Homeಚಳವಳಿಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿ ಶಿರಿನ್ ಇಬಾದಿಯ ಹೋರಾಟದ ಕಥೆ

ಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿ ಶಿರಿನ್ ಇಬಾದಿಯ ಹೋರಾಟದ ಕಥೆ

- Advertisement -
- Advertisement -

ತಮ್ಮ ಸಾಮರ್ಥ್ಯದಿಂದ ಶಿರಿನ್ ಇಬಾದಿ ಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿಯಾದರು. 1975ರಲ್ಲಿ ಇಸ್ಲಾಮಿಕ್ ರೆವಲ್ಯೂಶನ್ ಚುನಾವಣೆಯಲ್ಲಿ ಗೆದ್ದು ಬಂದಿತು. ಆಗ ಸಂಪ್ರದಾಯವಾದಿ ಧಾರ್ಮಿಕರು ಮಹಿಳೆಯು ನ್ಯಾಯಾಧೀಶೆಯಾಗಿರುವುದನ್ನು ವಿರೋಧಿಸಿ ಪ್ರತಿರೋಧ ಒಡ್ಡಿದರು. ನ್ಯಾಯಮೂರ್ತಿಯಾಗಿದ್ದವರನ್ನು ನ್ಯಾಯಾಲಯದಲ್ಲೇ ಗುಮಾಸ್ತೆಯಾಗಿರುವಂತೆ ಸೂಚಿಸಿತು.

ಇತ್ತೀಚೆಗೆ ಜೆಎನ್‍ಯುನಲ್ಲಿ ರಾಜಕೀಯ ಮತ್ತು ಮತೀಯ ಶಕ್ತಿಗಳು ಒಗ್ಗೂಡಿ ನಡೆಸಿದ ದಾಳಿಯಲ್ಲಿ ವಿದ್ಯಾರ್ಥಿ ಮುಂದಾಳು ಆಯಿಶಾ ಘೋಶ್ ಮತ್ತು ಇತರ ವಿದ್ಯಾರ್ಥಿಗಳು, ಹಾಗೂ ಪ್ರಾಧ್ಯಾಪಕರೂ ಗಾಯಗೊಂಡರು. ಅದರಂತೆಯೇ 1999ರಲ್ಲಿ ನಾಗರಿಕ ಪೋಷಾಕಿನ ರಾಜಕೀಯ ಶಕ್ತಿಗಳು ಟೆಹ್ರಾನ್ ವಿಶ್ವವಿದ್ಯಾಲಯದ ಹಾಸ್ಟೆಲ್ ಮೇಲೆ ದಾಳಿ ಮಾಡಿದ್ದವು. ಅವರ ಗುರಿ ಧರ್ಮಾತೀತವಾಗಿ ಮಾನವ ಹಕ್ಕುಗಳನ್ನು ಪ್ರತಿಪಾದಿಸುವ ಮತ್ತು ಕಟ್ಟರ್ ಚಾಳಿಯ ರಾಜಕೀಯ ವ್ಯವಸ್ಥೆಯನ್ನು ಪ್ರತಿಭಟಿಸುವ ಯುವ ಸಮೂಹದ ಮೇಲಾಗಿತ್ತು. ವಿದ್ಯಾರ್ಥಿ ದಂಗೆ ಎಂದು ತಿರುಚಲ್ಪಡುವ ಉದ್ದೇಶದಿಂದ ಕರೆಯಲಾದ ಆ ಆಕ್ರಮಣದಲ್ಲಿ ರಕ್ಷಣಾ ಸಿಬ್ಬಂದಿಯು ಇಜ್ಜತ್ ಇಬ್ರಾಹಿಂ ನಿಜಾಬ್ ಎಂಬ ವಿದ್ಯಾರ್ಥಿಯನ್ನು ಗುಂಡಿಟ್ಟು ಕೊಂದಿದ್ದೇ ಅಲ್ಲದೇ ಪೊಲೀಸರೆನಿಸಿಕೊಂಡವರೇ ಅತ್ಯಂತ ಹಿಂಸಾತ್ಮಕ ದಾಳಿಯನ್ನು ವಿದ್ಯಾರ್ಥಿಗಳ ಮೇಲೆ ನಡೆಸಿದರು. ಇಬ್ರಾಹಿಂನನ್ನು ಕೊಂದವರಾರೂ ವಿಚಾರಣೆಗೆ ಒಳಪಡಲಿಲ್ಲ ಮತ್ತು ಆ ಪೊಲೀಸರೂ ಕೂಡಾ ಕಾನೂನಿನಿಂದ ತಪ್ಪಿಸಿಕೊಂಡರು. ಇಬ್ರಾಹಿಂನ ಮನೆಯವರ ಪರವಾಗಿ ನಿಂತು ಪ್ರಕರಣವನ್ನು ನ್ಯಾಯಾಲಯದಲ್ಲಿ ನ್ಯಾಯಕ್ಕಾಗಿ ಹೋರಾಡಿದ್ದು ಶಿರಿನ್ ಇಬಾದಿ.

ಇಬ್ರಾಹಿಂನ ತಂದೆ ತಾಯಿ ಮತ್ತು ಕುಟುಂಬದ ಇತರ ಸದಸ್ಯರು ಶವವನ್ನೂ ಕೂಡಾ ನೋಡಲು ಬಿಡದಂತೆ ಗುಂಪುಗಳು ಅವರ ಮೇಲೆ ಕಲ್ಲುಗಳನ್ನು ತೂರಾಡುತ್ತಾ ದಾಳಿ ಮಾಡಿತ್ತು. ಅದಕ್ಕಾಗಿ ನೀವು ಮಗನ ಸಮಾಧಿಗೆ ಹೋಗಬೇಡಿ ಎಂದು ಸರ್ಕಾರ ಅವರ ಮೇಲೆ ನಿಷೇಧ ಹೇರಿದ್ದು ದುರದೃಷ್ಟಕರ.

ಇಂತಹ ಪ್ರಕರಣಗಳಿಗೆ ಬೆಂಬಲವಾಗಿ ಹೋರಾಡುವ ಮಾನವಹಕ್ಕುಗಳ ನ್ಯಾಯವಾದಿಯಾಗಿದ್ದ ಮತ್ತು ನೊಬಲ್ ಶಾಂತಿ ಪ್ರಶಸ್ತಿ ವಿಜೇತರಾದ ಎಪ್ಪತ್ತೆರಡು ವರ್ಷದ ಶಿರಿನ್ ಇಬಾದಿ ರಾಜಕೀಯ ಹೋರಾಟಗಾರ್ತಿ. ಪ್ರಜಾಪ್ರಭುತ್ವ ಮತ್ತು ಮಾನವಹಕ್ಕುಗಳಿಗಾಗಿ ಇರಾನಿನಲ್ಲಿ ಹೋರಾಡುತ್ತಿದ್ದಾರೆ. ಅದರಲ್ಲೂ ಮಹಿಳೆ, ಮಕ್ಕಳು ಮತ್ತು ನಿರ್ಗತಿಕ ವಲಸೆಗಾರರ ಹಕ್ಕುಗಳಿಗಾಗಿ ಹೋರಾಡಿದವರು. ಡಿಫೆಂಡರ್ಸ್ ಆಫ್ ಹ್ಯೂಮನ್ ರೈಟ್ಸ್ ಸೆಂಟರನ್ನು ಸ್ಥಾಪಿಸಿದರು. ನೊಬಲ್ ಪ್ರಶಸ್ತಿಯನ್ನು ಪಡೆದ ಮೊದಲ ಮುಸ್ಲಿಂ ಮಹಿಳೆ, ಅದರಲ್ಲೂ ಮೊದಲ ಇರಾನಿ ಮಹಿಳೆ (2003) ಅವರಾಗಿದ್ದರು. ಆದರೆ ಅವರು ಪಡೆದ ನೊಬಲ್ ಪ್ರಶಸ್ತಿ ಸಂಪ್ರದಾಯವಾದಿ ಮಾಧ್ಯಮಗಳಿಗೂ ಮತ್ತು ಸರಕಾರಕ್ಕೇನೂ ಖುಷಿಯಾಗಲಿಲ್ಲ. ಬದಲಾಗಿ ಇದೇ ಮೊದಲ ಬಾರಿಗೆ ಇರಾನಿ ಸರಕಾರವು ಪ್ರಶಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತು. ಟೆಹ್ರಾನಿನಲ್ಲಿ ನೆಲೆಸಿದ್ದ ಶಿರಿನ್ ಸರ್ಕಾರದ ಆಡಳಿತವನ್ನು ಟೀಕಿಸಿ ಅಲ್ಲಿನ ಜನರ ಉಪದ್ರವ ತಡೆಯಲಾರದೇ ಗಡಿಪಾರಾಗಿ ಇಂಗ್ಲೆಂಡಿನಲ್ಲಿ ಆಶ್ರಯ ಪಡೆದಿದ್ದರು. ಫೋಬ್ಸ್ ಪತ್ರಿಕೆ ಗುರುತಿಸಿದ್ದ ನೂರು ಪ್ರಭಾವಿ ಮಹಿಳೆಯರಲ್ಲಿ ಇವರೂ ಒಬ್ಬರು.

ತಮ್ಮ ಸಾಮರ್ಥ್ಯದಿಂದ ಇವರು ಇರಾನಿನ ಮೊದಲ ಮಹಿಳಾ ನ್ಯಾಯಮೂರ್ತಿಯಾದರು. 1975ರಲ್ಲಿ ಇಸ್ಲಾಮಿಕ್ ರೆವಲ್ಯೂಶನ್ ಚುನಾವಣೆಯಲ್ಲಿ ಗೆದ್ದು ಬಂದಿತು. ಆಗ ಸಂಪ್ರದಾಯವಾದಿ ಧಾರ್ಮಿಕರು ಮಹಿಳೆಯು ನ್ಯಾಯಾಧೀಶೆಯಾಗಿರುವುದನ್ನು ವಿರೋಧಿಸಿ ಪ್ರತಿರೋಧ ಒಡ್ಡಿದರು. ನ್ಯಾಯಮೂರ್ತಿಯಾಗಿದ್ದವರನ್ನು ನ್ಯಾಯಾಲಯದಲ್ಲೇ ಗುಮಾಸ್ತೆಯಾಗಿರುವಂತೆ ಸೂಚಿಸಿತು. ಆದರೆ ಶಿರಿನ್ ಮತ್ತು ಇತರ ಮಹಿಳಾ ನ್ಯಾಯಮೂರ್ತಿಗಳು ಕರ್ಮಠರ ವಿರುದ್ಧ ಪ್ರತಿಭಟನೆ ಮಾಡಿದರು. ಇವರ ಪ್ರತಿಭಟನೆಗೆ ಪ್ರತಿಯಾಗಿ ಆಡಳಿತ ವ್ಯವಸ್ಥೆಯು ನ್ಯಾಯಮೂರ್ತಿಗಳಾಗುವ ಬದಲು ಸ್ವಲ್ಪ ಉನ್ನತಸ್ಥಾನವಾದ ಕಾನೂನುತಜ್ಞರ ಪದವಿಗೆ ಇವರನ್ನು ಸೀಮಿತಗೊಳಿಸಿತು. ಸ್ವಯಂನಿವೃತ್ತಿ ಘೋಷಿಸಿಕೊಂಡ ಶಿರಿನ್ ಬದಲಾಗದ ಆಡಳಿತ ವ್ಯವಸ್ಥೆಯಿಂದ ಹೊರಗೆ ಬಂದರು. ಆದರೆ ಅವರು ನ್ಯಾಯವಾದಿಯಾಗಿ ಮುಂದುವರಿಯಲು ಅವರಿಗೆ ಅವಕಾಶ ಕೊಡಲಿಲ್ಲ. ಅದಕ್ಕಾಗಿ ಅವರು ಸಲ್ಲಿಸುತ್ತಿದ್ದ ಅರ್ಜಿಗಳನ್ನು ಪದೇಪದೇ ತಿರಸ್ಕರಿಸಲಾಯಿತು. ಆದರೆ ಅವರು 1993ರಲ್ಲಿ ತಮ್ಮ ವಕೀಲರ ಕಚೇರಿಯನ್ನು ತೆರೆದಿದ್ದರು. ನ್ಯಾಯವಾದಿಯಾಗಿ ತಾವು ತಿರಸ್ಕೃತರಾಗಿದ್ದ ಆ ಸಮಯವನ್ನು ಪತ್ರಿಕೆಗಳಿಗೆ ಲೇಖನಗಳನ್ನು ಬರೆಯಲು ಮತ್ತು ಪುಸ್ತಕ ಬರೆಯಲು ಉಪಯೋಗಿಸಿಕೊಂಡರು.

ವಕೀಲೆಯಾಗಿ ಕೇಸುಗಳನ್ನು ಅವರು ತೆಗೆದುಕೊಂಡಿದ್ದು ಹೆಚ್ಚಾಗಿ ಮಕ್ಕಳ ಮತ್ತು ಹೆಂಗಸರ ಕುರಿತಾದ ಅಂತರಾಷ್ಟ್ರೀಯ ಪ್ರಕರಣಗಳನ್ನು ಮತ್ತು ಪತ್ರಿಕೆಗಳು ಎದುರಿಸುತ್ತಿದ್ದ ಪ್ರಕರಣಗಳನ್ನು. ಜೊತೆಯಲ್ಲಿ ಮಾನವ ಹಕ್ಕಿನ ವಿಷಯವಾಗಿ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದ್ದರು. ಟೆಹರಾನಿನ ಯುನಿಸೆಫ್ ಪ್ರಾಯೋಜಕತ್ವದಲ್ಲಿ ಅನೇಕ ಯೋಜನೆಗಳನ್ನು ಮಾಡಿದ್ದಾರೆ. ಮಕ್ಕಳ ಮತ್ತು ಮಾನವ ಹಕ್ಕುಗಳ ಕುರಿತಾಗಿ ತಿಳಿವಳಿಕೆ ನೀಡಲು ಅನೇಕ ವೇದಿಕೆಗಳನ್ನು ಬಳಸಿಕೊಳ್ಳುತ್ತಾರೆ. ಹಾಗೆಯೇ ನೀಡುತ್ತಾರೆ ಕೂಡಾ.

ಇದರಿಂದಾಗಿ ಇವರಿಗೆ ಇರುವ ಜೀವ ಬೆದರಿಕೆ ಅಷ್ಟಿಷ್ಟಲ್ಲ. ಒಂದಲ್ಲಾ ಒಂದು ಬಗೆಯ ಆಕ್ರಮಣಕ್ಕೆ ತುತ್ತಾಗುತ್ತಲೇ ಇರುತ್ತಾರೆ. ಜೊತೆಗೆ ಇವರ ಕುಟುಂಬವೂ ಕೂಡ ಭೀತಿಯ ಜೀವನವನ್ನು ಸಾಗಿಸುತ್ತಿದೆ. ಸರ್ಕಾರ, ಪೊಲೀಸ್ ವ್ಯವಸ್ಥೆ, ನ್ಯಾಯಾಂಗ ವ್ಯವಸ್ಥೆ ಮತ್ತು ಮತೀಯ ನಾಗರಿಕರು ಎಲ್ಲರೂ ಇವರ ಮತ್ತು ಇವರಂತಹ ಮಾನವ ಹಕ್ಕುಗಳ ಹೋರಾಟಗಾರರ ವಿರುದ್ಧವೇ ಇದ್ದಾರೆ.

ಶಿರಿನ್ ಇಬಾದಿಯವರು ಮಾಡುವ ದ್ರೋಹಗಳಿವು ಎಂದು ಆರೋಪಿಸುವವರ ಪಟ್ಟಿಯಲ್ಲಿ ಏನೇನಿವೆ ನೋಡಿ.

1. ಇರಾನಿನ ಅಲ್ಪಸಂಖ್ಯಾತರಾಗಿರುವ ಬಹಾಯಿ ಶ್ರದ್ಧೆಯುಳ್ಳವರೊಂದಿಗೆ ಸಂಪರ್ಕವಿದೆ ಮತ್ತು ಅವರ ನಾಗರಿಕ ಹಕ್ಕುಗಳಿಗೆ ಹೋರಾಡುತ್ತಾರೆ.
2. ಸಲಿಂಗ ಕಾಮವನ್ನು ಸಮರ್ಥಿಸಿ ಸಲಿಂಗ ಕಾಮಿಗಳನ್ನು ಕಾನೂನಾತ್ಮಕವಾಗಿ ರಕ್ಷಿಸಲು ಮುಂದಾಗುತ್ತಾರೆ.
3. ಹಿಜಾಬ್ ಧರಿಸದೆಯೇ ಹೊರಗೆ ಬರುತ್ತಾರೆ ಮತ್ತು ತಮ್ಮ ಕಾರ್ಯಕ್ಷೇತ್ರಗಳಲ್ಲಿ ಸುತ್ತಾಡುತ್ತಾರೆ.
4. ಇಸ್ಲಾಂ ಕಾನೂನು ವಿಧಿಸುವ ಶಿಕ್ಷೆಗಳನ್ನು ಪ್ರಶ್ನಿಸುತ್ತಾರೆ.
5. ಇವರ ಮಗಳು ನರ್ಗೀಸ್ ಬಹಾಯಿ ಶ್ರದ್ಧೆಯನ್ನು ಅಂಗೀಕರಿಸಿ ಇಸ್ಲಾಮಿಕ್ ರಿಪಬ್ಲಿಕ್ ಪ್ರಕಾರ ಶಿಕ್ಷಾರ್ಹ ಅಪರಾಧವನ್ನು ಮಾಡಿದ್ದಾಳೆ.
ಇವುಗಳನ್ನು ಮುಂದಿಟ್ಟುಕೊಂಡು ಇರಾನಿ ಸರ್ಕಾರವು ಶಿರಿನ್‍ರವರ ಮಾನವ ಹಕ್ಕುಗಳ ಕಾರ್ಯಾಲಯವನ್ನು ಮುಚ್ಚಿಸಿತು. ತನ್ನ ಮೇಲಾಗುತ್ತಿರುವ ಎಲ್ಲಾ ಬಗೆಯ ದಾಳಿಗಳನ್ನೂ ಎದುರಿಸುತ್ತಾ ಶಿರಿನ್ ತಮ್ಮ ಹೋರಾಟಗಳನ್ನು ಮುಂದುವರೆಸಿದ್ದಾರೆ. 2018ರ ಸಂದರ್ಶನವೊಂದರಲ್ಲಿ ಅವರು ಹೇಳಿದ್ದೇನೆಂದರೆ, “ಇರಾನಿನಲ್ಲಿ ಇಸ್ಲಾಮಿಕ್ ರಿಪಬ್ಲಿಕನ್ನು ಯಾರೂ ಹೇಗೂ ಸರಿಪಡಿಸಲಾಗದು” ಎಂದು. ಇದು ಹತಾಶಾ ಭಾವವೋ ಅಥವಾ ಹದಿನೆಂಟನೆಯ ಶತಮಾನದ ಅಂತ್ಯದಿಂದ ನಡೆಯುತ್ತಿರುವ ಹೋರಾಟದ ಮುಂದುವರಿದ ಭಾಗವಾಗಿ ನುಡಿದ ಅನುಭವವೋ – ಗೊತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...