Homeಕರ್ನಾಟಕ'ಮನುವಾದಿ ಅಮಿತ್ ಶಾ ರಾಜೀನಾಮೆ ಕೊಡೋವರೆಗೂ ಹೋರಾಟ ನಿಲ್ಲಿಸಲ್ಲ..'; ದಸಂಸ ನಾಯಕ ಡಿ.ಜಿ.ಸಾಗರ್ ಎಚ್ಚರಿಕೆ

‘ಮನುವಾದಿ ಅಮಿತ್ ಶಾ ರಾಜೀನಾಮೆ ಕೊಡೋವರೆಗೂ ಹೋರಾಟ ನಿಲ್ಲಿಸಲ್ಲ..’; ದಸಂಸ ನಾಯಕ ಡಿ.ಜಿ.ಸಾಗರ್ ಎಚ್ಚರಿಕೆ

- Advertisement -
- Advertisement -

ರಾಜ್ಯಸಭೆ ಭಾಷಣದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿದ ಮನುವಾದಿ ಅಮಿತ್ ಶಾ ರಾಜೀನಾಮೆ ಕೊಡೋವರೆಗೂ ಹೋರಾಟ ನಿಲ್ಲಿಸಲ್ಲ ಎಂದು ಕಲಬುರಗಿ ದಲಿತ ಸಂಘರ್ಷ ಸಮಿತಿ ಹಿರಿಯ ನಾಯಕ ಡಾ. ಡಿ.ಜಿ.ಸಾಗರ್ ಎಚ್ಚರಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿ ಶನಿವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಸಚಿವ, ಮನುವಾದಿ ಅಮಿತ್ ಶಾ ಅವರ ಹೀನ ಮನಸ್ಥಿತಿ ಬಯಲಾಗಿದೆ. ಆತನಿಂದ ಕೂಡಲೇ ರಾಜೀನಾಮೆ ಪಡೆಯಬೇಕು. ಇಲ್ಲದಿದ್ದರೆ, ರಾಜೀನಾಮೆ ಕೊಡೋವರೆಗೂ ಹೋರಾಟ ನಿಲ್ಲಿಸಲ್ಲ” ಎಂದು ಎಚ್ಚರಿಕೆ ನೀಡಿದರು.

ಡಿ.24ರಂದು ಕಲಬುರಗಿ ಬಂದ್

ಅಂಬೇಡ್ಕರ್‌ಗೆ ಅವಮಾನ ಖಂಡಿಸಿ, ಡಿ.24ರಂದು ದಲಿತ ಪರ ಸಮಘಟನೆಗಳು ಹಾಗೂ ಮತ್ತಿತರ ಸಂಘಟನೆಗಳು ಕಲಬುರಗಿ ಬಂದ್ ಗಾಗಿ ಕರೆ ನೀಡಿವೆ. ಈ ಕರೆಗೆ ನಮ್ಮ ಸಂಘಟನೆಯು ಸಂಪೂರ್ಣ ಬೆಂಬಲಿಸಲಿದೆ. 2025ರ ಜ.6ರಂದು ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ, ಆಯಾ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

“ಸಂವಿಧಾನಕ್ಕೆ 75 ವರ್ಷಗಳು ತುಂಬಿದ ಈ ಹೊತ್ತಲ್ಲಿ, ಅಮಿತ್ ಶಾ ಅಂಬೇಡ್ಕರ್‌ಗೆ ಅವಮಾನ ಮಾಡಿರುವುದು ಕೋಟ್ಯಂತರ ಜನರಿಗೆ ಅವಮಾನ ಮಾಡಿದಂತಾಗಿದೆ. ಆತ ಕೂಡಲೇ ರಾಜೀನಾಮೆ ನೀಡಬೇಕು; ಇಲ್ಲದಿದ್ದರೆ ಪ್ರಧಾನಿಗಳು ಆತನನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು” ಎಂದು ಆಗ್ರಹಿಸಿದರು.

“ಡಾ.ಅಂಬೇಡ್ಕರ್ ಅವರು ಸಂವಿಧಾನದ ಅಡಿಯಲ್ಲಿ ದೇಶದ ದಮನಿತರಿಗೆ ಸಾಮಾಜಿಕ ನ್ಯಾಯ, ಮೀಸಲಾತಿ ಸೇರಿದಂತೆ ಸ್ವಾಭಿಮಾನಿಯಾಗಿ ಬದುಕಲು ಹಕ್ಕುಗಳು ಒದಗಿಸಿದ್ದಾರೆ. ಅಂತಹ ಅಂಶಗಳನ್ನು ವಿರೋಧಿಸುವ ಬಿಜೆಪಿ, ನೇರವಾಗಿ ಅಂಬೇಡ್ಕರ್ ಅವರನ್ನೇ ಗುರಿಯಾಗಿಟ್ಟುಕೊಂಡಿವೆ. ಬಿಜೆಪಿ ಆಗಿನಿಂದಲೂ ಬಾಬಾ ಸಾಹೇಬರನ್ನು ಅಪಮಾನಿಸುತ್ತಲೇ ಬಂದಿದೆ. ಬಿಜೆಪಿ ಸರ್ಕಾರದ ಜಾತಿವಾದಿ ಧೋರಣೆ, ದಲಿತ ವಿರೋಧಿ ನಿಲುವು ಅಮಿತ್ ಶಾ ಮೂಲಕ ಬಯಲಾಗಿದೆ” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಒದಿ; ಅಮಿತ್ ಶಾಗೆ ಹುಚ್ಚು ನಾಯಿ ಕಚ್ಚಿದೆ – ಪ್ರಿಯಾಂಕ್ ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...