Homeಕರ್ನಾಟಕಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

- Advertisement -
- Advertisement -

ಬೆಂಗಳೂರು: ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ಪರಿಶಿಷ್ಟ ಜಾತಿಗಳ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ ಶೇ 6ರಷ್ಟು, ಮತ್ತು ಭೋವಿ, ಕೊರಚ, ಕೊರಮ, ಲಂಬಾಣಿ, ಬಂಜಾರ ಸೇರಿದಂತೆ ಇತರೆ ಸ್ಪೃಶ್ಯ ಸಮುದಾಯಗಳಿಗೆ ಶೇ 5ರಷ್ಟು ಮೀಸಲಾತಿ ನೀಡುವ ತೀರ್ಮಾನವನ್ನು ಸಮಿತಿ ವಿರೋಧಿಸಿದೆ. ಈ ನಿರ್ಧಾರದಲ್ಲಿ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಸಮುದಾಯಗಳ ಗುಂಪಿಗೆ ಸೇರಿಸಿರುವುದು ಆ ಸಮುದಾಯಗಳಿಗೆ ಮಾಡಿದ ಐತಿಹಾಸಿಕ ದ್ರೋಹ ಎಂದು ಸಮಿತಿ ಆರೋಪಿಸಿದೆ.

ನ್ಯಾ. ನಾಗನೋಹನ್ ದಾಸ್ ವರದಿಯು ನ್ಯಾಯಯುತವಾಗಿತ್ತು ಎಂದು ಸಮಿತಿ ಹೇಳಿದೆ. ಆ ವರದಿಯಲ್ಲಿ ಸಮುದಾಯಗಳ ಗುಂಪು ಮಾಡದೆ, ಹಿಂದುಳಿದಿರುವಿಕೆಯ ಆಧಾರದ ಮೇಲೆ ಐದು ಗುಂಪುಗಳನ್ನು ರಚಿಸಿ ಮೀಸಲಾತಿ ಹಂಚಲಾಗಿತ್ತು. ಅದರಂತೆ ಅಲೆಮಾರಿಗಳಿಗೆ ಪ್ರತ್ಯೇಕ ಗುಂಪು ಮಾಡಿ ಶೇ.1ರಷ್ಟು ಮೀಸಲಾತಿಯೊಂದಿಗೆ ಮೊದಲ ಆದ್ಯತೆ ನೀಡಲಾಗಿತ್ತು. ಆದರೆ, ಈಗಿನ ನಿರ್ಧಾರವು ಅವರಿಗೆ ಕೊನೆಯ ಆದ್ಯತೆ ನೀಡಿದೆ ಎಂದು ಸಮಿತಿ ತಿಳಿಸಿದೆ.

ಇದರ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿಯ ಅಹೋರಾತ್ರಿ ಹೋರಾಟವನ್ನು ಮುಂದುವರೆಸುವುದಾಗಿ ಸಮಿತಿ ಘೋಷಿಸಿದೆ. ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಹೋರಾಟಗಾರರ ಆಕ್ರೋಶ

ಹೋರಾಟಗಾರ ಹುಲಿಕುಂಟೆ ಮೂರ್ತಿ ಅವರು, “ನಾವು ಜಸ್ಟೀಸ್ ನಾಗನೋಹನ್ ದಾಸ್ ಅವರು ಅಲೆಮಾರಿಗಳಿಗೆ ನೀಡಿದ್ದ ಶೇ 1ರಷ್ಟು ಮೀಸಲಾತಿಗೆ ಕೈ ಹಾಕಬೇಡಿ ಎಂದು ಎಲ್ಲಾ ಸಮುದಾಯಗಳ ಮುಖಂಡರ ಬಳಿ ಅಂಗಲಾಚಿದ್ದೆವು. ಆದರೆ, ಅಸ್ಪೃಶ್ಯ ಸಮುದಾಯಗಳ ಮಂತ್ರಿಗಳು ಕೂಡ ಒಬ್ಬನೇ ಒಬ್ಬ ಸ್ಪೃಶ್ಯ ಮಂತ್ರಿಯ ಒತ್ತಡಕ್ಕೆ ಮಣಿದು ಅನ್ಯಾಯಕ್ಕೆ ಸಮ್ಮತಿಸಿದ್ದಾರೆ. ಈ ನಿರ್ಧಾರವನ್ನು ಸಹಿಸಿಕೊಂಡರೆ ನಾವು ಶವಗಳಿಗೆ ಸಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರವಿಕುಮಾರ್ ಈಚಲಮರ ಅವರು ಮಾತನಾಡಿ, “ಅಲೆಮಾರಿ ಸಮುದಾಯಗಳು ಈಗಲೂ ಬಡತನ, ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಸಾಮಾಜಿಕ ತಾರತಮ್ಯದಿಂದ ಬಳಲುತ್ತಿವೆ. ಅವರಿಗೆ ಸರಿಯಾದ ಮನೆಗಳಿಲ್ಲ, ಶಾಲೆಗಳಿಲ್ಲ ಮತ್ತು ರಕ್ಷಣೆಯಿಲ್ಲ. ಅಂಥ ಸಮುದಾಯಗಳಿಗೆ ನ್ಯಾಯ ಕೊಡದೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಹೋರಾಟ ಕೇವಲ ಮಾದಿಗರ ಹೋರಾಟವಲ್ಲ, ನೂರಾರು ಅಲೆಮಾರಿ ಸಮುದಾಯಗಳ ಹೋರಾಟ” ಎಂದು ಹೇಳಿದರು.

ಜಾಗೃತ ಕರ್ನಾಟಕದ ಮುತ್ತುರಾಜು ಅವರು, “ಸಿದ್ದರಾಮಯ್ಯನವರು ಅಲೆಮಾರಿ ಸಮುದಾಯಗಳಿಗೆ ಐತಿಹಾಸಿಕ ದ್ರೋಹ ಎಸಗಿದ್ದಾರೆ. ಅವರು ಅಲೆಮಾರಿ ಸಮುದಾಯಗಳನ್ನು ಮಾದಿಗ ಅಥವಾ ಹೊಲೆಯ ಸಂಬಂಧಿತ ಜಾತಿಗಳ ಪ್ರವರ್ಗದಲ್ಲಿ ಸೇರಿಸಬೇಡಿ ಎಂದು ನಾವು ಒತ್ತಾಯಿಸಿದ್ದೆವು. ಏಕೆಂದರೆ ಅವರು ಅಲ್ಲಿ ಏನನ್ನೂ ಪಡೆಯಲು ಸಾಧ್ಯವಾಗುವುದಿಲ್ಲ. ಆದರೆ, ಈಗ ಅವರನ್ನು ಸ್ಪೃಶ್ಯ ಜಾತಿಗಳ ಗುಂಪಿಗೆ ಸೇರಿಸಲಾಗಿದೆ. ಇದರಿಂದ ಅವರು ಉಸಿರಾಡಲೂ ಸಾಧ್ಯವಿಲ್ಲದ ಪರಿಸ್ಥಿತಿ ಬಂದಿದೆ” ಎಂದು ಆರೋಪಿಸಿದರು.

ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಾ, “ಸಿದ್ದರಾಮಯ್ಯನವರು ಈಗಲೂ ಎಚ್ಚೆತ್ತುಕೊಂಡು ಅಲೆಮಾರಿಗಳಿಗೆ ಪ್ರತ್ಯೇಕ ಗುಂಪು ಮಾಡಿ ಸ್ಪೃಶ್ಯ ಸಮುದಾಯಕ್ಕೆ ಕೊಟ್ಟಿರುವ ಮೀಸಲಾತಿಯಲ್ಲಿ ಹಂಚಿಕೆ ಮಾಡುವ ಮೂಲಕ ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬಹುದು. ಇಲ್ಲದಿದ್ದರೆ ಈ ಕಳಂಕವು ಅವರಿಗೆ ಅಂಟಿಕೊಳ್ಳಲಿದೆ. ಈ ಹೋರಾಟವನ್ನು ಬೀದಿ ಹೋರಾಟ ಮತ್ತು ಕಾನೂನು ಹೋರಾಟ ಎರಡರ ಮೂಲಕವೂ ಮುಂದುವರೆಸುತ್ತೇವೆ. ಅನ್ಯಾಯದ ವಿರುದ್ಧ ನಾವು ಹೋರಾಡಿದ್ದೇವೆ ಎಂದು ಮುಂದಿನ ಪೀಳಿಗೆಗೆ ಹೇಳಲು ಈ ಹೋರಾಟ ಅಗತ್ಯವಾಗಿದೆ” ಎಂದರು.

ಶಿವಸುಂದರ್ ಅವರು, “ಒಂದು ತುತ್ತೂ ಸಿಗದವರನ್ನು, ಒಂದೆರಡು ತುತ್ತು ಕಡಿಮೆಯಾದವರ ಜೊತೆ ಸೇರಿಸುವುದು ಸಾಮಾಜಿಕ ನ್ಯಾಯವಲ್ಲ, ಅದು ಸಾಮಾಜಿಕ ಕ್ರೌರ್ಯ” ಎಂದು ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಸಂಪುಟ ಅಸ್ತು: ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...