Homeಕರ್ನಾಟಕಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

- Advertisement -
- Advertisement -

ಬೆಂಗಳೂರು: ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ಪರಿಶಿಷ್ಟ ಜಾತಿಗಳ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ ಶೇ 6ರಷ್ಟು, ಮತ್ತು ಭೋವಿ, ಕೊರಚ, ಕೊರಮ, ಲಂಬಾಣಿ, ಬಂಜಾರ ಸೇರಿದಂತೆ ಇತರೆ ಸ್ಪೃಶ್ಯ ಸಮುದಾಯಗಳಿಗೆ ಶೇ 5ರಷ್ಟು ಮೀಸಲಾತಿ ನೀಡುವ ತೀರ್ಮಾನವನ್ನು ಸಮಿತಿ ವಿರೋಧಿಸಿದೆ. ಈ ನಿರ್ಧಾರದಲ್ಲಿ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಸಮುದಾಯಗಳ ಗುಂಪಿಗೆ ಸೇರಿಸಿರುವುದು ಆ ಸಮುದಾಯಗಳಿಗೆ ಮಾಡಿದ ಐತಿಹಾಸಿಕ ದ್ರೋಹ ಎಂದು ಸಮಿತಿ ಆರೋಪಿಸಿದೆ.

ನ್ಯಾ. ನಾಗನೋಹನ್ ದಾಸ್ ವರದಿಯು ನ್ಯಾಯಯುತವಾಗಿತ್ತು ಎಂದು ಸಮಿತಿ ಹೇಳಿದೆ. ಆ ವರದಿಯಲ್ಲಿ ಸಮುದಾಯಗಳ ಗುಂಪು ಮಾಡದೆ, ಹಿಂದುಳಿದಿರುವಿಕೆಯ ಆಧಾರದ ಮೇಲೆ ಐದು ಗುಂಪುಗಳನ್ನು ರಚಿಸಿ ಮೀಸಲಾತಿ ಹಂಚಲಾಗಿತ್ತು. ಅದರಂತೆ ಅಲೆಮಾರಿಗಳಿಗೆ ಪ್ರತ್ಯೇಕ ಗುಂಪು ಮಾಡಿ ಶೇ.1ರಷ್ಟು ಮೀಸಲಾತಿಯೊಂದಿಗೆ ಮೊದಲ ಆದ್ಯತೆ ನೀಡಲಾಗಿತ್ತು. ಆದರೆ, ಈಗಿನ ನಿರ್ಧಾರವು ಅವರಿಗೆ ಕೊನೆಯ ಆದ್ಯತೆ ನೀಡಿದೆ ಎಂದು ಸಮಿತಿ ತಿಳಿಸಿದೆ.

ಇದರ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿಯ ಅಹೋರಾತ್ರಿ ಹೋರಾಟವನ್ನು ಮುಂದುವರೆಸುವುದಾಗಿ ಸಮಿತಿ ಘೋಷಿಸಿದೆ. ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಹೋರಾಟಗಾರರ ಆಕ್ರೋಶ

ಹೋರಾಟಗಾರ ಹುಲಿಕುಂಟೆ ಮೂರ್ತಿ ಅವರು, “ನಾವು ಜಸ್ಟೀಸ್ ನಾಗನೋಹನ್ ದಾಸ್ ಅವರು ಅಲೆಮಾರಿಗಳಿಗೆ ನೀಡಿದ್ದ ಶೇ 1ರಷ್ಟು ಮೀಸಲಾತಿಗೆ ಕೈ ಹಾಕಬೇಡಿ ಎಂದು ಎಲ್ಲಾ ಸಮುದಾಯಗಳ ಮುಖಂಡರ ಬಳಿ ಅಂಗಲಾಚಿದ್ದೆವು. ಆದರೆ, ಅಸ್ಪೃಶ್ಯ ಸಮುದಾಯಗಳ ಮಂತ್ರಿಗಳು ಕೂಡ ಒಬ್ಬನೇ ಒಬ್ಬ ಸ್ಪೃಶ್ಯ ಮಂತ್ರಿಯ ಒತ್ತಡಕ್ಕೆ ಮಣಿದು ಅನ್ಯಾಯಕ್ಕೆ ಸಮ್ಮತಿಸಿದ್ದಾರೆ. ಈ ನಿರ್ಧಾರವನ್ನು ಸಹಿಸಿಕೊಂಡರೆ ನಾವು ಶವಗಳಿಗೆ ಸಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರವಿಕುಮಾರ್ ಈಚಲಮರ ಅವರು ಮಾತನಾಡಿ, “ಅಲೆಮಾರಿ ಸಮುದಾಯಗಳು ಈಗಲೂ ಬಡತನ, ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಸಾಮಾಜಿಕ ತಾರತಮ್ಯದಿಂದ ಬಳಲುತ್ತಿವೆ. ಅವರಿಗೆ ಸರಿಯಾದ ಮನೆಗಳಿಲ್ಲ, ಶಾಲೆಗಳಿಲ್ಲ ಮತ್ತು ರಕ್ಷಣೆಯಿಲ್ಲ. ಅಂಥ ಸಮುದಾಯಗಳಿಗೆ ನ್ಯಾಯ ಕೊಡದೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಹೋರಾಟ ಕೇವಲ ಮಾದಿಗರ ಹೋರಾಟವಲ್ಲ, ನೂರಾರು ಅಲೆಮಾರಿ ಸಮುದಾಯಗಳ ಹೋರಾಟ” ಎಂದು ಹೇಳಿದರು.

ಜಾಗೃತ ಕರ್ನಾಟಕದ ಮುತ್ತುರಾಜು ಅವರು, “ಸಿದ್ದರಾಮಯ್ಯನವರು ಅಲೆಮಾರಿ ಸಮುದಾಯಗಳಿಗೆ ಐತಿಹಾಸಿಕ ದ್ರೋಹ ಎಸಗಿದ್ದಾರೆ. ಅವರು ಅಲೆಮಾರಿ ಸಮುದಾಯಗಳನ್ನು ಮಾದಿಗ ಅಥವಾ ಹೊಲೆಯ ಸಂಬಂಧಿತ ಜಾತಿಗಳ ಪ್ರವರ್ಗದಲ್ಲಿ ಸೇರಿಸಬೇಡಿ ಎಂದು ನಾವು ಒತ್ತಾಯಿಸಿದ್ದೆವು. ಏಕೆಂದರೆ ಅವರು ಅಲ್ಲಿ ಏನನ್ನೂ ಪಡೆಯಲು ಸಾಧ್ಯವಾಗುವುದಿಲ್ಲ. ಆದರೆ, ಈಗ ಅವರನ್ನು ಸ್ಪೃಶ್ಯ ಜಾತಿಗಳ ಗುಂಪಿಗೆ ಸೇರಿಸಲಾಗಿದೆ. ಇದರಿಂದ ಅವರು ಉಸಿರಾಡಲೂ ಸಾಧ್ಯವಿಲ್ಲದ ಪರಿಸ್ಥಿತಿ ಬಂದಿದೆ” ಎಂದು ಆರೋಪಿಸಿದರು.

ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಾ, “ಸಿದ್ದರಾಮಯ್ಯನವರು ಈಗಲೂ ಎಚ್ಚೆತ್ತುಕೊಂಡು ಅಲೆಮಾರಿಗಳಿಗೆ ಪ್ರತ್ಯೇಕ ಗುಂಪು ಮಾಡಿ ಸ್ಪೃಶ್ಯ ಸಮುದಾಯಕ್ಕೆ ಕೊಟ್ಟಿರುವ ಮೀಸಲಾತಿಯಲ್ಲಿ ಹಂಚಿಕೆ ಮಾಡುವ ಮೂಲಕ ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬಹುದು. ಇಲ್ಲದಿದ್ದರೆ ಈ ಕಳಂಕವು ಅವರಿಗೆ ಅಂಟಿಕೊಳ್ಳಲಿದೆ. ಈ ಹೋರಾಟವನ್ನು ಬೀದಿ ಹೋರಾಟ ಮತ್ತು ಕಾನೂನು ಹೋರಾಟ ಎರಡರ ಮೂಲಕವೂ ಮುಂದುವರೆಸುತ್ತೇವೆ. ಅನ್ಯಾಯದ ವಿರುದ್ಧ ನಾವು ಹೋರಾಡಿದ್ದೇವೆ ಎಂದು ಮುಂದಿನ ಪೀಳಿಗೆಗೆ ಹೇಳಲು ಈ ಹೋರಾಟ ಅಗತ್ಯವಾಗಿದೆ” ಎಂದರು.

ಶಿವಸುಂದರ್ ಅವರು, “ಒಂದು ತುತ್ತೂ ಸಿಗದವರನ್ನು, ಒಂದೆರಡು ತುತ್ತು ಕಡಿಮೆಯಾದವರ ಜೊತೆ ಸೇರಿಸುವುದು ಸಾಮಾಜಿಕ ನ್ಯಾಯವಲ್ಲ, ಅದು ಸಾಮಾಜಿಕ ಕ್ರೌರ್ಯ” ಎಂದು ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಸಂಪುಟ ಅಸ್ತು: ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...