Homeಮುಖಪುಟಕಾರ್ಮಿಕ ವಿರೋಧಿ ಮೋದಿ ಸರ್ಕಾರದ ವಿರುದ್ಧ ದನಿಯೆತ್ತುತ್ತೇವೆ: ವರದರಾಜೇಂದ್ರ

ಕಾರ್ಮಿಕ ವಿರೋಧಿ ಮೋದಿ ಸರ್ಕಾರದ ವಿರುದ್ಧ ದನಿಯೆತ್ತುತ್ತೇವೆ: ವರದರಾಜೇಂದ್ರ

ಮೋದಿ ಸರ್ಕಾರದ ಕೈಗಾರಿಕಾ ಸಂಬಂಧಗಳ ಸಂಹಿತೆಯು ಕಾರ್ಮಿಕರ ಮುಷ್ಕರದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಇದರಲ್ಲಿ ಮುಷ್ಕರದಲ್ಲಿ ಭಾಗವಹಿಸುವ ಕಾರ್ಮಿಕರಿಗೆ ಶಿಕ್ಷೆ ಮತ್ತು 50000 ರೂಗಳ ದಂಡ ವಿಧಿಸಬಹುದಾಗಿದೆ.

- Advertisement -
- Advertisement -

ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸುವ, ಮುಷ್ಕರದ ಹಕ್ಕನ್ನು ಕಸಿದುಕೊಳ್ಳುವ ತಿದ್ದುಪಡಿಗಳನ್ನು ತರುತ್ತಿರುವ ಕಾರ್ಮಿಕ ವಿರೋಧಿ ಮೋದಿ ಸರ್ಕಾರದ ವಿರುದ್ಧ ನವೆಂಬರ್ 26-27 ರಂದು ದನಿಯೆತ್ತುತ್ತೇವೆ ಎಂದು ಕರ್ನಾಟಕ ಶ್ರಮಿಕ ಶಕ್ತಿಯ ರಾಜ್ಯ ಸಂಚಾಲಕರಾದ ವರದರಾಜೇಂದ್ರ ತಿಳಿಸಿದ್ದಾರೆ.

ಮಂಡ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರವು ಕಾರ್ಮಿಕರ ಪರವಾಗಿದ್ದ 44 ಕಾನೂನುಗಳನ್ನು ಕ್ರೋಢಿಕರಿಸಿ ನಾಲ್ಕೂ ಕೋಡ್‌ಗಳಾಗಿ ಮಾಡುತ್ತಿದೆ. ಇವು ಮಾಲೀಕರ ಪರವಾಗಿದ್ದು ಕಾರ್ಮಿಕರ ಕೆಲಸದ ಭದ್ರತೆ, ಸಾಮಾಜಿಕ ಭದ್ರತೆ, ಮತ್ತು ಸಂಬಳ ಭದ್ರತೆಯನ್ನು ಇವು ಕಸಿದುಕೊಂಡು ಅನಿರ್ಧಿಷ್ಟ ಅವಧಿಯ ಕೆಲಸಕ್ಕೆ ಅನುಮತಿ ನೀಡುತ್ತಿದೆ” ಎಂದು ಕಿಡಿಕಾರಿದರು.

ವೇತನ ಕೋಡ್ ಎಂಬ ಸಂಹಿತೆಯು ಕಾರ್ಮಿಕರ ವೇತನದ ಖಾತ್ರಿ ಮತ್ತು ಕನಿಷ್ಟ ವೇತನ ಜಾರಿ ಮಾಡುವ ಮಾಲೀಕರ ಜವಾಬ್ದಾರಿಯಿಂದ ತೆಗೆದು, ಬೇಕಾಬಿಟ್ಟಿ ನಡೆಸಿಕೊಳ್ಳಲು ಅವಕಾಶ ನೀಡುತ್ತದೆ. ಸಾಮಾಜಿಕ ಭದ್ರತೆ ಕೋಡ್ ಈಗ ಕಾರ್ಮಿಕರಿಗೆ ಇರುವ ಸಾಮಾಜಿಕ ಭದ್ರತೆಗಳಾದ ಇಎಸ್‌ಐ, ಪಿ.ಎಫ್ ಮತ್ತು ಗ್ರಾಚುಟಿ ಪಾವತಿಸುವ ಮಾಲೀಕರ ಜವಾಬ್ದಾರಿಯನ್ನು ಕಿತ್ತುಹಾಕಿದೆ ಎಂದು ವರದರಾಜೇಂದ್ರ ಹೇಳಿದ್ದಾರೆ.

ಕೈಗಾರಿಕಾ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥತಿಗಳ ಸಂಹಿತೆ ಹೆಸರಿನಲ್ಲಿ ಹಾಲಿ 100 ಕಾರ್ಮಿಕರು ಇರುವ ಕಾರ್ಖಾನೆಯನ್ನು ಮುಚ್ಚಲು ಸರ್ಕಾರದ ಅನುಮತಿ ಬೇಕಿತ್ತು. ಆದರೆ ಈಗ 300ಗಿಂತ ಕಡಿಮೆ ಕಾರ್ಮಿಕರು ಇರುವ ಕಾರ್ಖಾನೆಯನ್ನು ಮುಚ್ಚಲು ಸರ್ಕಾರದ ಅನುಮತಿ ಅಗತ್ಯವಿರುವುದಿಲ್ಲ ಮತ್ತು ಪ್ರಧಾನ ಉದ್ಯೋಗದಾತರಿಗೆ ಗುತ್ತಿಗೆ ಕಾರ್ಮಿಕರ ಕುರಿತು ಯಾವುದೇ ಜವಾಬ್ದಾರಿ ಇರುವುದಿಲ್ಲ ಎಂಬ ತಿದ್ದುಪಡಿ ತರಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮೋದಿ ಸರ್ಕಾರದ ಕೈಗಾರಿಕಾ ಸಂಬಂಧಗಳ ಸಂಹಿತೆಯು ಕಾರ್ಮಿಕರ ಮುಷ್ಕರದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಇದರಲ್ಲಿ ಮುಷ್ಕರದಲ್ಲಿ ಭಾಗವಹಿಸುವ ಕಾರ್ಮಿಕರಿಗೆ ಶಿಕ್ಷೆ ಮತ್ತು 50000 ರೂಗಳ ದಂಡ ವಿಧಿಸಬಹುದಾಗಿದೆ. ಕಾರ್ಮಿಕರಲ್ಲದ ವ್ಯಕ್ತಿಯು ಕಾರ್ಮಿಕ ಸಂಘದ ಪದಾಧಿಕಾರಿಯಾಗುವುದನ್ನು ನಿಷೇದಿಸುತ್ತದೆ. ಶತಮಾನಗಳ ಹೋರಾಟದಿಂದ ಕಾರ್ಮಿಕರು 8 ಗಂಟೆಗಳ ಕೆಲಸದ ಅವಧಿ ಹಕ್ಕು ಪಡೆದಿದ್ದುದ್ದನ್ನು ಮೋದಿ ಸರ್ಕಾರ ಒಂದೇ ಏಟಿನಲ್ಲಿ ಮುಗಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಹಾಗಾಗಿ ತಿದ್ದುಪಡಿಯ ಮೂಲಕ ತರಲು ಹೊರಟಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಈ ಕೂಡಲೇ ಹಿಂಪಡೆಯಬೇಕು. ಸರ್ಕಾರಿ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಈ ಕೂಡಲೇ ಕೈಬಿಟ್ಟು ಬಲಪಡಿಸಲು ಕ್ರಮವಹಿಸಬೇಕು. ಎಲ್ಲಾ ರೀತಿಯ ಗುತ್ತಿಗೆ ಕಾರ್ಮಿಕ ಪದ್ದತಿಯನ್ನು ನಿಷೇದಿಸಬೇಕು. ರೈತ ವಿರೋಧಿಯಾಗಿರುವ ಕೃಷಿ ಮಸೂದೆಗಳನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್ 26-27 ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ನಮ್ಮ ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆ ಬೆಂಬಲಿಸುತ್ತದೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ಜನಶಕ್ತಿಯ ಪದಾಧಿಕಾರಿಗಳಾದ ಪೂರ್ಣಿಮಾ, ಸಿದ್ದರಾಜು, ಪುಟ್ಟಸ್ವಾಮಿ, ಈಶ್ವರಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...