Homeಕರ್ನಾಟಕಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಗೂಡು ಸೇರುವ ತವಕ; ಬಿಸಲನ್ನೂ ಲೆಕ್ಕಿಸದೆ ಹೆಜ್ಜೆ ಹಾಕುತ್ತಿರುವ ವಲಸೆ ಕಾರ್ಮಿಕರು

- Advertisement -
- Advertisement -

ವಲಸೆ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರಗಳು ಸೂಕ್ತ ವಾಹನದ ವ್ಯವಸ್ಥೆ ಮಾಡದೇ ಇರುವ ಕಾರಣದಿಂದ ಕಾರ್ಮಿಕ ಭಾರತ ಚಲಿಸುತ್ತಲೇ ಇದೆ.

ಬದುಕನ್ನು ಕಟ್ಟಿಕೊಳ್ಳಲು ಗೊತ್ತು ಗುರಿಯಿಲ್ಲದ ಪ್ರದೇಶಕ್ಕೆ ಬಂದಿದ್ದ ವಲಸೆ ಕಾರ್ಮಿಕರು ಹೆಜ್ಜೆಹೆಜ್ಜೆಗೂ ಕಡುಕಷ್ಟ ಅನುಭವಿಸುವಂತಾಗಿದೆ. ಊರಿಗೆ ಸೇರುವ ತವಕ ಎಲ್ಲಾ ಕಾರ್ಮಿಕರಲ್ಲಿ ಮನೆ ಮಾಡಿದೆ. ಕಾಲಲ್ಲಿ ರಕ್ತ ಸುರಿದರೂ ಸರಿಯೇ? ದೇಹದಲ್ಲಿ ಬೆವರು ಹರಿದರೂ ಸರಿಯೇ ಊಟ ನೀರು, ನಿದ್ರೆ ಯಾವುದೂ ಇಲ್ಲದಿದ್ದರೇನು ಊರು ತಲುಪಬೇಕೆಂಬ ಧಾವಂತ ಅವರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ.

ಉತ್ತರದ ಜನ ಕೊರೊನ ಲಾಕ್‌ಡೌನ್‌ಗೆ ತತ್ತರಿಸಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿ ಗಮನಹರಿಸಿ ದಂತೆ ಕಾಣುತ್ತಿಲ್ಲ. ಹಿಂದಿಯಲ್ಲೇ ಭಾಷಣ ಕುಟ್ಟುವ ಗೃಹ ಸಚಿವ ಅಮಿತ್ ಶಾ ಮತ್ತು ನರೇಂದ್ರ ಮೋದಿ ಅದೇ ಭಾಷಿಕರ ನೋವಿಗೆ ಮಿಡಿಯುತ್ತಿಲ್ಲ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ  ಜಾರ್ಖಂಡ್ ಭಾಗದ ವಲಸೆ ಕಾರ್ಮಿಕರು ಊರುಗಳಿಗೆ ತೆರಳಲು ಬಸ್, ಟ್ರೈನ್, ಲಾರಿ, ಹೀಗೇ ಯಾವುದೇ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೂ ನಡೆದೂ ಬಳಲಿ ಹೋಗಿದ್ದಾರೆ. ಅವರ ಗೋಳನ್ನು ಕೇಳುವವರೇ ಇಲ್ಲವಾಗಿದೆ. ರಸ್ತೆ ಎಲ್ಲಿಗೆ ಮುಟ್ಟಿಸುತ್ತದೆ ಎಂಬುದು ಗೊತ್ತಿಲ್ಲದೆ ಬೆನ್ನಿಗೆ ಬ್ಯಾಗುಗಳನ್ನು ತಗಲು ಹಾಕಿಕೊಂಡು ಹೋಗುತ್ತಿರುವ ದೃಶ್ಯಗಳು ಎಂಥವರ ಮನವನ್ನೂ ಕಲಕುವಂತಿವೆ.

ರಾಜ್ಯದಲ್ಲಿ ಇನ್ನೂ ವಲಸೆ ಕಾರ್ಮಿಕರಿದ್ದು, ಅವರೆಲ್ಲರೂ ಸೇವಾಸಿಂಧುವಿನಲ್ಲಿ ನೋಂದಣಿಯಾಗದ ಕಾರ್ಮಿಕರಾಗಿದ್ದಾರೆ. ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆಗಳು ಇಲ್ಲದೆ, ತಾಂತ್ರಿಕ ಕಾರಣಗಳಿಗಾಗಿ ನೋಂದಣಿ ಸಾಧ್ಯವಾಗದೆ, ಮೊಬೈಲ್ ಗೆ ಮಾಹಿತಿ ಬಾರದೆ ಇರುವ ವಲಸೆ ಕಾರ್ಮಿಕರು ಅನಿವಾರ್ಯವಾಗಿ ನಡೆದೇ ಹೋಗುವಂತಹ ಸನ್ನಿವೇಶ ಬಂದೊದಗಿದೆ. ಹಾಗಾಗಿ ವಲಸೆ ಕಾರ್ಮಿಕರು ತಂಡ ತಂಡವಾಗಿ ಲಾಕ್‌ಡೌನ್‌ ಲೆಕ್ಕಿಸದೇ ತೆರಳುತ್ತಿದ್ದಾರೆ. ಬೇಸಿಗೆಯ ಬಿಸಿನ ಧಗೆಗೆ ಅವರ ಬದುಕು ಮತ್ತಷ್ಟು ಕಮರಿ ಹೋಗಿದೆ. ಆದರೆ ಅದೇ ಕಾರ್ಮಿಕರು ಮತ್ತು ಜನರಿಂದ ಆಯ್ಕೆಯಾದವರು ನೆರಳಿನಲ್ಲಿ ಕೂತು ನಗುತ್ತಿದ್ದಾರೆ.

ಮೈಸೂರಿನಿಂದ ರೈಲಿನಲ್ಲಿ ಮೇ 23ರಂದು ಬೆಂಗಳುರಿಗೆ ಬಂದಿಳಿದ ವಲಸೆ ಕಾರ್ಮಿಕರು ಅಲ್ಲಿಂದ ನಡೆದೇ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಬೆಂಗಳೂರಿನಿಂದ ಮಧ್ಯಪ್ರದೇಶದತ್ತ ತಂಡೋಪತಂಡವಾಗಿ ಹೆಜ್ಜೆ ಹಾಕುತ್ತಲೇ ಸಾಗುತ್ತಿದ್ದಾರೆ. ಇವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು. ಇಡೀ ದೇಶ ಭಾನುವಾರ ಲಾಕ್‌ಡೌನ್ ಕಾರಣಕ್ಕಾಗಿ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೇ ಹೋಗುವಂತಹ ಪರಿಸ್ಥಿತಿಯನ್ನು ಸರ್ಕಾರಗಳು ಹುಟ್ಟು ಹಾಕಿವೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ನಾನುಗೌರಿ.ಕಾಮ್ ನೊಂದಿಗೆ ಮಾತನಾಡಿ, “ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಇದು ಸರ್ಕಾರಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ. ಕಾರ್ಮಿಕರ ನಡಿಗೆ ಹೀಗೆ ಮುಂದುವರಿದರೆ ನಡಿಗೆಗೆ ಸರ್ಕಾರ ಟ್ಯಾಕ್ಸ್ ಹಾಕಬಹುದು. ಪಾಪ ಅವರನ್ನು ನೋಡಲು ಆಗುತ್ತಿಲ್ಲ. ಉರಿ ಉರಿ ಬಿಸಿಲಲ್ಲಿ ಊಟ, ನೀರು ಇಲ್ಲದೆ ನಡೆದುಹೋಗುತ್ತಿದ್ದಾರೆ. ಅವರಲ್ಲಿ ಭಯ ಕಾಡುತ್ತಿದೆ. ದುಡಿಮೆ ಇಲ್ಲ. ಬಸ್ ಇಲ್ಲ, ಹಣವೂ ಇಲ್ಲ. ಮುಂದೆ ಅವರಿಗೆ ಬರ್ಬರ ದಿನಗಳು ಎದುರಾಗಲಿ”ವೆ ಎಂದು ನೊಂದು ನುಡಿದರು.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ವಲಸೆ ಕಾರ್ಮಿಕರ ತಂಡಗಳು ಭಾರದ ಹೆಜ್ಜೆಯನ್ನು ಹಾಕುತ್ತ ಮುನ್ನಡೆಯುತ್ತಿವೆ. ಆ ತಂಡಗಳಲ್ಲಿ ಕೆಲವರನ್ನು ವಿಚಾರಿಸಿದಾಗ ಮಧ್ಯಪ್ರದೇಶದ ಜಬ್ಬಲ್ ಪುರದವರು ಎಂದು ತಿಳಿದು ಬಂದಿದೆ. ನಡೆದೇ ಹೋಗುತ್ತೀರಲ್ಲ ಎಂದು ಪ್ರಶ್ನಿಸಿದರೆ ಏನು ಮಾಡೋದು? ನಮಗೆ ಯಾರೂ ನೆರವಾಗುತ್ತಿಲ್ಲ. ಊರು ಸೇರಬೇಕಲ್ಲ. ಹಾಗಾಗಿ ನಡೆದೇ ಹೋಗುತ್ತೇವೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಯಂತ್ರಗಳೊಂದಿಗೆ, ಕಟ್ಟಡ ಕಟ್ಟುವ  ಶ್ರಮ ಹಾಕಿದವರು ಈಗಲೂ ಶ್ರಮ ಹಾಕಬೇಕಾಗಿ ಬಂದಿದೆ. ಆಳುವ ಸರ್ಕಾರಗಳಿಗೆ ಜನರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ ಎಂಬುದು ಇದರಿಂದ ವ್ಯಕ್ತವಾಗುತ್ತದೆ. ಪ್ರಜೆಗಳ ಮನಸ್ಸನ್ನು ಅರ್ಥ ಮಾಡಿಕೊಂಡು ಪಾಲಿಸುವವನೇ ಅರಸ, ಲಂಚವನ್ನು ಸ್ವೀಕರಿಸದವನು ನಿಜವಾದ ಮಂತ್ರಿ ಕಷ್ಟದಲ್ಲಿ ಇರುವವರನ್ನು ಸಲಹವವನು ಯೋಗಿ ಎನ್ನುತ್ತಾನೆ ಕವಿ ಸೋಮನಾಥ. ಆದರೆ ಈ ಗುಣಗಳನ್ನು ಆಳುವವರ ಪೈಕಿ ಯಾರಲ್ಲಿ ಕಾಣಲು ಸಾಧ್ಯ ಎನ್ನುವಂತಾಗಿದೆ.


ಓದಿ: ಗುರುಗಾಂವ್: 75% ಕಾರ್ಮಿಕರಿಗೆ ಎಪ್ರಿಲ್ ತಿಂಗಳ ಸಂಬಳ ನೀಡದ ಕಾರ್ಖಾನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...