Homeಮುಖಪುಟಭಾರತೀಯನಾಗಿ ಹುಟ್ಟಿ NRC ಕಾರಣದಿಂದ‍ ವಿದೇಶಿಯನಾಗಿ ಸತ್ತ ನರೇಶ್: ಇನ್ನು 19 ಲಕ್ಷ ಜನರ ಪಾಡೇನು?

ಭಾರತೀಯನಾಗಿ ಹುಟ್ಟಿ NRC ಕಾರಣದಿಂದ‍ ವಿದೇಶಿಯನಾಗಿ ಸತ್ತ ನರೇಶ್: ಇನ್ನು 19 ಲಕ್ಷ ಜನರ ಪಾಡೇನು?

ಗಂಡನ ಅಗಲಿಕೆಯಿಂದ ಅಳಲೂ ಅವಳ ಬಳಿ ಪುರುಸೊತ್ತಿಲ್ಲ. ಯಾಕೆಂದರೆ ನರೇಶನ ಮೃತದೇಹವನ್ನು ಸುಡಲು ಬಳಸಿದ ಕಟ್ಟಿಗೆಗೆ ಮಾಡಿದ ಏಳುನೂರು ರುಪಾಯಿ ಸಾಲವನ್ನು ಈಕೆ ತೀರಿಸಬೇಕಿದೆ!

- Advertisement -
- Advertisement -

ಗಣರಾಜ್ಯ ಭಾರತ ಕಳೆದ 70 ವರ್ಷಗಳಲ್ಲಿ ಸಾಕಷ್ಟು ಕಾಯ್ದೆ, ಕಾನೂನುಗಳನ್ನು ಕಂಡಿದೆ. ದೇಶವನ್ನು ಆಳಿದ ಹಲವಾರು ಸರ್ಕಾರಗಳು ಆಡಳಿತವನ್ನು ಸುಗಮಗೊಳಿಸುವ ಹಾಗೂ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಹತ್ತಾರು ನೂತನ ಕಾನೂನುಗಳನ್ನು ಜಾರಿಗೆ ತಂದಿದ್ದಾರೆ. ಅಲ್ಲದೆ, ಹಳೆಯ ಕಾನೂನುಗಳಿಗೆ ಮಹತ್ವದ ತಿದ್ದುಪಡಿಗಳನ್ನೂ ತರಲಾಗಿದೆ. ಆದರೆ, ಈವರೆಗೆ ಕೇಂದ್ರ ಸರ್ಕಾರದ ಕಾನೂನೊಂದಕ್ಕೆ ಈ ಪರಿ ರಾಷ್ಟ್ರವ್ಯಾಪಿ ವಿರೋಧ ವ್ಯಕ್ತವಾಗುತ್ತಿರುವುದು ಬಹುತೇಕ ಇದೇ ಮೊದಲು.

ಅವೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ಪೌರತ್ವ ನೋಂದಣಿ ಕಾಯ್ದೆಗಳ(ಎನ್ಆರ್‌ಸಿ) ಯಾಗಿದ್ದು ಇವುಗಳ ವಿರುದ್ಧ ಕಳೆದ ಎರಡು ತಿಂಗಳಿನಿಂದ ರಾಷ್ಟ್ರವ್ಯಾಪಿ ದೊಡ್ಡ ಮಟ್ಟದಲ್ಲಿ ಚಳುವಳಿ, ಹೋರಾಟ ಹಾಗೂ ಮುಷ್ಕರಗಳು ಪ್ರತಿನಿತ್ಯ ನಡೆಯುತ್ತಲೇ ಇದೆ. ಆದರೆ, ಈ ಎರಡನ್ನು ಸಮರ್ಥಿಸಿಕೊಳ್ಳುತ್ತಿರುವ ಕೇಂದ್ರ ಸರ್ಕಾರ ಇದು ದೇಶದ ನಾಗರೀಕರ ಪೌರತ್ವವನ್ನು ಧೃಡಪಡಿಸುವ ಕಾಯ್ದೆಯೇ ಹೊರತು ಪೌರತ್ವವನ್ನು ಕಸಿದುಕೊಳ್ಳುವ ಕಾಯ್ದೆ ಅಲ್ಲ ಎಂದು ಬೊಬ್ಬೆ ಹೊಡೆಯುತ್ತಲೇ ಇವೆ.

ಈ ನಡುವೆ ಬೆಂಗಳೂರಿನಂತಹ ನಗರದಲ್ಲೇ ಪೌರತ್ವದ ಕುರಿತ ಸೂಕ್ತ ದಾಖಲೆಗಳು ಇಲ್ಲ ಎಂಬ ಕಾರಣಕ್ಕೆ ಬಾಂಗ್ಲಾ ನುಸುಳುಕೋರರು ಎಂಬ ಗುಮಾನಿಯಿಂದ ಉತ್ತರ ಕರ್ನಾಟಕದ ನೂರಾರು ಬಡ ಕೂಲಿ ಕಾರ್ಮಿಕರ ಗುಡಿಸಲುಗಳನ್ನು ಕಿತ್ತು ಹಾಕಲಾಗಿದೆ. ಈಗಾಗಲೇ ಸರಿಯಾದ ಮಳೆ-ಬೆಳೆ ಇಲ್ಲದೆ ಹಳ್ಳಿಯಿಂದ ನಗರ ಪ್ರದೇಶಗಳಿಗೆ ವಲಸೆ ಬಂದು ಕಡಿಮೆ ಕೂಲಿಗೆ ಕೆಲಸ ಮಾಡುತ್ತಿರುವ ರೈತರ ಬದುಕನ್ನೂ ಈ ಸರ್ಕಾರ ಕೇವಲ ಒಂದೇ ಕಾಯ್ದೆಯ ಮೂಲಕ ಅಕ್ಷರಶಃ ಬೀದಿಗೆ ತಂದು ನಿಲ್ಲಿಸಿದೆ.

ಅಸಲಿಗೆ ಬುಡಕಟ್ಟು ಸಮಾಜ ಭಾರತದ ಮೂಲ ನಿವಾಸಿಗಳು. ಅಸ್ಸಾಂನಿಂದ ಮೇಘಾಲಯ, ಜಾರ್ಖಂಡ್‌ವರೆಗೆ ಲಡಾಖ್‌ ಕಣಿವೆಗಳಿಂದ ದಕ್ಷಿಣ ಭಾರತದ ನೀಲಗಿರಿ ಬೆಟ್ಟದ ಸಾಲಿನವರೆಗೆ ಭಾರತದಲ್ಲಿ ಸರಿಸುಮಾರು ನೂರಾರು ಬುಡಕಟ್ಟು ಪಂಗಡಗಳಿವೆ. ಇವರು ಶತಮಾನಗಳಿಂದ ಇಲ್ಲೇ ಹುಟ್ಟಿ ಬೆಳೆದವರು.  ಆದರೆ, ಮೂಲತಃ ಅವಿದ್ಯಾವಂತರಾಗಿರುವ ಇವರ ಬಳಿ ಪೌರತ್ವದ ಕುರಿತ ಯಾವುದೇ ದಾಖಲೆಗಳಿಲ್ಲ. ಇರಲು ಸಾಧ್ಯವೂ ಇಲ್ಲ. ಹಾಗಾದರೆ ದಾಖಲೆಗಳಿಲ್ಲದ ಇವರ ಪಾಡೇನು? ಎಂಬ ಕುರಿತೂ ಸಹ ಸರ್ಕಾರ ಈ ವರೆಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ಬುಡಕಟ್ಟು ಸಮಾಜದ ಪಾಲಿಗೆ ಮರಣಶಾಸನವೇ ಆಗಿರುವ ಎನ್ಆರ್‌ಸಿ ಎರಡು ವರ್ಷಗಳ ಹಿಂದೆಯೇ ಅಸ್ಸಾಂನಲ್ಲಿ ಚಾಲ್ತಿಯಲ್ಲಿದೆ. ಈ ಕಾಯ್ದೆಯಿಂದ ಹಲವು ಬುಡಕಟ್ಟು ಜನ ಪೌರತ್ವ ಕಳೆದುಕೊಂಡು ಪಶುಗಳಂತೆ ಡಿಟೆನ್ಷನ್ ಸೆಂಟರ್‌ಗಳಲ್ಲಿ ಪ್ರಾಣ ಬಿಟ್ಟಿದ್ದಾರೆ/ ಬಿಡುತ್ತಿದ್ದಾರೆ. ಅಂತ ಒಂದು ಬುಡಕಟ್ಟು ಮಹಿಳೆಯ ಕಥೆ ಇಲ್ಲಿದೆ.

ಮೇಘಾಲಯದ ಗಾರೋ ಬುಡಕಟ್ಟಿನ ಹೆಣ್ಣು ಮಗಳ ಕತೆ

ಈಕೆಯ ಹೆಸರು ಜಿನು. ಮೇಘಾಲಯದ ಗಾರೋ ಎಂಬ ಬುಡಕಟ್ಟು ಹೆಣ್ಣುಮಗಳು. ಜನವರಿ 5ರಂದು ಗೋಲ್ ಪಾರ ಡಿಟೆನ್ಷನ್ ಕೇಂದ್ರದಲ್ಲಿ ಬಂಧಿಯಾಗಿ ಮೃತಪಟ್ಟ ನರೇಶ್ ಕೋಚ್ ಎಂಬಾತನ ಪತ್ನಿ.
ಮೃತ ನರೇಶ್ ನನ್ನು NRC ಪಟ್ಟಿಯಲ್ಲಿ ಇಲ್ಲದ ಕಾರಣಕ್ಕೆ ಡಿಟೆನ್ಷನ್ ಸೆಂಟರ್‌ನಲ್ಲಿ ಕೂಡಿಹಾಕಲಾಗಿತ್ತು. ನರೇಶ್ ಬಂಗಾಲಿಯಲ್ಲ, ಮುಸ್ಲಿಮನೂ ಅಲ್ಲ, ಮುಸ್ಲಿಂ ಬಂಗಾಲಿಯೂ ಅಲ್ಲ. ಅಥವಾ ಬಾಂಗ್ಲಾದೇಶದಿಂದ ಬಂದಿರಬಹುದಾದ ಯಾವುದೇ ಬುಡಕಟ್ಟು ಸಮುದಾಯಕ್ಕೂ ಸೇರಿದವನಲ್ಲ. ಬದಲಾಗಿ ಅಸ್ಸಾಂನ ಮೂಲನಿವಾಸಿ ಕೋಚ್ ಬುಡಕಟ್ಟು ಸಮುದಾಯಕ್ಕೆ ಸೇರಿದವನು.

ಕಳೆದ ವರ್ಷ ಬಿಡುಗಡೆಯಾದ NRC ಪಟ್ಟಿಯಲ್ಲಿ ಈತನ ಪುತ್ರ ಮತ್ತು ಸಹೋದರ ಸೇರಿದ್ದರು. ಆದರೆ ನರೇಶ್ ಹೊರಗೆ ಉಳಿದುಕೊಂಡುಬಿಟ್ಟ!. ಕೇಂದ್ರದ ಕಾನೂನನ್ನು ಕಾಪಾಡಲೇಬೇಕು ಎಂಬ ಉದ್ದೇಶದಿಂದ ಭಾರತದ ಬುಡಕಟ್ಟು ಸಮಾಜದವನೇ ಆದರೂ ಕೂಡ ಆತನನ್ನು ಒತ್ತಾಯಪೂರ್ವಕವಾಗಿ ಡಿಟೆನ್ಷನ್ ಸೆಂಟರ್‌ಗೆ ತಳಲ್ಪಟ್ಟಿದ್ದ.

ನರೇಶ್‌ ಕೋಚ್

ಕಳೆದ ಎರಡು ವರ್ಷದಿಂದ ನರೇಶ್‌ಗೆ ಬಿಪಿ ಇತ್ತು. ಕೊನೆಗೆ ಈತ ಡಿಟೆನ್ಷನ್ ಸೆಂಟರ್ನಲ್ಲಿ ಸ್ಟ್ರೋಕ್ ಆಗಿ ಸತ್ತೇ ಹೋದ. ಆ ಮೂಲಕ ಬಂಧನ ಕೇಂದ್ರದಲ್ಲಿ ಮೃತಪಟ್ಟ 29ನೇ ವ್ಯಕ್ತಿ ಈತನಾಗಿದ್ದು, ಈತನ ಪತ್ನಿ ಇನ್ನೂ ಆ ಆಘಾತದಿಂದ ಹೊರಬಂದಿಲ್ಲ. ಗಂಡನ ಅಗಲಿಕೆಯಿಂದ ಅಳಲೂ ಅವಳ ಬಳಿ ಪುರುಸೊತ್ತಿಲ್ಲ. ಯಾಕೆಂದರೆ ನರೇಶನ ಮೃತದೇಹವನ್ನು ಸುಡಲು ಬಳಸಿದ ಕಟ್ಟಿಗೆಗೆ ಮಾಡಿದ ಏಳುನೂರು ರುಪಾಯಿ ಸಾಲವನ್ನು ಈಕೆ ತೀರಿಸಬೇಕಿದೆ! ಮೀನು ಸಾಕಣಿಕೆ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವ ಜಿನುಗೆ ಏಳು ನೂರು ರುಪಾಯಿ ಹಣವನ್ನು ಹೊಂದಿಸುವುದು ದೊಡ್ಡ ಹೊರೆ.

ಎಂಥಾ ವಿಪರ್ಯಾಸ ನೋಡಿ ಕೇಂದ್ರದ ನೂತನ ಕಾನೂನಿನಿಂದ ಇವಳ ಗಂಡ ಭಾರತೀಯನಾಗಿ ಹುಟ್ಟಿದ ಆದರೆ, ದಾಖಲೆಯಿಲ್ಲದ ಕಾರಣಕ್ಕಾಗಿ ವಿದೇಶೀಯನಾಗಿ ಸತ್ತ. (ಸತ್ತ ಎನ್ನುವುದಕ್ಕಿಂತ ಕೊಲ್ಲಲ್ಪಟ್ಟ ಎಂಬುದು ಸೂಕ್ತ) ನರೇಶ್ ಸತ್ತಾಗ ಅವನದು ಯಾವ ದೇಶ? ಯಾರು ಉತ್ತರ ಕೊಡುತ್ತಾರೆ? ಇನ್ನೂ ಹೆಣ ಸುಟ್ಟ ಬಾಬ್ತು ಏಳು ನೂರು ರುಪಾಯಿ ತಾನೇ ಎನ್ನಬೇಡಿ, ಅಸ್ಸಾಮಿನಲ್ಲಿ ಸುಡಲು ಎನ್‌ಆರ್‌ಸಿ ಪಟ್ಟಿಯಿಂದ ಹೊರಗುಳಿದ ಇನ್ನೂ ಹತ್ತೊಂಭತ್ತು ಲಕ್ಷ ಚಿಲ್ಲರೆ ಬುಡಕಟ್ಟು ಜನರ ಹೆಣಗಳು ಸರದಿಯಲ್ಲಿ ನಿಲ್ಲಲಿವೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರಿಗೂ ಸಹ ನರೇಶ್ ಕೋಚನ ಪರಿಸ್ಥಿತಿ ಬರುವುದು ಬೇಡ. ಅದಕ್ಕಾಗಿ ನಾವೆಲ್ಲರೂ ಸಿಎಎ, ಎನ್. ಆರ್.ಸಿ. ಮತ್ತು ಎನ್.ಪಿ.ಅರ್.ಗಳನ್ನು ವಿರೋಧಿಸೋಣ.

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...