ್ರಿ ಡಾ.ಹರ್ಷವರ್ಧನ್ ಅವರು ಛತ್ತೀಸ್‌ಗಡದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ಡಿಯೊ ಅವರಿಗೆ ಪ್ರತಿಕ್ರಿಯಿಸಿ ಪತ್ರ ಬರೆದಿದ್ದಾರೆ.

ಡಾ.ಹರ್ಷವರ್ಧನ್ ತಮ್ಮ ಪತ್ರದಲ್ಲಿ, ವ್ಯಾಕ್ಸಿನೇಷನ್ ವೇಳಾಪಟ್ಟಿಯಲ್ಲಿ ರಾಜ್ಯವು ತೀರಾ ಹಿಂದುಳಿದಿದೆ. ಇದು ಕೇಂದ್ರಕ್ಕೆ ಹೆಚ್ಚಿನ ಚಿಂತೆಯನ್ನುಂಟುಮಾಡಿದೆ. ಛತ್ತೀಸ್‌ಘಡ ಸರ್ಕಾರವು ತಮ್ಮ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯ ಮೊದಲ ಪ್ರಮಾಣವನ್ನು ನೀಡುವ ಮೂಲಕ 69.87% ರಷ್ಟು ಮಾತ್ರ ಲಸಿಕೆ ನೀಡಿದೆ. ಜೊತೆಗೆ ರಾಜ್ಯವು ತನ್ನ 2,09,512 ಮುಂಚೂಣಿಯ ಕಾರ್ಯಕರ್ತರಲ್ಲಿ ಕೇವಲ 9.55% ರಷ್ಟು ಜನರಿಗೆ ಮಾತ್ರ ಲಸಿಕೆಯ ಮೊದಲ ಡೋಸ್ ನೀಡಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

“ಕೊವಾಕ್ಸಿನ್ ಬಾಟಲಿಯಲ್ಲಿ ಮುಕ್ತಾಯ ದಿನಾಂಕ ಲಭ್ಯವಿಲ್ಲದಿರುವ ಬಗ್ಗೆ ನಿಮ್ಮ ಕಾಳಜಿ ಸಂಪೂರ್ಣವಾಗಿ ಆಧಾರರಹಿತವಾಗಿದೆ” ಎಂದು ಹರ್ಷವರ್ಧನ್ ಛತ್ತೀಸ್‌ಘಡ ಆರೋಗ್ಯ ಸಚಿವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಡಾ. ಹರ್ಷವರ್ಧನ್ ಅವರು ರಾಜ್ಯಗಳಿಗೆ ಸರಬರಾಜು ಮಾಡುವ ಎಲ್ಲಾ ಲಸಿಕೆಗಳು “ಸುರಕ್ಷಿತ ಮತ್ತು ಇಮ್ಯುನೊಜೆನಿಕ್” ಮತ್ತು ಇದನ್ನು ತ್ವರಿತವಾಗಿ ಬಳಸಬೇಕು ಎಂದು ಹೇಳಿದ್ದಾರೆ.

ತನ್ನ ಮೂರನೇ ಹಂತದ ಪ್ರಯೋಗಗಳನ್ನು ಇನ್ನೂ ಪೂರ್ಣಗೊಳಿಸದ ಕೊವಾಕ್ಸಿನ್ ಅನ್ನು ಕ್ಲಿನಿಕಲ್ ಟ್ರಯಲ್ ಮೋಡ್‌ನಲ್ಲಿ ಬಳಸಲಾಗುತ್ತಿದೆ. ಅಂದರೆ ಇದನ್ನು ಸ್ವೀಕರಿಸುವವರನ್ನು ಇನ್ನೂ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಹಾಗಾಗಿ ಕಾಂಗ್ರೆಸ್ ಆಡಳಿತದ ರಾಜ್ಯವಾದ ಛತ್ತೀಸ್‌ಘಡವು ಈ ಹಿಂದೆ ಕೋವಾಕ್ಸಿನ್ ಬಗ್ಗೆ ತನ್ನ ಆಕ್ಷೇಪವನ್ನು ವ್ಯಕ್ತಪಡಿಸಿತ್ತು.


ಇದನ್ನೂ ಓದಿ: ರಾಜ್ಯಸಭಾ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ: ಕಾಂಗ್ರೆಸ್ ತೀರ್ಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...