Homeಮುಖಪುಟಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಸುಪ್ರೀಂ ಮೆಟ್ಟಿಲೇರಿದ ರಾಜ್ಯದ ವಿದ್ಯಾರ್ಥಿನಿಯರು

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಸುಪ್ರೀಂ ಮೆಟ್ಟಿಲೇರಿದ ರಾಜ್ಯದ ವಿದ್ಯಾರ್ಥಿನಿಯರು

ವಿಚಾರಣೆಯ ದಿನಾಂಕವನ್ನು ನಿಗದಿಪಡಿಸುವುದಾಗಿ ಸುಪ್ರೀಂ ಕೋರ್ಟ್ ಭರವಸೆ ನೀಡಿದೆ

- Advertisement -
- Advertisement -

ರಾಜ್ಯದ ಸರ್ಕಾರಿ ಸಂಸ್ಥೆಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕದ ವಿದ್ಯಾರ್ಥಿನಿಯರ ಗುಂಪೊಂದು ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 2022 ರಲ್ಲಿ ಹಿಂದಿನ ಪೀಠದ ಇಬ್ಬರು ನ್ಯಾಯಾಧೀಶರು ನೀಡಿದ ವಿಭಜಿತ ತೀರ್ಪಿನ ದೃಷ್ಟಿಯಿಂದ ಈ ವಿಷಯವನ್ನು ತೆಗೆದುಕೊಳ್ಳಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸಲು ಪರಿಗಣಿಸುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ಹೇಳಿದ್ದಾರೆ.

“ನಾನು ವಿಷಯವನ್ನು ಪರಿಶೀಲಿಸುತ್ತೇನೆ ಮತ್ತು ದಿನಾಂಕವನ್ನು ನಿಗದಿಪಡಿಸುತ್ತೇನೆ. ಇದು ತ್ರಿಸದಸ್ಯ ಪೀಠದ ವಿಷಯವಾಗಿದೆ. ನೀವು ರಿಜಿಸ್ಟ್ರಾರ್‌ಗೆ ಟಿಪ್ಪಣಿಯನ್ನು ಸಲ್ಲಿಸಿ” ಎಂದು ಸಿಜೆಐ ವಿದ್ಯಾರ್ಥಿಗಳ ಪರವಾಗಿ ಹಾಜರಾದ ಹಿರಿಯ ವಕೀಲ ಮೀನಾಕ್ಷಿ ಅರೋರಾ ಅವರಿಗೆ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ರಾಜ್ಯ ಸರ್ಕಾರವು ಮುಂದುವರಿಸಿರುವ ನಿಷೇಧದ ದೃಷ್ಟಿಯಿಂದ ಹೆಚ್ಚಿನ ವಿದ್ಯಾರ್ಥಿನಿಯರು ಕೆಲವು ಖಾಸಗಿ ಕಾಲೇಜುಗಳಿಗೆ ಸೇರಿದ್ದಾರೆ ಎಂದು ಅರೋರಾ ಅವರು ಸುಪ್ರೀಂಕೋರ್ಟ್‌ನ ಗಮನಸೆಳೆದಿದ್ದಾರೆ.

“ಆದಾಗ್ಯೂ, ಪರೀಕ್ಷೆಗಳನ್ನು ಸರ್ಕಾರಿ ಕಾಲೇಜುಗಳಲ್ಲಿ ಮಾತ್ರ ನಡೆಸಲಾಗುತ್ತದೆ… ಖಾಸಗಿ ಕಾಲೇಜುಗಳು ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ಈ ವಿಷಯವನ್ನು ಮಧ್ಯಂತರ ಆದೇಶ ನೀಡಬೇಕು ಎಂದು ನಾವು ಬಯಸುತ್ತೇವೆ” ಎಂದು ಅರೋರಾ ಸಿಜೆಐಗೆ ತಿಳಿಸಿದ್ದಾರೆ.

ಫೆಬ್ರವರಿ 6 ರಿಂದ ಪರೀಕ್ಷೆಗಳು ಪ್ರಾರಂಭವಾಗುವುದರಿಂದ ಆದ್ಯತೆಯ ಮೇಲೆ ವಿಷಯವನ್ನು ಪಟ್ಟಿ ಮಾಡಲು ಅವರು ನ್ಯಾಯಾಲಯವನ್ನು ಕೋರಿದ್ದಾರೆ. ಈ ಸಂದರ್ಭದಲ್ಲಿ, ಸಿಜೆಐ ಅವರು ಈ ವಿಷಯವನ್ನು ತ್ರಿಸದಸ್ಯ ಪೀಠಕ್ಕೆ ಹಂಚಬೇಕಾಗುತ್ತದೆ. ಪ್ರಕರಣದ ಪಟ್ಟಿಗಾಗಿ ಆಡಳಿತಾತ್ಮಕ ಭಾಗದಲ್ಲಿ ಸೂಕ್ತ ಆದೇಶಗಳನ್ನು ರವಾನಿಸುವುದನ್ನು ಅವರು ಪರಿಗಣಿಸುದಾಗಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕುರಿತು 2022 ರ ಅಕ್ಟೋಬರ್‌ನಲ್ಲಿ ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿತ್ತು. ಒಬ್ಬ ನ್ಯಾಯಾಧೀಶರು ಶಾಲೆಗಳಲ್ಲಿ ಸಮವಸ್ತ್ರವನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ದೃಢಪಡಿಸಿದರೆ, ಇನ್ನೊಬ್ಬರು ಹಿಜಾಬ್ ಅನ್ನು ಆಯ್ಕೆಯ ವಿಷಯ ಎಂದು ಕರೆದಿದ್ದು ಅದರನ್ನು ಸರ್ಕಾರದಿಂದ ನಿಗ್ರಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ತಮ್ಮ ತೀರ್ಪಿನಲ್ಲಿ, ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಕಡ್ಡಾಯವಲ್ಲ. ಹೀಗಾಗಿ ಏಕರೂಪದ ಸಮವಸ್ತ್ರದ ಆದೇಶವನ್ನು ಜಾರಿಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಅಧಿಕಾರವಿದೆ ಎಂದು ಕಳೆದ ವರ್ಷ ಮಾರ್ಚ್‌ನಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಿದ್ದರು.

ಆದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹೇಮಂತ್‌ ಗುಪ್ತಾ ಅವರ ತೀರ್ಪಿಗಿಂತ ಭಿನ್ನವಾಗಿ ತೀರ್ಪು ನೀಡಿದ್ದು, ಎಲ್ಲಾ ಮೇಲ್ಮನವಿಗಳನ್ನು ಅಂಗೀಕರಿಸಿದ್ದರು. ತಮ್ಮ ತೀರ್ಪಿನ ಆಪರೇಟಿವ್ ಭಾಗವನ್ನು ಓದಿದ ನ್ಯಾಯಮೂರ್ತಿ ಧುಲಿಯಾ, “ಹಿಜಾಬ್ ಧರಿಸುವುದು ಮುಸ್ಲಿಂ ಹುಡುಗಿಯ ಆಯ್ಕೆಯ ವಿಷಯವಾಗಿದೆ. ಅದರ ವಿರುದ್ಧ ಯಾವುದೇ ನಿರ್ಬಂಧ ಹೇರಲು ಸಾಧ್ಯವಿಲ್ಲ” ಎಂದು ಹೇಳಿದ ಅವರು, ರಾಜ್ಯ ಸರ್ಕಾರದ ನಿಷೇಧದ ಅಧಿಸೂಚನೆಯನ್ನು ರದ್ದುಗೊಳಿಸಿದ್ದರು. ತೀರ್ಪಿನ ವೇಳೆ ಅವರು, ಮುಖ್ಯವಾಗಿ ಹೆಣ್ಣು ಮಗುವಿನ ಶಿಕ್ಷಣದ ಬಗ್ಗೆ ಕಾಳಜಿ ನನ್ನ ಮನಸ್ಸಿನಲ್ಲಿ ಇದೆ ಎಂದು ಹೇಳಿದ್ದರು.

ಭಿನ್ನ ತೀರ್ಪಿನ ಹಿನ್ನಲೆಯಲ್ಲಿ, ಸೂಕ್ತ ಪೀಠವನ್ನು ರಚಿಸುವುದಕ್ಕಾಗಿ ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಾಧೀಶರಿಗೆ ಪ್ರಕರಣವನ್ನು ಉಲ್ಲೇಖಿಸಲಾಗಿತ್ತು.

ಇದನ್ನೂ ಓದಿ: ಸಂವಿಧಾನದ ಮೂಲ ರಚನೆಯು ದಿಕ್ಕು ತೋರುವ ನಕ್ಷತ್ರದಂತೆ: ಸಿಜೆಐ ಚಂದ್ರಚೂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...