Homeಕರ್ನಾಟಕಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರೆಯುತ್ತದೆ: ಒಳಮೀಸಲಾತಿ ಹೋರಾಟ ಸಮಿತಿ ಘೋಷಣೆ

- Advertisement -
- Advertisement -

ಬೆಂಗಳೂರು: ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿಯು ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದೆ. ಪರಿಶಿಷ್ಟ ಜಾತಿಗಳ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ತಲಾ ಶೇ 6ರಷ್ಟು, ಮತ್ತು ಭೋವಿ, ಕೊರಚ, ಕೊರಮ, ಲಂಬಾಣಿ, ಬಂಜಾರ ಸೇರಿದಂತೆ ಇತರೆ ಸ್ಪೃಶ್ಯ ಸಮುದಾಯಗಳಿಗೆ ಶೇ 5ರಷ್ಟು ಮೀಸಲಾತಿ ನೀಡುವ ತೀರ್ಮಾನವನ್ನು ಸಮಿತಿ ವಿರೋಧಿಸಿದೆ. ಈ ನಿರ್ಧಾರದಲ್ಲಿ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಸಮುದಾಯಗಳ ಗುಂಪಿಗೆ ಸೇರಿಸಿರುವುದು ಆ ಸಮುದಾಯಗಳಿಗೆ ಮಾಡಿದ ಐತಿಹಾಸಿಕ ದ್ರೋಹ ಎಂದು ಸಮಿತಿ ಆರೋಪಿಸಿದೆ.

ನ್ಯಾ. ನಾಗನೋಹನ್ ದಾಸ್ ವರದಿಯು ನ್ಯಾಯಯುತವಾಗಿತ್ತು ಎಂದು ಸಮಿತಿ ಹೇಳಿದೆ. ಆ ವರದಿಯಲ್ಲಿ ಸಮುದಾಯಗಳ ಗುಂಪು ಮಾಡದೆ, ಹಿಂದುಳಿದಿರುವಿಕೆಯ ಆಧಾರದ ಮೇಲೆ ಐದು ಗುಂಪುಗಳನ್ನು ರಚಿಸಿ ಮೀಸಲಾತಿ ಹಂಚಲಾಗಿತ್ತು. ಅದರಂತೆ ಅಲೆಮಾರಿಗಳಿಗೆ ಪ್ರತ್ಯೇಕ ಗುಂಪು ಮಾಡಿ ಶೇ.1ರಷ್ಟು ಮೀಸಲಾತಿಯೊಂದಿಗೆ ಮೊದಲ ಆದ್ಯತೆ ನೀಡಲಾಗಿತ್ತು. ಆದರೆ, ಈಗಿನ ನಿರ್ಧಾರವು ಅವರಿಗೆ ಕೊನೆಯ ಆದ್ಯತೆ ನೀಡಿದೆ ಎಂದು ಸಮಿತಿ ತಿಳಿಸಿದೆ.

ಇದರ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿಯ ಅಹೋರಾತ್ರಿ ಹೋರಾಟವನ್ನು ಮುಂದುವರೆಸುವುದಾಗಿ ಸಮಿತಿ ಘೋಷಿಸಿದೆ. ಅಲೆಮಾರಿಗಳಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ಹೋರಾಟಗಾರರ ಆಕ್ರೋಶ

ಹೋರಾಟಗಾರ ಹುಲಿಕುಂಟೆ ಮೂರ್ತಿ ಅವರು, “ನಾವು ಜಸ್ಟೀಸ್ ನಾಗನೋಹನ್ ದಾಸ್ ಅವರು ಅಲೆಮಾರಿಗಳಿಗೆ ನೀಡಿದ್ದ ಶೇ 1ರಷ್ಟು ಮೀಸಲಾತಿಗೆ ಕೈ ಹಾಕಬೇಡಿ ಎಂದು ಎಲ್ಲಾ ಸಮುದಾಯಗಳ ಮುಖಂಡರ ಬಳಿ ಅಂಗಲಾಚಿದ್ದೆವು. ಆದರೆ, ಅಸ್ಪೃಶ್ಯ ಸಮುದಾಯಗಳ ಮಂತ್ರಿಗಳು ಕೂಡ ಒಬ್ಬನೇ ಒಬ್ಬ ಸ್ಪೃಶ್ಯ ಮಂತ್ರಿಯ ಒತ್ತಡಕ್ಕೆ ಮಣಿದು ಅನ್ಯಾಯಕ್ಕೆ ಸಮ್ಮತಿಸಿದ್ದಾರೆ. ಈ ನಿರ್ಧಾರವನ್ನು ಸಹಿಸಿಕೊಂಡರೆ ನಾವು ಶವಗಳಿಗೆ ಸಮಾನ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರವಿಕುಮಾರ್ ಈಚಲಮರ ಅವರು ಮಾತನಾಡಿ, “ಅಲೆಮಾರಿ ಸಮುದಾಯಗಳು ಈಗಲೂ ಬಡತನ, ಮೂಲಭೂತ ಸೌಕರ್ಯಗಳ ಕೊರತೆ ಮತ್ತು ಸಾಮಾಜಿಕ ತಾರತಮ್ಯದಿಂದ ಬಳಲುತ್ತಿವೆ. ಅವರಿಗೆ ಸರಿಯಾದ ಮನೆಗಳಿಲ್ಲ, ಶಾಲೆಗಳಿಲ್ಲ ಮತ್ತು ರಕ್ಷಣೆಯಿಲ್ಲ. ಅಂಥ ಸಮುದಾಯಗಳಿಗೆ ನ್ಯಾಯ ಕೊಡದೆ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಹೋರಾಟ ಕೇವಲ ಮಾದಿಗರ ಹೋರಾಟವಲ್ಲ, ನೂರಾರು ಅಲೆಮಾರಿ ಸಮುದಾಯಗಳ ಹೋರಾಟ” ಎಂದು ಹೇಳಿದರು.

ಜಾಗೃತ ಕರ್ನಾಟಕದ ಮುತ್ತುರಾಜು ಅವರು, “ಸಿದ್ದರಾಮಯ್ಯನವರು ಅಲೆಮಾರಿ ಸಮುದಾಯಗಳಿಗೆ ಐತಿಹಾಸಿಕ ದ್ರೋಹ ಎಸಗಿದ್ದಾರೆ. ಅವರು ಅಲೆಮಾರಿ ಸಮುದಾಯಗಳನ್ನು ಮಾದಿಗ ಅಥವಾ ಹೊಲೆಯ ಸಂಬಂಧಿತ ಜಾತಿಗಳ ಪ್ರವರ್ಗದಲ್ಲಿ ಸೇರಿಸಬೇಡಿ ಎಂದು ನಾವು ಒತ್ತಾಯಿಸಿದ್ದೆವು. ಏಕೆಂದರೆ ಅವರು ಅಲ್ಲಿ ಏನನ್ನೂ ಪಡೆಯಲು ಸಾಧ್ಯವಾಗುವುದಿಲ್ಲ. ಆದರೆ, ಈಗ ಅವರನ್ನು ಸ್ಪೃಶ್ಯ ಜಾತಿಗಳ ಗುಂಪಿಗೆ ಸೇರಿಸಲಾಗಿದೆ. ಇದರಿಂದ ಅವರು ಉಸಿರಾಡಲೂ ಸಾಧ್ಯವಿಲ್ಲದ ಪರಿಸ್ಥಿತಿ ಬಂದಿದೆ” ಎಂದು ಆರೋಪಿಸಿದರು.

ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಾ, “ಸಿದ್ದರಾಮಯ್ಯನವರು ಈಗಲೂ ಎಚ್ಚೆತ್ತುಕೊಂಡು ಅಲೆಮಾರಿಗಳಿಗೆ ಪ್ರತ್ಯೇಕ ಗುಂಪು ಮಾಡಿ ಸ್ಪೃಶ್ಯ ಸಮುದಾಯಕ್ಕೆ ಕೊಟ್ಟಿರುವ ಮೀಸಲಾತಿಯಲ್ಲಿ ಹಂಚಿಕೆ ಮಾಡುವ ಮೂಲಕ ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಬಹುದು. ಇಲ್ಲದಿದ್ದರೆ ಈ ಕಳಂಕವು ಅವರಿಗೆ ಅಂಟಿಕೊಳ್ಳಲಿದೆ. ಈ ಹೋರಾಟವನ್ನು ಬೀದಿ ಹೋರಾಟ ಮತ್ತು ಕಾನೂನು ಹೋರಾಟ ಎರಡರ ಮೂಲಕವೂ ಮುಂದುವರೆಸುತ್ತೇವೆ. ಅನ್ಯಾಯದ ವಿರುದ್ಧ ನಾವು ಹೋರಾಡಿದ್ದೇವೆ ಎಂದು ಮುಂದಿನ ಪೀಳಿಗೆಗೆ ಹೇಳಲು ಈ ಹೋರಾಟ ಅಗತ್ಯವಾಗಿದೆ” ಎಂದರು.

ಶಿವಸುಂದರ್ ಅವರು, “ಒಂದು ತುತ್ತೂ ಸಿಗದವರನ್ನು, ಒಂದೆರಡು ತುತ್ತು ಕಡಿಮೆಯಾದವರ ಜೊತೆ ಸೇರಿಸುವುದು ಸಾಮಾಜಿಕ ನ್ಯಾಯವಲ್ಲ, ಅದು ಸಾಮಾಜಿಕ ಕ್ರೌರ್ಯ” ಎಂದು ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ಸಂಪುಟ ಅಸ್ತು: ಎಡಗೈ, ಬಲಗೈಗೆ ತಲಾ ಶೇ 6, ಕೊಲಂಬೋ, ಅಲೆಮಾರಿಗಳಿಗೆ ಶೇ. 5 ಮೀಸಲಾತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...