Homeಮುಖಪುಟಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಸುಪ್ರೀಂ ಮೆಟ್ಟಿಲೇರಿದ ರಾಜ್ಯದ ವಿದ್ಯಾರ್ಥಿನಿಯರು

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಸುಪ್ರೀಂ ಮೆಟ್ಟಿಲೇರಿದ ರಾಜ್ಯದ ವಿದ್ಯಾರ್ಥಿನಿಯರು

ವಿಚಾರಣೆಯ ದಿನಾಂಕವನ್ನು ನಿಗದಿಪಡಿಸುವುದಾಗಿ ಸುಪ್ರೀಂ ಕೋರ್ಟ್ ಭರವಸೆ ನೀಡಿದೆ

- Advertisement -
- Advertisement -

ರಾಜ್ಯದ ಸರ್ಕಾರಿ ಸಂಸ್ಥೆಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕದ ವಿದ್ಯಾರ್ಥಿನಿಯರ ಗುಂಪೊಂದು ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 2022 ರಲ್ಲಿ ಹಿಂದಿನ ಪೀಠದ ಇಬ್ಬರು ನ್ಯಾಯಾಧೀಶರು ನೀಡಿದ ವಿಭಜಿತ ತೀರ್ಪಿನ ದೃಷ್ಟಿಯಿಂದ ಈ ವಿಷಯವನ್ನು ತೆಗೆದುಕೊಳ್ಳಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸಲು ಪರಿಗಣಿಸುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ಹೇಳಿದ್ದಾರೆ.

“ನಾನು ವಿಷಯವನ್ನು ಪರಿಶೀಲಿಸುತ್ತೇನೆ ಮತ್ತು ದಿನಾಂಕವನ್ನು ನಿಗದಿಪಡಿಸುತ್ತೇನೆ. ಇದು ತ್ರಿಸದಸ್ಯ ಪೀಠದ ವಿಷಯವಾಗಿದೆ. ನೀವು ರಿಜಿಸ್ಟ್ರಾರ್‌ಗೆ ಟಿಪ್ಪಣಿಯನ್ನು ಸಲ್ಲಿಸಿ” ಎಂದು ಸಿಜೆಐ ವಿದ್ಯಾರ್ಥಿಗಳ ಪರವಾಗಿ ಹಾಜರಾದ ಹಿರಿಯ ವಕೀಲ ಮೀನಾಕ್ಷಿ ಅರೋರಾ ಅವರಿಗೆ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ರಾಜ್ಯ ಸರ್ಕಾರವು ಮುಂದುವರಿಸಿರುವ ನಿಷೇಧದ ದೃಷ್ಟಿಯಿಂದ ಹೆಚ್ಚಿನ ವಿದ್ಯಾರ್ಥಿನಿಯರು ಕೆಲವು ಖಾಸಗಿ ಕಾಲೇಜುಗಳಿಗೆ ಸೇರಿದ್ದಾರೆ ಎಂದು ಅರೋರಾ ಅವರು ಸುಪ್ರೀಂಕೋರ್ಟ್‌ನ ಗಮನಸೆಳೆದಿದ್ದಾರೆ.

“ಆದಾಗ್ಯೂ, ಪರೀಕ್ಷೆಗಳನ್ನು ಸರ್ಕಾರಿ ಕಾಲೇಜುಗಳಲ್ಲಿ ಮಾತ್ರ ನಡೆಸಲಾಗುತ್ತದೆ… ಖಾಸಗಿ ಕಾಲೇಜುಗಳು ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ಈ ವಿಷಯವನ್ನು ಮಧ್ಯಂತರ ಆದೇಶ ನೀಡಬೇಕು ಎಂದು ನಾವು ಬಯಸುತ್ತೇವೆ” ಎಂದು ಅರೋರಾ ಸಿಜೆಐಗೆ ತಿಳಿಸಿದ್ದಾರೆ.

ಫೆಬ್ರವರಿ 6 ರಿಂದ ಪರೀಕ್ಷೆಗಳು ಪ್ರಾರಂಭವಾಗುವುದರಿಂದ ಆದ್ಯತೆಯ ಮೇಲೆ ವಿಷಯವನ್ನು ಪಟ್ಟಿ ಮಾಡಲು ಅವರು ನ್ಯಾಯಾಲಯವನ್ನು ಕೋರಿದ್ದಾರೆ. ಈ ಸಂದರ್ಭದಲ್ಲಿ, ಸಿಜೆಐ ಅವರು ಈ ವಿಷಯವನ್ನು ತ್ರಿಸದಸ್ಯ ಪೀಠಕ್ಕೆ ಹಂಚಬೇಕಾಗುತ್ತದೆ. ಪ್ರಕರಣದ ಪಟ್ಟಿಗಾಗಿ ಆಡಳಿತಾತ್ಮಕ ಭಾಗದಲ್ಲಿ ಸೂಕ್ತ ಆದೇಶಗಳನ್ನು ರವಾನಿಸುವುದನ್ನು ಅವರು ಪರಿಗಣಿಸುದಾಗಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕುರಿತು 2022 ರ ಅಕ್ಟೋಬರ್‌ನಲ್ಲಿ ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿತ್ತು. ಒಬ್ಬ ನ್ಯಾಯಾಧೀಶರು ಶಾಲೆಗಳಲ್ಲಿ ಸಮವಸ್ತ್ರವನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ದೃಢಪಡಿಸಿದರೆ, ಇನ್ನೊಬ್ಬರು ಹಿಜಾಬ್ ಅನ್ನು ಆಯ್ಕೆಯ ವಿಷಯ ಎಂದು ಕರೆದಿದ್ದು ಅದರನ್ನು ಸರ್ಕಾರದಿಂದ ನಿಗ್ರಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ತಮ್ಮ ತೀರ್ಪಿನಲ್ಲಿ, ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಕಡ್ಡಾಯವಲ್ಲ. ಹೀಗಾಗಿ ಏಕರೂಪದ ಸಮವಸ್ತ್ರದ ಆದೇಶವನ್ನು ಜಾರಿಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಅಧಿಕಾರವಿದೆ ಎಂದು ಕಳೆದ ವರ್ಷ ಮಾರ್ಚ್‌ನಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಿದ್ದರು.

ಆದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹೇಮಂತ್‌ ಗುಪ್ತಾ ಅವರ ತೀರ್ಪಿಗಿಂತ ಭಿನ್ನವಾಗಿ ತೀರ್ಪು ನೀಡಿದ್ದು, ಎಲ್ಲಾ ಮೇಲ್ಮನವಿಗಳನ್ನು ಅಂಗೀಕರಿಸಿದ್ದರು. ತಮ್ಮ ತೀರ್ಪಿನ ಆಪರೇಟಿವ್ ಭಾಗವನ್ನು ಓದಿದ ನ್ಯಾಯಮೂರ್ತಿ ಧುಲಿಯಾ, “ಹಿಜಾಬ್ ಧರಿಸುವುದು ಮುಸ್ಲಿಂ ಹುಡುಗಿಯ ಆಯ್ಕೆಯ ವಿಷಯವಾಗಿದೆ. ಅದರ ವಿರುದ್ಧ ಯಾವುದೇ ನಿರ್ಬಂಧ ಹೇರಲು ಸಾಧ್ಯವಿಲ್ಲ” ಎಂದು ಹೇಳಿದ ಅವರು, ರಾಜ್ಯ ಸರ್ಕಾರದ ನಿಷೇಧದ ಅಧಿಸೂಚನೆಯನ್ನು ರದ್ದುಗೊಳಿಸಿದ್ದರು. ತೀರ್ಪಿನ ವೇಳೆ ಅವರು, ಮುಖ್ಯವಾಗಿ ಹೆಣ್ಣು ಮಗುವಿನ ಶಿಕ್ಷಣದ ಬಗ್ಗೆ ಕಾಳಜಿ ನನ್ನ ಮನಸ್ಸಿನಲ್ಲಿ ಇದೆ ಎಂದು ಹೇಳಿದ್ದರು.

ಭಿನ್ನ ತೀರ್ಪಿನ ಹಿನ್ನಲೆಯಲ್ಲಿ, ಸೂಕ್ತ ಪೀಠವನ್ನು ರಚಿಸುವುದಕ್ಕಾಗಿ ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಾಧೀಶರಿಗೆ ಪ್ರಕರಣವನ್ನು ಉಲ್ಲೇಖಿಸಲಾಗಿತ್ತು.

ಇದನ್ನೂ ಓದಿ: ಸಂವಿಧಾನದ ಮೂಲ ರಚನೆಯು ದಿಕ್ಕು ತೋರುವ ನಕ್ಷತ್ರದಂತೆ: ಸಿಜೆಐ ಚಂದ್ರಚೂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...