Homeಮುಖಪುಟಭಾರತೀಯನಾಗಿ ಹುಟ್ಟಿ NRC ಕಾರಣದಿಂದ‍ ವಿದೇಶಿಯನಾಗಿ ಸತ್ತ ನರೇಶ್: ಇನ್ನು 19 ಲಕ್ಷ ಜನರ ಪಾಡೇನು?

ಭಾರತೀಯನಾಗಿ ಹುಟ್ಟಿ NRC ಕಾರಣದಿಂದ‍ ವಿದೇಶಿಯನಾಗಿ ಸತ್ತ ನರೇಶ್: ಇನ್ನು 19 ಲಕ್ಷ ಜನರ ಪಾಡೇನು?

ಗಂಡನ ಅಗಲಿಕೆಯಿಂದ ಅಳಲೂ ಅವಳ ಬಳಿ ಪುರುಸೊತ್ತಿಲ್ಲ. ಯಾಕೆಂದರೆ ನರೇಶನ ಮೃತದೇಹವನ್ನು ಸುಡಲು ಬಳಸಿದ ಕಟ್ಟಿಗೆಗೆ ಮಾಡಿದ ಏಳುನೂರು ರುಪಾಯಿ ಸಾಲವನ್ನು ಈಕೆ ತೀರಿಸಬೇಕಿದೆ!

- Advertisement -
- Advertisement -

ಗಣರಾಜ್ಯ ಭಾರತ ಕಳೆದ 70 ವರ್ಷಗಳಲ್ಲಿ ಸಾಕಷ್ಟು ಕಾಯ್ದೆ, ಕಾನೂನುಗಳನ್ನು ಕಂಡಿದೆ. ದೇಶವನ್ನು ಆಳಿದ ಹಲವಾರು ಸರ್ಕಾರಗಳು ಆಡಳಿತವನ್ನು ಸುಗಮಗೊಳಿಸುವ ಹಾಗೂ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಹತ್ತಾರು ನೂತನ ಕಾನೂನುಗಳನ್ನು ಜಾರಿಗೆ ತಂದಿದ್ದಾರೆ. ಅಲ್ಲದೆ, ಹಳೆಯ ಕಾನೂನುಗಳಿಗೆ ಮಹತ್ವದ ತಿದ್ದುಪಡಿಗಳನ್ನೂ ತರಲಾಗಿದೆ. ಆದರೆ, ಈವರೆಗೆ ಕೇಂದ್ರ ಸರ್ಕಾರದ ಕಾನೂನೊಂದಕ್ಕೆ ಈ ಪರಿ ರಾಷ್ಟ್ರವ್ಯಾಪಿ ವಿರೋಧ ವ್ಯಕ್ತವಾಗುತ್ತಿರುವುದು ಬಹುತೇಕ ಇದೇ ಮೊದಲು.

ಅವೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ಪೌರತ್ವ ನೋಂದಣಿ ಕಾಯ್ದೆಗಳ(ಎನ್ಆರ್‌ಸಿ) ಯಾಗಿದ್ದು ಇವುಗಳ ವಿರುದ್ಧ ಕಳೆದ ಎರಡು ತಿಂಗಳಿನಿಂದ ರಾಷ್ಟ್ರವ್ಯಾಪಿ ದೊಡ್ಡ ಮಟ್ಟದಲ್ಲಿ ಚಳುವಳಿ, ಹೋರಾಟ ಹಾಗೂ ಮುಷ್ಕರಗಳು ಪ್ರತಿನಿತ್ಯ ನಡೆಯುತ್ತಲೇ ಇದೆ. ಆದರೆ, ಈ ಎರಡನ್ನು ಸಮರ್ಥಿಸಿಕೊಳ್ಳುತ್ತಿರುವ ಕೇಂದ್ರ ಸರ್ಕಾರ ಇದು ದೇಶದ ನಾಗರೀಕರ ಪೌರತ್ವವನ್ನು ಧೃಡಪಡಿಸುವ ಕಾಯ್ದೆಯೇ ಹೊರತು ಪೌರತ್ವವನ್ನು ಕಸಿದುಕೊಳ್ಳುವ ಕಾಯ್ದೆ ಅಲ್ಲ ಎಂದು ಬೊಬ್ಬೆ ಹೊಡೆಯುತ್ತಲೇ ಇವೆ.

ಈ ನಡುವೆ ಬೆಂಗಳೂರಿನಂತಹ ನಗರದಲ್ಲೇ ಪೌರತ್ವದ ಕುರಿತ ಸೂಕ್ತ ದಾಖಲೆಗಳು ಇಲ್ಲ ಎಂಬ ಕಾರಣಕ್ಕೆ ಬಾಂಗ್ಲಾ ನುಸುಳುಕೋರರು ಎಂಬ ಗುಮಾನಿಯಿಂದ ಉತ್ತರ ಕರ್ನಾಟಕದ ನೂರಾರು ಬಡ ಕೂಲಿ ಕಾರ್ಮಿಕರ ಗುಡಿಸಲುಗಳನ್ನು ಕಿತ್ತು ಹಾಕಲಾಗಿದೆ. ಈಗಾಗಲೇ ಸರಿಯಾದ ಮಳೆ-ಬೆಳೆ ಇಲ್ಲದೆ ಹಳ್ಳಿಯಿಂದ ನಗರ ಪ್ರದೇಶಗಳಿಗೆ ವಲಸೆ ಬಂದು ಕಡಿಮೆ ಕೂಲಿಗೆ ಕೆಲಸ ಮಾಡುತ್ತಿರುವ ರೈತರ ಬದುಕನ್ನೂ ಈ ಸರ್ಕಾರ ಕೇವಲ ಒಂದೇ ಕಾಯ್ದೆಯ ಮೂಲಕ ಅಕ್ಷರಶಃ ಬೀದಿಗೆ ತಂದು ನಿಲ್ಲಿಸಿದೆ.

ಅಸಲಿಗೆ ಬುಡಕಟ್ಟು ಸಮಾಜ ಭಾರತದ ಮೂಲ ನಿವಾಸಿಗಳು. ಅಸ್ಸಾಂನಿಂದ ಮೇಘಾಲಯ, ಜಾರ್ಖಂಡ್‌ವರೆಗೆ ಲಡಾಖ್‌ ಕಣಿವೆಗಳಿಂದ ದಕ್ಷಿಣ ಭಾರತದ ನೀಲಗಿರಿ ಬೆಟ್ಟದ ಸಾಲಿನವರೆಗೆ ಭಾರತದಲ್ಲಿ ಸರಿಸುಮಾರು ನೂರಾರು ಬುಡಕಟ್ಟು ಪಂಗಡಗಳಿವೆ. ಇವರು ಶತಮಾನಗಳಿಂದ ಇಲ್ಲೇ ಹುಟ್ಟಿ ಬೆಳೆದವರು.  ಆದರೆ, ಮೂಲತಃ ಅವಿದ್ಯಾವಂತರಾಗಿರುವ ಇವರ ಬಳಿ ಪೌರತ್ವದ ಕುರಿತ ಯಾವುದೇ ದಾಖಲೆಗಳಿಲ್ಲ. ಇರಲು ಸಾಧ್ಯವೂ ಇಲ್ಲ. ಹಾಗಾದರೆ ದಾಖಲೆಗಳಿಲ್ಲದ ಇವರ ಪಾಡೇನು? ಎಂಬ ಕುರಿತೂ ಸಹ ಸರ್ಕಾರ ಈ ವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಬುಡಕಟ್ಟು ಸಮಾಜದ ಪಾಲಿಗೆ ಮರಣಶಾಸನವೇ ಆಗಿರುವ ಎನ್ಆರ್‌ಸಿ ಎರಡು ವರ್ಷಗಳ ಹಿಂದೆಯೇ ಅಸ್ಸಾಂನಲ್ಲಿ ಚಾಲ್ತಿಯಲ್ಲಿದೆ. ಈ ಕಾಯ್ದೆಯಿಂದ ಹಲವು ಬುಡಕಟ್ಟು ಜನ ಪೌರತ್ವ ಕಳೆದುಕೊಂಡು ಪಶುಗಳಂತೆ ಡಿಟೆನ್ಷನ್ ಸೆಂಟರ್‌ಗಳಲ್ಲಿ ಪ್ರಾಣ ಬಿಟ್ಟಿದ್ದಾರೆ/ ಬಿಡುತ್ತಿದ್ದಾರೆ. ಅಂತ ಒಂದು ಬುಡಕಟ್ಟು ಮಹಿಳೆಯ ಕಥೆ ಇಲ್ಲಿದೆ.

ಮೇಘಾಲಯದ ಗಾರೋ ಬುಡಕಟ್ಟಿನ ಹೆಣ್ಣು ಮಗಳ ಕತೆ

ಈಕೆಯ ಹೆಸರು ಜಿನು. ಮೇಘಾಲಯದ ಗಾರೋ ಎಂಬ ಬುಡಕಟ್ಟು ಹೆಣ್ಣುಮಗಳು. ಜನವರಿ 5ರಂದು ಗೋಲ್ ಪಾರ ಡಿಟೆನ್ಷನ್ ಕೇಂದ್ರದಲ್ಲಿ ಬಂಧಿಯಾಗಿ ಮೃತಪಟ್ಟ ನರೇಶ್ ಕೋಚ್ ಎಂಬಾತನ ಪತ್ನಿ.
ಮೃತ ನರೇಶ್ ನನ್ನು NRC ಪಟ್ಟಿಯಲ್ಲಿ ಇಲ್ಲದ ಕಾರಣಕ್ಕೆ ಡಿಟೆನ್ಷನ್ ಸೆಂಟರ್‌ನಲ್ಲಿ ಕೂಡಿಹಾಕಲಾಗಿತ್ತು. ನರೇಶ್ ಬಂಗಾಲಿಯಲ್ಲ, ಮುಸ್ಲಿಮನೂ ಅಲ್ಲ, ಮುಸ್ಲಿಂ ಬಂಗಾಲಿಯೂ ಅಲ್ಲ. ಅಥವಾ ಬಾಂಗ್ಲಾದೇಶದಿಂದ ಬಂದಿರಬಹುದಾದ ಯಾವುದೇ ಬುಡಕಟ್ಟು ಸಮುದಾಯಕ್ಕೂ ಸೇರಿದವನಲ್ಲ. ಬದಲಾಗಿ ಅಸ್ಸಾಂನ ಮೂಲನಿವಾಸಿ ಕೋಚ್ ಬುಡಕಟ್ಟು ಸಮುದಾಯಕ್ಕೆ ಸೇರಿದವನು.

ಕಳೆದ ವರ್ಷ ಬಿಡುಗಡೆಯಾದ NRC ಪಟ್ಟಿಯಲ್ಲಿ ಈತನ ಪುತ್ರ ಮತ್ತು ಸಹೋದರ ಸೇರಿದ್ದರು. ಆದರೆ ನರೇಶ್ ಹೊರಗೆ ಉಳಿದುಕೊಂಡುಬಿಟ್ಟ!. ಕೇಂದ್ರದ ಕಾನೂನನ್ನು ಕಾಪಾಡಲೇಬೇಕು ಎಂಬ ಉದ್ದೇಶದಿಂದ ಭಾರತದ ಬುಡಕಟ್ಟು ಸಮಾಜದವನೇ ಆದರೂ ಕೂಡ ಆತನನ್ನು ಒತ್ತಾಯಪೂರ್ವಕವಾಗಿ ಡಿಟೆನ್ಷನ್ ಸೆಂಟರ್‌ಗೆ ತಳಲ್ಪಟ್ಟಿದ್ದ.

ನರೇಶ್‌ ಕೋಚ್

ಕಳೆದ ಎರಡು ವರ್ಷದಿಂದ ನರೇಶ್‌ಗೆ ಬಿಪಿ ಇತ್ತು. ಕೊನೆಗೆ ಈತ ಡಿಟೆನ್ಷನ್ ಸೆಂಟರ್ನಲ್ಲಿ ಸ್ಟ್ರೋಕ್ ಆಗಿ ಸತ್ತೇ ಹೋದ. ಆ ಮೂಲಕ ಬಂಧನ ಕೇಂದ್ರದಲ್ಲಿ ಮೃತಪಟ್ಟ 29ನೇ ವ್ಯಕ್ತಿ ಈತನಾಗಿದ್ದು, ಈತನ ಪತ್ನಿ ಇನ್ನೂ ಆ ಆಘಾತದಿಂದ ಹೊರಬಂದಿಲ್ಲ. ಗಂಡನ ಅಗಲಿಕೆಯಿಂದ ಅಳಲೂ ಅವಳ ಬಳಿ ಪುರುಸೊತ್ತಿಲ್ಲ. ಯಾಕೆಂದರೆ ನರೇಶನ ಮೃತದೇಹವನ್ನು ಸುಡಲು ಬಳಸಿದ ಕಟ್ಟಿಗೆಗೆ ಮಾಡಿದ ಏಳುನೂರು ರುಪಾಯಿ ಸಾಲವನ್ನು ಈಕೆ ತೀರಿಸಬೇಕಿದೆ! ಮೀನು ಸಾಕಣಿಕೆ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಜಿನುಗೆ ಏಳು ನೂರು ರುಪಾಯಿ ಹಣವನ್ನು ಹೊಂದಿಸುವುದು ದೊಡ್ಡ ಹೊರೆ.

ಎಂಥಾ ವಿಪರ್ಯಾಸ ನೋಡಿ ಕೇಂದ್ರದ ನೂತನ ಕಾನೂನಿನಿಂದ ಇವಳ ಗಂಡ ಭಾರತೀಯನಾಗಿ ಹುಟ್ಟಿದ ಆದರೆ, ದಾಖಲೆಯಿಲ್ಲದ ಕಾರಣಕ್ಕಾಗಿ ವಿದೇಶೀಯನಾಗಿ ಸತ್ತ. (ಸತ್ತ ಎನ್ನುವುದಕ್ಕಿಂತ ಕೊಲ್ಲಲ್ಪಟ್ಟ ಎಂಬುದು ಸೂಕ್ತ) ನರೇಶ್ ಸತ್ತಾಗ ಅವನದು ಯಾವ ದೇಶ? ಯಾರು ಉತ್ತರ ಕೊಡುತ್ತಾರೆ? ಇನ್ನೂ ಹೆಣ ಸುಟ್ಟ ಬಾಬ್ತು ಏಳು ನೂರು ರುಪಾಯಿ ತಾನೇ ಎನ್ನಬೇಡಿ, ಅಸ್ಸಾಮಿನಲ್ಲಿ ಸುಡಲು ಎನ್‌ಆರ್‌ಸಿ ಪಟ್ಟಿಯಿಂದ ಹೊರಗುಳಿದ ಇನ್ನೂ ಹತ್ತೊಂಭತ್ತು ಲಕ್ಷ ಚಿಲ್ಲರೆ ಬುಡಕಟ್ಟು ಜನರ ಹೆಣಗಳು ಸರದಿಯಲ್ಲಿ ನಿಲ್ಲಲಿವೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರಿಗೂ ಸಹ ನರೇಶ್ ಕೋಚನ ಪರಿಸ್ಥಿತಿ ಬರುವುದು ಬೇಡ. ಅದಕ್ಕಾಗಿ ನಾವೆಲ್ಲರೂ ಸಿಎಎ, ಎನ್. ಆರ್.ಸಿ. ಮತ್ತು ಎನ್.ಪಿ.ಅರ್.ಗಳನ್ನು ವಿರೋಧಿಸೋಣ.

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...