Homeಚಳವಳಿಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿ ಶಿರಿನ್ ಇಬಾದಿಯ ಹೋರಾಟದ ಕಥೆ

ಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿ ಶಿರಿನ್ ಇಬಾದಿಯ ಹೋರಾಟದ ಕಥೆ

- Advertisement -
- Advertisement -

ತಮ್ಮ ಸಾಮರ್ಥ್ಯದಿಂದ ಶಿರಿನ್ ಇಬಾದಿ ಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿಯಾದರು. 1975ರಲ್ಲಿ ಇಸ್ಲಾಮಿಕ್ ರೆವಲ್ಯೂಶನ್ ಚುನಾವಣೆಯಲ್ಲಿ ಗೆದ್ದು ಬಂದಿತು. ಆಗ ಸಂಪ್ರದಾಯವಾದಿ ಧಾರ್ಮಿಕರು ಮಹಿಳೆಯು ನ್ಯಾಯಾಧೀಶೆಯಾಗಿರುವುದನ್ನು ವಿರೋಧಿಸಿ ಪ್ರತಿರೋಧ ಒಡ್ಡಿದರು. ನ್ಯಾಯಮೂರ್ತಿಯಾಗಿದ್ದವರನ್ನು ನ್ಯಾಯಾಲಯದಲ್ಲೇ ಗುಮಾಸ್ತೆಯಾಗಿರುವಂತೆ ಸೂಚಿಸಿತು.

ಇತ್ತೀಚೆಗೆ ಜೆಎನ್‍ಯುನಲ್ಲಿ ರಾಜಕೀಯ ಮತ್ತು ಮತೀಯ ಶಕ್ತಿಗಳು ಒಗ್ಗೂಡಿ ನಡೆಸಿದ ದಾಳಿಯಲ್ಲಿ ವಿದ್ಯಾರ್ಥಿ ಮುಂದಾಳು ಆಯಿಶಾ ಘೋಶ್ ಮತ್ತು ಇತರ ವಿದ್ಯಾರ್ಥಿಗಳು, ಹಾಗೂ ಪ್ರಾಧ್ಯಾಪಕರೂ ಗಾಯಗೊಂಡರು. ಅದರಂತೆಯೇ 1999ರಲ್ಲಿ ನಾಗರಿಕ ಪೋಷಾಕಿನ ರಾಜಕೀಯ ಶಕ್ತಿಗಳು ಟೆಹ್ರಾನ್ ವಿಶ್ವವಿದ್ಯಾಲಯದ ಹಾಸ್ಟೆಲ್ ಮೇಲೆ ದಾಳಿ ಮಾಡಿದ್ದವು. ಅವರ ಗುರಿ ಧರ್ಮಾತೀತವಾಗಿ ಮಾನವ ಹಕ್ಕುಗಳನ್ನು ಪ್ರತಿಪಾದಿಸುವ ಮತ್ತು ಕಟ್ಟರ್ ಚಾಳಿಯ ರಾಜಕೀಯ ವ್ಯವಸ್ಥೆಯನ್ನು ಪ್ರತಿಭಟಿಸುವ ಯುವ ಸಮೂಹದ ಮೇಲಾಗಿತ್ತು. ವಿದ್ಯಾರ್ಥಿ ದಂಗೆ ಎಂದು ತಿರುಚಲ್ಪಡುವ ಉದ್ದೇಶದಿಂದ ಕರೆಯಲಾದ ಆ ಆಕ್ರಮಣದಲ್ಲಿ ರಕ್ಷಣಾ ಸಿಬ್ಬಂದಿಯು ಇಜ್ಜತ್ ಇಬ್ರಾಹಿಂ ನಿಜಾಬ್ ಎಂಬ ವಿದ್ಯಾರ್ಥಿಯನ್ನು ಗುಂಡಿಟ್ಟು ಕೊಂದಿದ್ದೇ ಅಲ್ಲದೇ ಪೊಲೀಸರೆನಿಸಿಕೊಂಡವರೇ ಅತ್ಯಂತ ಹಿಂಸಾತ್ಮಕ ದಾಳಿಯನ್ನು ವಿದ್ಯಾರ್ಥಿಗಳ ಮೇಲೆ ನಡೆಸಿದರು. ಇಬ್ರಾಹಿಂನನ್ನು ಕೊಂದವರಾರೂ ವಿಚಾರಣೆಗೆ ಒಳಪಡಲಿಲ್ಲ ಮತ್ತು ಆ ಪೊಲೀಸರೂ ಕೂಡಾ ಕಾನೂನಿನಿಂದ ತಪ್ಪಿಸಿಕೊಂಡರು. ಇಬ್ರಾಹಿಂನ ಮನೆಯವರ ಪರವಾಗಿ ನಿಂತು ಪ್ರಕರಣವನ್ನು ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡಿದ್ದು ಶಿರಿನ್ ಇಬಾದಿ.

ಇಬ್ರಾಹಿಂನ ತಂದೆ ತಾಯಿ ಮತ್ತು ಕುಟುಂಬದ ಇತರ ಸದಸ್ಯರು ಶವವನ್ನೂ ಕೂಡಾ ನೋಡಲು ಬಿಡದಂತೆ ಗುಂಪುಗಳು ಅವರ ಮೇಲೆ ಕಲ್ಲುಗಳನ್ನು ತೂರಾಡುತ್ತಾ ದಾಳಿ ಮಾಡಿತ್ತು. ಅದಕ್ಕಾಗಿ ನೀವು ಮಗನ ಸಮಾಧಿಗೆ ಹೋಗಬೇಡಿ ಎಂದು ಸರ್ಕಾರ ಅವರ ಮೇಲೆ ನಿಷೇಧ ಹೇರಿದ್ದು ದುರದೃಷ್ಟಕರ.

ಇಂತಹ ಪ್ರಕರಣಗಳಿಗೆ ಬೆಂಬಲವಾಗಿ ಹೋರಾಡುವ ಮಾನವಹಕ್ಕುಗಳ ನ್ಯಾಯವಾದಿಯಾಗಿದ್ದ ಮತ್ತು ನೊಬಲ್ ಶಾಂತಿ ಪ್ರಶಸ್ತಿ ವಿಜೇತರಾದ ಎಪ್ಪತ್ತೆರಡು ವರ್ಷದ ಶಿರಿನ್ ಇಬಾದಿ ರಾಜಕೀಯ ಹೋರಾಟಗಾರ್ತಿ. ಪ್ರಜಾಪ್ರಭುತ್ವ ಮತ್ತು ಮಾನವಹಕ್ಕುಗಳಿಗಾಗಿ ಇರಾನಿನಲ್ಲಿ ಹೋರಾಡುತ್ತಿದ್ದಾರೆ. ಅದರಲ್ಲೂ ಮಹಿಳೆ, ಮಕ್ಕಳು ಮತ್ತು ನಿರ್ಗತಿಕ ವಲಸೆಗಾರರ ಹಕ್ಕುಗಳಿಗಾಗಿ ಹೋರಾಡಿದವರು. ಡಿಫೆಂಡರ್ಸ್ ಆಫ್ ಹ್ಯೂಮನ್ ರೈಟ್ಸ್ ಸೆಂಟರನ್ನು ಸ್ಥಾಪಿಸಿದರು. ನೊಬಲ್ ಪ್ರಶಸ್ತಿಯನ್ನು ಪಡೆದ ಮೊದಲ ಮುಸ್ಲಿಂ ಮಹಿಳೆ, ಅದರಲ್ಲೂ ಮೊದಲ ಇರಾನಿ ಮಹಿಳೆ (2003) ಅವರಾಗಿದ್ದರು. ಆದರೆ ಅವರು ಪಡೆದ ನೊಬಲ್ ಪ್ರಶಸ್ತಿ ಸಂಪ್ರದಾಯವಾದಿ ಮಾಧ್ಯಮಗಳಿಗೂ ಮತ್ತು ಸರಕಾರಕ್ಕೇನೂ ಖುಷಿಯಾಗಲಿಲ್ಲ. ಬದಲಾಗಿ ಇದೇ ಮೊದಲ ಬಾರಿಗೆ ಇರಾನಿ ಸರಕಾರವು ಪ್ರಶಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತು. ಟೆಹ್ರಾನಿನಲ್ಲಿ ನೆಲೆಸಿದ್ದ ಶಿರಿನ್ ಸರ್ಕಾರದ ಆಡಳಿತವನ್ನು ಟೀಕಿಸಿ ಅಲ್ಲಿನ ಜನರ ಉಪದ್ರವ ತಡೆಯಲಾರದೇ ಗಡಿಪಾರಾಗಿ ಇಂಗ್ಲೆಂಡಿನಲ್ಲಿ ಆಶ್ರಯ ಪಡೆದಿದ್ದರು. ಫೋಬ್ಸ್ ಪತ್ರಿಕೆ ಗುರುತಿಸಿದ್ದ ನೂರು ಪ್ರಭಾವಿ ಮಹಿಳೆಯರಲ್ಲಿ ಇವರೂ ಒಬ್ಬರು.

ತಮ್ಮ ಸಾಮರ್ಥ್ಯದಿಂದ ಇವರು ಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿಯಾದರು. 1975ರಲ್ಲಿ ಇಸ್ಲಾಮಿಕ್ ರೆವಲ್ಯೂಶನ್ ಚುನಾವಣೆಯಲ್ಲಿ ಗೆದ್ದು ಬಂದಿತು. ಆಗ ಸಂಪ್ರದಾಯವಾದಿ ಧಾರ್ಮಿಕರು ಮಹಿಳೆಯು ನ್ಯಾಯಾಧೀಶೆಯಾಗಿರುವುದನ್ನು ವಿರೋಧಿಸಿ ಪ್ರತಿರೋಧ ಒಡ್ಡಿದರು. ನ್ಯಾಯಮೂರ್ತಿಯಾಗಿದ್ದವರನ್ನು ನ್ಯಾಯಾಲಯದಲ್ಲೇ ಗುಮಾಸ್ತೆಯಾಗಿರುವಂತೆ ಸೂಚಿಸಿತು. ಆದರೆ ಶಿರಿನ್ ಮತ್ತು ಇತರ ಮಹಿಳಾ ನ್ಯಾಯಮೂರ್ತಿಗಳು ಕರ್ಮಠರ ವಿರುದ್ಧ ಪ್ರತಿಭಟನೆ ಮಾಡಿದರು. ಇವರ ಪ್ರತಿಭಟನೆಗೆ ಪ್ರತಿಯಾಗಿ ಆಡಳಿತ ವ್ಯವಸ್ಥೆಯು ನ್ಯಾಯಮೂರ್ತಿಗಳಾಗುವ ಬದಲು ಸ್ವಲ್ಪ ಉನ್ನತಸ್ಥಾನವಾದ ಕಾನೂನುತಜ್ಞರ ಪದವಿಗೆ ಇವರನ್ನು ಸೀಮಿತಗೊಳಿಸಿತು. ಸ್ವಯಂನಿವೃತ್ತಿ ಘೋಷಿಸಿಕೊಂಡ ಶಿರಿನ್ ಬದಲಾಗದ ಆಡಳಿತ ವ್ಯವಸ್ಥೆಯಿಂದ ಹೊರಗೆ ಬಂದರು. ಆದರೆ ಅವರು ನ್ಯಾಯವಾದಿಯಾಗಿ ಮುಂದುವರಿಯಲು ಅವರಿಗೆ ಅವಕಾಶ ಕೊಡಲಿಲ್ಲ. ಅದಕ್ಕಾಗಿ ಅವರು ಸಲ್ಲಿಸುತ್ತಿದ್ದ ಅರ್ಜಿಗಳನ್ನು ಪದೇಪದೇ ತಿರಸ್ಕರಿಸಲಾಯಿತು. ಆದರೆ ಅವರು 1993ರಲ್ಲಿ ತಮ್ಮ ವಕೀಲರ ಕಚೇರಿಯನ್ನು ತೆರೆದಿದ್ದರು. ನ್ಯಾಯವಾದಿಯಾಗಿ ತಾವು ತಿರಸ್ಕೃತರಾಗಿದ್ದ ಆ ಸಮಯವನ್ನು ಪತ್ರಿಕೆಗಳಿಗೆ ಲೇಖನಗಳನ್ನು ಬರೆಯಲು ಮತ್ತು ಪುಸ್ತಕ ಬರೆಯಲು ಉಪಯೋಗಿಸಿಕೊಂಡರು.

ವಕೀಲೆಯಾಗಿ ಕೇಸುಗಳನ್ನು ಅವರು ತೆಗೆದುಕೊಂಡಿದ್ದು ಹೆಚ್ಚಾಗಿ ಮಕ್ಕಳ ಮತ್ತು ಹೆಂಗಸರ ಕುರಿತಾದ ಅಂತರಾಷ್ಟ್ರೀಯ ಪ್ರಕರಣಗಳನ್ನು ಮತ್ತು ಪತ್ರಿಕೆಗಳು ಎದುರಿಸುತ್ತಿದ್ದ ಪ್ರಕರಣಗಳನ್ನು. ಜೊತೆಯಲ್ಲಿ ಮಾನವ ಹಕ್ಕಿನ ವಿಷಯವಾಗಿ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದ್ದರು. ಟೆಹರಾನಿನ ಯುನಿಸೆಫ್ ಪ್ರಾಯೋಜಕತ್ವದಲ್ಲಿ ಅನೇಕ ಯೋಜನೆಗಳನ್ನು ಮಾಡಿದ್ದಾರೆ. ಮಕ್ಕಳ ಮತ್ತು ಮಾನವ ಹಕ್ಕುಗಳ ಕುರಿತಾಗಿ ತಿಳಿವಳಿಕೆ ನೀಡಲು ಅನೇಕ ವೇದಿಕೆಗಳನ್ನು ಬಳಸಿಕೊಳ್ಳುತ್ತಾರೆ. ಹಾಗೆಯೇ ನೀಡುತ್ತಾರೆ ಕೂಡಾ.

ಇದರಿಂದಾಗಿ ಇವರಿಗೆ ಇರುವ ಜೀವ ಬೆದರಿಕೆ ಅಷ್ಟಿಷ್ಟಲ್ಲ. ಒಂದಲ್ಲಾ ಒಂದು ಬಗೆಯ ಆಕ್ರಮಣಕ್ಕೆ ತುತ್ತಾಗುತ್ತಲೇ ಇರುತ್ತಾರೆ. ಜೊತೆಗೆ ಇವರ ಕುಟುಂಬವೂ ಕೂಡ ಭೀತಿಯ ಜೀವನವನ್ನು ಸಾಗಿಸುತ್ತಿದೆ. ಸರ್ಕಾರ, ಪೊಲೀಸ್ ವ್ಯವಸ್ಥೆ, ನ್ಯಾಯಾಂಗ ವ್ಯವಸ್ಥೆ ಮತ್ತು ಮತೀಯ ನಾಗರಿಕರು ಎಲ್ಲರೂ ಇವರ ಮತ್ತು ಇವರಂತಹ ಮಾನವ ಹಕ್ಕುಗಳ ಹೋರಾಟಗಾರರ ವಿರುದ್ಧವೇ ಇದ್ದಾರೆ.

ಶಿರಿನ್ ಇಬಾದಿಯವರು ಮಾಡುವ ದ್ರೋಹಗಳಿವು ಎಂದು ಆರೋಪಿಸುವವರ ಪಟ್ಟಿಯಲ್ಲಿ ಏನೇನಿವೆ ನೋಡಿ.

1. ಇರಾನಿನ ಅಲ್ಪಸಂಖ್ಯಾತರಾಗಿರುವ ಬಹಾಯಿ ಶ್ರದ್ಧೆಯುಳ್ಳವರೊಂದಿಗೆ ಸಂಪರ್ಕವಿದೆ ಮತ್ತು ಅವರ ನಾಗರಿಕ ಹಕ್ಕುಗಳಿಗೆ ಹೋರಾಡುತ್ತಾರೆ.
2. ಸಲಿಂಗ ಕಾಮವನ್ನು ಸಮರ್ಥಿಸಿ ಸಲಿಂಗ ಕಾಮಿಗಳನ್ನು ಕಾನೂನಾತ್ಮಕವಾಗಿ ರಕ್ಷಿಸಲು ಮುಂದಾಗುತ್ತಾರೆ.
3. ಹಿಜಾಬ್ ಧರಿಸದೆಯೇ ಹೊರಗೆ ಬರುತ್ತಾರೆ ಮತ್ತು ತಮ್ಮ ಕಾರ್ಯಕ್ಷೇತ್ರಗಳಲ್ಲಿ ಸುತ್ತಾಡುತ್ತಾರೆ.
4. ಇಸ್ಲಾಂ ಕಾನೂನು ವಿಧಿಸುವ ಶಿಕ್ಷೆಗಳನ್ನು ಪ್ರಶ್ನಿಸುತ್ತಾರೆ.
5. ಇವರ ಮಗಳು ನರ್ಗೀಸ್ ಬಹಾಯಿ ಶ್ರದ್ಧೆಯನ್ನು ಅಂಗೀಕರಿಸಿ ಇಸ್ಲಾಮಿಕ್ ರಿಪಬ್ಲಿಕ್ ಪ್ರಕಾರ ಶಿಕ್ಷಾರ್ಹ ಅಪರಾಧವನ್ನು ಮಾಡಿದ್ದಾಳೆ.
ಇವುಗಳನ್ನು ಮುಂದಿಟ್ಟುಕೊಂಡು ಇರಾನಿ ಸರ್ಕಾರವು ಶಿರಿನ್‍ರವರ ಮಾನವ ಹಕ್ಕುಗಳ ಕಾರ್ಯಾಲಯವನ್ನು ಮುಚ್ಚಿಸಿತು. ತನ್ನ ಮೇಲಾಗುತ್ತಿರುವ ಎಲ್ಲಾ ಬಗೆಯ ದಾಳಿಗಳನ್ನೂ ಎದುರಿಸುತ್ತಾ ಶಿರಿನ್ ತಮ್ಮ ಹೋರಾಟಗಳನ್ನು ಮುಂದುವರೆಸಿದ್ದಾರೆ. 2018ರ ಸಂದರ್ಶನವೊಂದರಲ್ಲಿ ಅವರು ಹೇಳಿದ್ದೇನೆಂದರೆ, “ಇರಾನಿನಲ್ಲಿ ಇಸ್ಲಾಮಿಕ್ ರಿಪಬ್ಲಿಕನ್ನು ಯಾರೂ ಹೇಗೂ ಸರಿಪಡಿಸಲಾಗದು” ಎಂದು. ಇದು ಹತಾಶಾ ಭಾವವೋ ಅಥವಾ ಹದಿನೆಂಟನೆಯ ಶತಮಾನದ ಅಂತ್ಯದಿಂದ ನಡೆಯುತ್ತಿರುವ ಹೋರಾಟದ ಮುಂದುವರಿದ ಭಾಗವಾಗಿ ನುಡಿದ ಅನುಭವವೋ – ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...