Homeಕರ್ನಾಟಕಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಗೂಡು ಸೇರುವ ತವಕ; ಬಿಸಲನ್ನೂ ಲೆಕ್ಕಿಸದೆ ಹೆಜ್ಜೆ ಹಾಕುತ್ತಿರುವ ವಲಸೆ ಕಾರ್ಮಿಕರು

- Advertisement -
- Advertisement -

ವಲಸೆ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರಗಳು ಸೂಕ್ತ ವಾಹನದ ವ್ಯವಸ್ಥೆ ಮಾಡದೇ ಇರುವ ಕಾರಣದಿಂದ ಕಾರ್ಮಿಕ ಭಾರತ ಚಲಿಸುತ್ತಲೇ ಇದೆ.

ಬದುಕನ್ನು ಕಟ್ಟಿಕೊಳ್ಳಲು ಗೊತ್ತು ಗುರಿಯಿಲ್ಲದ ಪ್ರದೇಶಕ್ಕೆ ಬಂದಿದ್ದ ವಲಸೆ ಕಾರ್ಮಿಕರು ಹೆಜ್ಜೆಹೆಜ್ಜೆಗೂ ಕಡುಕಷ್ಟ ಅನುಭವಿಸುವಂತಾಗಿದೆ. ಊರಿಗೆ ಸೇರುವ ತವಕ ಎಲ್ಲಾ ಕಾರ್ಮಿಕರಲ್ಲಿ ಮನೆ ಮಾಡಿದೆ. ಕಾಲಲ್ಲಿ ರಕ್ತ ಸುರಿದರೂ ಸರಿಯೇ? ದೇಹದಲ್ಲಿ ಬೆವರು ಹರಿದರೂ ಸರಿಯೇ ಊಟ ನೀರು, ನಿದ್ರೆ ಯಾವುದೂ ಇಲ್ಲದಿದ್ದರೇನು ಊರು ತಲುಪಬೇಕೆಂಬ ಧಾವಂತ ಅವರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ.

ಉತ್ತರದ ಜನ ಕೊರೊನ ಲಾಕ್‌ಡೌನ್‌ಗೆ ತತ್ತರಿಸಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿ ಗಮನಹರಿಸಿ ದಂತೆ ಕಾಣುತ್ತಿಲ್ಲ. ಹಿಂದಿಯಲ್ಲೇ ಭಾಷಣ ಕುಟ್ಟುವ ಗೃಹ ಸಚಿವ ಅಮಿತ್ ಶಾ ಮತ್ತು ನರೇಂದ್ರ ಮೋದಿ ಅದೇ ಭಾಷಿಕರ ನೋವಿಗೆ ಮಿಡಿಯುತ್ತಿಲ್ಲ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ  ಜಾರ್ಖಂಡ್ ಭಾಗದ ವಲಸೆ ಕಾರ್ಮಿಕರು ಊರುಗಳಿಗೆ ತೆರಳಲು ಬಸ್, ಟ್ರೈನ್, ಲಾರಿ, ಹೀಗೇ ಯಾವುದೇ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೂ ನಡೆದೂ ಬಳಲಿ ಹೋಗಿದ್ದಾರೆ. ಅವರ ಗೋಳನ್ನು ಕೇಳುವವರೇ ಇಲ್ಲವಾಗಿದೆ. ರಸ್ತೆ ಎಲ್ಲಿಗೆ ಮುಟ್ಟಿಸುತ್ತದೆ ಎಂಬುದು ಗೊತ್ತಿಲ್ಲದೆ ಬೆನ್ನಿಗೆ ಬ್ಯಾಗುಗಳನ್ನು ತಗಲು ಹಾಕಿಕೊಂಡು ಹೋಗುತ್ತಿರುವ ದೃಶ್ಯಗಳು ಎಂಥವರ ಮನವನ್ನೂ ಕಲಕುವಂತಿವೆ.

ರಾಜ್ಯದಲ್ಲಿ ಇನ್ನೂ ವಲಸೆ ಕಾರ್ಮಿಕರಿದ್ದು, ಅವರೆಲ್ಲರೂ ಸೇವಾಸಿಂಧುವಿನಲ್ಲಿ ನೋಂದಣಿಯಾಗದ ಕಾರ್ಮಿಕರಾಗಿದ್ದಾರೆ. ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆಗಳು ಇಲ್ಲದೆ, ತಾಂತ್ರಿಕ ಕಾರಣಗಳಿಗಾಗಿ ನೋಂದಣಿ ಸಾಧ್ಯವಾಗದೆ, ಮೊಬೈಲ್ ಗೆ ಮಾಹಿತಿ ಬಾರದೆ ಇರುವ ವಲಸೆ ಕಾರ್ಮಿಕರು ಅನಿವಾರ್ಯವಾಗಿ ನಡೆದೇ ಹೋಗುವಂತಹ ಸನ್ನಿವೇಶ ಬಂದೊದಗಿದೆ. ಹಾಗಾಗಿ ವಲಸೆ ಕಾರ್ಮಿಕರು ತಂಡ ತಂಡವಾಗಿ ಲಾಕ್‌ಡೌನ್‌ ಲೆಕ್ಕಿಸದೇ ತೆರಳುತ್ತಿದ್ದಾರೆ. ಬೇಸಿಗೆಯ ಬಿಸಿನ ಧಗೆಗೆ ಅವರ ಬದುಕು ಮತ್ತಷ್ಟು ಕಮರಿ ಹೋಗಿದೆ. ಆದರೆ ಅದೇ ಕಾರ್ಮಿಕರು ಮತ್ತು ಜನರಿಂದ ಆಯ್ಕೆಯಾದವರು ನೆರಳಿನಲ್ಲಿ ಕೂತು ನಗುತ್ತಿದ್ದಾರೆ.

ಮೈಸೂರಿನಿಂದ ರೈಲಿನಲ್ಲಿ ಮೇ 23ರಂದು ಬೆಂಗಳುರಿಗೆ ಬಂದಿಳಿದ ವಲಸೆ ಕಾರ್ಮಿಕರು ಅಲ್ಲಿಂದ ನಡೆದೇ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಬೆಂಗಳೂರಿನಿಂದ ಮಧ್ಯಪ್ರದೇಶದತ್ತ ತಂಡೋಪತಂಡವಾಗಿ ಹೆಜ್ಜೆ ಹಾಕುತ್ತಲೇ ಸಾಗುತ್ತಿದ್ದಾರೆ. ಇವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು. ಇಡೀ ದೇಶ ಭಾನುವಾರ ಲಾಕ್‌ಡೌನ್ ಕಾರಣಕ್ಕಾಗಿ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೇ ಹೋಗುವಂತಹ ಪರಿಸ್ಥಿತಿಯನ್ನು ಸರ್ಕಾರಗಳು ಹುಟ್ಟು ಹಾಕಿವೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ನಾನುಗೌರಿ.ಕಾಮ್ ನೊಂದಿಗೆ ಮಾತನಾಡಿ, “ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಇದು ಸರ್ಕಾರಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ. ಕಾರ್ಮಿಕರ ನಡಿಗೆ ಹೀಗೆ ಮುಂದುವರಿದರೆ ನಡಿಗೆಗೆ ಸರ್ಕಾರ ಟ್ಯಾಕ್ಸ್ ಹಾಕಬಹುದು. ಪಾಪ ಅವರನ್ನು ನೋಡಲು ಆಗುತ್ತಿಲ್ಲ. ಉರಿ ಉರಿ ಬಿಸಿಲಲ್ಲಿ ಊಟ, ನೀರು ಇಲ್ಲದೆ ನಡೆದುಹೋಗುತ್ತಿದ್ದಾರೆ. ಅವರಲ್ಲಿ ಭಯ ಕಾಡುತ್ತಿದೆ. ದುಡಿಮೆ ಇಲ್ಲ. ಬಸ್ ಇಲ್ಲ, ಹಣವೂ ಇಲ್ಲ. ಮುಂದೆ ಅವರಿಗೆ ಬರ್ಬರ ದಿನಗಳು ಎದುರಾಗಲಿ”ವೆ ಎಂದು ನೊಂದು ನುಡಿದರು.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ವಲಸೆ ಕಾರ್ಮಿಕರ ತಂಡಗಳು ಭಾರದ ಹೆಜ್ಜೆಯನ್ನು ಹಾಕುತ್ತ ಮುನ್ನಡೆಯುತ್ತಿವೆ. ಆ ತಂಡಗಳಲ್ಲಿ ಕೆಲವರನ್ನು ವಿಚಾರಿಸಿದಾಗ ಮಧ್ಯಪ್ರದೇಶದ ಜಬ್ಬಲ್ ಪುರದವರು ಎಂದು ತಿಳಿದು ಬಂದಿದೆ. ನಡೆದೇ ಹೋಗುತ್ತೀರಲ್ಲ ಎಂದು ಪ್ರಶ್ನಿಸಿದರೆ ಏನು ಮಾಡೋದು? ನಮಗೆ ಯಾರೂ ನೆರವಾಗುತ್ತಿಲ್ಲ. ಊರು ಸೇರಬೇಕಲ್ಲ. ಹಾಗಾಗಿ ನಡೆದೇ ಹೋಗುತ್ತೇವೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಯಂತ್ರಗಳೊಂದಿಗೆ, ಕಟ್ಟಡ ಕಟ್ಟುವ  ಶ್ರಮ ಹಾಕಿದವರು ಈಗಲೂ ಶ್ರಮ ಹಾಕಬೇಕಾಗಿ ಬಂದಿದೆ. ಆಳುವ ಸರ್ಕಾರಗಳಿಗೆ ಜನರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ ಎಂಬುದು ಇದರಿಂದ ವ್ಯಕ್ತವಾಗುತ್ತದೆ. ಪ್ರಜೆಗಳ ಮನಸ್ಸನ್ನು ಅರ್ಥ ಮಾಡಿಕೊಂಡು ಪಾಲಿಸುವವನೇ ಅರಸ, ಲಂಚವನ್ನು ಸ್ವೀಕರಿಸದವನು ನಿಜವಾದ ಮಂತ್ರಿ ಕಷ್ಟದಲ್ಲಿ ಇರುವವರನ್ನು ಸಲಹವವನು ಯೋಗಿ ಎನ್ನುತ್ತಾನೆ ಕವಿ ಸೋಮನಾಥ. ಆದರೆ ಈ ಗುಣಗಳನ್ನು ಆಳುವವರ ಪೈಕಿ ಯಾರಲ್ಲಿ ಕಾಣಲು ಸಾಧ್ಯ ಎನ್ನುವಂತಾಗಿದೆ.


ಓದಿ: ಗುರುಗಾಂವ್: 75% ಕಾರ್ಮಿಕರಿಗೆ ಎಪ್ರಿಲ್ ತಿಂಗಳ ಸಂಬಳ ನೀಡದ ಕಾರ್ಖಾನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...