Homeಕರ್ನಾಟಕಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಗೂಡು ಸೇರುವ ತವಕ; ಬಿಸಲನ್ನೂ ಲೆಕ್ಕಿಸದೆ ಹೆಜ್ಜೆ ಹಾಕುತ್ತಿರುವ ವಲಸೆ ಕಾರ್ಮಿಕರು

- Advertisement -
- Advertisement -

ವಲಸೆ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರಗಳು ಸೂಕ್ತ ವಾಹನದ ವ್ಯವಸ್ಥೆ ಮಾಡದೇ ಇರುವ ಕಾರಣದಿಂದ ಕಾರ್ಮಿಕ ಭಾರತ ಚಲಿಸುತ್ತಲೇ ಇದೆ.

ಬದುಕನ್ನು ಕಟ್ಟಿಕೊಳ್ಳಲು ಗೊತ್ತು ಗುರಿಯಿಲ್ಲದ ಪ್ರದೇಶಕ್ಕೆ ಬಂದಿದ್ದ ವಲಸೆ ಕಾರ್ಮಿಕರು ಹೆಜ್ಜೆಹೆಜ್ಜೆಗೂ ಕಡುಕಷ್ಟ ಅನುಭವಿಸುವಂತಾಗಿದೆ. ಊರಿಗೆ ಸೇರುವ ತವಕ ಎಲ್ಲಾ ಕಾರ್ಮಿಕರಲ್ಲಿ ಮನೆ ಮಾಡಿದೆ. ಕಾಲಲ್ಲಿ ರಕ್ತ ಸುರಿದರೂ ಸರಿಯೇ? ದೇಹದಲ್ಲಿ ಬೆವರು ಹರಿದರೂ ಸರಿಯೇ ಊಟ ನೀರು, ನಿದ್ರೆ ಯಾವುದೂ ಇಲ್ಲದಿದ್ದರೇನು ಊರು ತಲುಪಬೇಕೆಂಬ ಧಾವಂತ ಅವರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ.

ಉತ್ತರದ ಜನ ಕೊರೊನ ಲಾಕ್‌ಡೌನ್‌ಗೆ ತತ್ತರಿಸಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿ ಗಮನಹರಿಸಿ ದಂತೆ ಕಾಣುತ್ತಿಲ್ಲ. ಹಿಂದಿಯಲ್ಲೇ ಭಾಷಣ ಕುಟ್ಟುವ ಗೃಹ ಸಚಿವ ಅಮಿತ್ ಶಾ ಮತ್ತು ನರೇಂದ್ರ ಮೋದಿ ಅದೇ ಭಾಷಿಕರ ನೋವಿಗೆ ಮಿಡಿಯುತ್ತಿಲ್ಲ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ  ಜಾರ್ಖಂಡ್ ಭಾಗದ ವಲಸೆ ಕಾರ್ಮಿಕರು ಊರುಗಳಿಗೆ ತೆರಳಲು ಬಸ್, ಟ್ರೈನ್, ಲಾರಿ, ಹೀಗೇ ಯಾವುದೇ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೂ ನಡೆದೂ ಬಳಲಿ ಹೋಗಿದ್ದಾರೆ. ಅವರ ಗೋಳನ್ನು ಕೇಳುವವರೇ ಇಲ್ಲವಾಗಿದೆ. ರಸ್ತೆ ಎಲ್ಲಿಗೆ ಮುಟ್ಟಿಸುತ್ತದೆ ಎಂಬುದು ಗೊತ್ತಿಲ್ಲದೆ ಬೆನ್ನಿಗೆ ಬ್ಯಾಗುಗಳನ್ನು ತಗಲು ಹಾಕಿಕೊಂಡು ಹೋಗುತ್ತಿರುವ ದೃಶ್ಯಗಳು ಎಂಥವರ ಮನವನ್ನೂ ಕಲಕುವಂತಿವೆ.

ರಾಜ್ಯದಲ್ಲಿ ಇನ್ನೂ ವಲಸೆ ಕಾರ್ಮಿಕರಿದ್ದು, ಅವರೆಲ್ಲರೂ ಸೇವಾಸಿಂಧುವಿನಲ್ಲಿ ನೋಂದಣಿಯಾಗದ ಕಾರ್ಮಿಕರಾಗಿದ್ದಾರೆ. ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆಗಳು ಇಲ್ಲದೆ, ತಾಂತ್ರಿಕ ಕಾರಣಗಳಿಗಾಗಿ ನೋಂದಣಿ ಸಾಧ್ಯವಾಗದೆ, ಮೊಬೈಲ್ ಗೆ ಮಾಹಿತಿ ಬಾರದೆ ಇರುವ ವಲಸೆ ಕಾರ್ಮಿಕರು ಅನಿವಾರ್ಯವಾಗಿ ನಡೆದೇ ಹೋಗುವಂತಹ ಸನ್ನಿವೇಶ ಬಂದೊದಗಿದೆ. ಹಾಗಾಗಿ ವಲಸೆ ಕಾರ್ಮಿಕರು ತಂಡ ತಂಡವಾಗಿ ಲಾಕ್‌ಡೌನ್‌ ಲೆಕ್ಕಿಸದೇ ತೆರಳುತ್ತಿದ್ದಾರೆ. ಬೇಸಿಗೆಯ ಬಿಸಿನ ಧಗೆಗೆ ಅವರ ಬದುಕು ಮತ್ತಷ್ಟು ಕಮರಿ ಹೋಗಿದೆ. ಆದರೆ ಅದೇ ಕಾರ್ಮಿಕರು ಮತ್ತು ಜನರಿಂದ ಆಯ್ಕೆಯಾದವರು ನೆರಳಿನಲ್ಲಿ ಕೂತು ನಗುತ್ತಿದ್ದಾರೆ.

ಮೈಸೂರಿನಿಂದ ರೈಲಿನಲ್ಲಿ ಮೇ 23ರಂದು ಬೆಂಗಳುರಿಗೆ ಬಂದಿಳಿದ ವಲಸೆ ಕಾರ್ಮಿಕರು ಅಲ್ಲಿಂದ ನಡೆದೇ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಬೆಂಗಳೂರಿನಿಂದ ಮಧ್ಯಪ್ರದೇಶದತ್ತ ತಂಡೋಪತಂಡವಾಗಿ ಹೆಜ್ಜೆ ಹಾಕುತ್ತಲೇ ಸಾಗುತ್ತಿದ್ದಾರೆ. ಇವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು. ಇಡೀ ದೇಶ ಭಾನುವಾರ ಲಾಕ್‌ಡೌನ್ ಕಾರಣಕ್ಕಾಗಿ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೇ ಹೋಗುವಂತಹ ಪರಿಸ್ಥಿತಿಯನ್ನು ಸರ್ಕಾರಗಳು ಹುಟ್ಟು ಹಾಕಿವೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ನಾನುಗೌರಿ.ಕಾಮ್ ನೊಂದಿಗೆ ಮಾತನಾಡಿ, “ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಇದು ಸರ್ಕಾರಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ. ಕಾರ್ಮಿಕರ ನಡಿಗೆ ಹೀಗೆ ಮುಂದುವರಿದರೆ ನಡಿಗೆಗೆ ಸರ್ಕಾರ ಟ್ಯಾಕ್ಸ್ ಹಾಕಬಹುದು. ಪಾಪ ಅವರನ್ನು ನೋಡಲು ಆಗುತ್ತಿಲ್ಲ. ಉರಿ ಉರಿ ಬಿಸಿಲಲ್ಲಿ ಊಟ, ನೀರು ಇಲ್ಲದೆ ನಡೆದುಹೋಗುತ್ತಿದ್ದಾರೆ. ಅವರಲ್ಲಿ ಭಯ ಕಾಡುತ್ತಿದೆ. ದುಡಿಮೆ ಇಲ್ಲ. ಬಸ್ ಇಲ್ಲ, ಹಣವೂ ಇಲ್ಲ. ಮುಂದೆ ಅವರಿಗೆ ಬರ್ಬರ ದಿನಗಳು ಎದುರಾಗಲಿ”ವೆ ಎಂದು ನೊಂದು ನುಡಿದರು.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ವಲಸೆ ಕಾರ್ಮಿಕರ ತಂಡಗಳು ಭಾರದ ಹೆಜ್ಜೆಯನ್ನು ಹಾಕುತ್ತ ಮುನ್ನಡೆಯುತ್ತಿವೆ. ಆ ತಂಡಗಳಲ್ಲಿ ಕೆಲವರನ್ನು ವಿಚಾರಿಸಿದಾಗ ಮಧ್ಯಪ್ರದೇಶದ ಜಬ್ಬಲ್ ಪುರದವರು ಎಂದು ತಿಳಿದು ಬಂದಿದೆ. ನಡೆದೇ ಹೋಗುತ್ತೀರಲ್ಲ ಎಂದು ಪ್ರಶ್ನಿಸಿದರೆ ಏನು ಮಾಡೋದು? ನಮಗೆ ಯಾರೂ ನೆರವಾಗುತ್ತಿಲ್ಲ. ಊರು ಸೇರಬೇಕಲ್ಲ. ಹಾಗಾಗಿ ನಡೆದೇ ಹೋಗುತ್ತೇವೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಯಂತ್ರಗಳೊಂದಿಗೆ, ಕಟ್ಟಡ ಕಟ್ಟುವ  ಶ್ರಮ ಹಾಕಿದವರು ಈಗಲೂ ಶ್ರಮ ಹಾಕಬೇಕಾಗಿ ಬಂದಿದೆ. ಆಳುವ ಸರ್ಕಾರಗಳಿಗೆ ಜನರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ ಎಂಬುದು ಇದರಿಂದ ವ್ಯಕ್ತವಾಗುತ್ತದೆ. ಪ್ರಜೆಗಳ ಮನಸ್ಸನ್ನು ಅರ್ಥ ಮಾಡಿಕೊಂಡು ಪಾಲಿಸುವವನೇ ಅರಸ, ಲಂಚವನ್ನು ಸ್ವೀಕರಿಸದವನು ನಿಜವಾದ ಮಂತ್ರಿ ಕಷ್ಟದಲ್ಲಿ ಇರುವವರನ್ನು ಸಲಹವವನು ಯೋಗಿ ಎನ್ನುತ್ತಾನೆ ಕವಿ ಸೋಮನಾಥ. ಆದರೆ ಈ ಗುಣಗಳನ್ನು ಆಳುವವರ ಪೈಕಿ ಯಾರಲ್ಲಿ ಕಾಣಲು ಸಾಧ್ಯ ಎನ್ನುವಂತಾಗಿದೆ.


ಓದಿ: ಗುರುಗಾಂವ್: 75% ಕಾರ್ಮಿಕರಿಗೆ ಎಪ್ರಿಲ್ ತಿಂಗಳ ಸಂಬಳ ನೀಡದ ಕಾರ್ಖಾನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...