Homeಚಳವಳಿಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿ ಶಿರಿನ್ ಇಬಾದಿಯ ಹೋರಾಟದ ಕಥೆ

ಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿ ಶಿರಿನ್ ಇಬಾದಿಯ ಹೋರಾಟದ ಕಥೆ

- Advertisement -
- Advertisement -

ತಮ್ಮ ಸಾಮರ್ಥ್ಯದಿಂದ ಶಿರಿನ್ ಇಬಾದಿ ಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿಯಾದರು. 1975ರಲ್ಲಿ ಇಸ್ಲಾಮಿಕ್ ರೆವಲ್ಯೂಶನ್ ಚುನಾವಣೆಯಲ್ಲಿ ಗೆದ್ದು ಬಂದಿತು. ಆಗ ಸಂಪ್ರದಾಯವಾದಿ ಧಾರ್ಮಿಕರು ಮಹಿಳೆಯು ನ್ಯಾಯಾಧೀಶೆಯಾಗಿರುವುದನ್ನು ವಿರೋಧಿಸಿ ಪ್ರತಿರೋಧ ಒಡ್ಡಿದರು. ನ್ಯಾಯಮೂರ್ತಿಯಾಗಿದ್ದವರನ್ನು ನ್ಯಾಯಾಲಯದಲ್ಲೇ ಗುಮಾಸ್ತೆಯಾಗಿರುವಂತೆ ಸೂಚಿಸಿತು.

ಇತ್ತೀಚೆಗೆ ಜೆಎನ್‍ಯುನಲ್ಲಿ ರಾಜಕೀಯ ಮತ್ತು ಮತೀಯ ಶಕ್ತಿಗಳು ಒಗ್ಗೂಡಿ ನಡೆಸಿದ ದಾಳಿಯಲ್ಲಿ ವಿದ್ಯಾರ್ಥಿ ಮುಂದಾಳು ಆಯಿಶಾ ಘೋಶ್ ಮತ್ತು ಇತರ ವಿದ್ಯಾರ್ಥಿಗಳು, ಹಾಗೂ ಪ್ರಾಧ್ಯಾಪಕರೂ ಗಾಯಗೊಂಡರು. ಅದರಂತೆಯೇ 1999ರಲ್ಲಿ ನಾಗರಿಕ ಪೋಷಾಕಿನ ರಾಜಕೀಯ ಶಕ್ತಿಗಳು ಟೆಹ್ರಾನ್ ವಿಶ್ವವಿದ್ಯಾಲಯದ ಹಾಸ್ಟೆಲ್ ಮೇಲೆ ದಾಳಿ ಮಾಡಿದ್ದವು. ಅವರ ಗುರಿ ಧರ್ಮಾತೀತವಾಗಿ ಮಾನವ ಹಕ್ಕುಗಳನ್ನು ಪ್ರತಿಪಾದಿಸುವ ಮತ್ತು ಕಟ್ಟರ್ ಚಾಳಿಯ ರಾಜಕೀಯ ವ್ಯವಸ್ಥೆಯನ್ನು ಪ್ರತಿಭಟಿಸುವ ಯುವ ಸಮೂಹದ ಮೇಲಾಗಿತ್ತು. ವಿದ್ಯಾರ್ಥಿ ದಂಗೆ ಎಂದು ತಿರುಚಲ್ಪಡುವ ಉದ್ದೇಶದಿಂದ ಕರೆಯಲಾದ ಆ ಆಕ್ರಮಣದಲ್ಲಿ ರಕ್ಷಣಾ ಸಿಬ್ಬಂದಿಯು ಇಜ್ಜತ್ ಇಬ್ರಾಹಿಂ ನಿಜಾಬ್ ಎಂಬ ವಿದ್ಯಾರ್ಥಿಯನ್ನು ಗುಂಡಿಟ್ಟು ಕೊಂದಿದ್ದೇ ಅಲ್ಲದೇ ಪೊಲೀಸರೆನಿಸಿಕೊಂಡವರೇ ಅತ್ಯಂತ ಹಿಂಸಾತ್ಮಕ ದಾಳಿಯನ್ನು ವಿದ್ಯಾರ್ಥಿಗಳ ಮೇಲೆ ನಡೆಸಿದರು. ಇಬ್ರಾಹಿಂನನ್ನು ಕೊಂದವರಾರೂ ವಿಚಾರಣೆಗೆ ಒಳಪಡಲಿಲ್ಲ ಮತ್ತು ಆ ಪೊಲೀಸರೂ ಕೂಡಾ ಕಾನೂನಿನಿಂದ ತಪ್ಪಿಸಿಕೊಂಡರು. ಇಬ್ರಾಹಿಂನ ಮನೆಯವರ ಪರವಾಗಿ ನಿಂತು ಪ್ರಕರಣವನ್ನು ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡಿದ್ದು ಶಿರಿನ್ ಇಬಾದಿ.

ಇಬ್ರಾಹಿಂನ ತಂದೆ ತಾಯಿ ಮತ್ತು ಕುಟುಂಬದ ಇತರ ಸದಸ್ಯರು ಶವವನ್ನೂ ಕೂಡಾ ನೋಡಲು ಬಿಡದಂತೆ ಗುಂಪುಗಳು ಅವರ ಮೇಲೆ ಕಲ್ಲುಗಳನ್ನು ತೂರಾಡುತ್ತಾ ದಾಳಿ ಮಾಡಿತ್ತು. ಅದಕ್ಕಾಗಿ ನೀವು ಮಗನ ಸಮಾಧಿಗೆ ಹೋಗಬೇಡಿ ಎಂದು ಸರ್ಕಾರ ಅವರ ಮೇಲೆ ನಿಷೇಧ ಹೇರಿದ್ದು ದುರದೃಷ್ಟಕರ.

ಇಂತಹ ಪ್ರಕರಣಗಳಿಗೆ ಬೆಂಬಲವಾಗಿ ಹೋರಾಡುವ ಮಾನವಹಕ್ಕುಗಳ ನ್ಯಾಯವಾದಿಯಾಗಿದ್ದ ಮತ್ತು ನೊಬಲ್ ಶಾಂತಿ ಪ್ರಶಸ್ತಿ ವಿಜೇತರಾದ ಎಪ್ಪತ್ತೆರಡು ವರ್ಷದ ಶಿರಿನ್ ಇಬಾದಿ ರಾಜಕೀಯ ಹೋರಾಟಗಾರ್ತಿ. ಪ್ರಜಾಪ್ರಭುತ್ವ ಮತ್ತು ಮಾನವಹಕ್ಕುಗಳಿಗಾಗಿ ಇರಾನಿನಲ್ಲಿ ಹೋರಾಡುತ್ತಿದ್ದಾರೆ. ಅದರಲ್ಲೂ ಮಹಿಳೆ, ಮಕ್ಕಳು ಮತ್ತು ನಿರ್ಗತಿಕ ವಲಸೆಗಾರರ ಹಕ್ಕುಗಳಿಗಾಗಿ ಹೋರಾಡಿದವರು. ಡಿಫೆಂಡರ್ಸ್ ಆಫ್ ಹ್ಯೂಮನ್ ರೈಟ್ಸ್ ಸೆಂಟರನ್ನು ಸ್ಥಾಪಿಸಿದರು. ನೊಬಲ್ ಪ್ರಶಸ್ತಿಯನ್ನು ಪಡೆದ ಮೊದಲ ಮುಸ್ಲಿಂ ಮಹಿಳೆ, ಅದರಲ್ಲೂ ಮೊದಲ ಇರಾನಿ ಮಹಿಳೆ (2003) ಅವರಾಗಿದ್ದರು. ಆದರೆ ಅವರು ಪಡೆದ ನೊಬಲ್ ಪ್ರಶಸ್ತಿ ಸಂಪ್ರದಾಯವಾದಿ ಮಾಧ್ಯಮಗಳಿಗೂ ಮತ್ತು ಸರಕಾರಕ್ಕೇನೂ ಖುಷಿಯಾಗಲಿಲ್ಲ. ಬದಲಾಗಿ ಇದೇ ಮೊದಲ ಬಾರಿಗೆ ಇರಾನಿ ಸರಕಾರವು ಪ್ರಶಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತು. ಟೆಹ್ರಾನಿನಲ್ಲಿ ನೆಲೆಸಿದ್ದ ಶಿರಿನ್ ಸರ್ಕಾರದ ಆಡಳಿತವನ್ನು ಟೀಕಿಸಿ ಅಲ್ಲಿನ ಜನರ ಉಪದ್ರವ ತಡೆಯಲಾರದೇ ಗಡಿಪಾರಾಗಿ ಇಂಗ್ಲೆಂಡಿನಲ್ಲಿ ಆಶ್ರಯ ಪಡೆದಿದ್ದರು. ಫೋಬ್ಸ್ ಪತ್ರಿಕೆ ಗುರುತಿಸಿದ್ದ ನೂರು ಪ್ರಭಾವಿ ಮಹಿಳೆಯರಲ್ಲಿ ಇವರೂ ಒಬ್ಬರು.

ತಮ್ಮ ಸಾಮರ್ಥ್ಯದಿಂದ ಇವರು ಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿಯಾದರು. 1975ರಲ್ಲಿ ಇಸ್ಲಾಮಿಕ್ ರೆವಲ್ಯೂಶನ್ ಚುನಾವಣೆಯಲ್ಲಿ ಗೆದ್ದು ಬಂದಿತು. ಆಗ ಸಂಪ್ರದಾಯವಾದಿ ಧಾರ್ಮಿಕರು ಮಹಿಳೆಯು ನ್ಯಾಯಾಧೀಶೆಯಾಗಿರುವುದನ್ನು ವಿರೋಧಿಸಿ ಪ್ರತಿರೋಧ ಒಡ್ಡಿದರು. ನ್ಯಾಯಮೂರ್ತಿಯಾಗಿದ್ದವರನ್ನು ನ್ಯಾಯಾಲಯದಲ್ಲೇ ಗುಮಾಸ್ತೆಯಾಗಿರುವಂತೆ ಸೂಚಿಸಿತು. ಆದರೆ ಶಿರಿನ್ ಮತ್ತು ಇತರ ಮಹಿಳಾ ನ್ಯಾಯಮೂರ್ತಿಗಳು ಕರ್ಮಠರ ವಿರುದ್ಧ ಪ್ರತಿಭಟನೆ ಮಾಡಿದರು. ಇವರ ಪ್ರತಿಭಟನೆಗೆ ಪ್ರತಿಯಾಗಿ ಆಡಳಿತ ವ್ಯವಸ್ಥೆಯು ನ್ಯಾಯಮೂರ್ತಿಗಳಾಗುವ ಬದಲು ಸ್ವಲ್ಪ ಉನ್ನತಸ್ಥಾನವಾದ ಕಾನೂನುತಜ್ಞರ ಪದವಿಗೆ ಇವರನ್ನು ಸೀಮಿತಗೊಳಿಸಿತು. ಸ್ವಯಂನಿವೃತ್ತಿ ಘೋಷಿಸಿಕೊಂಡ ಶಿರಿನ್ ಬದಲಾಗದ ಆಡಳಿತ ವ್ಯವಸ್ಥೆಯಿಂದ ಹೊರಗೆ ಬಂದರು. ಆದರೆ ಅವರು ನ್ಯಾಯವಾದಿಯಾಗಿ ಮುಂದುವರಿಯಲು ಅವರಿಗೆ ಅವಕಾಶ ಕೊಡಲಿಲ್ಲ. ಅದಕ್ಕಾಗಿ ಅವರು ಸಲ್ಲಿಸುತ್ತಿದ್ದ ಅರ್ಜಿಗಳನ್ನು ಪದೇಪದೇ ತಿರಸ್ಕರಿಸಲಾಯಿತು. ಆದರೆ ಅವರು 1993ರಲ್ಲಿ ತಮ್ಮ ವಕೀಲರ ಕಚೇರಿಯನ್ನು ತೆರೆದಿದ್ದರು. ನ್ಯಾಯವಾದಿಯಾಗಿ ತಾವು ತಿರಸ್ಕೃತರಾಗಿದ್ದ ಆ ಸಮಯವನ್ನು ಪತ್ರಿಕೆಗಳಿಗೆ ಲೇಖನಗಳನ್ನು ಬರೆಯಲು ಮತ್ತು ಪುಸ್ತಕ ಬರೆಯಲು ಉಪಯೋಗಿಸಿಕೊಂಡರು.

ವಕೀಲೆಯಾಗಿ ಕೇಸುಗಳನ್ನು ಅವರು ತೆಗೆದುಕೊಂಡಿದ್ದು ಹೆಚ್ಚಾಗಿ ಮಕ್ಕಳ ಮತ್ತು ಹೆಂಗಸರ ಕುರಿತಾದ ಅಂತರಾಷ್ಟ್ರೀಯ ಪ್ರಕರಣಗಳನ್ನು ಮತ್ತು ಪತ್ರಿಕೆಗಳು ಎದುರಿಸುತ್ತಿದ್ದ ಪ್ರಕರಣಗಳನ್ನು. ಜೊತೆಯಲ್ಲಿ ಮಾನವ ಹಕ್ಕಿನ ವಿಷಯವಾಗಿ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದ್ದರು. ಟೆಹರಾನಿನ ಯುನಿಸೆಫ್ ಪ್ರಾಯೋಜಕತ್ವದಲ್ಲಿ ಅನೇಕ ಯೋಜನೆಗಳನ್ನು ಮಾಡಿದ್ದಾರೆ. ಮಕ್ಕಳ ಮತ್ತು ಮಾನವ ಹಕ್ಕುಗಳ ಕುರಿತಾಗಿ ತಿಳಿವಳಿಕೆ ನೀಡಲು ಅನೇಕ ವೇದಿಕೆಗಳನ್ನು ಬಳಸಿಕೊಳ್ಳುತ್ತಾರೆ. ಹಾಗೆಯೇ ನೀಡುತ್ತಾರೆ ಕೂಡಾ.

ಇದರಿಂದಾಗಿ ಇವರಿಗೆ ಇರುವ ಜೀವ ಬೆದರಿಕೆ ಅಷ್ಟಿಷ್ಟಲ್ಲ. ಒಂದಲ್ಲಾ ಒಂದು ಬಗೆಯ ಆಕ್ರಮಣಕ್ಕೆ ತುತ್ತಾಗುತ್ತಲೇ ಇರುತ್ತಾರೆ. ಜೊತೆಗೆ ಇವರ ಕುಟುಂಬವೂ ಕೂಡ ಭೀತಿಯ ಜೀವನವನ್ನು ಸಾಗಿಸುತ್ತಿದೆ. ಸರ್ಕಾರ, ಪೊಲೀಸ್ ವ್ಯವಸ್ಥೆ, ನ್ಯಾಯಾಂಗ ವ್ಯವಸ್ಥೆ ಮತ್ತು ಮತೀಯ ನಾಗರಿಕರು ಎಲ್ಲರೂ ಇವರ ಮತ್ತು ಇವರಂತಹ ಮಾನವ ಹಕ್ಕುಗಳ ಹೋರಾಟಗಾರರ ವಿರುದ್ಧವೇ ಇದ್ದಾರೆ.

ಶಿರಿನ್ ಇಬಾದಿಯವರು ಮಾಡುವ ದ್ರೋಹಗಳಿವು ಎಂದು ಆರೋಪಿಸುವವರ ಪಟ್ಟಿಯಲ್ಲಿ ಏನೇನಿವೆ ನೋಡಿ.

1. ಇರಾನಿನ ಅಲ್ಪಸಂಖ್ಯಾತರಾಗಿರುವ ಬಹಾಯಿ ಶ್ರದ್ಧೆಯುಳ್ಳವರೊಂದಿಗೆ ಸಂಪರ್ಕವಿದೆ ಮತ್ತು ಅವರ ನಾಗರಿಕ ಹಕ್ಕುಗಳಿಗೆ ಹೋರಾಡುತ್ತಾರೆ.
2. ಸಲಿಂಗ ಕಾಮವನ್ನು ಸಮರ್ಥಿಸಿ ಸಲಿಂಗ ಕಾಮಿಗಳನ್ನು ಕಾನೂನಾತ್ಮಕವಾಗಿ ರಕ್ಷಿಸಲು ಮುಂದಾಗುತ್ತಾರೆ.
3. ಹಿಜಾಬ್ ಧರಿಸದೆಯೇ ಹೊರಗೆ ಬರುತ್ತಾರೆ ಮತ್ತು ತಮ್ಮ ಕಾರ್ಯಕ್ಷೇತ್ರಗಳಲ್ಲಿ ಸುತ್ತಾಡುತ್ತಾರೆ.
4. ಇಸ್ಲಾಂ ಕಾನೂನು ವಿಧಿಸುವ ಶಿಕ್ಷೆಗಳನ್ನು ಪ್ರಶ್ನಿಸುತ್ತಾರೆ.
5. ಇವರ ಮಗಳು ನರ್ಗೀಸ್ ಬಹಾಯಿ ಶ್ರದ್ಧೆಯನ್ನು ಅಂಗೀಕರಿಸಿ ಇಸ್ಲಾಮಿಕ್ ರಿಪಬ್ಲಿಕ್ ಪ್ರಕಾರ ಶಿಕ್ಷಾರ್ಹ ಅಪರಾಧವನ್ನು ಮಾಡಿದ್ದಾಳೆ.
ಇವುಗಳನ್ನು ಮುಂದಿಟ್ಟುಕೊಂಡು ಇರಾನಿ ಸರ್ಕಾರವು ಶಿರಿನ್‍ರವರ ಮಾನವ ಹಕ್ಕುಗಳ ಕಾರ್ಯಾಲಯವನ್ನು ಮುಚ್ಚಿಸಿತು. ತನ್ನ ಮೇಲಾಗುತ್ತಿರುವ ಎಲ್ಲಾ ಬಗೆಯ ದಾಳಿಗಳನ್ನೂ ಎದುರಿಸುತ್ತಾ ಶಿರಿನ್ ತಮ್ಮ ಹೋರಾಟಗಳನ್ನು ಮುಂದುವರೆಸಿದ್ದಾರೆ. 2018ರ ಸಂದರ್ಶನವೊಂದರಲ್ಲಿ ಅವರು ಹೇಳಿದ್ದೇನೆಂದರೆ, “ಇರಾನಿನಲ್ಲಿ ಇಸ್ಲಾಮಿಕ್ ರಿಪಬ್ಲಿಕನ್ನು ಯಾರೂ ಹೇಗೂ ಸರಿಪಡಿಸಲಾಗದು” ಎಂದು. ಇದು ಹತಾಶಾ ಭಾವವೋ ಅಥವಾ ಹದಿನೆಂಟನೆಯ ಶತಮಾನದ ಅಂತ್ಯದಿಂದ ನಡೆಯುತ್ತಿರುವ ಹೋರಾಟದ ಮುಂದುವರಿದ ಭಾಗವಾಗಿ ನುಡಿದ ಅನುಭವವೋ – ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...