Homeಮುಖಪುಟ'ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್..' ಎಂದು ಘೋಷಣೆ ಕೂಗಿದ ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು

‘ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್..’ ಎಂದು ಘೋಷಣೆ ಕೂಗಿದ ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು

- Advertisement -
- Advertisement -

ಹರಿಯಾಣದ ಅಶೋಕ ವಿಶ್ವವಿದ್ಯಾನಿಲಯದ ಪ್ರತಿಭಟನಾನಿತರ ವಿದ್ಯಾರ್ಥಿಗಳ ಗುಂಪೊಂದುಮ ಜಾತಿ ಗಣತಿಗೆ ಆಗ್ರಹಿಸಿದ್ದು, “ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕುಗಿರುವ ವಿಡಿಯೋಗಳು ಜಾಳತಾಣದಲ್ಲಿ ವೈರಲ್ ಆಗಿವೆ.

ಅಶೋಕ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಜಾತಿವಿರೋಧಿ ಘೋಷಣೆಗಳನ್ನು ಕೂಗಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ವಿಶ್ವವಿದ್ಯಾನಿಲಯವು ಅವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದೆ. ಕ್ಯಾಂಪಸ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದೆ. ಆದರೆ, ತಾರತಮ್ಯ ವಿರೋಧಿ ಸೆಲ್‌ ಸ್ಥಾಪನೆಗೆ ಒತ್ತಾಯಿಸಿ ವಿದ್ಯಾರ್ಥಿಗಳ ಒಂದು ಗುಂಪು ಒಂದು ವಾರದದಿಂದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿದೆ.

ವಿಶ್ವವಿದ್ಯಾನಿಲಯದ ಆವರಣದಲ್ಲಿ ಪ್ರತಿಭಟಿಸಿರುವ ವಿದ್ಯಾರ್ಥಿಗಳು, “ನಮಗೆ ಜಾತಿ ಗಣತಿ, ಬ್ರಾಹ್ಮಣ-ಬನಿಯಾವಾದ್ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಜನಾಂಗೀಯ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ಹಿನ್ನೆಲೆಯ ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ಪ್ರತಿಪಾದಿಸುವ ಸ್ವತಂತ್ರ ವಿದ್ಯಾರ್ಥಿ ಸಂಘಟನೆಯಾದ ‘ಸಾಮಾಜಿಕ ನ್ಯಾಯ ವೇದಿಕೆ’ಯ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ವರದಿಯಾಗಿದೆ.

ವಿಶ್ವವಿದ್ಯಾನಿಲಯ ಆಡಳಿತ ಮಂಡಳಿಯು ಬುಧವಾರ ಪ್ರಕಟಣೆ ಹೊರಡಿಸಿದ್ದು, “ಅಶೋಕ ವಿಶ್ವವಿದ್ಯಾಲಯವು ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಹುರುಪಿನ ಚರ್ಚೆಗೆ ಹೆಚ್ಚಿನ ಮೌಲ್ಯವನ್ನು ನೀಡುತ್ತದೆ. ಆದರೆ, ಇದು ಪರಸ್ಪರ ಗೌರವಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ವಿಶ್ವವಿದ್ಯಾನಿಲಯವು ಯಾವುದೇ ವ್ಯಕ್ತಿ ಅಥವಾ ಗುಂಪಿನ ವಿರುದ್ಧ ದ್ವೇಷದ ಅಭಿವ್ಯಕ್ತಿಗಳನ್ನು ಖಂಡಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ ಅಶೋಕ ವಿಶ್ವವಿದ್ಯಾನಿಲಯದ ಮಾರ್ಗಸೂಚಿಗಳು ಅಂತಹ ಅಭಿವ್ಯಕ್ತಿ ಸ್ವಾತಂತ್ರ್ಯವು ಅಪರಿಮಿತವಲ್ಲ. ಇತರರ ಹಕ್ಕುಗಳು ಮತ್ತು ಸಂವೇದನೆಗಳಿಗೆ ಗೌರವವನ್ನು ನೀಡುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಅಶೋಕದಲ್ಲಿ ಸಮುದಾಯದ ಮನೋಭಾವವನ್ನು ಕಾಪಾಡಲು ಇದು ಅತ್ಯಗತ್ಯ” ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ವಾತಾವರಣವನ್ನು ಪ್ರತಿಕೂಲಗೊಳಿಸುವ ಕ್ರಮಗಳು ಶಿಸ್ತು ಕ್ರಮಕ್ಕೆ ಒಳಪಡುತ್ತವೆ ಎಂದು ವಿಶ್ವವಿದ್ಯಾನಿಲಯವು ಎಚ್ಚರಿಸಿದೆ. “ಕ್ಯಾಂಪಸ್‌ನ ವಾತಾವರಣವನ್ನು ಬೆದರಿಸುವ,ವ್ಯಕ್ತಿಗಳು ಅಥವಾ ಗುಂಪುಗಳಿಗೆ ಪ್ರತಿಕೂಲವಾಗಿಸುವ ಕ್ರಮಗಳನ್ನು ಗಂಭೀರ ಅಪರಾಧಗಳೆಂದು ಪರಿಗಣಿಸಲಾಗುತ್ತದೆ. ವಿಶ್ವವಿದ್ಯಾಲಯದ ಶಿಸ್ತಿನ ಕಾರ್ಯವಿಧಾನಕ್ಕೆ ಒಳಪಟ್ಟಿರುತ್ತದೆ. ವಿಶ್ವವಿದ್ಯಾನಿಲಯವು ಕ್ಯಾಂಪಸ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆಯಾಗದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ಅದು ಹೇಳಿದೆ.

ಕ್ಯಾಂಪಸ್‌ನಲ್ಲಿ ತಾರತಮ್ಯ ವಿರೋಧಿ ಕೋಶ ಮತ್ತು ಜಾತಿ ಗಣತಿಯನ್ನು ಸ್ಥಾಪಿಸಬೇಕೆಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಒತ್ತಾಯಿಸಿ ವಿದ್ಯಾರ್ಥಿಗಳ ಒಂದು ವಿಭಾಗವು ಇತ್ತೀಚೆಗೆ ಕ್ಯಾಂಪಸ್‌ನಲ್ಲಿ ಒಂದು ವಾರದಿಂದ ಪ್ರತಿಭಟನೆ ನಡೆಸಿತು. ಪ್ರತಿಭಟನೆಯ ನಂತರ, ವಿಶ್ವವಿದ್ಯಾನಿಲಯವು ಮಂಗಳವಾರ ಸೇರ್ಪಡೆ ಮತ್ತು ವೈವಿಧ್ಯತೆಯ ನೀತಿಗಳನ್ನು ಸುಧಾರಿಸಲು ‘ಸಮಾನ ಅವಕಾಶ’ ಕೋಶವನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿಶ್ವವಿದ್ಯಾನಿಲಯವು ಮಂಗಳವಾರ ಪ್ರಕಟಣೆಯಲ್ಲಿ, “ಸಮಾನ ಅವಕಾಶ ಕೋಶವನ್ನು ರಚಿಸುವಲ್ಲಿ ನಾವು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದೇವೆ, ಅವರ ಪಾತ್ರವು ಸೇರ್ಪಡೆ, ವೈವಿಧ್ಯತೆ ಮತ್ತು ಸೂಕ್ಷ್ಮತೆಯ ಕುರಿತು ಚಾಲ್ತಿಯಲ್ಲಿರುವ ಅಭ್ಯಾಸಗಳು ಮತ್ತು ನೀತಿಗಳನ್ನು ಸುಧಾರಿಸಲು ವಿಶ್ವವಿದ್ಯಾಲಯಕ್ಕೆ ಶಿಫಾರಸುಗಳನ್ನು ಮಾಡುವುದನ್ನು ಒಳಗೊಂಡಿರುತ್ತದೆ. ಇದು ಅಧ್ಯಾಪಕರು, ಸಿಬ್ಬಂದಿ ಮತ್ತು ಚುನಾಯಿತ ವಿದ್ಯಾರ್ಥಿ ಪ್ರತಿನಿಧಿಗಳನ್ನು ಸದಸ್ಯರನ್ನಾಗಿ ಹೊಂದಿರುತ್ತದೆ ಮತ್ತು ಶೀಘ್ರದಲ್ಲೇ ಕಾರ್ಯನಿರ್ವಹಿಸಲಿದೆ” ಎಂದು ವಿವರಿಸಿದೆ.

“ಕ್ಯಾಂಪಸ್‌ನಲ್ಲಿ ತಾರತಮ್ಯ ವಿರೋಧಿ ಕೋಶ ಮತ್ತು ಜಾತಿ ಗಣತಿಯನ್ನು ಸ್ಥಾಪಿಸಲು ಮೂರು ತಿಂಗಳ ಹಿಂದೆ ಉಪಕುಲಪತಿಯೊಂದಿಗೆ ಒತ್ತಾಯಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಪ್ರತಿಭಟನಾನಿರತ ವಿದ್ಯಾರ್ಥಿಯೊಬ್ಬರು ಪ್ರಕಟಣೆಗೆ ತಿಳಿಸಿದರು.

“ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ನೌಕರರನ್ನು ಒಳಗೊಂಡ ಸಮಗ್ರ ಮತ್ತು ಅನಾಮಧೇಯ ವಾರ್ಷಿಕ ಜಾತಿ ಗಣತಿ ಸೇರಿದಂತೆ ಮೂರು ಬೇಡಿಕೆಗಳನ್ನು ಎತ್ತಿ ವಿದ್ಯಾರ್ಥಿಗಳು ಪ್ರತಿಭಟಿಸಿದರು ಎಂದು ವರದಿಯಾಗಿದೆ. ಅಂಬೇಡ್ಕರ್ ಸ್ಮಾರಕ ಉಪನ್ಯಾಸ ಎಂಬ ವಾರ್ಷಿಕ ಕಾರ್ಯಕ್ರಮವನ್ನು ವಿಶ್ವವಿದ್ಯಾನಿಲಯವು ಸಾಮಾಜಿಕ ನ್ಯಾಯದ ಕುರಿತು ಮಾತನಾಡಲು ಅಂಚಿನಲ್ಲಿರುವ ಸಮುದಾಯಗಳ ಸಂಪನ್ಮೂಲ ವ್ಯಕ್ತಿಗಳು ಮತ್ತು ಪ್ಯಾನಲಿಸ್ಟ್‌ಗಳನ್ನು ಆಹ್ವಾನಿಸುತ್ತದೆ; ಶುಲ್ಕ ಪಾವತಿ ನೀತಿಯಲ್ಲಿನ ಬದಲಾವಣೆಯು ಗುರುತಿನ ಚೀಟಿಗಳನ್ನು ನಿರ್ಬಂಧಿಸುತ್ತದೆ. ವಿದ್ಯಾರ್ಥಿಗಳು ಶುಲ್ಕವನ್ನು ತಡವಾಗಿ ಪಾವತಿಸಿದರೆ ಗೂಗಲ್ ಕ್ಲಾಸ್‌ರೂಮ್ ಮತ್ತು ಮೆಸ್ ಊಟದಂತಹ ಸೌಲಭ್ಯಗಳಿಂದ ಅವರಿಗೆ ನಿರ್ಬಂಧ ಹೇರಲಾಗುತ್ತದೆ. ಇದು ಅಂಚಿನಲ್ಲಿರುವ ಸಮುದಾಯಗಳ ಮೇಲೆ ಅಸಮಾನವಾಗಿ ಪರಿಣಾಮ ಬೀರುತ್ತದೆ ಎಂದು ವಿದ್ಯಾರ್ಥಿ ಗುಂಪಿನ ಪ್ರಕಟಣೆ ತಿಳಿಸಿದೆ.

2014 ರಲ್ಲಿ ಸ್ಥಾಪನೆಯಾದ ಅಶೋಕ ವಿಶ್ವವಿದ್ಯಾನಿಲಯವು ಅದರ ಅಧ್ಯಾಪಕರ ರಾಜಕೀಯ ದೃಷ್ಟಿಕೋನಗಳ ಬಗ್ಗೆ ಈ ಹಿಂದೆ ಸುದ್ದಿಯಾಗಿತ್ತು. ಮಾರ್ಚ್ 2021 ರಲ್ಲಿ ಪ್ರೊಫೆಸರ್‌ಗಳಾದ ಪ್ರತಾಪ್ ಭಾನು ಮೆಹ್ತಾ ಮತ್ತು ಅರವಿಂದ್ ಸುಬ್ರಮಣಿಯನ್ ಅವರ ನಿರ್ಗಮನ ಭಾರೀ ಸದ್ದು ಮಾಡಿತ್ತು.

ಇದನ್ನೂ ಓದಿ; ಮೋದಿ ಸರಕಾರವನ್ನು ಟೀಕಿಸಿ ಲೇಖನ ಬರೆದ ಬೆನ್ನಲ್ಲಿ ‘ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್‌ʼ ಮುಖ್ಯಸ್ಥೆ ಹುದ್ದೆಗೆ ಯಾಮಿನಿ ಅಯ್ಯರ್ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...