Homeಕರ್ನಾಟಕಮೊಟ್ಟೆ ಪರವಾಗಿ ಮಾತನಾಡಿದ್ದ ವಿದ್ಯಾರ್ಥಿನಿಗೆ ಸಿಪಿಐ(ಎಂ)ನಿಂದ ಸನ್ಮಾನ

ಮೊಟ್ಟೆ ಪರವಾಗಿ ಮಾತನಾಡಿದ್ದ ವಿದ್ಯಾರ್ಥಿನಿಗೆ ಸಿಪಿಐ(ಎಂ)ನಿಂದ ಸನ್ಮಾನ

ಮೊಟ್ಟೆ ವಿರೋಧಿಸುವ ಮಠಾಧೀಶರ ವಿರುದ್ಧ ವಿದ್ಯಾರ್ಥಿನಿಯೂ ತೀವ್ರ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು

- Advertisement -
- Advertisement -

ರಾಜ್ಯದ ಶಾಲೆಗಳಲ್ಲಿ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಗೆ ವಿರೋಧ ವ್ಯಕ್ತವಾದಾಗ ಬಡ, ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳ ಪರವಾಗಿ ಪ್ರತಿಭಟನೆಯೊಂದರಲ್ಲಿ ಆಕ್ರೋಶಭರಿತವಾಗಿ ಮಾತಾಡಿದ್ದ ವಿದ್ಯಾರ್ಥಿನಿ ಅಂಜಲಿ ಅವರನ್ನು ಗಂಗಾವತಿಯಲ್ಲಿ ನಡೆಯುತ್ತಿರುವ ಸಿಪಿಐ(ಎಂ) ರಾಜ್ಯ ಸಮ್ಮೇಳನದ ವೇದಿಕೆಯಲ್ಲಿ ಪಕ್ಷದ ಪಾಲಿಟ್‌ಬ್ಯೂರೋ ಸದಸ್ಯ ಪ್ರಕಾಶ್ ಕಾರಟ್‌ ಅಭಿನಂದಿಸಿ ಗೌರವಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಜನವರಿ 2 ರಿಂದ 4ರವರೆಗೆ ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನ ನಡೆಯುತ್ತಿದೆ. ಗಂಗಾವತಿಯ ಎಂಎನ್ಎಂ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಅಂಜಲಿ ಮೊಟ್ಟೆ ವಿರೋಧಿಸುವ ಮಠಾಧೀಶರ ವಿರುದ್ಧ ಇತ್ತೀಚೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದರು. ಈ ವಿಡಿಯೊ ಸಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವಿದ್ಯಾರ್ಥಿನಿಯ ಮಾತಿಗೆ ಜನರು ಮೆಚ್ಚುಗೆ ಸೂಚಿಸಿದ್ದರು.

ಇದನ್ನೂ ಓದಿ:ಸಮಾನ ವೇತನ ಕಾನೂನು ಮಾಡಿ ಅಂದರೆ ಮೊಟ್ಟೆ, ಮಾಂಸ ತಿನ್ನಬೇಡಿ ಅಂತ ಕಾನೂನು ಮಾಡ್ತಾರೆ: ಬಾಲನ್‌

ವಿದ್ಯಾರ್ಥಿನಿ ಅಂಜಲಿಯನ್ನು ಸಮ್ಮೇಳನದ ವೇದಿಕೆಯಲ್ಲಿ ಸನ್ಮಾನಿಸಿದ ಪ್ರಕಾಶ್ ಕಾರಟ್‌‌, ಸಮ್ಮೇಳನದ ಪ್ರತಿನಿಧಿಗಳ ಪರವಾಗಿ ಸ್ಮರಣಿಕೆ ಹಾಗೂ ಸಾವಿತ್ರಿ ಭಾಯಿ ಫುಲೆ ಪುಸ್ತಕ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತ ವಿದ್ಯಾರ್ಥಿ ಒಕ್ಕೂಟ (ಎಸ್‌ಎಫ್‌ಐ)ದ ನೇತೃತ್ವದಲ್ಲಿ ಡಿಸೆಂಬರ್‌ 11 ರ ಶನಿವಾರದಂದು ಗಂಗಾವತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಅಂಜಲಿ, ಶಾಲೆಗಳಲ್ಲಿ ಮೊಟ್ಟೆ ವಿತರಿಸುವುದನ್ನು ಮಠಾಧೀಶರು ವಿರೋಧಿಸುವುದು ಮುಂದುವರಿಸಿದಲ್ಲಿ, ನಾವು ಮಕ್ಕಳೆಲ್ಲ ಸೇರಿ ಮಠದಲ್ಲೇ ಮೊಟ್ಟೆ ಮತ್ತು ಬಾಳೆಹಣ್ಣು ಸೇವಿಸುತ್ತೇವೆ ಎಂದು ಆಕ್ರೊಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:ಮಕ್ಕಳಿಗೆ ಮಕ್ಕಳಿಗೆ ಮೊಟ್ಟೆ ನೀಡಬೇಕೆಂಬುದು ಸಾಂವಿಧಾನಿಕ ಆಶಯ: ಟಿ.ಕುಮಾರಸ್ವಾಮಿ

“ಬಡತನ ಇರುವುದರಿಂದ ನಾವು ಸರ್ಕಾರಿ ಶಾಲೆಗೆ ಬರುತ್ತೇವೆ. ನಾವು ಮೊಟ್ಟೆ ತಿಂದದೆ ಬದುಕುತ್ತೇವೆ. ಇಲ್ಲದಿದ್ದರೆ, ಸತ್ತು ಹೋಗುತ್ತೇವೆ. ನಾವು ಮೊಟ್ಟೆ ಸೇವಿಸುವುದು ಬೇಕಾ ಇಲ್ಲವೇ, ಮೊಟ್ಟೆ ವಿತರಣೆ ಮಾಡದಿರುವುದು ಬೇಕಾ?” ಎಂದು ಅವರು ಪ್ರಶ್ನಿಸಿದ್ದರು.

“ನಮ್ಮ ಬೆನ್ನಿಗೆ ಯಾರೂ ಇಲ್ಲ ಎಂದು ತಿಳಿದಿದ್ದೀರಾ?. ಶಾಲೆ, ಪೋಷಕರು, ಶಿಕ್ಷಕರು, ಎಸ್ಎಫ್ಐ ಸಂಘಟನೆಯವರು ಇದ್ದಾರೆ. ಮೊಟ್ಟೆ ವಿತರಿಸಲು ಮಠಾಧೀಶರು ವಿರೋಧ ವ್ಯಕ್ತಪಡಿಸಿದರೆ, ಮಕ್ಕಳೆಲ್ಲ ಸೇರಿ ಮಠದಲ್ಲೇ ಮೊಟ್ಟೆ, ಬಾಳೆ ಹಣ್ಣು ಸೇವಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದರು.

ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕದ ಸರಕಾರಿ, ಅನುದಾನಿತ ಪ್ರಾಥಮಿಕ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿತ್ತು. ಆದರೆ ಮಠಗಳ ಸ್ವಾಮಿಗಳು ಮತ್ತು ಬಿಜೆಪಿ ಪರ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು.

ಇದನ್ನೂ ಓದಿ:ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರು ರಾಜ್ಯದ ‘ಅಪೌಷ್ಟಿಕತೆ’ ತಿಳಿದಿಲ್ಲವೇ? ಬಸವಣ್ಣನವರ ವಚನ ಓದಿಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...