Homeಕರ್ನಾಟಕಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಗೂಡು ಸೇರುವ ತವಕ; ಬಿಸಲನ್ನೂ ಲೆಕ್ಕಿಸದೆ ಹೆಜ್ಜೆ ಹಾಕುತ್ತಿರುವ ವಲಸೆ ಕಾರ್ಮಿಕರು

- Advertisement -
- Advertisement -

ವಲಸೆ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರಗಳು ಸೂಕ್ತ ವಾಹನದ ವ್ಯವಸ್ಥೆ ಮಾಡದೇ ಇರುವ ಕಾರಣದಿಂದ ಕಾರ್ಮಿಕ ಭಾರತ ಚಲಿಸುತ್ತಲೇ ಇದೆ.

ಬದುಕನ್ನು ಕಟ್ಟಿಕೊಳ್ಳಲು ಗೊತ್ತು ಗುರಿಯಿಲ್ಲದ ಪ್ರದೇಶಕ್ಕೆ ಬಂದಿದ್ದ ವಲಸೆ ಕಾರ್ಮಿಕರು ಹೆಜ್ಜೆಹೆಜ್ಜೆಗೂ ಕಡುಕಷ್ಟ ಅನುಭವಿಸುವಂತಾಗಿದೆ. ಊರಿಗೆ ಸೇರುವ ತವಕ ಎಲ್ಲಾ ಕಾರ್ಮಿಕರಲ್ಲಿ ಮನೆ ಮಾಡಿದೆ. ಕಾಲಲ್ಲಿ ರಕ್ತ ಸುರಿದರೂ ಸರಿಯೇ? ದೇಹದಲ್ಲಿ ಬೆವರು ಹರಿದರೂ ಸರಿಯೇ ಊಟ ನೀರು, ನಿದ್ರೆ ಯಾವುದೂ ಇಲ್ಲದಿದ್ದರೇನು ಊರು ತಲುಪಬೇಕೆಂಬ ಧಾವಂತ ಅವರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ.

ಉತ್ತರದ ಜನ ಕೊರೊನ ಲಾಕ್‌ಡೌನ್‌ಗೆ ತತ್ತರಿಸಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿ ಗಮನಹರಿಸಿ ದಂತೆ ಕಾಣುತ್ತಿಲ್ಲ. ಹಿಂದಿಯಲ್ಲೇ ಭಾಷಣ ಕುಟ್ಟುವ ಗೃಹ ಸಚಿವ ಅಮಿತ್ ಶಾ ಮತ್ತು ನರೇಂದ್ರ ಮೋದಿ ಅದೇ ಭಾಷಿಕರ ನೋವಿಗೆ ಮಿಡಿಯುತ್ತಿಲ್ಲ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ  ಜಾರ್ಖಂಡ್ ಭಾಗದ ವಲಸೆ ಕಾರ್ಮಿಕರು ಊರುಗಳಿಗೆ ತೆರಳಲು ಬಸ್, ಟ್ರೈನ್, ಲಾರಿ, ಹೀಗೇ ಯಾವುದೇ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೂ ನಡೆದೂ ಬಳಲಿ ಹೋಗಿದ್ದಾರೆ. ಅವರ ಗೋಳನ್ನು ಕೇಳುವವರೇ ಇಲ್ಲವಾಗಿದೆ. ರಸ್ತೆ ಎಲ್ಲಿಗೆ ಮುಟ್ಟಿಸುತ್ತದೆ ಎಂಬುದು ಗೊತ್ತಿಲ್ಲದೆ ಬೆನ್ನಿಗೆ ಬ್ಯಾಗುಗಳನ್ನು ತಗಲು ಹಾಕಿಕೊಂಡು ಹೋಗುತ್ತಿರುವ ದೃಶ್ಯಗಳು ಎಂಥವರ ಮನವನ್ನೂ ಕಲಕುವಂತಿವೆ.

ರಾಜ್ಯದಲ್ಲಿ ಇನ್ನೂ ವಲಸೆ ಕಾರ್ಮಿಕರಿದ್ದು, ಅವರೆಲ್ಲರೂ ಸೇವಾಸಿಂಧುವಿನಲ್ಲಿ ನೋಂದಣಿಯಾಗದ ಕಾರ್ಮಿಕರಾಗಿದ್ದಾರೆ. ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆಗಳು ಇಲ್ಲದೆ, ತಾಂತ್ರಿಕ ಕಾರಣಗಳಿಗಾಗಿ ನೋಂದಣಿ ಸಾಧ್ಯವಾಗದೆ, ಮೊಬೈಲ್ ಗೆ ಮಾಹಿತಿ ಬಾರದೆ ಇರುವ ವಲಸೆ ಕಾರ್ಮಿಕರು ಅನಿವಾರ್ಯವಾಗಿ ನಡೆದೇ ಹೋಗುವಂತಹ ಸನ್ನಿವೇಶ ಬಂದೊದಗಿದೆ. ಹಾಗಾಗಿ ವಲಸೆ ಕಾರ್ಮಿಕರು ತಂಡ ತಂಡವಾಗಿ ಲಾಕ್‌ಡೌನ್‌ ಲೆಕ್ಕಿಸದೇ ತೆರಳುತ್ತಿದ್ದಾರೆ. ಬೇಸಿಗೆಯ ಬಿಸಿನ ಧಗೆಗೆ ಅವರ ಬದುಕು ಮತ್ತಷ್ಟು ಕಮರಿ ಹೋಗಿದೆ. ಆದರೆ ಅದೇ ಕಾರ್ಮಿಕರು ಮತ್ತು ಜನರಿಂದ ಆಯ್ಕೆಯಾದವರು ನೆರಳಿನಲ್ಲಿ ಕೂತು ನಗುತ್ತಿದ್ದಾರೆ.

ಮೈಸೂರಿನಿಂದ ರೈಲಿನಲ್ಲಿ ಮೇ 23ರಂದು ಬೆಂಗಳುರಿಗೆ ಬಂದಿಳಿದ ವಲಸೆ ಕಾರ್ಮಿಕರು ಅಲ್ಲಿಂದ ನಡೆದೇ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಬೆಂಗಳೂರಿನಿಂದ ಮಧ್ಯಪ್ರದೇಶದತ್ತ ತಂಡೋಪತಂಡವಾಗಿ ಹೆಜ್ಜೆ ಹಾಕುತ್ತಲೇ ಸಾಗುತ್ತಿದ್ದಾರೆ. ಇವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು. ಇಡೀ ದೇಶ ಭಾನುವಾರ ಲಾಕ್‌ಡೌನ್ ಕಾರಣಕ್ಕಾಗಿ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೇ ಹೋಗುವಂತಹ ಪರಿಸ್ಥಿತಿಯನ್ನು ಸರ್ಕಾರಗಳು ಹುಟ್ಟು ಹಾಕಿವೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ನಾನುಗೌರಿ.ಕಾಮ್ ನೊಂದಿಗೆ ಮಾತನಾಡಿ, “ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಇದು ಸರ್ಕಾರಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ. ಕಾರ್ಮಿಕರ ನಡಿಗೆ ಹೀಗೆ ಮುಂದುವರಿದರೆ ನಡಿಗೆಗೆ ಸರ್ಕಾರ ಟ್ಯಾಕ್ಸ್ ಹಾಕಬಹುದು. ಪಾಪ ಅವರನ್ನು ನೋಡಲು ಆಗುತ್ತಿಲ್ಲ. ಉರಿ ಉರಿ ಬಿಸಿಲಲ್ಲಿ ಊಟ, ನೀರು ಇಲ್ಲದೆ ನಡೆದುಹೋಗುತ್ತಿದ್ದಾರೆ. ಅವರಲ್ಲಿ ಭಯ ಕಾಡುತ್ತಿದೆ. ದುಡಿಮೆ ಇಲ್ಲ. ಬಸ್ ಇಲ್ಲ, ಹಣವೂ ಇಲ್ಲ. ಮುಂದೆ ಅವರಿಗೆ ಬರ್ಬರ ದಿನಗಳು ಎದುರಾಗಲಿ”ವೆ ಎಂದು ನೊಂದು ನುಡಿದರು.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ವಲಸೆ ಕಾರ್ಮಿಕರ ತಂಡಗಳು ಭಾರದ ಹೆಜ್ಜೆಯನ್ನು ಹಾಕುತ್ತ ಮುನ್ನಡೆಯುತ್ತಿವೆ. ಆ ತಂಡಗಳಲ್ಲಿ ಕೆಲವರನ್ನು ವಿಚಾರಿಸಿದಾಗ ಮಧ್ಯಪ್ರದೇಶದ ಜಬ್ಬಲ್ ಪುರದವರು ಎಂದು ತಿಳಿದು ಬಂದಿದೆ. ನಡೆದೇ ಹೋಗುತ್ತೀರಲ್ಲ ಎಂದು ಪ್ರಶ್ನಿಸಿದರೆ ಏನು ಮಾಡೋದು? ನಮಗೆ ಯಾರೂ ನೆರವಾಗುತ್ತಿಲ್ಲ. ಊರು ಸೇರಬೇಕಲ್ಲ. ಹಾಗಾಗಿ ನಡೆದೇ ಹೋಗುತ್ತೇವೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಯಂತ್ರಗಳೊಂದಿಗೆ, ಕಟ್ಟಡ ಕಟ್ಟುವ  ಶ್ರಮ ಹಾಕಿದವರು ಈಗಲೂ ಶ್ರಮ ಹಾಕಬೇಕಾಗಿ ಬಂದಿದೆ. ಆಳುವ ಸರ್ಕಾರಗಳಿಗೆ ಜನರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ ಎಂಬುದು ಇದರಿಂದ ವ್ಯಕ್ತವಾಗುತ್ತದೆ. ಪ್ರಜೆಗಳ ಮನಸ್ಸನ್ನು ಅರ್ಥ ಮಾಡಿಕೊಂಡು ಪಾಲಿಸುವವನೇ ಅರಸ, ಲಂಚವನ್ನು ಸ್ವೀಕರಿಸದವನು ನಿಜವಾದ ಮಂತ್ರಿ ಕಷ್ಟದಲ್ಲಿ ಇರುವವರನ್ನು ಸಲಹವವನು ಯೋಗಿ ಎನ್ನುತ್ತಾನೆ ಕವಿ ಸೋಮನಾಥ. ಆದರೆ ಈ ಗುಣಗಳನ್ನು ಆಳುವವರ ಪೈಕಿ ಯಾರಲ್ಲಿ ಕಾಣಲು ಸಾಧ್ಯ ಎನ್ನುವಂತಾಗಿದೆ.


ಓದಿ: ಗುರುಗಾಂವ್: 75% ಕಾರ್ಮಿಕರಿಗೆ ಎಪ್ರಿಲ್ ತಿಂಗಳ ಸಂಬಳ ನೀಡದ ಕಾರ್ಖಾನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...