Homeಮುಖಪುಟ'ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್..' ಎಂದು ಘೋಷಣೆ ಕೂಗಿದ ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು

‘ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್..’ ಎಂದು ಘೋಷಣೆ ಕೂಗಿದ ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು

- Advertisement -
- Advertisement -

ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಪ್ರತಿಭಟನಾನಿತರ ವಿದ್ಯಾರ್ಥಿಗಳ ಗುಂಪೊಂದುಮ ಜಾತಿ ಗಣತಿಗೆ ಆಗ್ರಹಿಸಿದ್ದು, “ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕುಗಿರುವ ವಿಡಿಯೋಗಳು ಜಾಳತಾಣದಲ್ಲಿ ವೈರಲ್ ಆಗಿವೆ.

ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜಾತಿವಿರೋಧಿ ಘೋಷಣೆಗಳನ್ನು ಕೂಗಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ವಿಶ್ವವಿದ್ಯಾನಿಲಯವು ಅವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಕ್ಯಾಂಪಸ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ. ಆದರೆ, ತಾರತಮ್ಯ ವಿರೋಧಿ ಸೆಲ್‌ ಸ್ಥಾಪನೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ಒಂದು ಗುಂಪು ಒಂದು ವಾರದದಿಂದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿದೆ.

ವಿಶ್ವವಿದ್ಯಾನಿಲಯದ ಆವರಣದಲ್ಲಿ ಪ್ರತಿಭಟಿಸಿರುವ ವಿದ್ಯಾರ್ಥಿಗಳು, “ನಮಗೆ ಜಾತಿ ಗಣತಿ, ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಜನಾಂಗೀಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ಹಿನ್ನೆಲೆಯ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಪ್ರತಿಪಾದಿಸುವ ಸ್ವತಂತ್ರ ವಿದ್ಯಾರ್ಥಿ ಸಂಘಟನೆಯಾದ ‘ಸಾಮಾಜಿಕ ನ್ಯಾಯ ವೇದಿಕೆ’ಯ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ವರದಿಯಾಗಿದೆ.

ವಿಶ್ವವಿದ್ಯಾನಿಲಯ ಆಡಳಿತ ಮಂಡಳಿಯು ಬುಧವಾರ ಪ್ರಕಟಣೆ ಹೊರಡಿಸಿದ್ದು, “ಅಶೋಕ ವಿಶ್ವವಿದ್ಯಾಲಯವು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಹುರುಪಿನ ಚರ್ಚೆಗೆ ಹೆಚ್ಚಿನ ಮೌಲ್ಯವನ್ನು ನೀಡುತ್ತದೆ. ಆದರೆ, ಇದು ಪರಸ್ಪರ ಗೌರವಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ವಿಶ್ವವಿದ್ಯಾನಿಲಯವು ಯಾವುದೇ ವ್ಯಕ್ತಿ ಅಥವಾ ಗುಂಪಿನ ವಿರುದ್ಧ ದ್ವೇಷದ ಅಭಿವ್ಯಕ್ತಿಗಳನ್ನು ಖಂಡಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಅಶೋಕ ವಿಶ್ವವಿದ್ಯಾನಿಲಯದ ಮಾರ್ಗಸೂಚಿಗಳು ಅಂತಹ ಅಭಿವ್ಯಕ್ತಿ ಸ್ವಾತಂತ್ರ್ಯವು ಅಪರಿಮಿತವಲ್ಲ. ಇತರರ ಹಕ್ಕುಗಳು ಮತ್ತು ಸಂವೇದನೆಗಳಿಗೆ ಗೌರವವನ್ನು ನೀಡುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಅಶೋಕದಲ್ಲಿ ಸಮುದಾಯದ ಮನೋಭಾವವನ್ನು ಕಾಪಾಡಲು ಇದು ಅತ್ಯಗತ್ಯ” ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ವಾತಾವರಣವನ್ನು ಪ್ರತಿಕೂಲಗೊಳಿಸುವ ಕ್ರಮಗಳು ಶಿಸ್ತು ಕ್ರಮಕ್ಕೆ ಒಳಪಡುತ್ತವೆ ಎಂದು ವಿಶ್ವವಿದ್ಯಾನಿಲಯವು ಎಚ್ಚರಿಸಿದೆ. “ಕ್ಯಾಂಪಸ್‌ನ ವಾತಾವರಣವನ್ನು ಬೆದರಿಸುವ,ವ್ಯಕ್ತಿಗಳು ಅಥವಾ ಗುಂಪುಗಳಿಗೆ ಪ್ರತಿಕೂಲವಾಗಿಸುವ ಕ್ರಮಗಳನ್ನು ಗಂಭೀರ ಅಪರಾಧಗಳೆಂದು ಪರಿಗಣಿಸಲಾಗುತ್ತದೆ. ವಿಶ್ವವಿದ್ಯಾಲಯದ ಶಿಸ್ತಿನ ಕಾರ್ಯವಿಧಾನಕ್ಕೆ ಒಳಪಟ್ಟಿರುತ್ತದೆ. ವಿಶ್ವವಿದ್ಯಾನಿಲಯವು ಕ್ಯಾಂಪಸ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆಯಾಗದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ಅದು ಹೇಳಿದೆ.

ಕ್ಯಾಂಪಸ್‌ನಲ್ಲಿ ತಾರತಮ್ಯ ವಿರೋಧಿ ಕೋಶ ಮತ್ತು ಜಾತಿ ಗಣತಿಯನ್ನು ಸ್ಥಾಪಿಸಬೇಕೆಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಒತ್ತಾಯಿಸಿ ವಿದ್ಯಾರ್ಥಿಗಳ ಒಂದು ವಿಭಾಗವು ಇತ್ತೀಚೆಗೆ ಕ್ಯಾಂಪಸ್‌ನಲ್ಲಿ ಒಂದು ವಾರದಿಂದ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನಂತರ, ವಿಶ್ವವಿದ್ಯಾನಿಲಯವು ಮಂಗಳವಾರ ಸೇರ್ಪಡೆ ಮತ್ತು ವೈವಿಧ್ಯತೆಯ ನೀತಿಗಳನ್ನು ಸುಧಾರಿಸಲು ‘ಸಮಾನ ಅವಕಾಶ’ ಕೋಶವನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿಶ್ವವಿದ್ಯಾನಿಲಯವು ಮಂಗಳವಾರ ಪ್ರಕಟಣೆಯಲ್ಲಿ, “ಸಮಾನ ಅವಕಾಶ ಕೋಶವನ್ನು ರಚಿಸುವಲ್ಲಿ ನಾವು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇವೆ, ಅವರ ಪಾತ್ರವು ಸೇರ್ಪಡೆ, ವೈವಿಧ್ಯತೆ ಮತ್ತು ಸೂಕ್ಷ್ಮತೆಯ ಕುರಿತು ಚಾಲ್ತಿಯಲ್ಲಿರುವ ಅಭ್ಯಾಸಗಳು ಮತ್ತು ನೀತಿಗಳನ್ನು ಸುಧಾರಿಸಲು ವಿಶ್ವವಿದ್ಯಾಲಯಕ್ಕೆ ಶಿಫಾರಸುಗಳನ್ನು ಮಾಡುವುದನ್ನು ಒಳಗೊಂಡಿರುತ್ತದೆ. ಇದು ಅಧ್ಯಾಪಕರು, ಸಿಬ್ಬಂದಿ ಮತ್ತು ಚುನಾಯಿತ ವಿದ್ಯಾರ್ಥಿ ಪ್ರತಿನಿಧಿಗಳನ್ನು ಸದಸ್ಯರನ್ನಾಗಿ ಹೊಂದಿರುತ್ತದೆ ಮತ್ತು ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ” ಎಂದು ವಿವರಿಸಿದೆ.

“ಕ್ಯಾಂಪಸ್‌ನಲ್ಲಿ ತಾರತಮ್ಯ ವಿರೋಧಿ ಕೋಶ ಮತ್ತು ಜಾತಿ ಗಣತಿಯನ್ನು ಸ್ಥಾಪಿಸಲು ಮೂರು ತಿಂಗಳ ಹಿಂದೆ ಉಪಕುಲಪತಿಯೊಂದಿಗೆ ಒತ್ತಾಯಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಯೊಬ್ಬರು ಪ್ರಕಟಣೆಗೆ ತಿಳಿಸಿದರು.

“ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ನೌಕರರನ್ನು ಒಳಗೊಂಡ ಸಮಗ್ರ ಮತ್ತು ಅನಾಮಧೇಯ ವಾರ್ಷಿಕ ಜಾತಿ ಗಣತಿ ಸೇರಿದಂತೆ ಮೂರು ಬೇಡಿಕೆಗಳನ್ನು ಎತ್ತಿ ವಿದ್ಯಾರ್ಥಿಗಳು ಪ್ರತಿಭಟಿಸಿದರು ಎಂದು ವರದಿಯಾಗಿದೆ. ಅಂಬೇಡ್ಕರ್ ಸ್ಮಾರಕ ಉಪನ್ಯಾಸ ಎಂಬ ವಾರ್ಷಿಕ ಕಾರ್ಯಕ್ರಮವನ್ನು ವಿಶ್ವವಿದ್ಯಾನಿಲಯವು ಸಾಮಾಜಿಕ ನ್ಯಾಯದ ಕುರಿತು ಮಾತನಾಡಲು ಅಂಚಿನಲ್ಲಿರುವ ಸಮುದಾಯಗಳ ಸಂಪನ್ಮೂಲ ವ್ಯಕ್ತಿಗಳು ಮತ್ತು ಪ್ಯಾನಲಿಸ್ಟ್‌ಗಳನ್ನು ಆಹ್ವಾನಿಸುತ್ತದೆ; ಶುಲ್ಕ ಪಾವತಿ ನೀತಿಯಲ್ಲಿನ ಬದಲಾವಣೆಯು ಗುರುತಿನ ಚೀಟಿಗಳನ್ನು ನಿರ್ಬಂಧಿಸುತ್ತದೆ. ವಿದ್ಯಾರ್ಥಿಗಳು ಶುಲ್ಕವನ್ನು ತಡವಾಗಿ ಪಾವತಿಸಿದರೆ ಗೂಗಲ್ ಕ್ಲಾಸ್‌ರೂಮ್ ಮತ್ತು ಮೆಸ್ ಊಟದಂತಹ ಸೌಲಭ್ಯಗಳಿಂದ ಅವರಿಗೆ ನಿರ್ಬಂಧ ಹೇರಲಾಗುತ್ತದೆ. ಇದು ಅಂಚಿನಲ್ಲಿರುವ ಸಮುದಾಯಗಳ ಮೇಲೆ ಅಸಮಾನವಾಗಿ ಪರಿಣಾಮ ಬೀರುತ್ತದೆ ಎಂದು ವಿದ್ಯಾರ್ಥಿ ಗುಂಪಿನ ಪ್ರಕಟಣೆ ತಿಳಿಸಿದೆ.

2014 ರಲ್ಲಿ ಸ್ಥಾಪನೆಯಾದ ಅಶೋಕ ವಿಶ್ವವಿದ್ಯಾನಿಲಯವು ಅದರ ಅಧ್ಯಾಪಕರ ರಾಜಕೀಯ ದೃಷ್ಟಿಕೋನಗಳ ಬಗ್ಗೆ ಈ ಹಿಂದೆ ಸುದ್ದಿಯಾಗಿತ್ತು. ಮಾರ್ಚ್ 2021 ರಲ್ಲಿ ಪ್ರೊಫೆಸರ್‌ಗಳಾದ ಪ್ರತಾಪ್ ಭಾನು ಮೆಹ್ತಾ ಮತ್ತು ಅರವಿಂದ್ ಸುಬ್ರಮಣಿಯನ್ ಅವರ ನಿರ್ಗಮನ ಭಾರೀ ಸದ್ದು ಮಾಡಿತ್ತು.

ಇದನ್ನೂ ಓದಿ; ಮೋದಿ ಸರಕಾರವನ್ನು ಟೀಕಿಸಿ ಲೇಖನ ಬರೆದ ಬೆನ್ನಲ್ಲಿ ‘ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌ʼ ಮುಖ್ಯಸ್ಥೆ ಹುದ್ದೆಗೆ ಯಾಮಿನಿ ಅಯ್ಯರ್ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...