Homeಮುಖಪುಟಭಾರತೀಯನಾಗಿ ಹುಟ್ಟಿ NRC ಕಾರಣದಿಂದ‍ ವಿದೇಶಿಯನಾಗಿ ಸತ್ತ ನರೇಶ್: ಇನ್ನು 19 ಲಕ್ಷ ಜನರ ಪಾಡೇನು?

ಭಾರತೀಯನಾಗಿ ಹುಟ್ಟಿ NRC ಕಾರಣದಿಂದ‍ ವಿದೇಶಿಯನಾಗಿ ಸತ್ತ ನರೇಶ್: ಇನ್ನು 19 ಲಕ್ಷ ಜನರ ಪಾಡೇನು?

ಗಂಡನ ಅಗಲಿಕೆಯಿಂದ ಅಳಲೂ ಅವಳ ಬಳಿ ಪುರುಸೊತ್ತಿಲ್ಲ. ಯಾಕೆಂದರೆ ನರೇಶನ ಮೃತದೇಹವನ್ನು ಸುಡಲು ಬಳಸಿದ ಕಟ್ಟಿಗೆಗೆ ಮಾಡಿದ ಏಳುನೂರು ರುಪಾಯಿ ಸಾಲವನ್ನು ಈಕೆ ತೀರಿಸಬೇಕಿದೆ!

- Advertisement -
- Advertisement -

ಗಣರಾಜ್ಯ ಭಾರತ ಕಳೆದ 70 ವರ್ಷಗಳಲ್ಲಿ ಸಾಕಷ್ಟು ಕಾಯ್ದೆ, ಕಾನೂನುಗಳನ್ನು ಕಂಡಿದೆ. ದೇಶವನ್ನು ಆಳಿದ ಹಲವಾರು ಸರ್ಕಾರಗಳು ಆಡಳಿತವನ್ನು ಸುಗಮಗೊಳಿಸುವ ಹಾಗೂ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಹತ್ತಾರು ನೂತನ ಕಾನೂನುಗಳನ್ನು ಜಾರಿಗೆ ತಂದಿದ್ದಾರೆ. ಅಲ್ಲದೆ, ಹಳೆಯ ಕಾನೂನುಗಳಿಗೆ ಮಹತ್ವದ ತಿದ್ದುಪಡಿಗಳನ್ನೂ ತರಲಾಗಿದೆ. ಆದರೆ, ಈವರೆಗೆ ಕೇಂದ್ರ ಸರ್ಕಾರದ ಕಾನೂನೊಂದಕ್ಕೆ ಈ ಪರಿ ರಾಷ್ಟ್ರವ್ಯಾಪಿ ವಿರೋಧ ವ್ಯಕ್ತವಾಗುತ್ತಿರುವುದು ಬಹುತೇಕ ಇದೇ ಮೊದಲು.

ಅವೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ಪೌರತ್ವ ನೋಂದಣಿ ಕಾಯ್ದೆಗಳ(ಎನ್ಆರ್‌ಸಿ) ಯಾಗಿದ್ದು ಇವುಗಳ ವಿರುದ್ಧ ಕಳೆದ ಎರಡು ತಿಂಗಳಿನಿಂದ ರಾಷ್ಟ್ರವ್ಯಾಪಿ ದೊಡ್ಡ ಮಟ್ಟದಲ್ಲಿ ಚಳುವಳಿ, ಹೋರಾಟ ಹಾಗೂ ಮುಷ್ಕರಗಳು ಪ್ರತಿನಿತ್ಯ ನಡೆಯುತ್ತಲೇ ಇದೆ. ಆದರೆ, ಈ ಎರಡನ್ನು ಸಮರ್ಥಿಸಿಕೊಳ್ಳುತ್ತಿರುವ ಕೇಂದ್ರ ಸರ್ಕಾರ ಇದು ದೇಶದ ನಾಗರೀಕರ ಪೌರತ್ವವನ್ನು ಧೃಡಪಡಿಸುವ ಕಾಯ್ದೆಯೇ ಹೊರತು ಪೌರತ್ವವನ್ನು ಕಸಿದುಕೊಳ್ಳುವ ಕಾಯ್ದೆ ಅಲ್ಲ ಎಂದು ಬೊಬ್ಬೆ ಹೊಡೆಯುತ್ತಲೇ ಇವೆ.

ಈ ನಡುವೆ ಬೆಂಗಳೂರಿನಂತಹ ನಗರದಲ್ಲೇ ಪೌರತ್ವದ ಕುರಿತ ಸೂಕ್ತ ದಾಖಲೆಗಳು ಇಲ್ಲ ಎಂಬ ಕಾರಣಕ್ಕೆ ಬಾಂಗ್ಲಾ ನುಸುಳುಕೋರರು ಎಂಬ ಗುಮಾನಿಯಿಂದ ಉತ್ತರ ಕರ್ನಾಟಕದ ನೂರಾರು ಬಡ ಕೂಲಿ ಕಾರ್ಮಿಕರ ಗುಡಿಸಲುಗಳನ್ನು ಕಿತ್ತು ಹಾಕಲಾಗಿದೆ. ಈಗಾಗಲೇ ಸರಿಯಾದ ಮಳೆ-ಬೆಳೆ ಇಲ್ಲದೆ ಹಳ್ಳಿಯಿಂದ ನಗರ ಪ್ರದೇಶಗಳಿಗೆ ವಲಸೆ ಬಂದು ಕಡಿಮೆ ಕೂಲಿಗೆ ಕೆಲಸ ಮಾಡುತ್ತಿರುವ ರೈತರ ಬದುಕನ್ನೂ ಈ ಸರ್ಕಾರ ಕೇವಲ ಒಂದೇ ಕಾಯ್ದೆಯ ಮೂಲಕ ಅಕ್ಷರಶಃ ಬೀದಿಗೆ ತಂದು ನಿಲ್ಲಿಸಿದೆ.

ಅಸಲಿಗೆ ಬುಡಕಟ್ಟು ಸಮಾಜ ಭಾರತದ ಮೂಲ ನಿವಾಸಿಗಳು. ಅಸ್ಸಾಂನಿಂದ ಮೇಘಾಲಯ, ಜಾರ್ಖಂಡ್‌ವರೆಗೆ ಲಡಾಖ್‌ ಕಣಿವೆಗಳಿಂದ ದಕ್ಷಿಣ ಭಾರತದ ನೀಲಗಿರಿ ಬೆಟ್ಟದ ಸಾಲಿನವರೆಗೆ ಭಾರತದಲ್ಲಿ ಸರಿಸುಮಾರು ನೂರಾರು ಬುಡಕಟ್ಟು ಪಂಗಡಗಳಿವೆ. ಇವರು ಶತಮಾನಗಳಿಂದ ಇಲ್ಲೇ ಹುಟ್ಟಿ ಬೆಳೆದವರು.  ಆದರೆ, ಮೂಲತಃ ಅವಿದ್ಯಾವಂತರಾಗಿರುವ ಇವರ ಬಳಿ ಪೌರತ್ವದ ಕುರಿತ ಯಾವುದೇ ದಾಖಲೆಗಳಿಲ್ಲ. ಇರಲು ಸಾಧ್ಯವೂ ಇಲ್ಲ. ಹಾಗಾದರೆ ದಾಖಲೆಗಳಿಲ್ಲದ ಇವರ ಪಾಡೇನು? ಎಂಬ ಕುರಿತೂ ಸಹ ಸರ್ಕಾರ ಈ ವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಬುಡಕಟ್ಟು ಸಮಾಜದ ಪಾಲಿಗೆ ಮರಣಶಾಸನವೇ ಆಗಿರುವ ಎನ್ಆರ್‌ಸಿ ಎರಡು ವರ್ಷಗಳ ಹಿಂದೆಯೇ ಅಸ್ಸಾಂನಲ್ಲಿ ಚಾಲ್ತಿಯಲ್ಲಿದೆ. ಈ ಕಾಯ್ದೆಯಿಂದ ಹಲವು ಬುಡಕಟ್ಟು ಜನ ಪೌರತ್ವ ಕಳೆದುಕೊಂಡು ಪಶುಗಳಂತೆ ಡಿಟೆನ್ಷನ್ ಸೆಂಟರ್‌ಗಳಲ್ಲಿ ಪ್ರಾಣ ಬಿಟ್ಟಿದ್ದಾರೆ/ ಬಿಡುತ್ತಿದ್ದಾರೆ. ಅಂತ ಒಂದು ಬುಡಕಟ್ಟು ಮಹಿಳೆಯ ಕಥೆ ಇಲ್ಲಿದೆ.

ಮೇಘಾಲಯದ ಗಾರೋ ಬುಡಕಟ್ಟಿನ ಹೆಣ್ಣು ಮಗಳ ಕತೆ

ಈಕೆಯ ಹೆಸರು ಜಿನು. ಮೇಘಾಲಯದ ಗಾರೋ ಎಂಬ ಬುಡಕಟ್ಟು ಹೆಣ್ಣುಮಗಳು. ಜನವರಿ 5ರಂದು ಗೋಲ್ ಪಾರ ಡಿಟೆನ್ಷನ್ ಕೇಂದ್ರದಲ್ಲಿ ಬಂಧಿಯಾಗಿ ಮೃತಪಟ್ಟ ನರೇಶ್ ಕೋಚ್ ಎಂಬಾತನ ಪತ್ನಿ.
ಮೃತ ನರೇಶ್ ನನ್ನು NRC ಪಟ್ಟಿಯಲ್ಲಿ ಇಲ್ಲದ ಕಾರಣಕ್ಕೆ ಡಿಟೆನ್ಷನ್ ಸೆಂಟರ್‌ನಲ್ಲಿ ಕೂಡಿಹಾಕಲಾಗಿತ್ತು. ನರೇಶ್ ಬಂಗಾಲಿಯಲ್ಲ, ಮುಸ್ಲಿಮನೂ ಅಲ್ಲ, ಮುಸ್ಲಿಂ ಬಂಗಾಲಿಯೂ ಅಲ್ಲ. ಅಥವಾ ಬಾಂಗ್ಲಾದೇಶದಿಂದ ಬಂದಿರಬಹುದಾದ ಯಾವುದೇ ಬುಡಕಟ್ಟು ಸಮುದಾಯಕ್ಕೂ ಸೇರಿದವನಲ್ಲ. ಬದಲಾಗಿ ಅಸ್ಸಾಂನ ಮೂಲನಿವಾಸಿ ಕೋಚ್ ಬುಡಕಟ್ಟು ಸಮುದಾಯಕ್ಕೆ ಸೇರಿದವನು.

ಕಳೆದ ವರ್ಷ ಬಿಡುಗಡೆಯಾದ NRC ಪಟ್ಟಿಯಲ್ಲಿ ಈತನ ಪುತ್ರ ಮತ್ತು ಸಹೋದರ ಸೇರಿದ್ದರು. ಆದರೆ ನರೇಶ್ ಹೊರಗೆ ಉಳಿದುಕೊಂಡುಬಿಟ್ಟ!. ಕೇಂದ್ರದ ಕಾನೂನನ್ನು ಕಾಪಾಡಲೇಬೇಕು ಎಂಬ ಉದ್ದೇಶದಿಂದ ಭಾರತದ ಬುಡಕಟ್ಟು ಸಮಾಜದವನೇ ಆದರೂ ಕೂಡ ಆತನನ್ನು ಒತ್ತಾಯಪೂರ್ವಕವಾಗಿ ಡಿಟೆನ್ಷನ್ ಸೆಂಟರ್‌ಗೆ ತಳಲ್ಪಟ್ಟಿದ್ದ.

ನರೇಶ್‌ ಕೋಚ್

ಕಳೆದ ಎರಡು ವರ್ಷದಿಂದ ನರೇಶ್‌ಗೆ ಬಿಪಿ ಇತ್ತು. ಕೊನೆಗೆ ಈತ ಡಿಟೆನ್ಷನ್ ಸೆಂಟರ್ನಲ್ಲಿ ಸ್ಟ್ರೋಕ್ ಆಗಿ ಸತ್ತೇ ಹೋದ. ಆ ಮೂಲಕ ಬಂಧನ ಕೇಂದ್ರದಲ್ಲಿ ಮೃತಪಟ್ಟ 29ನೇ ವ್ಯಕ್ತಿ ಈತನಾಗಿದ್ದು, ಈತನ ಪತ್ನಿ ಇನ್ನೂ ಆ ಆಘಾತದಿಂದ ಹೊರಬಂದಿಲ್ಲ. ಗಂಡನ ಅಗಲಿಕೆಯಿಂದ ಅಳಲೂ ಅವಳ ಬಳಿ ಪುರುಸೊತ್ತಿಲ್ಲ. ಯಾಕೆಂದರೆ ನರೇಶನ ಮೃತದೇಹವನ್ನು ಸುಡಲು ಬಳಸಿದ ಕಟ್ಟಿಗೆಗೆ ಮಾಡಿದ ಏಳುನೂರು ರುಪಾಯಿ ಸಾಲವನ್ನು ಈಕೆ ತೀರಿಸಬೇಕಿದೆ! ಮೀನು ಸಾಕಣಿಕೆ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಜಿನುಗೆ ಏಳು ನೂರು ರುಪಾಯಿ ಹಣವನ್ನು ಹೊಂದಿಸುವುದು ದೊಡ್ಡ ಹೊರೆ.

ಎಂಥಾ ವಿಪರ್ಯಾಸ ನೋಡಿ ಕೇಂದ್ರದ ನೂತನ ಕಾನೂನಿನಿಂದ ಇವಳ ಗಂಡ ಭಾರತೀಯನಾಗಿ ಹುಟ್ಟಿದ ಆದರೆ, ದಾಖಲೆಯಿಲ್ಲದ ಕಾರಣಕ್ಕಾಗಿ ವಿದೇಶೀಯನಾಗಿ ಸತ್ತ. (ಸತ್ತ ಎನ್ನುವುದಕ್ಕಿಂತ ಕೊಲ್ಲಲ್ಪಟ್ಟ ಎಂಬುದು ಸೂಕ್ತ) ನರೇಶ್ ಸತ್ತಾಗ ಅವನದು ಯಾವ ದೇಶ? ಯಾರು ಉತ್ತರ ಕೊಡುತ್ತಾರೆ? ಇನ್ನೂ ಹೆಣ ಸುಟ್ಟ ಬಾಬ್ತು ಏಳು ನೂರು ರುಪಾಯಿ ತಾನೇ ಎನ್ನಬೇಡಿ, ಅಸ್ಸಾಮಿನಲ್ಲಿ ಸುಡಲು ಎನ್‌ಆರ್‌ಸಿ ಪಟ್ಟಿಯಿಂದ ಹೊರಗುಳಿದ ಇನ್ನೂ ಹತ್ತೊಂಭತ್ತು ಲಕ್ಷ ಚಿಲ್ಲರೆ ಬುಡಕಟ್ಟು ಜನರ ಹೆಣಗಳು ಸರದಿಯಲ್ಲಿ ನಿಲ್ಲಲಿವೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರಿಗೂ ಸಹ ನರೇಶ್ ಕೋಚನ ಪರಿಸ್ಥಿತಿ ಬರುವುದು ಬೇಡ. ಅದಕ್ಕಾಗಿ ನಾವೆಲ್ಲರೂ ಸಿಎಎ, ಎನ್. ಆರ್.ಸಿ. ಮತ್ತು ಎನ್.ಪಿ.ಅರ್.ಗಳನ್ನು ವಿರೋಧಿಸೋಣ.

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...