Homeಕರ್ನಾಟಕ‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆ...

‘ಚಾಮರಾಜನಗರ ಆಕ್ಸಿಜನ್ ದುರಂತ’ದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಮರಣಪ್ರಮಾಣ ಪತ್ರ ನೀಡದ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್‌‌ ಕಿಡಿ

- Advertisement -
- Advertisement -

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರಿಗೆ ಕೊರೊನಾ ಸಾವು ಎಂದು ಮರಣ ಪ್ರಮಾಣ ಪತ್ರ ನೀಡದಿರುವುದಕ್ಕೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ರಾಜ್ಯದಲ್ಲಿ 3.30 ಲಕ್ಷ ಕೊರೊನಾ ಸಾವುಗಳ ಆಗಿವೆ ಎಂಬುದಕ್ಕೆ ನಮ್ಮ ಬಳಿ ದಾಖಲೆಗಳಿವೆ” ಎಂದು ಹೇಳಿದ್ದಾರೆ.

“ನಾನು ಕೂಡ ರಾಜ್ಯದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇನೆ. ಅದರಲ್ಲೂ ಚಾಮರಾಜನಗರದಲ್ಲೇ ಒಂದೇ ದಿನ 65 ಮಂದಿ ಆಕ್ಸಿಜನ್ ಇಲ್ಲದೆ ಸತ್ತಿದ್ದಾರೆ. ಆದರೆ ಆಸ್ಪತ್ರೆಯಲ್ಲಿ 36 ಮಂದಿ ಸತ್ತಿದ್ದಾರೆ ಎಂದು ವರದಿ ಬಂದಿವೆ. ಸರ್ಕಾರ ಕೇವಲ 3 ಜನ ಸತ್ತಿದ್ದಾರೆ ಎಂದಿತ್ತು. ನಾನು 36 ಮೃತರ ಕುಟುಂಬಗಳ ಮನೆಗಳಿಗೆ ಭೇಟಿ ಕೊಟ್ಟಿದ್ದೆ. ಇವರಲ್ಲಿ ಯಾರಿಗೂ ಸರ್ಕಾರ ಕೊರೊನಾ ಸಾವು ಎಂದು ಮರಣ ಪ್ರಮಾಣ ಪತ್ರ ಕೊಟ್ಟಿಲ್ಲ. ಈ ಮಧ್ಯೆ ಸರ್ಕಾರ 1 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದೆ. ಸುಪ್ರೀಂ ಕೋರ್ಟ್ ಪರಿಹಾರ ನೀಡಲು ಕಾಲಾವಕಾಶ ನಿಗದಿ ಮಾಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೃತರ ಗೌರವಯುತ ವಿದಾಯಕ್ಕೂ ಅವಕಾಶ ಮಾಡದ ಯಾವ ಸೀಮೆಯ ಸರ್ಕಾರವಿದು: ಡಿ.ಕೆ.ಶಿವಕುಮಾರ್‌ ಆಕ್ರೋಶ

“ಆಂಧ್ರಪ್ರದೇಶ ಸರ್ಕಾರ ಮೃತರಿಗೆ ಪರಿಹಾರ ಘೋಷಿಸಿದೆ. ನಮ್ಮ ರಾಜ್ಯದಲ್ಲೂ ಮೃತರಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸುತ್ತಿದ್ದೇವೆ. ಈ ಸೋಂಕಿನಿಂದ ಸತ್ತವರ ಮಾಹಿತಿ ಪಡೆಯಲು ಸರ್ಕಾರ ಡೆತ್ ಆಡಿಟ್ ಮಾಡಿ ಅವರಿಗೆ ಪರಿಹಾರ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“ನಿನ್ನೆ ನಮ್ಮ ಕಾರ್ಯಾಧ್ಯಕ್ಷರು ಬೀದರ್ ಒಂದೇ ಜಿಲ್ಲೆಯಲ್ಲಿ ಸರ್ಕಾರ ಹೇಗೆ ಸುಳ್ಳು ಸಾವಿನ ಲೆಕ್ಕ ನೀಡುತ್ತಿದೆ ಎಂದು ಹೇಳಿದ್ದಾರೆ. ಇದಕ್ಕಾಗಿ ನಮ್ಮ ಪಕ್ಷದ ಕಾರ್ಯಕರ್ತರಿಗೆ ಪ್ರತಿ ಮನೆಗೂ ಹೋಗಿ ಅವರ ಮಾಹಿತಿ ಪಡೆದು, ಅವರಿಗೆ ಪರಿಹಾರ ಸಿಗುವಂತೆ ಮಾಡಬೇಕೆಂದು ಸೂಚನೆ ಕೊಟ್ಟಿದ್ದೇವೆ. ನಾವು ಈ ಸಂಕಷ್ಟದ ಸಮಯದಲ್ಲಿ ಜನರ ಬೆನ್ನಿಗೆ ನಿಲ್ಲುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ವಿಜಯೇಂದ್ರ ಅವರ ಹೆಸರಲ್ಲಿ ಸಚಿವ ಶ್ರೀರಾಮುಲು ಅವರ ಆಪ್ತ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್‌‌, ಪಿಎ ವಿಚಾರದಲ್ಲಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...