Homeಕರ್ನಾಟಕಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಗೂಡು ಸೇರುವ ತವಕ; ಬಿಸಲನ್ನೂ ಲೆಕ್ಕಿಸದೆ ಹೆಜ್ಜೆ ಹಾಕುತ್ತಿರುವ ವಲಸೆ ಕಾರ್ಮಿಕರು

- Advertisement -
- Advertisement -

ವಲಸೆ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರಗಳು ಸೂಕ್ತ ವಾಹನದ ವ್ಯವಸ್ಥೆ ಮಾಡದೇ ಇರುವ ಕಾರಣದಿಂದ ಕಾರ್ಮಿಕ ಭಾರತ ಚಲಿಸುತ್ತಲೇ ಇದೆ.

ಬದುಕನ್ನು ಕಟ್ಟಿಕೊಳ್ಳಲು ಗೊತ್ತು ಗುರಿಯಿಲ್ಲದ ಪ್ರದೇಶಕ್ಕೆ ಬಂದಿದ್ದ ವಲಸೆ ಕಾರ್ಮಿಕರು ಹೆಜ್ಜೆಹೆಜ್ಜೆಗೂ ಕಡುಕಷ್ಟ ಅನುಭವಿಸುವಂತಾಗಿದೆ. ಊರಿಗೆ ಸೇರುವ ತವಕ ಎಲ್ಲಾ ಕಾರ್ಮಿಕರಲ್ಲಿ ಮನೆ ಮಾಡಿದೆ. ಕಾಲಲ್ಲಿ ರಕ್ತ ಸುರಿದರೂ ಸರಿಯೇ? ದೇಹದಲ್ಲಿ ಬೆವರು ಹರಿದರೂ ಸರಿಯೇ ಊಟ ನೀರು, ನಿದ್ರೆ ಯಾವುದೂ ಇಲ್ಲದಿದ್ದರೇನು ಊರು ತಲುಪಬೇಕೆಂಬ ಧಾವಂತ ಅವರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ.

ಉತ್ತರದ ಜನ ಕೊರೊನ ಲಾಕ್‌ಡೌನ್‌ಗೆ ತತ್ತರಿಸಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿ ಗಮನಹರಿಸಿ ದಂತೆ ಕಾಣುತ್ತಿಲ್ಲ. ಹಿಂದಿಯಲ್ಲೇ ಭಾಷಣ ಕುಟ್ಟುವ ಗೃಹ ಸಚಿವ ಅಮಿತ್ ಶಾ ಮತ್ತು ನರೇಂದ್ರ ಮೋದಿ ಅದೇ ಭಾಷಿಕರ ನೋವಿಗೆ ಮಿಡಿಯುತ್ತಿಲ್ಲ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ  ಜಾರ್ಖಂಡ್ ಭಾಗದ ವಲಸೆ ಕಾರ್ಮಿಕರು ಊರುಗಳಿಗೆ ತೆರಳಲು ಬಸ್, ಟ್ರೈನ್, ಲಾರಿ, ಹೀಗೇ ಯಾವುದೇ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೂ ನಡೆದೂ ಬಳಲಿ ಹೋಗಿದ್ದಾರೆ. ಅವರ ಗೋಳನ್ನು ಕೇಳುವವರೇ ಇಲ್ಲವಾಗಿದೆ. ರಸ್ತೆ ಎಲ್ಲಿಗೆ ಮುಟ್ಟಿಸುತ್ತದೆ ಎಂಬುದು ಗೊತ್ತಿಲ್ಲದೆ ಬೆನ್ನಿಗೆ ಬ್ಯಾಗುಗಳನ್ನು ತಗಲು ಹಾಕಿಕೊಂಡು ಹೋಗುತ್ತಿರುವ ದೃಶ್ಯಗಳು ಎಂಥವರ ಮನವನ್ನೂ ಕಲಕುವಂತಿವೆ.

ರಾಜ್ಯದಲ್ಲಿ ಇನ್ನೂ ವಲಸೆ ಕಾರ್ಮಿಕರಿದ್ದು, ಅವರೆಲ್ಲರೂ ಸೇವಾಸಿಂಧುವಿನಲ್ಲಿ ನೋಂದಣಿಯಾಗದ ಕಾರ್ಮಿಕರಾಗಿದ್ದಾರೆ. ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆಗಳು ಇಲ್ಲದೆ, ತಾಂತ್ರಿಕ ಕಾರಣಗಳಿಗಾಗಿ ನೋಂದಣಿ ಸಾಧ್ಯವಾಗದೆ, ಮೊಬೈಲ್ ಗೆ ಮಾಹಿತಿ ಬಾರದೆ ಇರುವ ವಲಸೆ ಕಾರ್ಮಿಕರು ಅನಿವಾರ್ಯವಾಗಿ ನಡೆದೇ ಹೋಗುವಂತಹ ಸನ್ನಿವೇಶ ಬಂದೊದಗಿದೆ. ಹಾಗಾಗಿ ವಲಸೆ ಕಾರ್ಮಿಕರು ತಂಡ ತಂಡವಾಗಿ ಲಾಕ್‌ಡೌನ್‌ ಲೆಕ್ಕಿಸದೇ ತೆರಳುತ್ತಿದ್ದಾರೆ. ಬೇಸಿಗೆಯ ಬಿಸಿನ ಧಗೆಗೆ ಅವರ ಬದುಕು ಮತ್ತಷ್ಟು ಕಮರಿ ಹೋಗಿದೆ. ಆದರೆ ಅದೇ ಕಾರ್ಮಿಕರು ಮತ್ತು ಜನರಿಂದ ಆಯ್ಕೆಯಾದವರು ನೆರಳಿನಲ್ಲಿ ಕೂತು ನಗುತ್ತಿದ್ದಾರೆ.

ಮೈಸೂರಿನಿಂದ ರೈಲಿನಲ್ಲಿ ಮೇ 23ರಂದು ಬೆಂಗಳುರಿಗೆ ಬಂದಿಳಿದ ವಲಸೆ ಕಾರ್ಮಿಕರು ಅಲ್ಲಿಂದ ನಡೆದೇ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಬೆಂಗಳೂರಿನಿಂದ ಮಧ್ಯಪ್ರದೇಶದತ್ತ ತಂಡೋಪತಂಡವಾಗಿ ಹೆಜ್ಜೆ ಹಾಕುತ್ತಲೇ ಸಾಗುತ್ತಿದ್ದಾರೆ. ಇವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು. ಇಡೀ ದೇಶ ಭಾನುವಾರ ಲಾಕ್‌ಡೌನ್ ಕಾರಣಕ್ಕಾಗಿ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೇ ಹೋಗುವಂತಹ ಪರಿಸ್ಥಿತಿಯನ್ನು ಸರ್ಕಾರಗಳು ಹುಟ್ಟು ಹಾಕಿವೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ನಾನುಗೌರಿ.ಕಾಮ್ ನೊಂದಿಗೆ ಮಾತನಾಡಿ, “ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಇದು ಸರ್ಕಾರಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ. ಕಾರ್ಮಿಕರ ನಡಿಗೆ ಹೀಗೆ ಮುಂದುವರಿದರೆ ನಡಿಗೆಗೆ ಸರ್ಕಾರ ಟ್ಯಾಕ್ಸ್ ಹಾಕಬಹುದು. ಪಾಪ ಅವರನ್ನು ನೋಡಲು ಆಗುತ್ತಿಲ್ಲ. ಉರಿ ಉರಿ ಬಿಸಿಲಲ್ಲಿ ಊಟ, ನೀರು ಇಲ್ಲದೆ ನಡೆದುಹೋಗುತ್ತಿದ್ದಾರೆ. ಅವರಲ್ಲಿ ಭಯ ಕಾಡುತ್ತಿದೆ. ದುಡಿಮೆ ಇಲ್ಲ. ಬಸ್ ಇಲ್ಲ, ಹಣವೂ ಇಲ್ಲ. ಮುಂದೆ ಅವರಿಗೆ ಬರ್ಬರ ದಿನಗಳು ಎದುರಾಗಲಿ”ವೆ ಎಂದು ನೊಂದು ನುಡಿದರು.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ವಲಸೆ ಕಾರ್ಮಿಕರ ತಂಡಗಳು ಭಾರದ ಹೆಜ್ಜೆಯನ್ನು ಹಾಕುತ್ತ ಮುನ್ನಡೆಯುತ್ತಿವೆ. ಆ ತಂಡಗಳಲ್ಲಿ ಕೆಲವರನ್ನು ವಿಚಾರಿಸಿದಾಗ ಮಧ್ಯಪ್ರದೇಶದ ಜಬ್ಬಲ್ ಪುರದವರು ಎಂದು ತಿಳಿದು ಬಂದಿದೆ. ನಡೆದೇ ಹೋಗುತ್ತೀರಲ್ಲ ಎಂದು ಪ್ರಶ್ನಿಸಿದರೆ ಏನು ಮಾಡೋದು? ನಮಗೆ ಯಾರೂ ನೆರವಾಗುತ್ತಿಲ್ಲ. ಊರು ಸೇರಬೇಕಲ್ಲ. ಹಾಗಾಗಿ ನಡೆದೇ ಹೋಗುತ್ತೇವೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಯಂತ್ರಗಳೊಂದಿಗೆ, ಕಟ್ಟಡ ಕಟ್ಟುವ  ಶ್ರಮ ಹಾಕಿದವರು ಈಗಲೂ ಶ್ರಮ ಹಾಕಬೇಕಾಗಿ ಬಂದಿದೆ. ಆಳುವ ಸರ್ಕಾರಗಳಿಗೆ ಜನರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ ಎಂಬುದು ಇದರಿಂದ ವ್ಯಕ್ತವಾಗುತ್ತದೆ. ಪ್ರಜೆಗಳ ಮನಸ್ಸನ್ನು ಅರ್ಥ ಮಾಡಿಕೊಂಡು ಪಾಲಿಸುವವನೇ ಅರಸ, ಲಂಚವನ್ನು ಸ್ವೀಕರಿಸದವನು ನಿಜವಾದ ಮಂತ್ರಿ ಕಷ್ಟದಲ್ಲಿ ಇರುವವರನ್ನು ಸಲಹವವನು ಯೋಗಿ ಎನ್ನುತ್ತಾನೆ ಕವಿ ಸೋಮನಾಥ. ಆದರೆ ಈ ಗುಣಗಳನ್ನು ಆಳುವವರ ಪೈಕಿ ಯಾರಲ್ಲಿ ಕಾಣಲು ಸಾಧ್ಯ ಎನ್ನುವಂತಾಗಿದೆ.


ಓದಿ: ಗುರುಗಾಂವ್: 75% ಕಾರ್ಮಿಕರಿಗೆ ಎಪ್ರಿಲ್ ತಿಂಗಳ ಸಂಬಳ ನೀಡದ ಕಾರ್ಖಾನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...