Homeಕರ್ನಾಟಕಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಗೂಡು ಸೇರುವ ತವಕ; ಬಿಸಲನ್ನೂ ಲೆಕ್ಕಿಸದೆ ಹೆಜ್ಜೆ ಹಾಕುತ್ತಿರುವ ವಲಸೆ ಕಾರ್ಮಿಕರು

- Advertisement -
- Advertisement -

ವಲಸೆ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರಗಳು ಸೂಕ್ತ ವಾಹನದ ವ್ಯವಸ್ಥೆ ಮಾಡದೇ ಇರುವ ಕಾರಣದಿಂದ ಕಾರ್ಮಿಕ ಭಾರತ ಚಲಿಸುತ್ತಲೇ ಇದೆ.

ಬದುಕನ್ನು ಕಟ್ಟಿಕೊಳ್ಳಲು ಗೊತ್ತು ಗುರಿಯಿಲ್ಲದ ಪ್ರದೇಶಕ್ಕೆ ಬಂದಿದ್ದ ವಲಸೆ ಕಾರ್ಮಿಕರು ಹೆಜ್ಜೆಹೆಜ್ಜೆಗೂ ಕಡುಕಷ್ಟ ಅನುಭವಿಸುವಂತಾಗಿದೆ. ಊರಿಗೆ ಸೇರುವ ತವಕ ಎಲ್ಲಾ ಕಾರ್ಮಿಕರಲ್ಲಿ ಮನೆ ಮಾಡಿದೆ. ಕಾಲಲ್ಲಿ ರಕ್ತ ಸುರಿದರೂ ಸರಿಯೇ? ದೇಹದಲ್ಲಿ ಬೆವರು ಹರಿದರೂ ಸರಿಯೇ ಊಟ ನೀರು, ನಿದ್ರೆ ಯಾವುದೂ ಇಲ್ಲದಿದ್ದರೇನು ಊರು ತಲುಪಬೇಕೆಂಬ ಧಾವಂತ ಅವರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ.

ಉತ್ತರದ ಜನ ಕೊರೊನ ಲಾಕ್‌ಡೌನ್‌ಗೆ ತತ್ತರಿಸಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿ ಗಮನಹರಿಸಿ ದಂತೆ ಕಾಣುತ್ತಿಲ್ಲ. ಹಿಂದಿಯಲ್ಲೇ ಭಾಷಣ ಕುಟ್ಟುವ ಗೃಹ ಸಚಿವ ಅಮಿತ್ ಶಾ ಮತ್ತು ನರೇಂದ್ರ ಮೋದಿ ಅದೇ ಭಾಷಿಕರ ನೋವಿಗೆ ಮಿಡಿಯುತ್ತಿಲ್ಲ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ  ಜಾರ್ಖಂಡ್ ಭಾಗದ ವಲಸೆ ಕಾರ್ಮಿಕರು ಊರುಗಳಿಗೆ ತೆರಳಲು ಬಸ್, ಟ್ರೈನ್, ಲಾರಿ, ಹೀಗೇ ಯಾವುದೇ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೂ ನಡೆದೂ ಬಳಲಿ ಹೋಗಿದ್ದಾರೆ. ಅವರ ಗೋಳನ್ನು ಕೇಳುವವರೇ ಇಲ್ಲವಾಗಿದೆ. ರಸ್ತೆ ಎಲ್ಲಿಗೆ ಮುಟ್ಟಿಸುತ್ತದೆ ಎಂಬುದು ಗೊತ್ತಿಲ್ಲದೆ ಬೆನ್ನಿಗೆ ಬ್ಯಾಗುಗಳನ್ನು ತಗಲು ಹಾಕಿಕೊಂಡು ಹೋಗುತ್ತಿರುವ ದೃಶ್ಯಗಳು ಎಂಥವರ ಮನವನ್ನೂ ಕಲಕುವಂತಿವೆ.

ರಾಜ್ಯದಲ್ಲಿ ಇನ್ನೂ ವಲಸೆ ಕಾರ್ಮಿಕರಿದ್ದು, ಅವರೆಲ್ಲರೂ ಸೇವಾಸಿಂಧುವಿನಲ್ಲಿ ನೋಂದಣಿಯಾಗದ ಕಾರ್ಮಿಕರಾಗಿದ್ದಾರೆ. ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆಗಳು ಇಲ್ಲದೆ, ತಾಂತ್ರಿಕ ಕಾರಣಗಳಿಗಾಗಿ ನೋಂದಣಿ ಸಾಧ್ಯವಾಗದೆ, ಮೊಬೈಲ್ ಗೆ ಮಾಹಿತಿ ಬಾರದೆ ಇರುವ ವಲಸೆ ಕಾರ್ಮಿಕರು ಅನಿವಾರ್ಯವಾಗಿ ನಡೆದೇ ಹೋಗುವಂತಹ ಸನ್ನಿವೇಶ ಬಂದೊದಗಿದೆ. ಹಾಗಾಗಿ ವಲಸೆ ಕಾರ್ಮಿಕರು ತಂಡ ತಂಡವಾಗಿ ಲಾಕ್‌ಡೌನ್‌ ಲೆಕ್ಕಿಸದೇ ತೆರಳುತ್ತಿದ್ದಾರೆ. ಬೇಸಿಗೆಯ ಬಿಸಿನ ಧಗೆಗೆ ಅವರ ಬದುಕು ಮತ್ತಷ್ಟು ಕಮರಿ ಹೋಗಿದೆ. ಆದರೆ ಅದೇ ಕಾರ್ಮಿಕರು ಮತ್ತು ಜನರಿಂದ ಆಯ್ಕೆಯಾದವರು ನೆರಳಿನಲ್ಲಿ ಕೂತು ನಗುತ್ತಿದ್ದಾರೆ.

ಮೈಸೂರಿನಿಂದ ರೈಲಿನಲ್ಲಿ ಮೇ 23ರಂದು ಬೆಂಗಳುರಿಗೆ ಬಂದಿಳಿದ ವಲಸೆ ಕಾರ್ಮಿಕರು ಅಲ್ಲಿಂದ ನಡೆದೇ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಬೆಂಗಳೂರಿನಿಂದ ಮಧ್ಯಪ್ರದೇಶದತ್ತ ತಂಡೋಪತಂಡವಾಗಿ ಹೆಜ್ಜೆ ಹಾಕುತ್ತಲೇ ಸಾಗುತ್ತಿದ್ದಾರೆ. ಇವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು. ಇಡೀ ದೇಶ ಭಾನುವಾರ ಲಾಕ್‌ಡೌನ್ ಕಾರಣಕ್ಕಾಗಿ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೇ ಹೋಗುವಂತಹ ಪರಿಸ್ಥಿತಿಯನ್ನು ಸರ್ಕಾರಗಳು ಹುಟ್ಟು ಹಾಕಿವೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ನಾನುಗೌರಿ.ಕಾಮ್ ನೊಂದಿಗೆ ಮಾತನಾಡಿ, “ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಇದು ಸರ್ಕಾರಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ. ಕಾರ್ಮಿಕರ ನಡಿಗೆ ಹೀಗೆ ಮುಂದುವರಿದರೆ ನಡಿಗೆಗೆ ಸರ್ಕಾರ ಟ್ಯಾಕ್ಸ್ ಹಾಕಬಹುದು. ಪಾಪ ಅವರನ್ನು ನೋಡಲು ಆಗುತ್ತಿಲ್ಲ. ಉರಿ ಉರಿ ಬಿಸಿಲಲ್ಲಿ ಊಟ, ನೀರು ಇಲ್ಲದೆ ನಡೆದುಹೋಗುತ್ತಿದ್ದಾರೆ. ಅವರಲ್ಲಿ ಭಯ ಕಾಡುತ್ತಿದೆ. ದುಡಿಮೆ ಇಲ್ಲ. ಬಸ್ ಇಲ್ಲ, ಹಣವೂ ಇಲ್ಲ. ಮುಂದೆ ಅವರಿಗೆ ಬರ್ಬರ ದಿನಗಳು ಎದುರಾಗಲಿ”ವೆ ಎಂದು ನೊಂದು ನುಡಿದರು.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ವಲಸೆ ಕಾರ್ಮಿಕರ ತಂಡಗಳು ಭಾರದ ಹೆಜ್ಜೆಯನ್ನು ಹಾಕುತ್ತ ಮುನ್ನಡೆಯುತ್ತಿವೆ. ಆ ತಂಡಗಳಲ್ಲಿ ಕೆಲವರನ್ನು ವಿಚಾರಿಸಿದಾಗ ಮಧ್ಯಪ್ರದೇಶದ ಜಬ್ಬಲ್ ಪುರದವರು ಎಂದು ತಿಳಿದು ಬಂದಿದೆ. ನಡೆದೇ ಹೋಗುತ್ತೀರಲ್ಲ ಎಂದು ಪ್ರಶ್ನಿಸಿದರೆ ಏನು ಮಾಡೋದು? ನಮಗೆ ಯಾರೂ ನೆರವಾಗುತ್ತಿಲ್ಲ. ಊರು ಸೇರಬೇಕಲ್ಲ. ಹಾಗಾಗಿ ನಡೆದೇ ಹೋಗುತ್ತೇವೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಯಂತ್ರಗಳೊಂದಿಗೆ, ಕಟ್ಟಡ ಕಟ್ಟುವ  ಶ್ರಮ ಹಾಕಿದವರು ಈಗಲೂ ಶ್ರಮ ಹಾಕಬೇಕಾಗಿ ಬಂದಿದೆ. ಆಳುವ ಸರ್ಕಾರಗಳಿಗೆ ಜನರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ ಎಂಬುದು ಇದರಿಂದ ವ್ಯಕ್ತವಾಗುತ್ತದೆ. ಪ್ರಜೆಗಳ ಮನಸ್ಸನ್ನು ಅರ್ಥ ಮಾಡಿಕೊಂಡು ಪಾಲಿಸುವವನೇ ಅರಸ, ಲಂಚವನ್ನು ಸ್ವೀಕರಿಸದವನು ನಿಜವಾದ ಮಂತ್ರಿ ಕಷ್ಟದಲ್ಲಿ ಇರುವವರನ್ನು ಸಲಹವವನು ಯೋಗಿ ಎನ್ನುತ್ತಾನೆ ಕವಿ ಸೋಮನಾಥ. ಆದರೆ ಈ ಗುಣಗಳನ್ನು ಆಳುವವರ ಪೈಕಿ ಯಾರಲ್ಲಿ ಕಾಣಲು ಸಾಧ್ಯ ಎನ್ನುವಂತಾಗಿದೆ.


ಓದಿ: ಗುರುಗಾಂವ್: 75% ಕಾರ್ಮಿಕರಿಗೆ ಎಪ್ರಿಲ್ ತಿಂಗಳ ಸಂಬಳ ನೀಡದ ಕಾರ್ಖಾನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....