Homeಮುಖಪುಟಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಸುಪ್ರೀಂ ಮೆಟ್ಟಿಲೇರಿದ ರಾಜ್ಯದ ವಿದ್ಯಾರ್ಥಿನಿಯರು

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಸುಪ್ರೀಂ ಮೆಟ್ಟಿಲೇರಿದ ರಾಜ್ಯದ ವಿದ್ಯಾರ್ಥಿನಿಯರು

ವಿಚಾರಣೆಯ ದಿನಾಂಕವನ್ನು ನಿಗದಿಪಡಿಸುವುದಾಗಿ ಸುಪ್ರೀಂ ಕೋರ್ಟ್ ಭರವಸೆ ನೀಡಿದೆ

- Advertisement -
- Advertisement -

ರಾಜ್ಯದ ಸರ್ಕಾರಿ ಸಂಸ್ಥೆಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕದ ವಿದ್ಯಾರ್ಥಿನಿಯರ ಗುಂಪೊಂದು ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅಕ್ಟೋಬರ್ 2022 ರಲ್ಲಿ ಹಿಂದಿನ ಪೀಠದ ಇಬ್ಬರು ನ್ಯಾಯಾಧೀಶರು ನೀಡಿದ ವಿಭಜಿತ ತೀರ್ಪಿನ ದೃಷ್ಟಿಯಿಂದ ಈ ವಿಷಯವನ್ನು ತೆಗೆದುಕೊಳ್ಳಲು ತ್ರಿಸದಸ್ಯ ಪೀಠವನ್ನು ಸ್ಥಾಪಿಸಲು ಪರಿಗಣಿಸುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಧನಂಜಯ ವೈ ಚಂದ್ರಚೂಡ್ ಹೇಳಿದ್ದಾರೆ.

“ನಾನು ವಿಷಯವನ್ನು ಪರಿಶೀಲಿಸುತ್ತೇನೆ ಮತ್ತು ದಿನಾಂಕವನ್ನು ನಿಗದಿಪಡಿಸುತ್ತೇನೆ. ಇದು ತ್ರಿಸದಸ್ಯ ಪೀಠದ ವಿಷಯವಾಗಿದೆ. ನೀವು ರಿಜಿಸ್ಟ್ರಾರ್‌ಗೆ ಟಿಪ್ಪಣಿಯನ್ನು ಸಲ್ಲಿಸಿ” ಎಂದು ಸಿಜೆಐ ವಿದ್ಯಾರ್ಥಿಗಳ ಪರವಾಗಿ ಹಾಜರಾದ ಹಿರಿಯ ವಕೀಲ ಮೀನಾಕ್ಷಿ ಅರೋರಾ ಅವರಿಗೆ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ರಾಜ್ಯ ಸರ್ಕಾರವು ಮುಂದುವರಿಸಿರುವ ನಿಷೇಧದ ದೃಷ್ಟಿಯಿಂದ ಹೆಚ್ಚಿನ ವಿದ್ಯಾರ್ಥಿನಿಯರು ಕೆಲವು ಖಾಸಗಿ ಕಾಲೇಜುಗಳಿಗೆ ಸೇರಿದ್ದಾರೆ ಎಂದು ಅರೋರಾ ಅವರು ಸುಪ್ರೀಂಕೋರ್ಟ್‌ನ ಗಮನಸೆಳೆದಿದ್ದಾರೆ.

“ಆದಾಗ್ಯೂ, ಪರೀಕ್ಷೆಗಳನ್ನು ಸರ್ಕಾರಿ ಕಾಲೇಜುಗಳಲ್ಲಿ ಮಾತ್ರ ನಡೆಸಲಾಗುತ್ತದೆ… ಖಾಸಗಿ ಕಾಲೇಜುಗಳು ಪರೀಕ್ಷೆಗಳನ್ನು ನಡೆಸಲು ಸಾಧ್ಯವಿಲ್ಲ. ಅದಕ್ಕಾಗಿಯೇ ಈ ವಿಷಯವನ್ನು ಮಧ್ಯಂತರ ಆದೇಶ ನೀಡಬೇಕು ಎಂದು ನಾವು ಬಯಸುತ್ತೇವೆ” ಎಂದು ಅರೋರಾ ಸಿಜೆಐಗೆ ತಿಳಿಸಿದ್ದಾರೆ.

ಫೆಬ್ರವರಿ 6 ರಿಂದ ಪರೀಕ್ಷೆಗಳು ಪ್ರಾರಂಭವಾಗುವುದರಿಂದ ಆದ್ಯತೆಯ ಮೇಲೆ ವಿಷಯವನ್ನು ಪಟ್ಟಿ ಮಾಡಲು ಅವರು ನ್ಯಾಯಾಲಯವನ್ನು ಕೋರಿದ್ದಾರೆ. ಈ ಸಂದರ್ಭದಲ್ಲಿ, ಸಿಜೆಐ ಅವರು ಈ ವಿಷಯವನ್ನು ತ್ರಿಸದಸ್ಯ ಪೀಠಕ್ಕೆ ಹಂಚಬೇಕಾಗುತ್ತದೆ. ಪ್ರಕರಣದ ಪಟ್ಟಿಗಾಗಿ ಆಡಳಿತಾತ್ಮಕ ಭಾಗದಲ್ಲಿ ಸೂಕ್ತ ಆದೇಶಗಳನ್ನು ರವಾನಿಸುವುದನ್ನು ಅವರು ಪರಿಗಣಿಸುದಾಗಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕುರಿತು 2022 ರ ಅಕ್ಟೋಬರ್‌ನಲ್ಲಿ ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠ ಭಿನ್ನ ತೀರ್ಪು ನೀಡಿತ್ತು. ಒಬ್ಬ ನ್ಯಾಯಾಧೀಶರು ಶಾಲೆಗಳಲ್ಲಿ ಸಮವಸ್ತ್ರವನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ದೃಢಪಡಿಸಿದರೆ, ಇನ್ನೊಬ್ಬರು ಹಿಜಾಬ್ ಅನ್ನು ಆಯ್ಕೆಯ ವಿಷಯ ಎಂದು ಕರೆದಿದ್ದು ಅದರನ್ನು ಸರ್ಕಾರದಿಂದ ನಿಗ್ರಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ತಮ್ಮ ತೀರ್ಪಿನಲ್ಲಿ, ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಕಡ್ಡಾಯವಲ್ಲ. ಹೀಗಾಗಿ ಏಕರೂಪದ ಸಮವಸ್ತ್ರದ ಆದೇಶವನ್ನು ಜಾರಿಗೊಳಿಸಲು ಕರ್ನಾಟಕ ಸರ್ಕಾರಕ್ಕೆ ಅಧಿಕಾರವಿದೆ ಎಂದು ಕಳೆದ ವರ್ಷ ಮಾರ್ಚ್‌ನಲ್ಲಿ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಿದ್ದರು.

ಆದರೆ, ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರು ಹೇಮಂತ್‌ ಗುಪ್ತಾ ಅವರ ತೀರ್ಪಿಗಿಂತ ಭಿನ್ನವಾಗಿ ತೀರ್ಪು ನೀಡಿದ್ದು, ಎಲ್ಲಾ ಮೇಲ್ಮನವಿಗಳನ್ನು ಅಂಗೀಕರಿಸಿದ್ದರು. ತಮ್ಮ ತೀರ್ಪಿನ ಆಪರೇಟಿವ್ ಭಾಗವನ್ನು ಓದಿದ ನ್ಯಾಯಮೂರ್ತಿ ಧುಲಿಯಾ, “ಹಿಜಾಬ್ ಧರಿಸುವುದು ಮುಸ್ಲಿಂ ಹುಡುಗಿಯ ಆಯ್ಕೆಯ ವಿಷಯವಾಗಿದೆ. ಅದರ ವಿರುದ್ಧ ಯಾವುದೇ ನಿರ್ಬಂಧ ಹೇರಲು ಸಾಧ್ಯವಿಲ್ಲ” ಎಂದು ಹೇಳಿದ ಅವರು, ರಾಜ್ಯ ಸರ್ಕಾರದ ನಿಷೇಧದ ಅಧಿಸೂಚನೆಯನ್ನು ರದ್ದುಗೊಳಿಸಿದ್ದರು. ತೀರ್ಪಿನ ವೇಳೆ ಅವರು, ಮುಖ್ಯವಾಗಿ ಹೆಣ್ಣು ಮಗುವಿನ ಶಿಕ್ಷಣದ ಬಗ್ಗೆ ಕಾಳಜಿ ನನ್ನ ಮನಸ್ಸಿನಲ್ಲಿ ಇದೆ ಎಂದು ಹೇಳಿದ್ದರು.

ಭಿನ್ನ ತೀರ್ಪಿನ ಹಿನ್ನಲೆಯಲ್ಲಿ, ಸೂಕ್ತ ಪೀಠವನ್ನು ರಚಿಸುವುದಕ್ಕಾಗಿ ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಾಧೀಶರಿಗೆ ಪ್ರಕರಣವನ್ನು ಉಲ್ಲೇಖಿಸಲಾಗಿತ್ತು.

ಇದನ್ನೂ ಓದಿ: ಸಂವಿಧಾನದ ಮೂಲ ರಚನೆಯು ದಿಕ್ಕು ತೋರುವ ನಕ್ಷತ್ರದಂತೆ: ಸಿಜೆಐ ಚಂದ್ರಚೂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...