Homeಕರ್ನಾಟಕಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಇನ್ನೂ ನಿಲ್ಲದ ವಲಸೆ ಕಾರ್ಮಿಕರ ನಡಿಗೆ; ಸೊಲ್ಲೆತ್ತದ ಸರ್ಕಾರ

ಗೂಡು ಸೇರುವ ತವಕ; ಬಿಸಲನ್ನೂ ಲೆಕ್ಕಿಸದೆ ಹೆಜ್ಜೆ ಹಾಕುತ್ತಿರುವ ವಲಸೆ ಕಾರ್ಮಿಕರು

- Advertisement -
- Advertisement -

ವಲಸೆ ಕಾರ್ಮಿಕರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರಗಳು ಸೂಕ್ತ ವಾಹನದ ವ್ಯವಸ್ಥೆ ಮಾಡದೇ ಇರುವ ಕಾರಣದಿಂದ ಕಾರ್ಮಿಕ ಭಾರತ ಚಲಿಸುತ್ತಲೇ ಇದೆ.

ಬದುಕನ್ನು ಕಟ್ಟಿಕೊಳ್ಳಲು ಗೊತ್ತು ಗುರಿಯಿಲ್ಲದ ಪ್ರದೇಶಕ್ಕೆ ಬಂದಿದ್ದ ವಲಸೆ ಕಾರ್ಮಿಕರು ಹೆಜ್ಜೆಹೆಜ್ಜೆಗೂ ಕಡುಕಷ್ಟ ಅನುಭವಿಸುವಂತಾಗಿದೆ. ಊರಿಗೆ ಸೇರುವ ತವಕ ಎಲ್ಲಾ ಕಾರ್ಮಿಕರಲ್ಲಿ ಮನೆ ಮಾಡಿದೆ. ಕಾಲಲ್ಲಿ ರಕ್ತ ಸುರಿದರೂ ಸರಿಯೇ? ದೇಹದಲ್ಲಿ ಬೆವರು ಹರಿದರೂ ಸರಿಯೇ ಊಟ ನೀರು, ನಿದ್ರೆ ಯಾವುದೂ ಇಲ್ಲದಿದ್ದರೇನು ಊರು ತಲುಪಬೇಕೆಂಬ ಧಾವಂತ ಅವರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ.

ಉತ್ತರದ ಜನ ಕೊರೊನ ಲಾಕ್‌ಡೌನ್‌ಗೆ ತತ್ತರಿಸಿದ್ದರೂ ಸಹ ಪ್ರಧಾನಿ ನರೇಂದ್ರ ಮೋದಿ ಗಮನಹರಿಸಿ ದಂತೆ ಕಾಣುತ್ತಿಲ್ಲ. ಹಿಂದಿಯಲ್ಲೇ ಭಾಷಣ ಕುಟ್ಟುವ ಗೃಹ ಸಚಿವ ಅಮಿತ್ ಶಾ ಮತ್ತು ನರೇಂದ್ರ ಮೋದಿ ಅದೇ ಭಾಷಿಕರ ನೋವಿಗೆ ಮಿಡಿಯುತ್ತಿಲ್ಲ. ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ  ಜಾರ್ಖಂಡ್ ಭಾಗದ ವಲಸೆ ಕಾರ್ಮಿಕರು ಊರುಗಳಿಗೆ ತೆರಳಲು ಬಸ್, ಟ್ರೈನ್, ಲಾರಿ, ಹೀಗೇ ಯಾವುದೇ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೂ ನಡೆದೂ ಬಳಲಿ ಹೋಗಿದ್ದಾರೆ. ಅವರ ಗೋಳನ್ನು ಕೇಳುವವರೇ ಇಲ್ಲವಾಗಿದೆ. ರಸ್ತೆ ಎಲ್ಲಿಗೆ ಮುಟ್ಟಿಸುತ್ತದೆ ಎಂಬುದು ಗೊತ್ತಿಲ್ಲದೆ ಬೆನ್ನಿಗೆ ಬ್ಯಾಗುಗಳನ್ನು ತಗಲು ಹಾಕಿಕೊಂಡು ಹೋಗುತ್ತಿರುವ ದೃಶ್ಯಗಳು ಎಂಥವರ ಮನವನ್ನೂ ಕಲಕುವಂತಿವೆ.

ರಾಜ್ಯದಲ್ಲಿ ಇನ್ನೂ ವಲಸೆ ಕಾರ್ಮಿಕರಿದ್ದು, ಅವರೆಲ್ಲರೂ ಸೇವಾಸಿಂಧುವಿನಲ್ಲಿ ನೋಂದಣಿಯಾಗದ ಕಾರ್ಮಿಕರಾಗಿದ್ದಾರೆ. ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲೆಗಳು ಇಲ್ಲದೆ, ತಾಂತ್ರಿಕ ಕಾರಣಗಳಿಗಾಗಿ ನೋಂದಣಿ ಸಾಧ್ಯವಾಗದೆ, ಮೊಬೈಲ್ ಗೆ ಮಾಹಿತಿ ಬಾರದೆ ಇರುವ ವಲಸೆ ಕಾರ್ಮಿಕರು ಅನಿವಾರ್ಯವಾಗಿ ನಡೆದೇ ಹೋಗುವಂತಹ ಸನ್ನಿವೇಶ ಬಂದೊದಗಿದೆ. ಹಾಗಾಗಿ ವಲಸೆ ಕಾರ್ಮಿಕರು ತಂಡ ತಂಡವಾಗಿ ಲಾಕ್‌ಡೌನ್‌ ಲೆಕ್ಕಿಸದೇ ತೆರಳುತ್ತಿದ್ದಾರೆ. ಬೇಸಿಗೆಯ ಬಿಸಿನ ಧಗೆಗೆ ಅವರ ಬದುಕು ಮತ್ತಷ್ಟು ಕಮರಿ ಹೋಗಿದೆ. ಆದರೆ ಅದೇ ಕಾರ್ಮಿಕರು ಮತ್ತು ಜನರಿಂದ ಆಯ್ಕೆಯಾದವರು ನೆರಳಿನಲ್ಲಿ ಕೂತು ನಗುತ್ತಿದ್ದಾರೆ.

ಮೈಸೂರಿನಿಂದ ರೈಲಿನಲ್ಲಿ ಮೇ 23ರಂದು ಬೆಂಗಳುರಿಗೆ ಬಂದಿಳಿದ ವಲಸೆ ಕಾರ್ಮಿಕರು ಅಲ್ಲಿಂದ ನಡೆದೇ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾರೆ. ಬೆಂಗಳೂರಿನಿಂದ ಮಧ್ಯಪ್ರದೇಶದತ್ತ ತಂಡೋಪತಂಡವಾಗಿ ಹೆಜ್ಜೆ ಹಾಕುತ್ತಲೇ ಸಾಗುತ್ತಿದ್ದಾರೆ. ಇವರು ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದು. ಇಡೀ ದೇಶ ಭಾನುವಾರ ಲಾಕ್‌ಡೌನ್ ಕಾರಣಕ್ಕಾಗಿ ವಾಹನಗಳ ವ್ಯವಸ್ಥೆ ಇಲ್ಲದೆ ನಡೆದೇ ಹೋಗುವಂತಹ ಪರಿಸ್ಥಿತಿಯನ್ನು ಸರ್ಕಾರಗಳು ಹುಟ್ಟು ಹಾಕಿವೆ.

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾಧ್ಯಕ್ಷ ಬಿ.ಉಮೇಶ್ ನಾನುಗೌರಿ.ಕಾಮ್ ನೊಂದಿಗೆ ಮಾತನಾಡಿ, “ವಲಸೆ ಕಾರ್ಮಿಕರ ನಡಿಗೆ ಇನ್ನೂ ನಿಂತಿಲ್ಲ. ಇದು ಸರ್ಕಾರಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ. ಕಾರ್ಮಿಕರ ನಡಿಗೆ ಹೀಗೆ ಮುಂದುವರಿದರೆ ನಡಿಗೆಗೆ ಸರ್ಕಾರ ಟ್ಯಾಕ್ಸ್ ಹಾಕಬಹುದು. ಪಾಪ ಅವರನ್ನು ನೋಡಲು ಆಗುತ್ತಿಲ್ಲ. ಉರಿ ಉರಿ ಬಿಸಿಲಲ್ಲಿ ಊಟ, ನೀರು ಇಲ್ಲದೆ ನಡೆದುಹೋಗುತ್ತಿದ್ದಾರೆ. ಅವರಲ್ಲಿ ಭಯ ಕಾಡುತ್ತಿದೆ. ದುಡಿಮೆ ಇಲ್ಲ. ಬಸ್ ಇಲ್ಲ, ಹಣವೂ ಇಲ್ಲ. ಮುಂದೆ ಅವರಿಗೆ ಬರ್ಬರ ದಿನಗಳು ಎದುರಾಗಲಿ”ವೆ ಎಂದು ನೊಂದು ನುಡಿದರು.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ವಲಸೆ ಕಾರ್ಮಿಕರ ತಂಡಗಳು ಭಾರದ ಹೆಜ್ಜೆಯನ್ನು ಹಾಕುತ್ತ ಮುನ್ನಡೆಯುತ್ತಿವೆ. ಆ ತಂಡಗಳಲ್ಲಿ ಕೆಲವರನ್ನು ವಿಚಾರಿಸಿದಾಗ ಮಧ್ಯಪ್ರದೇಶದ ಜಬ್ಬಲ್ ಪುರದವರು ಎಂದು ತಿಳಿದು ಬಂದಿದೆ. ನಡೆದೇ ಹೋಗುತ್ತೀರಲ್ಲ ಎಂದು ಪ್ರಶ್ನಿಸಿದರೆ ಏನು ಮಾಡೋದು? ನಮಗೆ ಯಾರೂ ನೆರವಾಗುತ್ತಿಲ್ಲ. ಊರು ಸೇರಬೇಕಲ್ಲ. ಹಾಗಾಗಿ ನಡೆದೇ ಹೋಗುತ್ತೇವೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಯಂತ್ರಗಳೊಂದಿಗೆ, ಕಟ್ಟಡ ಕಟ್ಟುವ  ಶ್ರಮ ಹಾಕಿದವರು ಈಗಲೂ ಶ್ರಮ ಹಾಕಬೇಕಾಗಿ ಬಂದಿದೆ. ಆಳುವ ಸರ್ಕಾರಗಳಿಗೆ ಜನರ ಬಗ್ಗೆ ಪ್ರೀತಿ, ಕಾಳಜಿ ಇಲ್ಲ ಎಂಬುದು ಇದರಿಂದ ವ್ಯಕ್ತವಾಗುತ್ತದೆ. ಪ್ರಜೆಗಳ ಮನಸ್ಸನ್ನು ಅರ್ಥ ಮಾಡಿಕೊಂಡು ಪಾಲಿಸುವವನೇ ಅರಸ, ಲಂಚವನ್ನು ಸ್ವೀಕರಿಸದವನು ನಿಜವಾದ ಮಂತ್ರಿ ಕಷ್ಟದಲ್ಲಿ ಇರುವವರನ್ನು ಸಲಹವವನು ಯೋಗಿ ಎನ್ನುತ್ತಾನೆ ಕವಿ ಸೋಮನಾಥ. ಆದರೆ ಈ ಗುಣಗಳನ್ನು ಆಳುವವರ ಪೈಕಿ ಯಾರಲ್ಲಿ ಕಾಣಲು ಸಾಧ್ಯ ಎನ್ನುವಂತಾಗಿದೆ.


ಓದಿ: ಗುರುಗಾಂವ್: 75% ಕಾರ್ಮಿಕರಿಗೆ ಎಪ್ರಿಲ್ ತಿಂಗಳ ಸಂಬಳ ನೀಡದ ಕಾರ್ಖಾನೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...