Homeಮುಖಪುಟಕಾರ್ಮಿಕ ವಿರೋಧಿ ಮೋದಿ ಸರ್ಕಾರದ ವಿರುದ್ಧ ದನಿಯೆತ್ತುತ್ತೇವೆ: ವರದರಾಜೇಂದ್ರ

ಕಾರ್ಮಿಕ ವಿರೋಧಿ ಮೋದಿ ಸರ್ಕಾರದ ವಿರುದ್ಧ ದನಿಯೆತ್ತುತ್ತೇವೆ: ವರದರಾಜೇಂದ್ರ

ಮೋದಿ ಸರ್ಕಾರದ ಕೈಗಾರಿಕಾ ಸಂಬಂಧಗಳ ಸಂಹಿತೆಯು ಕಾರ್ಮಿಕರ ಮುಷ್ಕರದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಇದರಲ್ಲಿ ಮುಷ್ಕರದಲ್ಲಿ ಭಾಗವಹಿಸುವ ಕಾರ್ಮಿಕರಿಗೆ ಶಿಕ್ಷೆ ಮತ್ತು 50000 ರೂಗಳ ದಂಡ ವಿಧಿಸಬಹುದಾಗಿದೆ.

- Advertisement -
- Advertisement -

ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸುವ, ಮುಷ್ಕರದ ಹಕ್ಕನ್ನು ಕಸಿದುಕೊಳ್ಳುವ ತಿದ್ದುಪಡಿಗಳನ್ನು ತರುತ್ತಿರುವ ಕಾರ್ಮಿಕ ವಿರೋಧಿ ಮೋದಿ ಸರ್ಕಾರದ ವಿರುದ್ಧ ನವೆಂಬರ್ 26-27 ರಂದು ದನಿಯೆತ್ತುತ್ತೇವೆ ಎಂದು ಕರ್ನಾಟಕ ಶ್ರಮಿಕ ಶಕ್ತಿಯ ರಾಜ್ಯ ಸಂಚಾಲಕರಾದ ವರದರಾಜೇಂದ್ರ ತಿಳಿಸಿದ್ದಾರೆ.

ಮಂಡ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಸರ್ಕಾರವು ಕಾರ್ಮಿಕರ ಪರವಾಗಿದ್ದ 44 ಕಾನೂನುಗಳನ್ನು ಕ್ರೋಢಿಕರಿಸಿ ನಾಲ್ಕೂ ಕೋಡ್‌ಗಳಾಗಿ ಮಾಡುತ್ತಿದೆ. ಇವು ಮಾಲೀಕರ ಪರವಾಗಿದ್ದು ಕಾರ್ಮಿಕರ ಕೆಲಸದ ಭದ್ರತೆ, ಸಾಮಾಜಿಕ ಭದ್ರತೆ, ಮತ್ತು ಸಂಬಳ ಭದ್ರತೆಯನ್ನು ಇವು ಕಸಿದುಕೊಂಡು ಅನಿರ್ಧಿಷ್ಟ ಅವಧಿಯ ಕೆಲಸಕ್ಕೆ ಅನುಮತಿ ನೀಡುತ್ತಿದೆ” ಎಂದು ಕಿಡಿಕಾರಿದರು.

ವೇತನ ಕೋಡ್ ಎಂಬ ಸಂಹಿತೆಯು ಕಾರ್ಮಿಕರ ವೇತನದ ಖಾತ್ರಿ ಮತ್ತು ಕನಿಷ್ಟ ವೇತನ ಜಾರಿ ಮಾಡುವ ಮಾಲೀಕರ ಜವಾಬ್ದಾರಿಯಿಂದ ತೆಗೆದು, ಬೇಕಾಬಿಟ್ಟಿ ನಡೆಸಿಕೊಳ್ಳಲು ಅವಕಾಶ ನೀಡುತ್ತದೆ. ಸಾಮಾಜಿಕ ಭದ್ರತೆ ಕೋಡ್ ಈಗ ಕಾರ್ಮಿಕರಿಗೆ ಇರುವ ಸಾಮಾಜಿಕ ಭದ್ರತೆಗಳಾದ ಇಎಸ್‌ಐ, ಪಿ.ಎಫ್ ಮತ್ತು ಗ್ರಾಚುಟಿ ಪಾವತಿಸುವ ಮಾಲೀಕರ ಜವಾಬ್ದಾರಿಯನ್ನು ಕಿತ್ತುಹಾಕಿದೆ ಎಂದು ವರದರಾಜೇಂದ್ರ ಹೇಳಿದ್ದಾರೆ.

ಕೈಗಾರಿಕಾ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥತಿಗಳ ಸಂಹಿತೆ ಹೆಸರಿನಲ್ಲಿ ಹಾಲಿ 100 ಕಾರ್ಮಿಕರು ಇರುವ ಕಾರ್ಖಾನೆಯನ್ನು ಮುಚ್ಚಲು ಸರ್ಕಾರದ ಅನುಮತಿ ಬೇಕಿತ್ತು. ಆದರೆ ಈಗ 300ಗಿಂತ ಕಡಿಮೆ ಕಾರ್ಮಿಕರು ಇರುವ ಕಾರ್ಖಾನೆಯನ್ನು ಮುಚ್ಚಲು ಸರ್ಕಾರದ ಅನುಮತಿ ಅಗತ್ಯವಿರುವುದಿಲ್ಲ ಮತ್ತು ಪ್ರಧಾನ ಉದ್ಯೋಗದಾತರಿಗೆ ಗುತ್ತಿಗೆ ಕಾರ್ಮಿಕರ ಕುರಿತು ಯಾವುದೇ ಜವಾಬ್ದಾರಿ ಇರುವುದಿಲ್ಲ ಎಂಬ ತಿದ್ದುಪಡಿ ತರಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮೋದಿ ಸರ್ಕಾರದ ಕೈಗಾರಿಕಾ ಸಂಬಂಧಗಳ ಸಂಹಿತೆಯು ಕಾರ್ಮಿಕರ ಮುಷ್ಕರದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಇದರಲ್ಲಿ ಮುಷ್ಕರದಲ್ಲಿ ಭಾಗವಹಿಸುವ ಕಾರ್ಮಿಕರಿಗೆ ಶಿಕ್ಷೆ ಮತ್ತು 50000 ರೂಗಳ ದಂಡ ವಿಧಿಸಬಹುದಾಗಿದೆ. ಕಾರ್ಮಿಕರಲ್ಲದ ವ್ಯಕ್ತಿಯು ಕಾರ್ಮಿಕ ಸಂಘದ ಪದಾಧಿಕಾರಿಯಾಗುವುದನ್ನು ನಿಷೇದಿಸುತ್ತದೆ. ಶತಮಾನಗಳ ಹೋರಾಟದಿಂದ ಕಾರ್ಮಿಕರು 8 ಗಂಟೆಗಳ ಕೆಲಸದ ಅವಧಿ ಹಕ್ಕು ಪಡೆದಿದ್ದುದ್ದನ್ನು ಮೋದಿ ಸರ್ಕಾರ ಒಂದೇ ಏಟಿನಲ್ಲಿ ಮುಗಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಹಾಗಾಗಿ ತಿದ್ದುಪಡಿಯ ಮೂಲಕ ತರಲು ಹೊರಟಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಈ ಕೂಡಲೇ ಹಿಂಪಡೆಯಬೇಕು. ಸರ್ಕಾರಿ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮಾಡುವ ಪ್ರಕ್ರಿಯೆಯನ್ನು ಈ ಕೂಡಲೇ ಕೈಬಿಟ್ಟು ಬಲಪಡಿಸಲು ಕ್ರಮವಹಿಸಬೇಕು. ಎಲ್ಲಾ ರೀತಿಯ ಗುತ್ತಿಗೆ ಕಾರ್ಮಿಕ ಪದ್ದತಿಯನ್ನು ನಿಷೇದಿಸಬೇಕು. ರೈತ ವಿರೋಧಿಯಾಗಿರುವ ಕೃಷಿ ಮಸೂದೆಗಳನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆಯಬೇಕು ಎಂಬ ಬೇಡಿಕೆಗಳ ಈಡೇರಿಕೆಗಾಗಿ ನವೆಂಬರ್ 26-27 ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ನಮ್ಮ ಕರ್ನಾಟಕ ಶ್ರಮಿಕ ಶಕ್ತಿ ಸಂಘಟನೆ ಬೆಂಬಲಿಸುತ್ತದೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ಜನಶಕ್ತಿಯ ಪದಾಧಿಕಾರಿಗಳಾದ ಪೂರ್ಣಿಮಾ, ಸಿದ್ದರಾಜು, ಪುಟ್ಟಸ್ವಾಮಿ, ಈಶ್ವರಿ ಮುಂತಾದವರು ಭಾಗವಹಿಸಿದ್ದರು.


ಇದನ್ನೂ ಓದಿ: ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...