Homeಚಳವಳಿಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿ ಶಿರಿನ್ ಇಬಾದಿಯ ಹೋರಾಟದ ಕಥೆ

ಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿ ಶಿರಿನ್ ಇಬಾದಿಯ ಹೋರಾಟದ ಕಥೆ

- Advertisement -
- Advertisement -

ತಮ್ಮ ಸಾಮರ್ಥ್ಯದಿಂದ ಶಿರಿನ್ ಇಬಾದಿ ಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿಯಾದರು. 1975ರಲ್ಲಿ ಇಸ್ಲಾಮಿಕ್ ರೆವಲ್ಯೂಶನ್ ಚುನಾವಣೆಯಲ್ಲಿ ಗೆದ್ದು ಬಂದಿತು. ಆಗ ಸಂಪ್ರದಾಯವಾದಿ ಧಾರ್ಮಿಕರು ಮಹಿಳೆಯು ನ್ಯಾಯಾಧೀಶೆಯಾಗಿರುವುದನ್ನು ವಿರೋಧಿಸಿ ಪ್ರತಿರೋಧ ಒಡ್ಡಿದರು. ನ್ಯಾಯಮೂರ್ತಿಯಾಗಿದ್ದವರನ್ನು ನ್ಯಾಯಾಲಯದಲ್ಲೇ ಗುಮಾಸ್ತೆಯಾಗಿರುವಂತೆ ಸೂಚಿಸಿತು.

ಇತ್ತೀಚೆಗೆ ಜೆಎನ್‍ಯುನಲ್ಲಿ ರಾಜಕೀಯ ಮತ್ತು ಮತೀಯ ಶಕ್ತಿಗಳು ಒಗ್ಗೂಡಿ ನಡೆಸಿದ ದಾಳಿಯಲ್ಲಿ ವಿದ್ಯಾರ್ಥಿ ಮುಂದಾಳು ಆಯಿಶಾ ಘೋಶ್ ಮತ್ತು ಇತರ ವಿದ್ಯಾರ್ಥಿಗಳು, ಹಾಗೂ ಪ್ರಾಧ್ಯಾಪಕರೂ ಗಾಯಗೊಂಡರು. ಅದರಂತೆಯೇ 1999ರಲ್ಲಿ ನಾಗರಿಕ ಪೋಷಾಕಿನ ರಾಜಕೀಯ ಶಕ್ತಿಗಳು ಟೆಹ್ರಾನ್ ವಿಶ್ವವಿದ್ಯಾಲಯದ ಹಾಸ್ಟೆಲ್ ಮೇಲೆ ದಾಳಿ ಮಾಡಿದ್ದವು. ಅವರ ಗುರಿ ಧರ್ಮಾತೀತವಾಗಿ ಮಾನವ ಹಕ್ಕುಗಳನ್ನು ಪ್ರತಿಪಾದಿಸುವ ಮತ್ತು ಕಟ್ಟರ್ ಚಾಳಿಯ ರಾಜಕೀಯ ವ್ಯವಸ್ಥೆಯನ್ನು ಪ್ರತಿಭಟಿಸುವ ಯುವ ಸಮೂಹದ ಮೇಲಾಗಿತ್ತು. ವಿದ್ಯಾರ್ಥಿ ದಂಗೆ ಎಂದು ತಿರುಚಲ್ಪಡುವ ಉದ್ದೇಶದಿಂದ ಕರೆಯಲಾದ ಆ ಆಕ್ರಮಣದಲ್ಲಿ ರಕ್ಷಣಾ ಸಿಬ್ಬಂದಿಯು ಇಜ್ಜತ್ ಇಬ್ರಾಹಿಂ ನಿಜಾಬ್ ಎಂಬ ವಿದ್ಯಾರ್ಥಿಯನ್ನು ಗುಂಡಿಟ್ಟು ಕೊಂದಿದ್ದೇ ಅಲ್ಲದೇ ಪೊಲೀಸರೆನಿಸಿಕೊಂಡವರೇ ಅತ್ಯಂತ ಹಿಂಸಾತ್ಮಕ ದಾಳಿಯನ್ನು ವಿದ್ಯಾರ್ಥಿಗಳ ಮೇಲೆ ನಡೆಸಿದರು. ಇಬ್ರಾಹಿಂನನ್ನು ಕೊಂದವರಾರೂ ವಿಚಾರಣೆಗೆ ಒಳಪಡಲಿಲ್ಲ ಮತ್ತು ಆ ಪೊಲೀಸರೂ ಕೂಡಾ ಕಾನೂನಿನಿಂದ ತಪ್ಪಿಸಿಕೊಂಡರು. ಇಬ್ರಾಹಿಂನ ಮನೆಯವರ ಪರವಾಗಿ ನಿಂತು ಪ್ರಕರಣವನ್ನು ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡಿದ್ದು ಶಿರಿನ್ ಇಬಾದಿ.

ಇಬ್ರಾಹಿಂನ ತಂದೆ ತಾಯಿ ಮತ್ತು ಕುಟುಂಬದ ಇತರ ಸದಸ್ಯರು ಶವವನ್ನೂ ಕೂಡಾ ನೋಡಲು ಬಿಡದಂತೆ ಗುಂಪುಗಳು ಅವರ ಮೇಲೆ ಕಲ್ಲುಗಳನ್ನು ತೂರಾಡುತ್ತಾ ದಾಳಿ ಮಾಡಿತ್ತು. ಅದಕ್ಕಾಗಿ ನೀವು ಮಗನ ಸಮಾಧಿಗೆ ಹೋಗಬೇಡಿ ಎಂದು ಸರ್ಕಾರ ಅವರ ಮೇಲೆ ನಿಷೇಧ ಹೇರಿದ್ದು ದುರದೃಷ್ಟಕರ.

ಇಂತಹ ಪ್ರಕರಣಗಳಿಗೆ ಬೆಂಬಲವಾಗಿ ಹೋರಾಡುವ ಮಾನವಹಕ್ಕುಗಳ ನ್ಯಾಯವಾದಿಯಾಗಿದ್ದ ಮತ್ತು ನೊಬಲ್ ಶಾಂತಿ ಪ್ರಶಸ್ತಿ ವಿಜೇತರಾದ ಎಪ್ಪತ್ತೆರಡು ವರ್ಷದ ಶಿರಿನ್ ಇಬಾದಿ ರಾಜಕೀಯ ಹೋರಾಟಗಾರ್ತಿ. ಪ್ರಜಾಪ್ರಭುತ್ವ ಮತ್ತು ಮಾನವಹಕ್ಕುಗಳಿಗಾಗಿ ಇರಾನಿನಲ್ಲಿ ಹೋರಾಡುತ್ತಿದ್ದಾರೆ. ಅದರಲ್ಲೂ ಮಹಿಳೆ, ಮಕ್ಕಳು ಮತ್ತು ನಿರ್ಗತಿಕ ವಲಸೆಗಾರರ ಹಕ್ಕುಗಳಿಗಾಗಿ ಹೋರಾಡಿದವರು. ಡಿಫೆಂಡರ್ಸ್ ಆಫ್ ಹ್ಯೂಮನ್ ರೈಟ್ಸ್ ಸೆಂಟರನ್ನು ಸ್ಥಾಪಿಸಿದರು. ನೊಬಲ್ ಪ್ರಶಸ್ತಿಯನ್ನು ಪಡೆದ ಮೊದಲ ಮುಸ್ಲಿಂ ಮಹಿಳೆ, ಅದರಲ್ಲೂ ಮೊದಲ ಇರಾನಿ ಮಹಿಳೆ (2003) ಅವರಾಗಿದ್ದರು. ಆದರೆ ಅವರು ಪಡೆದ ನೊಬಲ್ ಪ್ರಶಸ್ತಿ ಸಂಪ್ರದಾಯವಾದಿ ಮಾಧ್ಯಮಗಳಿಗೂ ಮತ್ತು ಸರಕಾರಕ್ಕೇನೂ ಖುಷಿಯಾಗಲಿಲ್ಲ. ಬದಲಾಗಿ ಇದೇ ಮೊದಲ ಬಾರಿಗೆ ಇರಾನಿ ಸರಕಾರವು ಪ್ರಶಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತು. ಟೆಹ್ರಾನಿನಲ್ಲಿ ನೆಲೆಸಿದ್ದ ಶಿರಿನ್ ಸರ್ಕಾರದ ಆಡಳಿತವನ್ನು ಟೀಕಿಸಿ ಅಲ್ಲಿನ ಜನರ ಉಪದ್ರವ ತಡೆಯಲಾರದೇ ಗಡಿಪಾರಾಗಿ ಇಂಗ್ಲೆಂಡಿನಲ್ಲಿ ಆಶ್ರಯ ಪಡೆದಿದ್ದರು. ಫೋಬ್ಸ್ ಪತ್ರಿಕೆ ಗುರುತಿಸಿದ್ದ ನೂರು ಪ್ರಭಾವಿ ಮಹಿಳೆಯರಲ್ಲಿ ಇವರೂ ಒಬ್ಬರು.

ತಮ್ಮ ಸಾಮರ್ಥ್ಯದಿಂದ ಇವರು ಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿಯಾದರು. 1975ರಲ್ಲಿ ಇಸ್ಲಾಮಿಕ್ ರೆವಲ್ಯೂಶನ್ ಚುನಾವಣೆಯಲ್ಲಿ ಗೆದ್ದು ಬಂದಿತು. ಆಗ ಸಂಪ್ರದಾಯವಾದಿ ಧಾರ್ಮಿಕರು ಮಹಿಳೆಯು ನ್ಯಾಯಾಧೀಶೆಯಾಗಿರುವುದನ್ನು ವಿರೋಧಿಸಿ ಪ್ರತಿರೋಧ ಒಡ್ಡಿದರು. ನ್ಯಾಯಮೂರ್ತಿಯಾಗಿದ್ದವರನ್ನು ನ್ಯಾಯಾಲಯದಲ್ಲೇ ಗುಮಾಸ್ತೆಯಾಗಿರುವಂತೆ ಸೂಚಿಸಿತು. ಆದರೆ ಶಿರಿನ್ ಮತ್ತು ಇತರ ಮಹಿಳಾ ನ್ಯಾಯಮೂರ್ತಿಗಳು ಕರ್ಮಠರ ವಿರುದ್ಧ ಪ್ರತಿಭಟನೆ ಮಾಡಿದರು. ಇವರ ಪ್ರತಿಭಟನೆಗೆ ಪ್ರತಿಯಾಗಿ ಆಡಳಿತ ವ್ಯವಸ್ಥೆಯು ನ್ಯಾಯಮೂರ್ತಿಗಳಾಗುವ ಬದಲು ಸ್ವಲ್ಪ ಉನ್ನತಸ್ಥಾನವಾದ ಕಾನೂನುತಜ್ಞರ ಪದವಿಗೆ ಇವರನ್ನು ಸೀಮಿತಗೊಳಿಸಿತು. ಸ್ವಯಂನಿವೃತ್ತಿ ಘೋಷಿಸಿಕೊಂಡ ಶಿರಿನ್ ಬದಲಾಗದ ಆಡಳಿತ ವ್ಯವಸ್ಥೆಯಿಂದ ಹೊರಗೆ ಬಂದರು. ಆದರೆ ಅವರು ನ್ಯಾಯವಾದಿಯಾಗಿ ಮುಂದುವರಿಯಲು ಅವರಿಗೆ ಅವಕಾಶ ಕೊಡಲಿಲ್ಲ. ಅದಕ್ಕಾಗಿ ಅವರು ಸಲ್ಲಿಸುತ್ತಿದ್ದ ಅರ್ಜಿಗಳನ್ನು ಪದೇಪದೇ ತಿರಸ್ಕರಿಸಲಾಯಿತು. ಆದರೆ ಅವರು 1993ರಲ್ಲಿ ತಮ್ಮ ವಕೀಲರ ಕಚೇರಿಯನ್ನು ತೆರೆದಿದ್ದರು. ನ್ಯಾಯವಾದಿಯಾಗಿ ತಾವು ತಿರಸ್ಕೃತರಾಗಿದ್ದ ಆ ಸಮಯವನ್ನು ಪತ್ರಿಕೆಗಳಿಗೆ ಲೇಖನಗಳನ್ನು ಬರೆಯಲು ಮತ್ತು ಪುಸ್ತಕ ಬರೆಯಲು ಉಪಯೋಗಿಸಿಕೊಂಡರು.

ವಕೀಲೆಯಾಗಿ ಕೇಸುಗಳನ್ನು ಅವರು ತೆಗೆದುಕೊಂಡಿದ್ದು ಹೆಚ್ಚಾಗಿ ಮಕ್ಕಳ ಮತ್ತು ಹೆಂಗಸರ ಕುರಿತಾದ ಅಂತರಾಷ್ಟ್ರೀಯ ಪ್ರಕರಣಗಳನ್ನು ಮತ್ತು ಪತ್ರಿಕೆಗಳು ಎದುರಿಸುತ್ತಿದ್ದ ಪ್ರಕರಣಗಳನ್ನು. ಜೊತೆಯಲ್ಲಿ ಮಾನವ ಹಕ್ಕಿನ ವಿಷಯವಾಗಿ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದ್ದರು. ಟೆಹರಾನಿನ ಯುನಿಸೆಫ್ ಪ್ರಾಯೋಜಕತ್ವದಲ್ಲಿ ಅನೇಕ ಯೋಜನೆಗಳನ್ನು ಮಾಡಿದ್ದಾರೆ. ಮಕ್ಕಳ ಮತ್ತು ಮಾನವ ಹಕ್ಕುಗಳ ಕುರಿತಾಗಿ ತಿಳಿವಳಿಕೆ ನೀಡಲು ಅನೇಕ ವೇದಿಕೆಗಳನ್ನು ಬಳಸಿಕೊಳ್ಳುತ್ತಾರೆ. ಹಾಗೆಯೇ ನೀಡುತ್ತಾರೆ ಕೂಡಾ.

ಇದರಿಂದಾಗಿ ಇವರಿಗೆ ಇರುವ ಜೀವ ಬೆದರಿಕೆ ಅಷ್ಟಿಷ್ಟಲ್ಲ. ಒಂದಲ್ಲಾ ಒಂದು ಬಗೆಯ ಆಕ್ರಮಣಕ್ಕೆ ತುತ್ತಾಗುತ್ತಲೇ ಇರುತ್ತಾರೆ. ಜೊತೆಗೆ ಇವರ ಕುಟುಂಬವೂ ಕೂಡ ಭೀತಿಯ ಜೀವನವನ್ನು ಸಾಗಿಸುತ್ತಿದೆ. ಸರ್ಕಾರ, ಪೊಲೀಸ್ ವ್ಯವಸ್ಥೆ, ನ್ಯಾಯಾಂಗ ವ್ಯವಸ್ಥೆ ಮತ್ತು ಮತೀಯ ನಾಗರಿಕರು ಎಲ್ಲರೂ ಇವರ ಮತ್ತು ಇವರಂತಹ ಮಾನವ ಹಕ್ಕುಗಳ ಹೋರಾಟಗಾರರ ವಿರುದ್ಧವೇ ಇದ್ದಾರೆ.

ಶಿರಿನ್ ಇಬಾದಿಯವರು ಮಾಡುವ ದ್ರೋಹಗಳಿವು ಎಂದು ಆರೋಪಿಸುವವರ ಪಟ್ಟಿಯಲ್ಲಿ ಏನೇನಿವೆ ನೋಡಿ.

1. ಇರಾನಿನ ಅಲ್ಪಸಂಖ್ಯಾತರಾಗಿರುವ ಬಹಾಯಿ ಶ್ರದ್ಧೆಯುಳ್ಳವರೊಂದಿಗೆ ಸಂಪರ್ಕವಿದೆ ಮತ್ತು ಅವರ ನಾಗರಿಕ ಹಕ್ಕುಗಳಿಗೆ ಹೋರಾಡುತ್ತಾರೆ.
2. ಸಲಿಂಗ ಕಾಮವನ್ನು ಸಮರ್ಥಿಸಿ ಸಲಿಂಗ ಕಾಮಿಗಳನ್ನು ಕಾನೂನಾತ್ಮಕವಾಗಿ ರಕ್ಷಿಸಲು ಮುಂದಾಗುತ್ತಾರೆ.
3. ಹಿಜಾಬ್ ಧರಿಸದೆಯೇ ಹೊರಗೆ ಬರುತ್ತಾರೆ ಮತ್ತು ತಮ್ಮ ಕಾರ್ಯಕ್ಷೇತ್ರಗಳಲ್ಲಿ ಸುತ್ತಾಡುತ್ತಾರೆ.
4. ಇಸ್ಲಾಂ ಕಾನೂನು ವಿಧಿಸುವ ಶಿಕ್ಷೆಗಳನ್ನು ಪ್ರಶ್ನಿಸುತ್ತಾರೆ.
5. ಇವರ ಮಗಳು ನರ್ಗೀಸ್ ಬಹಾಯಿ ಶ್ರದ್ಧೆಯನ್ನು ಅಂಗೀಕರಿಸಿ ಇಸ್ಲಾಮಿಕ್ ರಿಪಬ್ಲಿಕ್ ಪ್ರಕಾರ ಶಿಕ್ಷಾರ್ಹ ಅಪರಾಧವನ್ನು ಮಾಡಿದ್ದಾಳೆ.
ಇವುಗಳನ್ನು ಮುಂದಿಟ್ಟುಕೊಂಡು ಇರಾನಿ ಸರ್ಕಾರವು ಶಿರಿನ್‍ರವರ ಮಾನವ ಹಕ್ಕುಗಳ ಕಾರ್ಯಾಲಯವನ್ನು ಮುಚ್ಚಿಸಿತು. ತನ್ನ ಮೇಲಾಗುತ್ತಿರುವ ಎಲ್ಲಾ ಬಗೆಯ ದಾಳಿಗಳನ್ನೂ ಎದುರಿಸುತ್ತಾ ಶಿರಿನ್ ತಮ್ಮ ಹೋರಾಟಗಳನ್ನು ಮುಂದುವರೆಸಿದ್ದಾರೆ. 2018ರ ಸಂದರ್ಶನವೊಂದರಲ್ಲಿ ಅವರು ಹೇಳಿದ್ದೇನೆಂದರೆ, “ಇರಾನಿನಲ್ಲಿ ಇಸ್ಲಾಮಿಕ್ ರಿಪಬ್ಲಿಕನ್ನು ಯಾರೂ ಹೇಗೂ ಸರಿಪಡಿಸಲಾಗದು” ಎಂದು. ಇದು ಹತಾಶಾ ಭಾವವೋ ಅಥವಾ ಹದಿನೆಂಟನೆಯ ಶತಮಾನದ ಅಂತ್ಯದಿಂದ ನಡೆಯುತ್ತಿರುವ ಹೋರಾಟದ ಮುಂದುವರಿದ ಭಾಗವಾಗಿ ನುಡಿದ ಅನುಭವವೋ – ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...