Homeಮುಖಪುಟಭಾರತೀಯನಾಗಿ ಹುಟ್ಟಿ NRC ಕಾರಣದಿಂದ‍ ವಿದೇಶಿಯನಾಗಿ ಸತ್ತ ನರೇಶ್: ಇನ್ನು 19 ಲಕ್ಷ ಜನರ ಪಾಡೇನು?

ಭಾರತೀಯನಾಗಿ ಹುಟ್ಟಿ NRC ಕಾರಣದಿಂದ‍ ವಿದೇಶಿಯನಾಗಿ ಸತ್ತ ನರೇಶ್: ಇನ್ನು 19 ಲಕ್ಷ ಜನರ ಪಾಡೇನು?

ಗಂಡನ ಅಗಲಿಕೆಯಿಂದ ಅಳಲೂ ಅವಳ ಬಳಿ ಪುರುಸೊತ್ತಿಲ್ಲ. ಯಾಕೆಂದರೆ ನರೇಶನ ಮೃತದೇಹವನ್ನು ಸುಡಲು ಬಳಸಿದ ಕಟ್ಟಿಗೆಗೆ ಮಾಡಿದ ಏಳುನೂರು ರುಪಾಯಿ ಸಾಲವನ್ನು ಈಕೆ ತೀರಿಸಬೇಕಿದೆ!

- Advertisement -
- Advertisement -

ಗಣರಾಜ್ಯ ಭಾರತ ಕಳೆದ 70 ವರ್ಷಗಳಲ್ಲಿ ಸಾಕಷ್ಟು ಕಾಯ್ದೆ, ಕಾನೂನುಗಳನ್ನು ಕಂಡಿದೆ. ದೇಶವನ್ನು ಆಳಿದ ಹಲವಾರು ಸರ್ಕಾರಗಳು ಆಡಳಿತವನ್ನು ಸುಗಮಗೊಳಿಸುವ ಹಾಗೂ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಹತ್ತಾರು ನೂತನ ಕಾನೂನುಗಳನ್ನು ಜಾರಿಗೆ ತಂದಿದ್ದಾರೆ. ಅಲ್ಲದೆ, ಹಳೆಯ ಕಾನೂನುಗಳಿಗೆ ಮಹತ್ವದ ತಿದ್ದುಪಡಿಗಳನ್ನೂ ತರಲಾಗಿದೆ. ಆದರೆ, ಈವರೆಗೆ ಕೇಂದ್ರ ಸರ್ಕಾರದ ಕಾನೂನೊಂದಕ್ಕೆ ಈ ಪರಿ ರಾಷ್ಟ್ರವ್ಯಾಪಿ ವಿರೋಧ ವ್ಯಕ್ತವಾಗುತ್ತಿರುವುದು ಬಹುತೇಕ ಇದೇ ಮೊದಲು.

ಅವೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ಪೌರತ್ವ ನೋಂದಣಿ ಕಾಯ್ದೆಗಳ(ಎನ್ಆರ್‌ಸಿ) ಯಾಗಿದ್ದು ಇವುಗಳ ವಿರುದ್ಧ ಕಳೆದ ಎರಡು ತಿಂಗಳಿನಿಂದ ರಾಷ್ಟ್ರವ್ಯಾಪಿ ದೊಡ್ಡ ಮಟ್ಟದಲ್ಲಿ ಚಳುವಳಿ, ಹೋರಾಟ ಹಾಗೂ ಮುಷ್ಕರಗಳು ಪ್ರತಿನಿತ್ಯ ನಡೆಯುತ್ತಲೇ ಇದೆ. ಆದರೆ, ಈ ಎರಡನ್ನು ಸಮರ್ಥಿಸಿಕೊಳ್ಳುತ್ತಿರುವ ಕೇಂದ್ರ ಸರ್ಕಾರ ಇದು ದೇಶದ ನಾಗರೀಕರ ಪೌರತ್ವವನ್ನು ಧೃಡಪಡಿಸುವ ಕಾಯ್ದೆಯೇ ಹೊರತು ಪೌರತ್ವವನ್ನು ಕಸಿದುಕೊಳ್ಳುವ ಕಾಯ್ದೆ ಅಲ್ಲ ಎಂದು ಬೊಬ್ಬೆ ಹೊಡೆಯುತ್ತಲೇ ಇವೆ.

ಈ ನಡುವೆ ಬೆಂಗಳೂರಿನಂತಹ ನಗರದಲ್ಲೇ ಪೌರತ್ವದ ಕುರಿತ ಸೂಕ್ತ ದಾಖಲೆಗಳು ಇಲ್ಲ ಎಂಬ ಕಾರಣಕ್ಕೆ ಬಾಂಗ್ಲಾ ನುಸುಳುಕೋರರು ಎಂಬ ಗುಮಾನಿಯಿಂದ ಉತ್ತರ ಕರ್ನಾಟಕದ ನೂರಾರು ಬಡ ಕೂಲಿ ಕಾರ್ಮಿಕರ ಗುಡಿಸಲುಗಳನ್ನು ಕಿತ್ತು ಹಾಕಲಾಗಿದೆ. ಈಗಾಗಲೇ ಸರಿಯಾದ ಮಳೆ-ಬೆಳೆ ಇಲ್ಲದೆ ಹಳ್ಳಿಯಿಂದ ನಗರ ಪ್ರದೇಶಗಳಿಗೆ ವಲಸೆ ಬಂದು ಕಡಿಮೆ ಕೂಲಿಗೆ ಕೆಲಸ ಮಾಡುತ್ತಿರುವ ರೈತರ ಬದುಕನ್ನೂ ಈ ಸರ್ಕಾರ ಕೇವಲ ಒಂದೇ ಕಾಯ್ದೆಯ ಮೂಲಕ ಅಕ್ಷರಶಃ ಬೀದಿಗೆ ತಂದು ನಿಲ್ಲಿಸಿದೆ.

ಅಸಲಿಗೆ ಬುಡಕಟ್ಟು ಸಮಾಜ ಭಾರತದ ಮೂಲ ನಿವಾಸಿಗಳು. ಅಸ್ಸಾಂನಿಂದ ಮೇಘಾಲಯ, ಜಾರ್ಖಂಡ್‌ವರೆಗೆ ಲಡಾಖ್‌ ಕಣಿವೆಗಳಿಂದ ದಕ್ಷಿಣ ಭಾರತದ ನೀಲಗಿರಿ ಬೆಟ್ಟದ ಸಾಲಿನವರೆಗೆ ಭಾರತದಲ್ಲಿ ಸರಿಸುಮಾರು ನೂರಾರು ಬುಡಕಟ್ಟು ಪಂಗಡಗಳಿವೆ. ಇವರು ಶತಮಾನಗಳಿಂದ ಇಲ್ಲೇ ಹುಟ್ಟಿ ಬೆಳೆದವರು.  ಆದರೆ, ಮೂಲತಃ ಅವಿದ್ಯಾವಂತರಾಗಿರುವ ಇವರ ಬಳಿ ಪೌರತ್ವದ ಕುರಿತ ಯಾವುದೇ ದಾಖಲೆಗಳಿಲ್ಲ. ಇರಲು ಸಾಧ್ಯವೂ ಇಲ್ಲ. ಹಾಗಾದರೆ ದಾಖಲೆಗಳಿಲ್ಲದ ಇವರ ಪಾಡೇನು? ಎಂಬ ಕುರಿತೂ ಸಹ ಸರ್ಕಾರ ಈ ವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಬುಡಕಟ್ಟು ಸಮಾಜದ ಪಾಲಿಗೆ ಮರಣಶಾಸನವೇ ಆಗಿರುವ ಎನ್ಆರ್‌ಸಿ ಎರಡು ವರ್ಷಗಳ ಹಿಂದೆಯೇ ಅಸ್ಸಾಂನಲ್ಲಿ ಚಾಲ್ತಿಯಲ್ಲಿದೆ. ಈ ಕಾಯ್ದೆಯಿಂದ ಹಲವು ಬುಡಕಟ್ಟು ಜನ ಪೌರತ್ವ ಕಳೆದುಕೊಂಡು ಪಶುಗಳಂತೆ ಡಿಟೆನ್ಷನ್ ಸೆಂಟರ್‌ಗಳಲ್ಲಿ ಪ್ರಾಣ ಬಿಟ್ಟಿದ್ದಾರೆ/ ಬಿಡುತ್ತಿದ್ದಾರೆ. ಅಂತ ಒಂದು ಬುಡಕಟ್ಟು ಮಹಿಳೆಯ ಕಥೆ ಇಲ್ಲಿದೆ.

ಮೇಘಾಲಯದ ಗಾರೋ ಬುಡಕಟ್ಟಿನ ಹೆಣ್ಣು ಮಗಳ ಕತೆ

ಈಕೆಯ ಹೆಸರು ಜಿನು. ಮೇಘಾಲಯದ ಗಾರೋ ಎಂಬ ಬುಡಕಟ್ಟು ಹೆಣ್ಣುಮಗಳು. ಜನವರಿ 5ರಂದು ಗೋಲ್ ಪಾರ ಡಿಟೆನ್ಷನ್ ಕೇಂದ್ರದಲ್ಲಿ ಬಂಧಿಯಾಗಿ ಮೃತಪಟ್ಟ ನರೇಶ್ ಕೋಚ್ ಎಂಬಾತನ ಪತ್ನಿ.
ಮೃತ ನರೇಶ್ ನನ್ನು NRC ಪಟ್ಟಿಯಲ್ಲಿ ಇಲ್ಲದ ಕಾರಣಕ್ಕೆ ಡಿಟೆನ್ಷನ್ ಸೆಂಟರ್‌ನಲ್ಲಿ ಕೂಡಿಹಾಕಲಾಗಿತ್ತು. ನರೇಶ್ ಬಂಗಾಲಿಯಲ್ಲ, ಮುಸ್ಲಿಮನೂ ಅಲ್ಲ, ಮುಸ್ಲಿಂ ಬಂಗಾಲಿಯೂ ಅಲ್ಲ. ಅಥವಾ ಬಾಂಗ್ಲಾದೇಶದಿಂದ ಬಂದಿರಬಹುದಾದ ಯಾವುದೇ ಬುಡಕಟ್ಟು ಸಮುದಾಯಕ್ಕೂ ಸೇರಿದವನಲ್ಲ. ಬದಲಾಗಿ ಅಸ್ಸಾಂನ ಮೂಲನಿವಾಸಿ ಕೋಚ್ ಬುಡಕಟ್ಟು ಸಮುದಾಯಕ್ಕೆ ಸೇರಿದವನು.

ಕಳೆದ ವರ್ಷ ಬಿಡುಗಡೆಯಾದ NRC ಪಟ್ಟಿಯಲ್ಲಿ ಈತನ ಪುತ್ರ ಮತ್ತು ಸಹೋದರ ಸೇರಿದ್ದರು. ಆದರೆ ನರೇಶ್ ಹೊರಗೆ ಉಳಿದುಕೊಂಡುಬಿಟ್ಟ!. ಕೇಂದ್ರದ ಕಾನೂನನ್ನು ಕಾಪಾಡಲೇಬೇಕು ಎಂಬ ಉದ್ದೇಶದಿಂದ ಭಾರತದ ಬುಡಕಟ್ಟು ಸಮಾಜದವನೇ ಆದರೂ ಕೂಡ ಆತನನ್ನು ಒತ್ತಾಯಪೂರ್ವಕವಾಗಿ ಡಿಟೆನ್ಷನ್ ಸೆಂಟರ್‌ಗೆ ತಳಲ್ಪಟ್ಟಿದ್ದ.

ನರೇಶ್‌ ಕೋಚ್

ಕಳೆದ ಎರಡು ವರ್ಷದಿಂದ ನರೇಶ್‌ಗೆ ಬಿಪಿ ಇತ್ತು. ಕೊನೆಗೆ ಈತ ಡಿಟೆನ್ಷನ್ ಸೆಂಟರ್ನಲ್ಲಿ ಸ್ಟ್ರೋಕ್ ಆಗಿ ಸತ್ತೇ ಹೋದ. ಆ ಮೂಲಕ ಬಂಧನ ಕೇಂದ್ರದಲ್ಲಿ ಮೃತಪಟ್ಟ 29ನೇ ವ್ಯಕ್ತಿ ಈತನಾಗಿದ್ದು, ಈತನ ಪತ್ನಿ ಇನ್ನೂ ಆ ಆಘಾತದಿಂದ ಹೊರಬಂದಿಲ್ಲ. ಗಂಡನ ಅಗಲಿಕೆಯಿಂದ ಅಳಲೂ ಅವಳ ಬಳಿ ಪುರುಸೊತ್ತಿಲ್ಲ. ಯಾಕೆಂದರೆ ನರೇಶನ ಮೃತದೇಹವನ್ನು ಸುಡಲು ಬಳಸಿದ ಕಟ್ಟಿಗೆಗೆ ಮಾಡಿದ ಏಳುನೂರು ರುಪಾಯಿ ಸಾಲವನ್ನು ಈಕೆ ತೀರಿಸಬೇಕಿದೆ! ಮೀನು ಸಾಕಣಿಕೆ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಜಿನುಗೆ ಏಳು ನೂರು ರುಪಾಯಿ ಹಣವನ್ನು ಹೊಂದಿಸುವುದು ದೊಡ್ಡ ಹೊರೆ.

ಎಂಥಾ ವಿಪರ್ಯಾಸ ನೋಡಿ ಕೇಂದ್ರದ ನೂತನ ಕಾನೂನಿನಿಂದ ಇವಳ ಗಂಡ ಭಾರತೀಯನಾಗಿ ಹುಟ್ಟಿದ ಆದರೆ, ದಾಖಲೆಯಿಲ್ಲದ ಕಾರಣಕ್ಕಾಗಿ ವಿದೇಶೀಯನಾಗಿ ಸತ್ತ. (ಸತ್ತ ಎನ್ನುವುದಕ್ಕಿಂತ ಕೊಲ್ಲಲ್ಪಟ್ಟ ಎಂಬುದು ಸೂಕ್ತ) ನರೇಶ್ ಸತ್ತಾಗ ಅವನದು ಯಾವ ದೇಶ? ಯಾರು ಉತ್ತರ ಕೊಡುತ್ತಾರೆ? ಇನ್ನೂ ಹೆಣ ಸುಟ್ಟ ಬಾಬ್ತು ಏಳು ನೂರು ರುಪಾಯಿ ತಾನೇ ಎನ್ನಬೇಡಿ, ಅಸ್ಸಾಮಿನಲ್ಲಿ ಸುಡಲು ಎನ್‌ಆರ್‌ಸಿ ಪಟ್ಟಿಯಿಂದ ಹೊರಗುಳಿದ ಇನ್ನೂ ಹತ್ತೊಂಭತ್ತು ಲಕ್ಷ ಚಿಲ್ಲರೆ ಬುಡಕಟ್ಟು ಜನರ ಹೆಣಗಳು ಸರದಿಯಲ್ಲಿ ನಿಲ್ಲಲಿವೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರಿಗೂ ಸಹ ನರೇಶ್ ಕೋಚನ ಪರಿಸ್ಥಿತಿ ಬರುವುದು ಬೇಡ. ಅದಕ್ಕಾಗಿ ನಾವೆಲ್ಲರೂ ಸಿಎಎ, ಎನ್. ಆರ್.ಸಿ. ಮತ್ತು ಎನ್.ಪಿ.ಅರ್.ಗಳನ್ನು ವಿರೋಧಿಸೋಣ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...